ಬೆಂಗಳೂರು : ಈಗಾಗಲೆ ಬಿಗ್ ಬಾಸ್ 11ರ ಶೋನಿಂದ ಹೊರಹಾಕಲ್ಪಟ್ಟ ಲಾಯರ್ ಜಗದೀಶ್ ಅವರಿಗೆ ಕರ್ನಾಟಕದ ಕ್ರಶ್ ಎಂದೇ ಅಭಿಮಾನಿಗಳು ಬಿರುದು ಕೊಟ್ಟಿದ್ದರು. ಬಿಗ್ ಬಾಸ್ ಮನೆಯಲ್ಲಿ ಇದ್ದಾಗ ಮೊದಲನೇ ವಾರದಲ್ಲಿ ಅವಕಾಶ ಸಿಕ್ಕರೆ ನಾನು ರಾಜ್ಯದ ಸಿಎಂ ಆಗುತ್ತೇನೆ ಎಂದು ಹೇಳಿದ್ದರು.
ಇದೀಗ ಅವರು ಬಿಗ್ ಬಾಸ್ ನಲ್ಲಿ ಕೆಲವು ಅವಾಚ್ಯ ಪದಗಳನ್ನು ಬಳಸಿದ್ದರ ಹಿನ್ನೆಲೆಯಲ್ಲಿ ಅವರನ್ನು ಶೋನಿಂದ ಹೊರ ಹಾಕಲಾಗಿದೆ. ನಾನು ಕೂಡ ಸಿಎಂ ಆಗುತ್ತೇನೆ ಎಂಬ ಹೇಳಿಕೆ ನೀಡಿದ್ದ ಅವರು ಇದೀಗ ಹಾವೇರಿ ಜಿಲ್ಲೆಯ ಶಿಗ್ಗಾಂವಿ ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ಕೊಟ್ಟರೆ ಸಂಸದ ಬಸವರಾಜ ಬೊಮ್ಮಾಯಿ ಪುತ್ರ ಭರತ್ ಬೊಮ್ಮಾಯಿ ವಿರುದ್ಧ ಸ್ಪರ್ಧಿಸುತ್ತೇನೆ ಎಂದು ಹೇಳಿಕೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನಗೆ ಕಾಂಗ್ರೆಸ್ ಹೈಕಮಾಂಡ್ ಯಾರು ಗೊತ್ತಿಲ್ಲ ಅಕಸ್ಮಾತ್ ಕಾಂಗ್ರೆಸ್ ನನಗೆ ಟಿಕೆಟ್ ಕೊಟ್ಟರೆ ಸ್ಪರ್ಧಿಸುತ್ತೇನೆ. ಜನರ ಸೇವೆ ಮಾಡೋಕೆ ಯಾವ ಕೆಲಸ ಕೊಟ್ಟರೂ ಮಾಡುತ್ತೇನೆ. ಕಾಂಗ್ರೆಸ್ ಹೈಕಮಾಂಡ್ ನನ್ನನ್ನು ಕರೆದು ಟಿಕೆಟ್ ಕೊಟ್ಟರೆ ನನ್ನ ಜವಾಬ್ದಾರಿ ನಿರ್ವಹಿಸುತ್ತೇನೆ ಎಂದು ತಿಳಿಸಿದ್ದಾರೆ. ಆದರೆ ಈಗಾಗಲೇ ನಾಳೆ ಶಿಗ್ಗಾಂವಿ ಕ್ಷೇತ್ರದ ಅಭ್ಯರ್ಥಿ ಹೆಸರು ಘೋಷಣೆ ಆಗಲಿದೆ.