Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ರಾಜ್ಯದಲ್ಲಿ ‘ಪೋಡಿ ದುರಸ್ಥಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ‘ಕನಿಷ್ಟ ದಾಖಲೆ’ ಇದ್ದರೂ ಪೋಡಿ

17/12/2025 6:12 AM

BIG NEWS : ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ `ಗೈಡ್ ಲೈನ್ಸ್’ ಜಾರಿ : ಈ ನಿಯಮಗಳ ಪಾಲನೆ ಕಡ್ಡಾಯ.!

17/12/2025 6:08 AM

GOOD NEWS : ಹೊಸ `BPL’ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ : ಶೀಘ್ರವೇ ಪಡಿತರ ಚೀಟಿ ವಿತರಣೆ.!

17/12/2025 6:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ `ಗೈಡ್ ಲೈನ್ಸ್’ ಜಾರಿ : ಈ ನಿಯಮಗಳ ಪಾಲನೆ ಕಡ್ಡಾಯ.!
KARNATAKA

BIG NEWS : ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ `ಗೈಡ್ ಲೈನ್ಸ್’ ಜಾರಿ : ಈ ನಿಯಮಗಳ ಪಾಲನೆ ಕಡ್ಡಾಯ.!

By kannadanewsnow5717/12/2025 6:08 AM

ಬೆಂಗಳೂರು: ನಗರದಲ್ಲಿ ಡಿಸೆಂಬರ್.31ರ ರಾತ್ರಿಯಂದು ಹೊಸ ವರ್ಷಾಚರಣೆಯನ್ನು ವಿಜೃಂಭಣೆಯಿಂದ ಜನರು ಆಚರಿಸುತ್ತಾರೆ. ಈ ವೇಳೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಮುನ್ನಚ್ಚರಿಕೆ ಕ್ರಮವಾಗಿ ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಲಾಗಿದೆ.

ಹೊಸ ವರ್ಷಾಚರಣೆಯನ್ನು ಆಚರಿಸುವ ನಗರದ ಸಾರ್ವಜನಿಕರು, ಮಹಿಳೆಯರು, ಮತ್ತು ಮಕ್ಕಳ ಭದ್ರತೆ ಮತ್ತು ಸುರಕ್ಷತೆ ದೃಷ್ಠಿಯಿಂದ ನಗರ ಪೊಲೀಸರಿಂದ ಕೆಲವು ಸಲಹಾ ಸೂಚನೆಗಳು, ಸಾರ್ವಜನಿಕರು ಮಾಡಬೇಕಾದ ಅಂಶಗಳು.

1. ಹೊಸ ವರ್ಷಾಚರಣೆಯನ್ನು ಶಾಂತಿಯುತವಾಗಿ ಆಚರಿಸುವುದು.

2. ಕಾನೂನು ನಿಯಮಗಳನ್ನು ಪಾಲನೆ ಮಾಡಿ, ನಿಯಮಿತವಾಗಿ ವಾಹನ ಚಾಲನೆ ಮಾಡಿ ಮತ್ತು ಸಂಚಾರಿ ನಿಮಯಗಳನ್ನು ಕಡ್ಡಾಯವಾಗಿ ಪಾಲಿಸಿ.

3. ಸಾರ್ವಜನಿಕರು ಶಾಂತಿ ಮತ್ತು ಶಿಸ್ತನ್ನು ಕಾಪಾಡಲು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂಧಿಯವರ ಜೊತೆ ಸಹಕರಿಸಿ

4. ಪೊಲೀಸರು ಮತ್ತು ಸ್ಥಳೀಯ ಆಡಳಿತದಿಂದ ಅನುಮೋದಿಸಲ್ಪಟ್ಟ ಅಧೀಕೃತ ಸ್ಥಳಗಳಲ್ಲಿ ವರ್ಷಾಚರಣೆಯನ್ನು ಆಚರಿಸಿ.

5. ತುರ್ತು ಸಂದರ್ಭಗಳಲ್ಲಿ 112 ಅಥವಾ ಸಮೀಪದ ಪೊಲೀಸ್ ಠಾಣೆಯನ್ನು/ಪೊಲೀಸ್ ಕಿಯೋಸ್ಕ್ ಅನ್ನು ಸಂಪರ್ಕಿಸುವುದು.

6. ವರ್ಷಾಚರಣೆಯ ಸಂದರ್ಭದಲ್ಲಿ ಅಕ್ಕಪಕ್ಕದವರ ಭದ್ರತೆ ಮತ್ತು ಸುರಕ್ಷತೆಯ ಬಗ್ಗೆ ಕಾಳಜಿ ವಹಿಸುವುದು.

7. ಹೆಚ್ಚು ಬೆಳಕಿರುವ ಪ್ರದೇಶಗಳಲ್ಲಿ ವರ್ಷಾಚರಣೆಯನ್ನು ಆಚರಿಸಿ.

8. ಸಾರ್ವಜನಿಕರು ಮಹಿಳೆಯರು, ಮಕ್ಕಳು ಮತ್ತು ಹಿರಿಯರ ಸುರಕ್ಷತೆ ಬಗ್ಗೆ ಗಮನಹರಿಸುವುದು.

9. ಸಾರ್ವಜನಿಕರು ಜನಸಂದಣಿ ಇರುವ ಸ್ಥಳಗಳಲ್ಲಿ ಹೆಚ್ಚು ಜಾಗರೂಕತೆಯಿಂದ ಇರುವುದು.

10. ಯಾವುದೇ ಅಹಿತಕರ ಘಟನೆ/ಕಾನೂನುಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ತಕ್ಷಣ ಹತ್ತಿರದ ಪೊಲೀಸರಿಗೆ ಮಾಹಿತಿಯನ್ನು ನೀಡುವುದು.

11. ಸಾರ್ವಜನಿಕರು ತಮ್ಮ ಚಲನವಲನಗಳ ಬಗ್ಗೆ ಕುಟುಂಬಕ್ಕೆ ಮಾಹಿತಿಯನ್ನು ಆಗಿದ್ದಾಂಗೆ ನೀಡುತ್ತಿರಿ.

12. ವರ್ಷಾಚರಣೆಯನ್ನು ಆಚರಿಸುವ ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರು ಮತ್ತು ಮಕ್ಕಳು ಬೆಲೆಬಾಳುವ ಆಭರಣಗಳನ್ನು ಧರಿಸದೇ ಇರುವುದು ಒಳಿತು. ಅಲ್ಲದೇ ಮೊಬೈಲ್ ಫೋನ್ ಮತ್ತು ಹಣವನ್ನು ಸುರಕ್ಷಿತವಾಗಿ ಇಟ್ಟುಕೊಳ್ಳುವುದು.

13. ಇತರೆ ಧರ್ಮದವರಿಗೆ ಘಾಸಿಯಾಗದಂತೆ ವರ್ಷಚರಣೆಯನ್ನು ಆಚರಿಸಿ.

14. ಭದ್ರತಾ ಸಿಬ್ಬಂಧಿಗಳಾದ ಪೊಲೀಸ್, ಹೋಂ ಗಾರ್ಡ್, ಜೊತೆ ಸಹಕರಿಸಿ

15. ಆಟೋ ಮತ್ತು ಕ್ಯಾಬ್‌ಗಳಲ್ಲಿ ಪ್ರಯಾಣಿಸುವಾಗ ಅದೀಕೃತವೇ ಎಂಬುದನ್ನು ಖಾತ್ರಿಪಡಿಸಿಕೊಳ್ಳಿ. 16. ಪೊಲೀಸರು ಸೂಚಿಸಿರುವ ರಸ್ತೆಗಳಲ್ಲಿಯೇ ಸಂಚರಿಸಿ.

ಸಾರ್ವಜನಿಕರು ಮಾಡಬಾರದ ಅಂಶಗಳು

1. ಮದ್ಯಪಾನ ಮತ್ತು ಮಾದಕ ವಸ್ತುಗಳನ್ನು ಸೇವಿಸಿ ವಾಹನ ಚಾಲನೆ ಮಾಡಬೇಡಿ, ಇದು ಕಾನೂನು ಬಾಹಿರವಾಗಿದ್ದು, ಜೀವಕ್ಕೆ ಹಾನಿ ಉಂಟು ಮಾಡಬಹುದು.

2. ಪಟಾಕಿಗಳನ್ನು ಸಿಡಿಸಬಾರದು. ಪರಿಸರ ಮಾಲಿನ್ಯ ಉಂಟಾಗುವುದನ್ನು ತಪ್ಪಿಸಿ.

3. ಅನಾವಶ್ಯಕವಾಗಿ ವಾಹನದ ಹಾರ್ನ್ ಮೊಳಗಿಸಬೇಡಿ, ಹಾಗೂ ಪೀಪಿ ಯನ್ನು ಊದಬೇಡಿ.

4. ಅಪಾಯಕಾರಿಯಾಗಿ, ಅತೀವೇಗ ಮತ್ತು ಅಜಾಗರೂಕತೆಯಿಂದ ವಾಹನಗಳನ್ನು ಚಲಾಯಿಸುವಂತಿಲ್ಲ. 5. ಪೊಲೀಸರು ಮತ್ತು ಸ್ಥಳೀಯ ಆಡಳಿತದಿಂದ ಅನುಮತಿ ಪಡೆಯದೇ ಯಾವುದೇ ಸಮಾರಂಭಗಳನ್ನು ಆಯೋಜಿಸುವಂತಿಲ್ಲ.

6. ವಯಸ್ಸಾದವರಿಗೆ,ಖಾಯಿಲೆ ಮನುಷ್ಯರಿಗೆ ತೊಂದರೆಯಾಗುವಂತೆ ಸಮಾರಂಭಗಳನ್ನು ಆಯೋಜಿಸಬಾರದು.

7. ಅವಧಿ ಮೀರಿ ಶಬ್ದಮಾಲಿನ್ಯವನ್ನುಂಟು ಮಾಡುವುದು ಕಾನೂನುಬಾಹಿರವಾಗಿದೆ.

8. ಪೊಲೀಸರು ಮತ್ತು ಸ್ಥಳೀಯ ಆಡಳಿತ ರೂಪಿಸುವ ಭದ್ರತಾ ಮಾರ್ಗದರ್ಶಿಗಳನ್ನು ಉಲ್ಲಂಘಿಸುವಂತಿಲ್ಲ. 9. ಸಾರ್ವಜನಿಕರು ಅನಾವಶ್ಯಕವಾಗಿ ಗೊಂದಲ ಮತ್ತು ದ್ವಂದ್ವಗಳಿಗೆ ಎಡೆ ಮಾಡಿಕೊಡಬೇಡಿ.

10. ನಿರ್ಭಂಧಿತ ಸ್ಥಳ/ಪ್ರದೇಶಗಳಿಗೆ ಪ್ರವೇಶಿಸಬೇಡಿ.

II. ಸಾರ್ವಜನಿಕ ಸ್ಥಳಗಳಲ್ಲಿ ಮದ್ಯಪಾನ ಮತ್ತು ದೂಮಪಾನವನ್ನು ಮಾಡುವುದು ಕಾನೂನು ಬಾಹಿರವಾಗಿರುತ್ತದೆ.

12. ಸಾರ್ವಜನಿಕರು ಇತರರಿಗೆ ತೊಂದರೆಯಾಗುವಂತೆ ನಡೆದುಕೊಳ್ಳಬೇಡಿ.

13. ಪೊಲೀಸ್ ಬ್ಯಾರಿಕೇಡ್‌ಗಳನ್ನು ಹಾಯ್ದು ಹೋಗಲು ಪ್ರಯತ್ನಿಸಬೇಡಿ

14. ತಮಾಷೆ ಮತ್ತು ಮೋಜಿಗಾಗಿ ತುರ್ತು ಕರೆಗಳಿಗೆ ಸಂಪರ್ಕಿಸುವ ಕೆಲಸದಲ್ಲಿ ತೊಡಗಿಸಿಕೊಳ್ಳಬೇಡಿ.

15. ರಸ್ತೆ ಮಧ್ಯೆ ಅನಾವಶ್ಯಕವಾಗಿ ನಿಂತುಕೊಳ್ಳುವುದು ಮತ್ತು ಗುಂಪುಗೂಡುವಂತಿಲ್ಲ.

16. ಸಮಾಜದ ಶಾಂತಿ ಕದಡುವಂತಹ ಯಾವುದೇ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಡಿ.

17. ರಸ್ತೆ ದೀಪ ಸೇರಿದಂತೆ ಸರ್ಕಾರಿ ಸ್ವತ್ತುಗಳನ್ನು ಹಾನಿಗೊಳಿಸಬೇಡಿ.

18. ಪೋಷಕರು ಅಪ್ರಾಪ್ತ ವಯಸ್ಕ ಮಕ್ಕಳಿಗೆ ವಾಹನಗಳನ್ನು ಚಾಲನೆ ಮಾಡಲು ನೀಡಬೇಡಿ. 19. ಅನಾವಶ್ಯಕವಾಗಿ ಸಾರ್ವಜನಿಕರೊಂದಿಗೆ ಹಾಗೂ ಅಪರಿಚಿತರೊಂದಿಗೆ ವಾದ, ವಾಗ್ವಾದಗಳಲ್ಲಿ ತೊಡಗಿಸಿಕೊಳ್ಳಬೇಡಿ.

20. ಸಾರ್ವಜನಿಕರು ಕೃತಕ ವಿಕೃತ ಮುಖವಾಡಗಳನ್ನು ಧರಿಸಿ, ಬೇರೆಯವರಿಗೆ ಕಿರಿಕಿರಿ ಮಾಡಬೇಡಿ.

BIG NEWS: Guidelines for New Year celebrations implemented in Bengaluru: Compliance with these rules is mandatory!
Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದಲ್ಲಿ ‘ಪೋಡಿ ದುರಸ್ಥಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ‘ಕನಿಷ್ಟ ದಾಖಲೆ’ ಇದ್ದರೂ ಪೋಡಿ

17/12/2025 6:12 AM1 Min Read

GOOD NEWS : ಹೊಸ `BPL’ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ : ಶೀಘ್ರವೇ ಪಡಿತರ ಚೀಟಿ ವಿತರಣೆ.!

17/12/2025 6:00 AM1 Min Read

BIG NEWS : ರಾಜ್ಯದಲ್ಲಿ `ಮದ್ಯ’ ಮಾರಾಟ ನಿಷೇಧಿಸಿ : CM ಸಿದ್ದರಾಮಯ್ಯಗೆ ಮಹಿಳಾ ಆಯೋಗ ಮನವಿ.!

17/12/2025 5:54 AM1 Min Read
Recent News

GOOD NEWS : ರಾಜ್ಯದಲ್ಲಿ ‘ಪೋಡಿ ದುರಸ್ಥಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ‘ಕನಿಷ್ಟ ದಾಖಲೆ’ ಇದ್ದರೂ ಪೋಡಿ

17/12/2025 6:12 AM

BIG NEWS : ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ `ಗೈಡ್ ಲೈನ್ಸ್’ ಜಾರಿ : ಈ ನಿಯಮಗಳ ಪಾಲನೆ ಕಡ್ಡಾಯ.!

17/12/2025 6:08 AM

GOOD NEWS : ಹೊಸ `BPL’ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ : ಶೀಘ್ರವೇ ಪಡಿತರ ಚೀಟಿ ವಿತರಣೆ.!

17/12/2025 6:00 AM

BIG NEWS : ರಾಜ್ಯದಲ್ಲಿ `ಮದ್ಯ’ ಮಾರಾಟ ನಿಷೇಧಿಸಿ : CM ಸಿದ್ದರಾಮಯ್ಯಗೆ ಮಹಿಳಾ ಆಯೋಗ ಮನವಿ.!

17/12/2025 5:54 AM
State News
KARNATAKA

GOOD NEWS : ರಾಜ್ಯದಲ್ಲಿ ‘ಪೋಡಿ ದುರಸ್ಥಿ’ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: ‘ಕನಿಷ್ಟ ದಾಖಲೆ’ ಇದ್ದರೂ ಪೋಡಿ

By kannadanewsnow0917/12/2025 6:12 AM KARNATAKA 1 Min Read

ಬೆಳಗಾವಿ ಸುವರ್ಣಸೌಧ : ಸರ್ಕಾರವೇ ಸ್ವಯಂ ಪ್ರೇರಿತವಾಗಿ ರೈತರ ಮನೆ ಬಾಗಿಲಿಗೆ ಹೋಗಿ ಅಭಿಯಾನ ಮಾದರಿಯಲ್ಲಿ ದರ್ಖಾಸ್ತು ಪೋಡಿ ಮಾಡಿಕೊಡುತ್ತಿದ್ದು, ಕನಿಷ್ಟ…

BIG NEWS : ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ `ಗೈಡ್ ಲೈನ್ಸ್’ ಜಾರಿ : ಈ ನಿಯಮಗಳ ಪಾಲನೆ ಕಡ್ಡಾಯ.!

17/12/2025 6:08 AM

GOOD NEWS : ಹೊಸ `BPL’ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಗುಡ್ ನ್ಯೂಸ್ : ಶೀಘ್ರವೇ ಪಡಿತರ ಚೀಟಿ ವಿತರಣೆ.!

17/12/2025 6:00 AM

BIG NEWS : ರಾಜ್ಯದಲ್ಲಿ `ಮದ್ಯ’ ಮಾರಾಟ ನಿಷೇಧಿಸಿ : CM ಸಿದ್ದರಾಮಯ್ಯಗೆ ಮಹಿಳಾ ಆಯೋಗ ಮನವಿ.!

17/12/2025 5:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.