Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೆಮ್ಮನ್ನು ರೆಕಾರ್ಡ್ ಮಾಡಿ ಶ್ವಾಸಕೋಶದ ಆರೋಗ್ಯ ವರದಿ ಪಡೆಯಬಹುದು : `Swaasa AI’ ಅಪ್ಲಿಕೇಶನ್ ಗೆ AIIMS ಅನುಮೋದನೆ !

20/02/2026 11:50 AM
BREAKING NEWS

BREAKING : ಗ್ರೇಟರ್ ಬೆಂಗಳೂರು ಕಸ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ : ತಪ್ಪಿದ ಭಾರಿ ಅನಾಹುತ!

20/02/2026 11:47 AM

ಭಾರತ AI ಇಂಪ್ಯಾಕ್ಟ್ ಶೃಂಗಸಭೆ: ಭಾರತದಲ್ಲಿ 300 ಬಿಲಿಯನ್ ಡಾಲರ್ ಮೌಲ್ಯದ ಎಐ ಹೂಡಿಕೆ: ವರದಿ

20/02/2026 11:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ `ಅಕ್ಕ ಪಡೆ’ ರಚನೆ, ಕಾರ್ಯ ವಿಧಾನಗಳ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ
KARNATAKA

BIG NEWS : ರಾಜ್ಯದಲ್ಲಿ `ಅಕ್ಕ ಪಡೆ’ ರಚನೆ, ಕಾರ್ಯ ವಿಧಾನಗಳ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

By kannadanewsnow5710/01/2026 5:27 AM

ಬೆಂಗಳೂರು : ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರವು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮತ್ತು ಗೃಹ ಇಲಾಖೆಯು ಸಹಯೋಗದೊಂದಿಗೆ “ಅಕ್ಕ ಪಡೆ” ಎಂಬ ಒಂದು ನೂತನ ಯೋಜನೆಯನ್ನು ಜಾರಿಗೆ ತರಲಾಗಿದೆ. ರಾಜ್ಯದಲ್ಲಿ ಅಕ್ಕ ಪಡೆ ರಚನೆ ಮತ್ತು ಕಾರ್ಯ ವಿಧಾನಗಳ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.

ಪ್ರಸ್ತುತ ಆಧುನಿಕ ಮತ್ತು ಮಾಹಿತಿ ತಂತ್ರಜ್ಞಾನ ಯುಗದಲ್ಲಿ ಮಹಿಳೆಯರು ಮತ್ತು ಮಕ್ಕಳ ವಿರುದ್ಧ ನಡೆಯುವ ದೌರ್ಜನ್ಯ (ಅತ್ಯಾಚಾರ, ಲೈಂಗಿಕ ಕಿರುಕುಳ, ಮಾನವ ಕಳ್ಳ ಸಾಗಣೆ, ವರದಕ್ಷಿಣೆ ಕಿರುಕುಳ, ಬಾಲ್ಯ ವಿವಾಹ & ಪೋಕ್ಸ್) ಅಂತಹ ಪ್ರಕರಣಗಳಿಂದ ಮಹಿಳೆಯರು ಮತ್ತು ಮಕ್ಕಳ ಮೇಲೆ ಮಾನಸಿಕ, ದೈಹಿಕವಾಗಿ ಮತ್ತು ಸಾಮಾಜಿಕವಾಗಿ ಹಿಂಸೆಗೊಳಪಟ್ಟಿರುತ್ತಾರೆ.. ಆದುದರಿಂದ ಕರ್ನಾಟಕ ರಾಜ್ಯ ಸರ್ಕಾರವು ಮಹಿಳೆಯರು ಮತ್ತು ಮಕ್ಕಳ ವಿರುದ್ಧ ಪ್ರಖರವಾಗಿ ನಡೆಯುವ ಅಪರಾಧಗಳ ಬಗ್ಗೆ ಕಾನೂನು ಅರಿವು & ಜಾಗೃತಿ ಮೂಡಿಸಲು ಶಿಕ್ಷಣ ನೀಡುವುದು, ಜೊತೆಗೆ ಸಂಕಷ್ಟದಲ್ಲಿ ಇರುವ ಮಹಿಳಾ ಮತ್ತು ಮಕ್ಕಳಿಗೆ ತಕ್ಷಣ ರಕ್ಷಣೆ/ ನೆರವು ನೀಡುವ ಉದ್ದೇಶದಿಂದ “ಅಕ್ಕ ಪಡೆ” ಎಂಬ ತಂಡವನ್ನು ದಿನಾಂಕ:28/11/2025 ರಿಂದ ರಾಜ್ಯದ 31 ಜಿಲ್ಲೆ & 5 ಪೊಲೀಸ್ ಕಮೀಷನರೇಟ್‌ಗಳಲ್ಲಿ ಜಾರಿಗೆ ತರಲಾಗಿದೆ.

“ಅಕ್ಕ ಪಡೆಯ ರಚನೆ”

ಅಕ್ಕ ಪಡೆಯ ತಂಡಕ್ಕೆ ಪ್ರತಿ ಜಿಲ್ಲೆ/ ಕಮೀಷನರೇಟ್‌ಗಳಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳು ಮತ್ತು ಪೊಲೀಸ್ ಆಯುಕ್ತರು 04 ಸಂಖ್ಯೆಯ ಮಹಿಳಾ ಹೋಂಗಾರ್ಡ್‌ಗಳನ್ನು ನೇಮಕ ಮಾಡುವ ಪ್ರಕ್ರಿಯೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸತಕ್ಕದ್ದು, ಅಲ್ಲದೇ ವೈಯಕ್ತಿಕವಾಗಿ ಗಮನ ಹರಿಸಿ ಸದೃಢ ದೇಹದಾರ್ಡ್ಯತೆ ಮತ್ತು ಆರೋಗ್ಯ ಹೊಂದಿರುವ 35 ವರ್ಷದೊಳಗಿನ ರವರನ್ನು ನೇಮಿಸುವುದು.

ಆಯ್ಕೆ ಮಾಡಿದ ಮಹಿಳಾ ಹೋಂಗಾರ್ಡ್‌ ರವರಿಗೆ ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನಗಳ ಕುರಿತು ಸಂಪೂರ್ಣ ತರಬೇತಿಯನ್ನು ನೀಡಿ ಅವರಿಗೆ ಈ ಬಗ್ಗೆ ಕೈಪಿಡಿಯನ್ನು ನೀಡಿ ಕರ್ತವ್ಯವನ್ನು ನಿರ್ವಹಿಸಲು ತಿಳಿಸುವುದು. ಒಂದು ವಾರದ ತರಬೇತಿ ನೀಡಲು ಸಂಬಂಧಪಟ್ಟ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಮತ್ತು ಪೊಲೀಸ್‌ ಆಯುಕ್ತರು ಕ್ರಮ ಕೈಗೊಳ್ಳುವುದು.

ಅಕ್ಕ ಪಡೆ ತಂಡದಲ್ಲಿ ಕರ್ತವ್ಯ ನಿರ್ವಹಿಸುವ 04 ಮಹಿಳಾ ಹೋಂ ಗಾರ್ಡ್ ರವರಿಗೆ ಸರ್ಕಾರವು ನಿಗಧಿಪಡಿಸಿದ ವೇತನದ ವೆಚ್ಚವನ್ನು ಮಹಿಳಾ ಮತ್ತು ಮಕ್ಕಳ ಅಭೀವೃದ್ಧಿ ಇಲಾಖೆಯಿಂದ ಗೌರವ ಧನ ಮಂಜೂರಿಸುವುದು ಅಲ್ಲದೇ ಅಕ್ಕ ಪಡೆ ತಂಡಗಳು ಜಿಲ್ಲಾ ಹಾಗೂ ಕಮೀಷನರೇಟ್ ವ್ಯಾಪ್ತಿಯಲ್ಲಿ ಗಸ್ತು ಸಂಚರಿಸಲು ಅಗತ್ಯವಾದ ವಾಹನಗಳನ್ನು (ಮಹೇಂದ್ರ ಬೊಲೆರೊ) ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಂಚಿಕೆಮಾಡಲಾಗುವುದು. ಇಲಾಖೆಯಿಂದ ಘಟಕಗಳಿಗೆ

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹಂಚಿಕೆ ಮಾಡಲಾದ ವಾಹನಗಳ ಚಾಲನೆ, ನಿರ್ವಹಣೆ, ಮತ್ತು ಇಂಧನದ ವೆಚ್ಚವನ್ನು ಆಯಾ ಪೊಲೀಸ್ ಇಲಾಖೆಯ ಘಟಕಾಧಿಕಾರಿಗಳು ಸಾರಿಗೆ ವೆಚ್ಚದಡಿ ಭರಿಸಲು ಕ್ರಮವಹಿಸಬೇಕಾಗಿರುತ್ತದೆ.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಹಂಚಿಕೆಮಾಡಲಾಗಿರುವ ವಾಹನವನ್ನು ಅಕ್ಕ ಪಡೆಯ ಕರ್ತವ್ಯಕ್ಕೆ ಮಾತ್ರ ಉಪಯೋಗಿಸುವುದು ಮತ್ತು ಸದರಿ ವಾಹನಕ್ಕೆ ಪ್ರತ್ಯಕ ಲಾಗ್ ಬುಕ್ ನಿರ್ವಹಣೆಯನ್ನು ಮಾಡಲು ಸೂಚಿಸಿದೆ.

ಅಕ್ಕ ಪಡೆಯಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಹೋಂ ಗಾರ್ಡ್ ಗಳಿಗೆ ಕಮಾಂಡೋ (camouflage) ಸಮವಸ್ತ್ರವನ್ನು ಆಯಾ ಜಿಲ್ಲಾ ಪೊಲೀಸ್ ಮತ್ತು ಕಮೀಷನರೇಟ್ ಕಛೇರಿಯಿಂದ ಒದಗಿಸುವುದು.

ಅಕ್ಕ ಪಡೆಯ ಕಾರ್ಯನಿರ್ವಹಣೆಯನ್ನು ಜಿಲ್ಲಾ ಮತ್ತು ಕಮೀಷನರೇಟ್ ಮಟ್ಟದಲ್ಲಿ ಪರಿಶೀಲಿಸಲು ಹಾಗೂ ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲು ಕೆಳಕಂಡಂತೆ ಸಮಿತಿಯನ್ನು ರಚಿಸುವುದು

ಅಕ್ಕ ಪಡೆಯ ಕಾರ್ಯ ಮತ್ತು ಜವಾಬ್ದಾರಿಗಳು

ಜಾಗೃತಿ: ಅಕ್ಕ ಪಡೆಯ ತಂಡವು ಶಾಲಾ, ಕಾಲೇಜು ಮತ್ತು ವಿಧ್ಯಾರ್ಥಿ/ವಿಧ್ಯಾರ್ಥಿನಿಯರ ವಸತಿ ನಿಲಯಗಳಿಗೆ ಪ್ರತಿ ವಾರ ಕಡ್ಡಾಯವಾಗಿ ಭೇಟಿ ನೀಡುವುದು, ಅಲ್ಲದೆ ಸಾರ್ವಜನಿಕ ಜನ ಸಂದಣಿ ಸ್ಥಳಗಳಲ್ಲಿ ಮಹಿಳೆಯರ ವಿರುದ್‌ದ ಲೈಂಗಿಕ ಕಿರುಕಳು ಕುರಿತು ಮೂಂಜಾಗ್ರತಾ ಕ್ರಮಗಳ ಬಗ್ಗೆ ಅರಿವು ಮೂಡಿಸುವುದು.

ಅಕ್ಕ ಪಡೆಯ ತಂಡವು ಪ್ರತಿ ನಿತ್ಯ ಜಿಲ್ಲಾ/ ಕಮೀಷನರೇಟ್‌ನ ವ್ಯಾಪ್ತಿಯಲ್ಲಿ ಬರುವ ಶಾಲಾ ಮತ್ತು ಕಾಲೇಜುಗಳಿಗೆ ತೆರಳಿ ಮಕ್ಕಳಲ್ಲಿ ಪೋಕ್ಸ್ ಮತ್ತು ಸೈಬರ್ ಅಪರಾಧ ಹಾಗೂ ಮಾದಕ ವಸ್ತು ಸೇವನೆ ದುಷ್ಪರಿಣಾಮದ ಬಗ್ಗೆ ಜಾಗೃತಿಯ ಕುರಿತು ಅರಿವು ಮೂಡಿಸುವುದು.

ವಾರದಲ್ಲಿ ಒಂದು ದಿನ ಜಿಲ್ಲೆಯ ಇತರೇ ತಾಲ್ಲೂಕುಗಳಲ್ಲಿ ಮತ್ತು ಪ್ರಮುಖ ಪಟ್ಟಣಗಳ ಶಾಲೆ & ಕಾಲೇಜುಗಳು ಹಾಗೂ ರೈಲ್ವೇ ನಿಲ್ದಾಣ, ಬಸ್ ನಿಲ್ದಾಣ, ಜನನಿಬಿಡ ಪದೇಶಗಳಲ್ಲಿ ಗಸ್ತು (Patroling) ಮೂಲಕ ಮಹಿಳೆ & ಮಕ್ಕಳ ಸುರಕ್ಷತೆ ಬಗ್ಗೆ ಅರಿವು ಮೂಡಿಸುವ ಬಗ್ಗೆ ಕ್ರಮ ಕೈಗೊಳ್ಳುವುದು.
ಜಿಲ್ಲೆಯಲ್ಲಿ/ಕಮೀಷನರೇಟ್ ವ್ಯಾಪ್ತಿಯಲ್ಲಿ ಬರುವ ಶಾಲಾ ಕಾಲೇಜುಗಳಲ್ಲಿನ ಹೆಣ್ಣು ಮಕ್ಕಳ ವಸತಿ ನಿಲಯಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಅಲ್ಲಿಯ ಹೆಣ್ಣು ಮಕ್ಕಳೊಂದಿಗೆ ಸಂವಾದ ನಡೆಸಿ ಕುಂದು ಕೊರತೆ ಮತ್ತು ಸುರಕ್ಷತೆ ಕುರಿತಂತೆ ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರ ಗಮನಕ್ಕೆ ತರುವುದು.

ಗಸ್ತು ಸಂದರ್ಭದಲ್ಲಿ ಅಹಿತಕರ ಘಟನೆ ಸಂಭವಿಸಿದ್ದಲ್ಲಿ ತುರ್ತಾಗಿ ERSS 112 ಜೊತೆ ಸಂವಹನೆ ಮಾಡಿ ಸೂಕ್ತ ರಕ್ಷಣೆಯನ್ನು ಒದಗಿಸುವುದು.

ಮಹಿಳೆ ಮತ್ತು ಮಕ್ಕಳ ವಿರುದ್ಧ ಸಂಭವಿಸುವ ಪ್ರಮುಖ ಪ್ರಕರಣಗಳ ಬಗ್ಗೆ ಜಿಲ್ಲಾ/ಕಮೀಷನರ್ ಪೊಲೀಸ್ ಕಛೇರಿಯ ನಿಯಂತ್ರಣ ಕೊಠಡಿಗೆ (Control Room) ಮಾಹಿತಿಯನ್ನು ಶೀಘ್ರವಾಗಿ ರವಾನಿಸುವುದು.

ಮಹಿಳಾ ಕಿರುಕುಳ ಪ್ರಕರಣಗಳ ಬಗೆ, ವ್ಯಾಪ್ತಿಯಲ್ಲಿರುವ ಪೊಲೀಸ್ ಠಾಣೆಗೆ ವರದಿ ಮಾಡುವುದು.

ಮಹಿಳೆ ಮತ್ತು ಮಕ್ಕಳಿಗೆ ಸ್ವಯಂ ರಕ್ಷಣೆ ಕಾರ್ಯವಿಧಾನದ ತರಬೇತಿ ನೀಡುವುದು,

ಮಹಿಳೆಯರ ಕಿರುಕುಳ ಮತ್ತು ಈವ್ ಟೇಸಿಂಗ್ ತಡೆಗಟ್ಟಲು ಶಾಲೆ ಕಾಲೇಜು, ಉದ್ಯಾನವನ, ಸಿನಿಮಾ ಮಂದಿರ, ಮಾಲ್‌ಗಳು, ಸ್ಥಳೀಯ ಮಾರುಕಟ್ಟೆಗಳಿಗೆ, ದಾರ್ಮಿಕ ಸ್ಥಳಗಳಲ್ಲಿ, ಬಸ್/ ರೈಲ್ವೇ/ ಮೇಟ್ರೋ ನಿಲ್ದಾಣಗಳು ಹಾಗೂ ಬಸ್‌ಗಳಲ್ಲಿ ಪ್ರಯಾಣಿಸುವಾಗ ನಿಯಮಿತವಾಗಿ ಬೇಟಿ ನೀಡಿ ಮುಂಜಾಗೃತ ಕ್ರಮ ಕೈಗೊಳ್ಳುವುದು

ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಲ್ಲಿ ಗುಡ್ ಟಚ್ ಮತ್ತು ಬ್ಯಾಡ್ ಟಚ್ ಹಾಗೂ ಅವರಿಚಿತರ ಬಗ್ಗೆ ಎಚ್ಚರದಿಂದಿರುವುದರ ಬಗ್ಗೆ, ಜಾಗೃತಿ ಮೂಡಿಸುವುದು.

POCSO, ಬಾಲ್ಯವಿವಾಹ, ಬಾಲ ಕಾರ್ಮಿಕ ಪದ್ದತಿ, ಮಕ್ಕಳ ಮತ್ತು ಮಹಿಳೆಯರ ಮೇಲಿನ ದೌರ್ಜನ್ಯ ಮಹಿಳೆಯರು ಮತ್ತು ಮಕ್ಕಳ ಕಳ್ಳಸಾಗಣೆ, ಮಾದಕ ವಸ್ತುಗಳ ದುರುಪಯೋಗದ ಬಗ್ಗೆ ಜಾಗೃತಿ ಮೂಡಿಸುವುದು.

ಮಾದಕ ದ್ರವ್ಯಗಳು ಮತ್ತು ಮಾದಕ ದ್ರವ್ಯಗಳ ದುರುವಯೋಗ ಮತ್ತು ಆರೋಗ್ಯದ ಮೇಲೆ ಅದರ ಪರಿಣಾಮದ ಬಗ್ಗೆ, ಜಾಗೃತಿ ಮೂಡಿಸುವುದು.

ಸಂಚಾರ ನಿಯಮಗಳು ಮತ್ತು ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವುದು.

ಸಹಾಯವಾಣಿ 1098 181, 112, ಇತ್ಯಾದಿಗಳ ಬಗ್ಗೆ ಜಾಗೃತಿ ಮೂಡಿಸುವುದು.

ಸಾಮಾಜಿಕ ಜಾಲತಾಣಗಳಿಂದ ಮಹಿಳೆ ಮತ್ತು ಮಕ್ಕಳ ವಿರುದ್ಧ ಸಂಭವಿಸುವ * ಸೈಬರ್ ಅಪರಾಧಗಳ ದುಷ್ಪರಿಣಾಮಗಳು ಮತ್ತು ತೆಗೆದುಕೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಅರಿವು/ ಜಾಗೃತಿ ಮೂಡಿಸುವುದು.

ಶಾಲೆ, ಕಾಲೇಜು, ಹುಡುಗಿಯರು ಮತ್ತು ಉದ್ಯೋಗಸ್ತ ಮಹಿಳೆಯರ ವಸತಿ ನಿಲಯಗಳ ಆವರಣದಲ್ಲಿ, ದುಷ್ಕರ್ಮಿಗಳ ಮೇಲೆ ನಿಗಾ ಇರಿಸುವುದು.

ಸಿಗ್ನಲ್ ಬಳಿ ಮಹಿಳೆ ಮತ್ತು ಮಕ್ಕಳ ಭಿಕ್ಷಾಟನೆಯನ್ನು ತಡೆಗಟ್ಟುವ ಜೊತೆಗೆ ವಿಶೇಷವಾಗಿ ನಿಗಾವಹಿಸುವುದು.

ಕಳ್ಳಸಾಗಣೆಯಿಂದ ರಕ್ಷಿಸಲ್ಪಟ್ಟ ಮಹಿಳೆಯರು ಮತ್ತು ಮಕ್ಕಳಿಗೆ ಪುನರ್ವಸತಿ ಕಲ್ಪಿಸುವುದು.

ಸಹಾಯವಾಣಿಗಳಿಂದ ಬರುವ ಎಲ್ಲಾ ತುರ್ತು ಕರೆಗಳಿಗೆ ಸ್ಪಂಧಿಸುವುದು ಮತ್ತು ಸೂಕ್ತ ಶಿಷ್ಟಾಚಾರದೊಂದಿಗೆ ಸಂತ್ರಸ್ತೆಯರನ್ನು ರಕ್ಷಿಸುವುದು.

BIG NEWS: Important order from the government regarding the formation and working methods of the `Akka Pade' in the state
Share. Facebook Twitter LinkedIn WhatsApp Email

Related Posts

BREAKING NEWS

BREAKING : ಗ್ರೇಟರ್ ಬೆಂಗಳೂರು ಕಸ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ : ತಪ್ಪಿದ ಭಾರಿ ಅನಾಹುತ!

20/02/2026 11:47 AM1 Min Read

ಕಲಬುರ್ಗಿ : ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದನ್ನು ಪ್ರಶ್ನಿಸಿದಕ್ಕೆ, ಪರೀಕ್ಷಾ ಮೇಲ್ವಿಚಾರಕರ ಮೇಲೆ ವಿದ್ಯಾರ್ಥಿಯಿಂದ ಹಲ್ಲೆ!

20/02/2026 11:36 AM1 Min Read

BIG NEWS : ಕಲ್ಬುರ್ಗಿಯಲ್ಲಿ ಐವರು ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ : ಕಿವಿ, ಕಣ್ಣು, ಎದೆ ಭಾಗಗಳಿಗೆ ಗಂಭೀರ ಗಾಯ!

20/02/2026 11:23 AM1 Min Read
Recent News

ಕೆಮ್ಮನ್ನು ರೆಕಾರ್ಡ್ ಮಾಡಿ ಶ್ವಾಸಕೋಶದ ಆರೋಗ್ಯ ವರದಿ ಪಡೆಯಬಹುದು : `Swaasa AI’ ಅಪ್ಲಿಕೇಶನ್ ಗೆ AIIMS ಅನುಮೋದನೆ !

20/02/2026 11:50 AM
BREAKING NEWS

BREAKING : ಗ್ರೇಟರ್ ಬೆಂಗಳೂರು ಕಸ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ : ತಪ್ಪಿದ ಭಾರಿ ಅನಾಹುತ!

20/02/2026 11:47 AM

ಭಾರತ AI ಇಂಪ್ಯಾಕ್ಟ್ ಶೃಂಗಸಭೆ: ಭಾರತದಲ್ಲಿ 300 ಬಿಲಿಯನ್ ಡಾಲರ್ ಮೌಲ್ಯದ ಎಐ ಹೂಡಿಕೆ: ವರದಿ

20/02/2026 11:45 AM

World Most Painful Disease : ಇದು `ವಿಶ್ವದ ಅತ್ಯಂತ ನೋವಿನ ಕಾಯಿಲೆ’ : ಇದರ ಲಕ್ಷಣಗಳೇನು ತಿಳಿಯಿರಿ

20/02/2026 11:38 AM
State News
BREAKING NEWS KARNATAKA

BREAKING : ಗ್ರೇಟರ್ ಬೆಂಗಳೂರು ಕಸ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ : ತಪ್ಪಿದ ಭಾರಿ ಅನಾಹುತ!

By kannadanewsnow0520/02/2026 11:47 AM KARNATAKA 1 Min Read

ಬೆಂಗಳೂರು : ಬೆಂಗಳೂರಲ್ಲಿ ಗ್ರೇಟರ್ ಬೆಂಗಳೂರು ಕಸ ಸಂಸ್ಕರಣಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಬೆಗೂರು ಸಮೀಪದ ಗ್ರೇಟರ್ ಬೆಂಗಳೂರು…

ಕಲಬುರ್ಗಿ : ಪರೀಕ್ಷೆಯಲ್ಲಿ ನಕಲು ಮಾಡುತ್ತಿದ್ದನ್ನು ಪ್ರಶ್ನಿಸಿದಕ್ಕೆ, ಪರೀಕ್ಷಾ ಮೇಲ್ವಿಚಾರಕರ ಮೇಲೆ ವಿದ್ಯಾರ್ಥಿಯಿಂದ ಹಲ್ಲೆ!

20/02/2026 11:36 AM

BIG NEWS : ಕಲ್ಬುರ್ಗಿಯಲ್ಲಿ ಐವರು ಮಕ್ಕಳ ಮೇಲೆ ಹುಚ್ಚು ನಾಯಿ ದಾಳಿ : ಕಿವಿ, ಕಣ್ಣು, ಎದೆ ಭಾಗಗಳಿಗೆ ಗಂಭೀರ ಗಾಯ!

20/02/2026 11:23 AM

BREAKING : ಶಂಕಿತ ಉಗ್ರ ಜುನೈದ್ ಅಹಮ್ಮದ್ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ಘೋಷಿಸಿದ ‘NIA’

20/02/2026 10:37 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.