ಬೆಂಗಳೂರು : ಡಿ.ಕೆ.ಶಿವಕುಮಾರ್ ಬಳಿ ಬಟ್ಟೆ ಹೊಲಿಸಿಕೊಳ್ಳುವಷ್ಟು ದರಿದ್ರ ನನಗಿಲ್ಲ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಕುಮಾಸ್ವಾಮಿ ಅವರ ಸರ್ಕಾರ ಅಧಿಕಾರಕ್ಕೆ ಬರುತ್ತದೆಯೇ? ಅವರ ಸರ್ಕಾರ ಬರುವುದೂ ಇಲ್ಲ, ಗೆಲ್ಲುವುದೂ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಲೇವಡಿ ಮಾಡಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಏನು ಹೇಳಿದ್ದರು?. ಬಿಜೆಪಿ- ಜೆಡಿಎಸ್ ಮೈತ್ರಿ ಸರ್ಕಾರ ಬರುತ್ತದೆ, ಎಲ್ಲ ತಯಾರಾಗಿ ಎಂದು ಹೇಳಿದ್ದರು. ಆಗ ಅದಕ್ಕೆ ನಾನು ಉಡುಗೊರೆ ನೀಡುತ್ತೇನೆ ಎಂದು ಹೇಳಿದ್ದೆ. ಕುಮಾಸ್ವಾಮಿ ಅವರ ಸರ್ಕಾರ ಅಧಿಕಾರಕ್ಕೆ ಬರುತ್ತದೆಯೇ? ಅವರ ಸರ್ಕಾರ ಬರುವುದೂ ಇಲ್ಲ, ಗೆಲ್ಲುವುದೂ ಇಲ್ಲ ಎಂದು ವ್ಯಂಗ್ಯವಾಡಿದರು.