Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಬಾಪೂಜಿ ಸೇವಾ ಕೇಂದ್ರಗಳಲ್ಲೇ ಸಿಗಲಿದೆ `11ಇ ನಕ್ಷೆ, ಪೋಡಿ, ಹದ್ದುಬಸ್ತು’ ಸೇವೆ.!

13/01/2026 9:45 AM

SHOCKING : ಮಾತ್ರೆ ಸೇವಿಸಿ ಲವರ್ ಜೊತೆಗೆ `ಸೆಕ್ಸ್’ ನಡೆಸುವಾಗಲೇ ಯುವಕ ದುರಂತ ಸಾವು.!

13/01/2026 9:36 AM

ALERT : `ಆನ್‌ ಲೈನ್’ ನೋಡಿ ಚಿಕಿತ್ಸೆ ಪಡೆಯುವವರೇ ಎಚ್ಚರ : ದೇಹದೊಳಗೆ ಜೀವಂತ `ಜಿಗಣಿ ಹುಳ’ ಸೇರಿಸಿಕೊಂಡ ಯುವಕ.!

13/01/2026 9:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಇಂದಿನಿಂದ `ಒಳಮೀಸಲಾತಿ’ಗಾಗಿ ಮನೆಮನೆ ಗಣತಿ ಆರಂಭ : ಆ್ಯಪ್ ಮೂಲಕ ಸಮೀಕ್ಷೆ.!
KARNATAKA

BIG NEWS : ರಾಜ್ಯದಲ್ಲಿ ಇಂದಿನಿಂದ `ಒಳಮೀಸಲಾತಿ’ಗಾಗಿ ಮನೆಮನೆ ಗಣತಿ ಆರಂಭ : ಆ್ಯಪ್ ಮೂಲಕ ಸಮೀಕ್ಷೆ.!

By kannadanewsnow5705/05/2025 5:55 AM
vidhana soudha
vidhana soudha

ಬೆಂಗಳೂರು : ಪರಿಶಿಷ್ಟ ಜಾತಿ ಒಳ ಮೀಸಲು ಕಲ್ಪಿಸುವ ಕುರಿತು ಶಿಫಾರಸು ಮಾಡಲು ಸರ್ಕಾರ ರಚಿಸಿರುವ ನ್ಯಾ| ನಾಗಮೋಹನ್ ದಾಸ್ ಆಯೋಗ ಇಂದಿನಿಂದ ಸಮೀಕ್ಷೆಗೆ ಚಾಲನೆ ನೀಡಲಿದ್ದು, ಗಣತಿದಾರರು ಪ್ರತಿ ಮನೆ ಮನೆಗೂ ಆಗಮಿಸಿ ಸಮೀಕ್ಷೆ ನಡೆಸಲಿದ್ದಾರೆ.

ಗಣತಿದಾರರು ಕೇವಲ ಪರಿಶಿಷ್ಟ ಜಾತಿಗೆ ಸೇರಿದವರ ಮನೆಗೆ ಮಾತ್ರವಲ್ಲದೆ ಎಲ್ಲ ಮನೆಗಳಿಗೂ ಭೇಟಿ ನೀಡಲಿದ್ದಾರೆ. ಈ ವೇಳೆ ಎಸ್ಸಿ ಅಲ್ಲದ ಕುಟುಂಬಗಳಿಂದ ಮನೆ ಸಂಖ್ಯೆ ಆ್ಯಪ್ ನಲ್ಲಿ ನಮೂದಿಸಿ ಕುಟುಂಬ ಸದಸ್ಯರ ಸಂಖ್ಯೆ ದಾಖಲಿಸಲಿದ್ದಾರೆ.

ಮತ್ತಷ್ಟು ಮಾಹಿತಿ: ಸಮೀಕ್ಷೆದಾರರ ಪ್ರಾಮುಖ್ಯತೆ: ಸಮೀಕ್ಷೆದಾರನಾಗಿ ಆಯ್ಕೆಗೊಂಡಿರುವುದು ಶಿಕ್ಷಕರು ಸಮೀಕ್ಷೆದಾರರಾಗಿ ಮಹತ್ವದ ಕರ್ತವ್ಯ ನಿರ್ವಹಿಸಬೇಕಿದೆ.

ಸಮೀಕ್ಷೆಯಲ್ಲಿ ಶಿಕ್ಷಕರ ಪಾತ್ರ ಮಹತ್ವದ್ದಾಗಿವೆ. ಸಮೀಕ್ಷೆದಾರರು ನಿಷ್ಠೆಯಿಂದ ಸಕ್ರಿಯವಾಗಿ ಭಾಗವಹಿಸಿ ಸಮೀಕ್ಷೆ ಪೂರ್ಣಗೊಳಿಸಬೇಕಿದೆ.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕೈಗೊಳ್ಳುವ ಮೊದಲು ತಮಗೆ ವಹಿಸಿದ ಪ್ರದೇಶದಲ್ಲಿನ ಹಿರಿಯ ಮತ್ತು ಪ್ರಮುಖ ವ್ಯಕ್ತಿಗಳನ್ನು ಭೇಟಿ ಮಾಡಿ ಭೇಟಿಯ ಉದ್ದೇಶವನ್ನು ನಿವಾಸಿಗಳಿಗೆ ವಿವರಿಸುವ ಮೂಲಕ ಅವರೊಂದಿಗೆ ನಿಕಟ ಸೌಹಾರ್ದತೆ ಹೊಂದಬೇಕು.

ಸಮೀಕ್ಷೆ ಕಾರ್ಯಕ್ಕೆ ಹೋಗುವ ಎಲ್ಲ ಸಮಯದಲ್ಲಿ ಗುರುತಿನ ಚೀಟಿಯನ್ನು ಕೊರಳಲ್ಲಿ ತಪ್ಪದೇ ಧರಿಸಿರಬೇಕು. ಯಾವುದೇ ಕುಟುಂಬವನ್ನು ಸಂದರ್ಶಿಸಿ, ಪ್ರಶ್ನಾವಳಿಯಲ್ಲಿನ ಪ್ರಶ್ನೆಗಳನ್ನು ಕೇಳುವಾಗ ಅವಸರ ಮಾಡಬೇಡಿ. ಯಾವಾಗಲೂ ನಗುಮುಖದೊಡನೆ ಮತ್ತು ಸೌಜನ್ಯ ಪೂರ್ವಕವಾಗಿ, ನಿಮ್ಮ ಭೇಟಿಯ ಉದ್ದೇಶವನ್ನು ಮನೆಯ ಸದಸ್ಯರಿಗೆ ಸಂಕ್ಷಿಪ್ತವಾಗಿ ವಿವರಿಸಿ ನಿಮ್ಮ ಕಿರು ಪರಿಚಯದೊಡನೆ ಮುಂದುವರೆಯಿರಿ. ಸ್ನೇಹಪೂರ್ವಕ ಮತ್ತು ವಿವೇಚನಾಯುತ ನಡೆನುಡಿಗಳು ಹಾಗೂ ವಿನಯಪೂರ್ವಕವಾಗಿ ಆಡಿದ ಕೆಲವು ಒಳ್ಳೆಯ ಮಾತುಗಳು ಕುಟುಂಬ ಸದಸ್ಯರಿಗೆ ನಿರಾಳತೆಯನ್ನು ನೀಡಿ, ಅವರು ಸರಿಯಾದ ಉತ್ತರ ನೀಡಲು ಅನುಕೂಲವಾಗುತ್ತದೆ.

ಸೂಚನಾ ಕೈಪಿಡಿಯು ಮೊಬೈಲ್ ಆಪ್‍ನಲ್ಲಿ ಸಮೀಕ್ಷೆಯಲ್ಲಿನ ಮಾಹಿತಿ ತುಂಬುವ ಕುರಿತು ನೀಡಿರುವ ವಿಸ್ತøತ ಮಾರ್ಗದರ್ಶಿಯಾಗಿದೆ. ಸಮೀಕ್ಷೆಗೆ ಸಂಬಂಧಿಸಿದ ನಮೂನೆಗಳನ್ನು ಭರ್ತಿ ಮಾಡುವಾಗ ಸಾಮಾನ್ಯವಾಗಿ ಉದ್ಭವವಾಗಬಹುದಾದ ಎಲ್ಲಾ ಸಮಸ್ಯೆಗಳ ಬಗ್ಗೆಯೂ ವಿವರ ನೀಡಲು ಸಾಕಷ್ಟು ಪ್ರಯತ್ನ ಮಾಡಲಾಗಿದೆ. ಯಾವುದೇ ರೀತಿಯ ಸಂದೇಹ ನಿವಾರಣೆಗಾಗಿ ನಿಮ್ಮ ಮೇಲ್ವಿಚಾರಕರು ಅಥವಾ ಸಂಪನ್ಮೂಲ ವ್ಯಕ್ತಿ ಸಂಪರ್ಕಿಸಬಹುದು. ತರಬೇತಿಗೆ ಹಾಜರಾದಾಗ ಅವರ ಮೊಬೈಲ್ ಸಂಖ್ಯೆ ಪಡೆದುಕೊಳ್ಳಲು ಮರೆಯಬೇಡಿ.

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಸಮಯದಲ್ಲಿ ಸಮೀಕ್ಷೆದಾರರ ಪಾತ್ರ ಮತ್ತು ಜವಾಬ್ದಾರಿಗಳು: ಮೊಬೈಲ್ ಆಪ್ ನಲ್ಲಿಯ ಅಂಶ/ ಕಾಲಂಗಳನ್ನು ಅರ್ಥ ಮಾಡಿಕೊಂಡು ಅವುಗಳನ್ನು ಭರ್ತಿ ಮಾಡುವ ಬಗ್ಗೆ ಈ ಕೈಪಿಡಿಯಲ್ಲಿ ಸವಿಸ್ತಾರವಾಗಿ ವಿವರಿಸಲಾಗಿದೆ. ಈ ಸೂಚನೆಗಳ ಪರಿಚಯವನ್ನು ಮಾಡಿಕೊಳ್ಳುವುದು ಅತ್ಯಾವಶ್ಯಕ. ಸೂಚನೆಗಳನ್ನು ಪೂರ್ಣವಾಗಿ ಹಾಗೂ ಸ್ಪಷ್ಟವಾಗಿ ತಿಳಿದುಕೊಂಡ ಮೇಲೆ ಕುಟುಂಬದ ಅನುಸೂಚಿಯನ್ನು ನೈಜವಾಗಿ ಹಾಗೂ ಪ್ರಾಮಾಣಿಕವಾಗಿ ಭರ್ತಿ ಮಾಡುವುದರ ಮೇಲೆ ಸಮೀಕ್ಷೆಯ ಯಶಸ್ಸು ಅವಲಂಬಿಸಿದೆ. ತರಬೇತಿ ಸಮಯದಲ್ಲಿ ಅನುಮಾನಗಳು ಇದ್ದರೆ, ತರಬೇತಿ ಶಿಬಿರದಲ್ಲಿ ತರಬೇತುದಾರರಿಂದ ವಿವರಣೆಯನ್ನು ಪಡೆಯಲು ಹಿಂಜರಿಯಬೇಡಿ.

ಸಮೀಕ್ಷಾ ಸಮಯದಲ್ಲಿನ ಕರ್ತವ್ಯಗಳು: ಸಮೀಕ್ಷಾ ವ್ಯಾಪ್ತಿಯಲ್ಲಿರುವ ಮನೆಗಳಿಗೆ ನಿಮಗೆ ಒದಗಿಸಲಾದ ಮತದಾರರ ಪಟ್ಟಿಯಲ್ಲಿರುವ ಮನೆ ಸಂಖ್ಯೆಗಳ ಆಧಾರದ ಮೇಲೆ ಭೇಟಿ ನೀಡಬೇಕು. ಮತ್ತು ಪರಿಶಿಷ್ಟ ಜಾತಿಯ ಕುಟುಂಬಗಳನ್ನು ಗುರುತಿಸಬೇಕು.

ಯಾವ ದಿನದಂದು, ಯಾವ ಯಾವ ಮನೆಗಳನ್ನು ಸಮೀಕ್ಷೆಗೆ ಒಳಪಡಿಸಲಾಗುವುದು ಎಂಬ ಮಾಹಿತಿಯನ್ನು ಆದಷ್ಟು ಮಟ್ಟಿಗೆ ಮುಂಚಿತವಾಗಿಯೆ ಗ್ರಾಮಸ್ಥರಿಗೆ ತಿಳಿಸುವುದು. ಪಂಚಾಯತ್ ಅಭಿವೃದ್ದಿ ಅಧಿಕಾರಿ(ಪಿಡಿಒ), ಗ್ರಾಮದ ಗ್ರಾಮ ಲೆಕ್ಕಿಗರು, ಪಂಚಾಯತ್ ಬಿಲ್ ಕಲೆಕ್ಟರ್, ಅಂಗನವಾಡಿ ಕಾರ್ಯಕರ್ತರು ಹಾಗೂ ಇತರರ ನೆರವನ್ನು ಪಡೆಯಬಹುದು.

ಸಮೀಕ್ಷೆಯಲ್ಲಿ ಪರಿಶಿಷ್ಟ ಜಾತಿಯವರ ಯಾವುದೇ ಮನೆಯನ್ನು ಬಿಡದೆ, ಪ್ರತಿಯೊಂದು ಮನೆಗೆ ಭೇಟಿ ನೀಡಿ ಅಲ್ಲಿರುವ ಪ್ರತಿಯೊಂದು ಕುಟುಂಬದ ಎಲ್ಲಾ ಸದಸ್ಯರ ಮಾಹಿತಿಯನ್ನು ಮೊಬೈಲ್ ಆಪ್‍ನಲ್ಲಿ ಭರ್ತಿ ಮಾಡುವುದು.

ಸಮೀಕ್ಷೆ ನಡೆಸುವಾಗ ಸಮೀಕ್ಷೆ ಬ್ಲಾಕಿನ ಅಧಿಕೃತ ಭಾಗವಾಗಿರುವ ಯಾವುದೇ ಮನೆಯನ್ನು ಬಿಡಬಾರದು. ಒಂದು ಇಡೀ ಕುಟುಂಬವೇ ತಾತ್ಕಾಲಿಕವಾಗಿ ಲಭ್ಯವಿಲ್ಲದಿದ್ದಲ್ಲಿ (ನಿಮ್ಮ ಭೇಟಿಯ ಸಮಯದಲ್ಲಿ ಗ್ರಾಮ/ ನಗರದಲ್ಲಿ ಮಾಹಿತಿದಾರರು ಇಲ್ಲದಿದ್ದ ಕಾರಣದಿಂದ) ಸಮೀಕ್ಷೆಯ ಕಾಲಾವಧಿಯಲ್ಲಿ ಇನ್ನೊಮ್ಮೆ ಭೇಟಿ ನೀಡಿ, ಹಲವಾರು ಬಾರಿ ಭೇಟಿ ನೀಡಿದಾಗಲೂ ಮಾಹಿತಿಯನ್ನು ಸಂಗ್ರಹಿಸಲು ಸಾಧ್ಯವಾಗದಿದ್ದಲ್ಲಿ ನಿಮ್ಮ ಮೇಲ್ವಿಚಾರಕರ ಗಮನಕ್ಕೆ ತಂದು ಅವರ ಆದೇಶಾನುಸಾರ ಕ್ರಮವಹಿಸಿ.

ನೀವು ಯಾವುದೇ ಕುಟುಂಬವನ್ನು ಭೇಟಿ ಮಾಡಿದಾಗ, ಪ್ರಶ್ನಾವಳಿ ತುಂಬಲು ಆತುರಪಡಬೇಡಿ. ಯಾವಾಗಲೂ ಹಸನ್ಮುಖರಾಗಿ ನಿಮ್ಮ ಭೇಟಿಯ ಬಗ್ಗೆ ಮಾಹಿತಿ ನೀಡುವವರಿಗೆ ಸಂಕ್ಷಿಪ್ತವಾಗಿ ತಿಳಿಸಿ ನಿಮ್ಮ ಪರಿಚಯವನ್ನು ಮಾಡಿಕೊಳ್ಳಿ. ನೀವು ಸಮೀಕ್ಷೆ ಮಾಡುವ ಮುನ್ನ ನಿಮ್ಮ ಗುರುತಿನ ಚೀಟಿಯನ್ನು ತೋರಿಸಿ, ಸ್ನೇಹಮಯ ಮತ್ತು ಸೌಜನ್ಯ ಪೂರ್ವಕ ನಡತೆಯಿಂದ ಸಮೀಕ್ಷೆಗೆ ಬೇಕಾಗುವ ಮಾಹಿತಿಯನ್ನು ಪಡೆದುಕೊಳ್ಳಲು ಸಹಾಯವಾಗುತ್ತದೆ.

ಕುಟುಂಬಕ್ಕೆ ಸೇರದ ವ್ಯಕ್ತಿಯ ಮೂಲಕವಾಗಲಿ ಅಥವಾ ಸಂಘ ಸಂಸ್ಥೆಗಳ ಮೂಲಕವಾಗಲಿ ಮಾಹಿತಿಯನ್ನು ಸಂಗ್ರಹಿಸಬೇಡಿ. ಇದು ಮನೆ ಮನೆಗೆ ಭೇಟಿ ನೀಡಿ ಸಮೀಕ್ಷೆ ನಡೆಸುವ ಕಾರ್ಯಕ್ರಮವಾಗಿದೆ.

ಮಾಹಿತಿದಾರರು (ಪುರುಷ ಅಥವಾ ಮಹಿಳೆ) ಸಾಮಾನ್ಯವಾಗಿ ತಿಳುವಳಿಕೆ ಉಳ್ಳವರಾಗಿದ್ದು, ಕುಟುಂಬದ ಬಗ್ಗೆ ಮಾಹಿತಿ ನೀಡಲು ಸಮರ್ಥರಾಗಿರಬೇಕು. ಅಪ್ರಾಪ್ತ ವಯಸ್ಸಿನ ಮಕ್ಕಳಿಂದ ಮಾಹಿತಿ ಪಡೆಯಬಾರದು. ಸಮೀಕ್ಷೆಯ ವೇಳೆಯಲ್ಲಿ ಕುಟುಂಬದ ಸದಸ್ಯರೊಂದಿಗೆ ವಾಗ್ವಾದ ಮಾಡದೇ ವಿನಯಪೂರ್ವಕವಾಗಿ ಪ್ರಶ್ನೆಗಳನ್ನು ಕೇಳಿ ಮಾಹಿತಿ ಸಂಗ್ರಹಿಸಬೇಕಿದೆ. ನಿಮಗೆ ಮಾಹಿತಿ ನೀಡುವವರು ಮಹಿಳೆಯರಾಗಿದ್ದಲ್ಲಿ ಹೆಚ್ಚು ಗೌರವಪೂರ್ವಕವಾಗಿ ವರ್ತಿಸಿ.

ಕುಟುಂಬದ ಸದಸ್ಯರು ಮಾಹಿತಿಯನ್ನು ನೀಡುವಾಗ ತಾಳ್ಮೆಯಿಂದ ವರ್ತಿಸಿ ಅವರು ನೀಡುವ ಮಾಹಿತಿಯನ್ನು ಸರಿಯಗಾಗಿ ದಾಖಲು ಮಾಡಬೇಕು. ಅವರು ಉತ್ತರಿಸುವ ಮೊದಲೇ ಇನ್ನಿತರ ಅಂಶಗಳ ಬಗ್ಗೆ ಪ್ರಶ್ನೆಗಳನ್ನು ಕೇಳಬೇಡಿ.

ಸದಸ್ಯರು ನೀಡುವ ಮಾಹಿತಿಯನ್ನು ನಮೂನೆ-3 ರಲ್ಲಿ ನಮೂದಿಸಿರುವ ಅಂಶಗಳ ಬಗ್ಗೆ ಹಾಗೂ ನಿಗದಿತ ಕೋಡ್ ಸಂಖ್ಯೆಗಳ ಪ್ರಕಾರ ಮೊಬೈಲ್ ಆಪ್ ನಲ್ಲಿ ನಮೂದಿಸಬೇಕು.

BIG NEWS: House-to-house census for `internal reservation' begins in the state from today: Survey through app!
Share. Facebook Twitter LinkedIn WhatsApp Email

Related Posts

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಬಾಪೂಜಿ ಸೇವಾ ಕೇಂದ್ರಗಳಲ್ಲೇ ಸಿಗಲಿದೆ `11ಇ ನಕ್ಷೆ, ಪೋಡಿ, ಹದ್ದುಬಸ್ತು’ ಸೇವೆ.!

13/01/2026 9:45 AM2 Mins Read

ಉದ್ಯೋಗಿಗಳಿಗೆ ಗುಡ್ ನ್ಯೂಸ್ : `ಸಂಬಳ ಖಾತೆ’ಯಿಂದ ನಿಮಗೆ ಸಿಗಲಿವೆ ಈ 5 ಆರ್ಥಿಕ ಪ್ರಯೋಜನಗಳು.!

13/01/2026 9:04 AM2 Mins Read

BIG NEWS : ಮಕ್ಕಳ ಮೇಲೆ ಲೈಂಗಿಕ ಶೋಷಣೆ : `ಪೋಕ್ಸೋ ಕಾಯಿದೆ’ಯಡಿ ವಿಧಿಸಲಾಗುವ ಅಪರಾಧ, ದಂಡನೆಗಳ ಕುರಿತು ಇಲ್ಲಿದೆ ಮಾಹಿತಿ

13/01/2026 8:58 AM2 Mins Read
Recent News

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಬಾಪೂಜಿ ಸೇವಾ ಕೇಂದ್ರಗಳಲ್ಲೇ ಸಿಗಲಿದೆ `11ಇ ನಕ್ಷೆ, ಪೋಡಿ, ಹದ್ದುಬಸ್ತು’ ಸೇವೆ.!

13/01/2026 9:45 AM

SHOCKING : ಮಾತ್ರೆ ಸೇವಿಸಿ ಲವರ್ ಜೊತೆಗೆ `ಸೆಕ್ಸ್’ ನಡೆಸುವಾಗಲೇ ಯುವಕ ದುರಂತ ಸಾವು.!

13/01/2026 9:36 AM

ALERT : `ಆನ್‌ ಲೈನ್’ ನೋಡಿ ಚಿಕಿತ್ಸೆ ಪಡೆಯುವವರೇ ಎಚ್ಚರ : ದೇಹದೊಳಗೆ ಜೀವಂತ `ಜಿಗಣಿ ಹುಳ’ ಸೇರಿಸಿಕೊಂಡ ಯುವಕ.!

13/01/2026 9:18 AM

ಲೋಹ್ರಿ, ಮಕರ ಸಂಕ್ರಾಂತಿ, ಪೊಂಗಲ್, ಮಾಘ ಬಿಹು ಶುಭಾಶಯಗಳನ್ನು ಕೋರಿದ ರಾಷ್ಟ್ರಪತಿ ಮುರ್ಮು

13/01/2026 9:14 AM
State News
KARNATAKA

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಬಾಪೂಜಿ ಸೇವಾ ಕೇಂದ್ರಗಳಲ್ಲೇ ಸಿಗಲಿದೆ `11ಇ ನಕ್ಷೆ, ಪೋಡಿ, ಹದ್ದುಬಸ್ತು’ ಸೇವೆ.!

By kannadanewsnow5713/01/2026 9:45 AM KARNATAKA 2 Mins Read

ಬೆಂಗಳೂರು : ರಾಜ್ಯದ ಗ್ರಾಮೀಣ ಜನತೆಗೆ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಭೂಮಾಪನ ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಯ ಮೋಜಿನಿ…

ಉದ್ಯೋಗಿಗಳಿಗೆ ಗುಡ್ ನ್ಯೂಸ್ : `ಸಂಬಳ ಖಾತೆ’ಯಿಂದ ನಿಮಗೆ ಸಿಗಲಿವೆ ಈ 5 ಆರ್ಥಿಕ ಪ್ರಯೋಜನಗಳು.!

13/01/2026 9:04 AM

BIG NEWS : ಮಕ್ಕಳ ಮೇಲೆ ಲೈಂಗಿಕ ಶೋಷಣೆ : `ಪೋಕ್ಸೋ ಕಾಯಿದೆ’ಯಡಿ ವಿಧಿಸಲಾಗುವ ಅಪರಾಧ, ದಂಡನೆಗಳ ಕುರಿತು ಇಲ್ಲಿದೆ ಮಾಹಿತಿ

13/01/2026 8:58 AM

BIG NEWS : ಕರ್ನಾಟಕದಲ್ಲಿ `ಸಾಮಾಜಿಕ ಬಹಿಷ್ಕಾರ’ ಹಾಕಿದರೆ 1 ಲಕ್ಷ ರೂ.ದಂಡ, 3 ವರ್ಷ ಜೈಲು ಶಿಕ್ಷೆ ಫಿಕ್ಸ್ : ಸರ್ಕಾರದಿಂದ ಮಹತ್ವದ ಆದೇಶ

13/01/2026 8:39 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.