ಬೆಂಗಳೂರು : ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಬಿಡದಿಯ ಕೇತಗಾನಹಳ್ಳಿ ಬಳಿ 6 ಎಕರೆ ಸರ್ಕಾರಿ ಭೂಮಿ ಅಕ್ರಮವಾಗಿ ಒತ್ತುವರಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಹಸಿಲ್ದಾರ್ ನೋಟಿಸ್ ಅನ್ನೋ ಪ್ರಶ್ನೆಸಿ ಇದೀಗ ಎಚ್ ಡಿ ಕುಮಾರಸ್ವಾಮಿ ಅವರು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.
ಸುಮಾರು 6 ಎಕರೆ ಒತ್ತುವರಿ ಸಂಬಂಧ ಸ್ಥಳೀಯ ತಹಶೀಲ್ದಾರ್ ನೀಡಿರುವ ನೋಟಿಸ್ ಪ್ರಶ್ನಿಸಿ ಕುಮಾರಸ್ವಾಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂತಿ ಎನ್.ಎಸ್. ಸಂಜಯಗೌಡ ಅವರಿದ್ದ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಾದ ಮಂಡಿಸಿದ ವಕೀಲರು, ಅಧಿಕಾರ ವ್ಯಾಪ್ತಿ ಇಲ್ಲದಿದ್ದರೂ ತಹಶೀಲ್ದಾರ್ ಅರ್ಜಿದಾರರಿಗೆ ನೋಟಿಸ್ ನೀಡಿದ್ದಾರೆ. 1985ರಲ್ಲಿಯೇ ಕ್ರಯ ಪತ್ರವಾಗಿರುವ ಜಮೀನಿಗೆ ಈಗ ನೋಟಿಸ್ ನೀಡಲಾಗಿದೆ.
ನ್ಯಾಯಾಂಗ ನಿಂದನೆ ಪ್ರಕರಣವನ್ನು ಸುಪ್ರೀಂಕೋರ್ಟ್ನಲ್ಲಿ ಪ್ರಶ್ನಿಸಲಾಗಿದೆ. ಹಾಗಾಗಿ ತಹಶೀಲ್ದಾರ್ ನೋಟಿಸ್ಗೆ ತಡೆ ನೀಡಬೇಕು ಎಂದು ಕೋರಿದರು.ಇದಕ್ಕೆ ಸರ್ಕಾರದ ಪರ ವಕೀಲರು, ಆಕ್ಷೇಪ ವ್ಯಕ್ತಪಡಿಸಿ 2025ರ ತಿದ್ದುಪಡಿಯನ್ವಯ ತಹಶೀಲ್ದಾರ್ಗೆ ಅಧಿಕಾರವಿದೆ, ಹಾಗಾಗಿಯೇ ನೋಟಿಸ್ ಜಾರಿಗೊಳಿಸಲಾಗಿದೆ ಎಂದು ವಾದ ಮಂಡಿಸಿದರು.
ಅಲ್ಲದೇ, ಆ ಕುರಿತು ದಾಖಲೆ ಸಲ್ಲಿಸಲು ಕಾಲಾವಕಾಶ ಕೋರಿದರು.ಅದಕ್ಕೆ ಸರ್ಕಾರದ ಪರ ವಕೀಲರು, ಮಾರ್ಚ್ 27ರವರೆಗೂ ಅರ್ಜಿದಾರರ ವಿರುದ್ಧ ಯಾವುದೇ ವಿಧವಾದ ಬಲವಂತದ ಕ್ರಮ ಕೈಗೊಳ್ಳುವುದಿಲ್ಲ ಎಂದು ಹೇಳಿದರು. ಆ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಾಲಯ ವಿಚಾರಣೆಯನ್ನು ಮಾ.27ಕ್ಕೆ ನಿಗದಿಪಡಿಸಿತು.