Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ವಿಚ್ಛೇದನವೂ ಆಗಿಲ್ಲ, ಜಗಳವೂ ಇಲ್ಲ: ಆದರೂ 35 ವರ್ಷಗಳಿಂದ ಪತಿಯಿಂದ ಈ ಖ್ಯಾತ ನಟಿ ದೂರ, ಕಾರಣವೇನು ಗೊತ್ತ?

ಜೂನ್​ 15ರಿಂದ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ

ರಾಜ್ಯದಲ್ಲೊಂದು ಮನಕಲಕುವ ಘಟನೆ: ದ್ವಿತೀಯ ಪಿಯುಸಿಯಲ್ಲಿ 4ನೇ ರ್‍ಯಾಂಕ್ ವಿಜೇತೆ ಅಭಿಜ್ಞಾ ಭಟ್ ಅನಾರೋಗ್ಯದಿಂದ ನಿಧನ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜೂನ್​ 15ರಿಂದ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ
KARNATAKA

ಜೂನ್​ 15ರಿಂದ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ

By ಸುರೇಶ್‌

ಶಿವಮೊಗ್ಗ: ಮಳೆಗಾಲದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ರಸ್ತೆ ಕುಸಿತ ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ಆಗುಂಬೆ ಘಾಟಿ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟಿಯಲ್ಲಿ ಜಲ್ಲಿ ಮತ್ತು ಸರಕು ತುಂಬಿದ ಭಾರಿ ವಾಹನಗಳ ಓಡಾಟವನ್ನು ಜೂನ್ 15ರಿಂದ ಜಾರಿಗೆ ಬರುವಂತೆ ಮಳೆಗಾಲ ಮುಗಿಯುವವರೆಗೂ ನಿಷೇಧಿಸಿ ಶಿವಮೊಗ್ಗ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಅವರು ಅಧಿಕೃತ ಆದೇಶ ಹೊರಡಿಸಿದ್ದಾರೆ.

ಹುಲಿಕಲ್ ಘಾಟಿ ಕಾಮಗಾರಿ ವಿಳಂಬವೇ ಕಾರಣ: ಶಿವಮೊಗ್ಗದಿಂದ ಹೊಸನಗರ-ಮಾಸ್ತಿಕಟ್ಟೆ ಮಾರ್ಗವಾಗಿ ಕುಂದಾಪುರ ಮತ್ತು ಉಡುಪಿಗೆ ಸಂಪರ್ಕ ಕಲ್ಪಿಸುವ ಮತ್ತೊಂದು ಪ್ರಮುಖ ಮಾರ್ಗವಾದ ಹುಲಿಕಲ್ ಘಾಟಿಯಲ್ಲಿ ಇತ್ತೀಚೆಗೆ ಭೂಕುಸಿತ ಸಂಭವಿಸಿತ್ತು. ಸದ್ಯ ಅಲ್ಲಿ ತಾತ್ಕಾಲಿಕ ರಕ್ಷಣಾತ್ಮಕ ಕಾಮಗಾರಿಗಳು ಪ್ರಗತಿಯಲ್ಲಿದ್ದು, ಇನ್ನು ಸಂಪೂರ್ಣವಾಗಿ ಮುಗಿದಿಲ್ಲ. ಹುಲಿಕಲ್ ಘಾಟಿಯ ಈ ರಸ್ತೆ ದುರಸ್ತಿ ಕಾರ್ಯ ಪೂರ್ಣಗೊಳ್ಳದ ಕಾರಣ, ವಾಹನ ಸವಾರರು ಅನಿವಾರ್ಯವಾಗಿ ಆಗುಂಬೆ ಘಾಟಿಯನ್ನೇ ಅವಲಂಬಿಸುವಂತಾಗಿದೆ.

ಹೆಚ್ಚಿದ ಸಂಚಾರ ಒತ್ತಡ ಮತ್ತು ಅಪಾಯದ ಭೀತಿ: ರಾಷ್ಟ್ರೀಯ ಹೆದ್ದಾರಿ 169ಎ ತೀರ್ಥಹಳ್ಳಿ-ಮಲ್ಪೆ-ಉಡುಪಿ ರಸ್ತೆಯ ಆಗುಂಬೆ ಘಾಟಿಯಲ್ಲಿ ಸದ್ಯ ಭಾರಿ ವಾಹನಗಳ ಓಡಾಟ ಗಣನೀಯವಾಗಿ ಹೆಚ್ಚಾಗಿದೆ. ಮುಂಬರುವ ಮಳೆಗಾಲದಲ್ಲಿಯೂ ಇದೇ ರೀತಿ ಭಾರಿ ವಾಹನಗಳ ಸಂಚಾರ ಮುಂದುವರೆದರೆ, ಸೂಕ್ಷ್ಮ ಪ್ರದೇಶವಾಗಿರುವ ಘಾಟಿ ರಸ್ತೆಯ ಬದಿಗಳಲ್ಲಿ ಭೂಕುಸಿತ ಉಂಟಾಗುವ ಸಾಧ್ಯತೆ ಅಧಿಕವಾಗಿದೆ. ಅಲ್ಲದೆ, ಇದು ಸರಣಿ ಅಪಘಾತಗಳಿಗೆ ಕಾರಣವಾಗಿ ಸಾರ್ವಜನಿಕರ ಜೀವಕ್ಕೆ ಹಾಗೂ ಮುಕ್ತ ಓಡಾಟಕ್ಕೆ ತೀವ್ರ ತೊಂದರೆಯಾಗುವ ಸಂಭವ ಇರುವುದರಿಂದ ಜಿಲ್ಲಾಡಳಿತ ಈ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.

ತೀರ್ಥಹಳ್ಳಿಯಿಂದ ಉಡುಪಿಗೆ ಹೋಗುವವರಿಗೆ ಪರ್ಯಾಯ ಮಾರ್ಗ: ಭಾರಿ ವಾಹನಗಳ ನಿಷೇಧದ ಹಿನ್ನೆಲೆಯಲ್ಲಿ ವಾಹನ ಸವಾರರು ಸಂಚರಿಸಲು ಜಿಲ್ಲಾಧಿಕಾರಿಗಳು ಪರ್ಯಾಯ ಮಾರ್ಗಗಳನ್ನು ಸೂಚಿಸಿದ್ದಾರೆ. ತೀರ್ಥಹಳ್ಳಿಯಿಂದ ಉಡುಪಿ ಕಡೆಗೆ ತೆರಳುವ ಭಾರಿ ವಾಹನಗಳು ಈ ಕೆಳಗಿನ ಮಾರ್ಗಗಳನ್ನು ಬಳಸಬೇಕಾಗುತ್ತದೆ:

  • ಮಾರ್ಗ ೧: ತೀರ್ಥಹಳ್ಳಿ – ನಗರ – ನಾಗೋಡಿ – ಕೊಲ್ಲೂರು – ಕುಂದಾಪುರ – ಉಡುಪಿ.

  • ಮಾರ್ಗ ೨: ತೀರ್ಥಹಳ್ಳಿ – ಶೃಂಗೇರಿ – ಕೆರೆಕಟ್ಟೆ – ಬಜಗೋಳಿ – ಕಾರ್ಕಳ – ಉಡುಪಿ.

ಉಡುಪಿಯಿಂದ ತೀರ್ಥಹಳ್ಳಿಗೆ ಬರುವವರಿಗೆ ಪರ್ಯಾಯ ಮಾರ್ಗ: ಅದೇ ರೀತಿ, ಉಡುಪಿ ಕಡೆಯಿಂದ ತೀರ್ಥಹಳ್ಳಿ ಹಾಗೂ ಶಿವಮೊಗ್ಗದ ಕಡೆಗೆ ಆಗಮಿಸುವ ಭಾರಿ ವಾಹನಗಳ ಸಂಚಾರಕ್ಕೂ ಪರ್ಯಾಯ ರಸ್ತೆಗಳನ್ನು ನಿಗದಿಪಡಿಸಲಾಗಿದೆ:

  • ಮಾರ್ಗ ೧: ಉಡುಪಿ – ಕುಂದಾಪುರ – ಕೊಲ್ಲೂರು – ನಾಗೋಡಿ – ನಗರ – ತೀರ್ಥಹಳ್ಳಿ.

  • ಮಾರ್ಗ ೨: ಕಾರ್ಕಳ – ಬಜಗೋಳಿ – ಕೆರೆಕಟ್ಟೆ – ಶೃಂಗೇರಿ – ತೀರ್ಥಹಳ್ಳಿ.

ಮಳೆಗಾಲದ ಅವಧಿಯಲ್ಲಿ ಯಾವುದೇ ಅಹಿತಕರ ಘಟನೆಗಳು ಸಂಭವಿಸದಂತೆ ತಡೆಯಲು ಸಾರ್ವಜನಿಕರು ಹಾಗೂ ಸಾರಿಗೆ ಮಾಲೀಕರು ಜಿಲ್ಲಾಡಳಿತದ ಈ ಆದೇಶವನ್ನು ಪಾಲಿಸಿ, ಸಹಕರಿಸಬೇಕೆಂದು ಕೋರಲಾಗಿದೆ.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲೊಂದು ಮನಕಲಕುವ ಘಟನೆ: ದ್ವಿತೀಯ ಪಿಯುಸಿಯಲ್ಲಿ 4ನೇ ರ್‍ಯಾಂಕ್ ವಿಜೇತೆ ಅಭಿಜ್ಞಾ ಭಟ್ ಅನಾರೋಗ್ಯದಿಂದ ನಿಧನ

2 Mins Read

ಯೋಗೇಶ್ ಗೌಡ ಕೊಲೆ ಕೇಸ್ : ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಜೂ.18ಕ್ಕೆ ನಿಗದಿಪಡಿಸಿದ ಹೈಕೋರ್ಟ್!

2 Mins Read

BIG NEWS: ಸರ್ಕಾರಿ ನೌಕರನ ವೈಯಕ್ತಿಕ ಆಸ್ತಿ ವಿವರ ‘RTI’ ಅಡಿ ನೀಡಲಾಗದು: ಹೈಕೋರ್ಟ್ ಮಹತ್ವದ ತೀರ್ಪು

2 Mins Read
Recent News

ವಿಚ್ಛೇದನವೂ ಆಗಿಲ್ಲ, ಜಗಳವೂ ಇಲ್ಲ: ಆದರೂ 35 ವರ್ಷಗಳಿಂದ ಪತಿಯಿಂದ ಈ ಖ್ಯಾತ ನಟಿ ದೂರ, ಕಾರಣವೇನು ಗೊತ್ತ?

ಜೂನ್​ 15ರಿಂದ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ

ರಾಜ್ಯದಲ್ಲೊಂದು ಮನಕಲಕುವ ಘಟನೆ: ದ್ವಿತೀಯ ಪಿಯುಸಿಯಲ್ಲಿ 4ನೇ ರ್‍ಯಾಂಕ್ ವಿಜೇತೆ ಅಭಿಜ್ಞಾ ಭಟ್ ಅನಾರೋಗ್ಯದಿಂದ ನಿಧನ

ಯೋಗೇಶ್ ಗೌಡ ಕೊಲೆ ಕೇಸ್ : ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಜೂ.18ಕ್ಕೆ ನಿಗದಿಪಡಿಸಿದ ಹೈಕೋರ್ಟ್!

State News
KARNATAKA

ಜೂನ್​ 15ರಿಂದ ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ

By ಸುರೇಶ್‌ KARNATAKA 2 Mins Read

ಶಿವಮೊಗ್ಗ: ಮಳೆಗಾಲದ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆ ಮತ್ತು ರಸ್ತೆ ಕುಸಿತ ತಡೆಗಟ್ಟುವ ಮುನ್ನೆಚ್ಚರಿಕಾ ಕ್ರಮವಾಗಿ ಶಿವಮೊಗ್ಗ ಜಿಲ್ಲೆಯ ಆಗುಂಬೆ ಘಾಟಿ…

ರಾಜ್ಯದಲ್ಲೊಂದು ಮನಕಲಕುವ ಘಟನೆ: ದ್ವಿತೀಯ ಪಿಯುಸಿಯಲ್ಲಿ 4ನೇ ರ್‍ಯಾಂಕ್ ವಿಜೇತೆ ಅಭಿಜ್ಞಾ ಭಟ್ ಅನಾರೋಗ್ಯದಿಂದ ನಿಧನ

ಯೋಗೇಶ್ ಗೌಡ ಕೊಲೆ ಕೇಸ್ : ವಿನಯ್ ಕುಲಕರ್ಣಿ ಜಾಮೀನು ಅರ್ಜಿ ವಿಚಾರಣೆ ಜೂ.18ಕ್ಕೆ ನಿಗದಿಪಡಿಸಿದ ಹೈಕೋರ್ಟ್!

BIG NEWS: ಸರ್ಕಾರಿ ನೌಕರನ ವೈಯಕ್ತಿಕ ಆಸ್ತಿ ವಿವರ ‘RTI’ ಅಡಿ ನೀಡಲಾಗದು: ಹೈಕೋರ್ಟ್ ಮಹತ್ವದ ತೀರ್ಪು

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.