ಬಳ್ಳಾರಿ : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್ ಗೆ ಬೆನ್ನುನೋವಿನ ಸಮಸ್ಯೆ ಕಾಣಿಸಿಕೊಂಡಿದ್ದು, ಇಂದು ಜೈಲಿನ ವೈದ್ಯರು ನಟ ದರ್ಶನ್ ಆರೋಗ್ಯ ತಪಾಸಣೆ ನಡೆಸಲಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಿದ ಬೆನ್ನಲ್ಲೇ ಪತಿ ನಟ ದರ್ಶನ್ ನೋಡಲು ವಿಜಯಲಕ್ಷ್ಮೀ ಆಗಮಿಸಿದ್ದರು. ಈ ವೇಳೆ ತಮ್ಮ ಪತಿ ದರ್ಶನ್ ಗೆ ಬೆನ್ನು ನೋವಿನ ಸಮಸ್ಯೆಯಿಂದ ಚಿಕಿತ್ಸೆ ನೀಡಲು ಡಿಐಜಿ ಟಿ. ಪಿ. ಶೇಷ ಅವರ ಬಳಿ ಮನವಿ ಮಾಡಿದ್ದರು. ಹೀಗಾಗಿ ನಟ ದರ್ಶನ್ ಗೆ ಬೆನ್ನುನೋವಿನ ಕುರಿತು ಆಸ್ಪತ್ರೆ ದಾಖಲೆ ತರುವಂತೆ ಟಿಐಜಿ ಸೂಚನೆ ನೀಡಿದ್ದರು.
ವಿಜಯಲಕ್ಷ್ಮೀ ಅವರು ಸದ್ಯ ಬೆನ್ನು ನೋವಿನ ಸಮಸ್ಯೆ ಕುರಿತು ಆಸ್ಪತ್ರೆ ದಾಖಲೆ ಸಲ್ಲಿಸಿದ್ದು, ಇಂದು ಜೈಲಿನ ವೈದ್ಯರು ನಟ ದರ್ಶನ್ ಆರೋಗ್ಯ ತಪಾಸಣೆ ನಡೆಸಲಿದ್ದಾರೆ. ಬೆನ್ನುನೋವು, ಮಲಬದ್ಧತೆ ಸಮಸ್ಯೆ ಅಷ್ಟೊಂದು ಗಂಭೀರ ಸಮಸ್ಯೆ ಅಲ್ಲ. ಅಗತ್ಯ ಬಿದ್ದರೆ ಜೈಲಿನ ವೈದ್ಯರೇ ಚಿಕಿತ್ಸೆ ಕೊಡುತ್ತಾರೆ ಎಂದು ಡಿಐಜಿ ಹೇಳಿದ್ದಾರೆ ಎನ್ನಲಾಗಿದೆ.