Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜಾಗತಿಕ ಮಾಧ್ಯಮ ಲೋಕದ ಧ್ರುವತಾರೆ ಅಸ್ತಂಗತ: ಸಿಎನ್ಎನ್ ಸಂಸ್ಥಾಪಕ ಟೆಡ್ ಟರ್ನರ್ ಇನ್ನಿಲ್ಲ | Ted Turner Dies

06/05/2026 8:22 PM

ವಿಮಾನಯಾನ ಸಂಸ್ಥೆಗಳಿಗೆ ಕೇಂದ್ರದ ಭರ್ಜರಿ ಬೂಸ್ಟರ್ ಡೋಸ್: ವಿಮಾನ ಇಂಧನ ದರ ಏರಿಕೆ ನಡುವೆ 5,000 ಕೋಟಿ ರೂ. ತುರ್ತು ಸಾಲ ಬಿಡುಗಡೆ!

06/05/2026 8:20 PM

BREAKING: ಮಾಧ್ಯಮ ಲೋಕದ ದಿಗ್ಗಜ, CNN ಸಂಸ್ಥಾಪಕ ಟೆಡ್ ಟರ್ನರ್ ಇನ್ನಿಲ್ಲ | Ted Turner No More

06/05/2026 8:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ‘ಜನೌಷಧಿ ಕೇಂದ್ರ’ಗಳು ಬಂದ್ : ಸರ್ಕಾರದಿಂದ ಮಹತ್ವದ ಆದೇಶ.!
KARNATAKA

BIG NEWS : ರಾಜ್ಯದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ‘ಜನೌಷಧಿ ಕೇಂದ್ರ’ಗಳು ಬಂದ್ : ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5718/05/2025 5:01 AM

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲೇ ಉಚಿತವಾಗಿ ಔಷಧಿ ವಿತರಣೆ ಮಾಡುತ್ತಿರುವಾಗ, ತನ್ನ ಆವರಣದಲ್ಲೇ ದುಡ್ಡಿಗೆ ಔಷಧಿ ಮಾರಾಟ ಮಾಡುತ್ತಿದ್ದಂತ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. 

ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಹಾಗೂ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಸುಮೂರು 200 ಜನೌಷಧಿ ಮಳಿಗೆಗಳನ್ನು ಸ್ಥಾಪಿಸಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿರುತ್ತದೆ ಎಂದು ತಿಳಿಸಿದೆ.

ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರುಗಳು ಬ್ರಾಂಡೆಡ್ ಔಷಧಿಗಳನ್ನು ರೋಗಿಗಳಿಗೆ ಸಲಹಾ ಚೀಟಿ (Prescription) ರೂಪದಲ್ಲಿ ನೀಡುವುದನ್ನು ನಿಷೇಧಿಸಲಾಗಿದೆ ಹಾಗೂ ಆರೋಗ್ಯ ಸಂಸ್ಥೆಗಳಲ್ಲಿ ಲಭ್ಯವಿರದ ಔಷಧಿಗಳನ್ನು ಸಂಬಂಧಿಸಿದ ವೈದ್ಯರುಗಳು, ರೋಗಿಗಳಿಗೆ ನೀಡುವ ಸಲಹಾ ಚೀಟಿ (Prescription) ಗಳನ್ನು Generic ಹೆಸರಿನಲ್ಲಿ ಬರೆಯಲು ಕಡ್ಡಾಯವಾಗಿ ಸೂಚಿಸಿದೆ. ಈ ಔಷಧಿಗಳನ್ನು ಆರೋಗ್ಯ ಸಂಸ್ಥೆಯ ಆವರಣದಲ್ಲಿ ಸ್ಥಾಪಿಸಿರುವ ಜನೌಷಧಿ ಮಳಿಗೆಯಲ್ಲಿ ಕಡಿಮೆ ದರದಲ್ಲಿ ಔಷಧಿ ಸಿಗುವ ಬಗ್ಗೆ ರೋಗಿಗಳಿಗೆ ವಿವರಿಸಿ ಅಲ್ಲಿಂದ ಆ ಔಷಧಿಗಳನ್ನು ಖರೀದಿಸಲು ಸಲಹೆ ನೀಡುವಂತೆ ಸಹ ಸೂಚಿಸಿದೆ ಹಾಗೂ ಜನರಿಕ್ ಔಷಧಿಗಳು, ಬ್ರಾಂಡೆಡ್ ಔಷಧಿಯಷ್ಟೇ ಉತ್ತಮ ಗುಣಮಟ್ಟ, ರೋಗನಿವಾರಕ ಸಾಮರ್ಥ್ಯ ಹೊಂದಿರುತ್ತದೆ ಎಂದು ರೋಗಿಗಳಿಗೆ ಶಿಕ್ಷಣ ಹಾಗೂ ಪುಚಾರದ ಮೂಲಕ ಜಾಗೃತಿ ಮೂಡಿಸುವುದು ಮತ್ತು ಜನರಿಕ್ ಔಷಧಿಗಳನ್ನು ಈ ಒಂದು ಸದುದ್ದೇಶಕ್ಕಾಗಿ ತೆರೆದಿರುವ ಜನೌಷಧಿ ಮಳಿಗೆಗಳ ಮೂಲಕವೇ ಖರೀದಿಸಲು ಜನಸಾಮಾನ್ಯರಿಗೆ ಉತ್ತೇಜನದ ಮುಖಾಂತರ ತಿಳುವಳಿಕೆ ನೀಡಲು ಆದೇಶಿಸಿದೆ ಎಂದಿದೆ.

ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರ ಏಕಕಡತದಲ್ಲಿ ರಾಜ್ಯದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪಸ್ತುತ 207 ಜನೌಷಧಿ ಕೇಂದ್ರಗಳಿಗೆ ಅನುಮತಿ ನೀಡಲಾಗಿರುತ್ತದೆ. ಅರ್ಜಿದಾರರು ಜನೌಷಧಿ ಕೇಂದ್ರಗಳ ಸ್ಥಾಪನೆಗೆ ಸಲ್ಲಿಸಿದ ಅರ್ಜಿಯನ್ನು ARS ಮುಂದೆ ಮಂಡಿಸಿ ಅದರ ಅನುಮೋದನೆಯ ನಂತರ ಆಯುಕ್ತರ ಮುಖಾಂತರ ಸರ್ಕಾರಕ್ಕೆ ಸಲ್ಲಿಸಿ, ಸರ್ಕಾರದಿಂದ ಅನುಮೋದನೆ ಆದ ನಂತರ ಅರ್ಜಿದಾರರಿಗೆ ಅನುಮತಿ ನೀಡಲಾಗುತ್ತದೆ. ಆದುದರಿಂದ, ಜನೌಷಧಿ ಕೇಂದ್ರಗಳನ್ನು ಪ್ರಾರಂಭಿಸುವ ನೀತಿಗೆ ಸಂಬಂಧಿಸಿದಂತೆ ಸಮಗ್ರವಾಗಿ ಪರಿಶೀಲಿಸುವ ಅಗತ್ಯವಿರುತ್ತದೆ ಎಂದು ಹೇಳಿದೆ.

ಪ್ರಸ್ತುತ ಜನೌಷಧಿ ಕೇಂದ್ರಗಳ ಸ್ಥಾಪನೆಗೆ 31 ಅರ್ಜಿಗಳು ಆಯುಕ್ತರ ಹಂತದಲ್ಲಿ ಬಾಕಿ ಇರುತ್ತವೆ. ಸದರಿ ಜನೌಷಧಿ ಕೇಂದ್ರಗಳ ಸ್ಥಾಪನೆಗೆ ಸಂಬಂಧಿಸಿದ ಈಗಿನ ನೀತಿಯು, ಕಾರ್ಯವಿಧಾನಕ್ಕೆ ಸಂಬಂಧಿಸಿದಂತೆ ಹಳೆಯದಾಗಿದೆ. ಈ ಹಿನ್ನೆಲೆಯಲ್ಲಿ ಪಾಲಿಸಿಯನ್ನು ಮರುಪರಿಶೀಲಿಸುವುದು ಅಗತ್ಯವಿರುತ್ತದೆ. ಆದುದರಿಂದ ಆಯುಕ್ತಾಲಯದಲ್ಲಿ ಸ್ವೀಕೃತವಾಗಿರುವ ಅರ್ಜಿಗಳ ಬಗ್ಗೆ ಕ್ರಮ ಕೈಗೊಳ್ಳುವ ಕುರಿತು ನಿರ್ದೇಶನ ಕೋರಿರುತ್ತಾರೆ.

ಪುಸ್ತುತ ಆಸ್ಪತ್ರೆಗಳು ರೋಗಿಗಳಿಗೆ ಯಾವುದೇ ಔಷಧಿಗಳನ್ನು ಹೊರಗಿನಿಂದ ಖರೀದಿಸಲು ಶಿಫಾರಸ್ಸನ್ನು ಮಾಡದಂತೆ ನೋಡಿಕೊಳ್ಳುವುದು ಸರ್ಕಾರ ನೀತಿಯಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ಆವರಣದೊಳಗೆ ಜನಔಷಧಿ ಕೇಂದ್ರಗಳನ್ನು ತೆರೆಯುವುದು ಸರ್ಕಾರದ ನೀತಿಗೆ ವ್ಯತಿರಿಕ್ತವಾಗುತ್ತದೆ. ಭಾರತದ ಬಿ.ಪಿ.ಪಿ.ಐ ಬ್ಯೂರೋ ಆಫ್ ಫಾರ್ಮ ಈ ಜನೌಷಧಿ ಕೇಂದ್ರಗಳಿಗೆ ನೋಡಲ್ ಕೇಂದ್ರ ಸಂಸ್ಥೆಯಾಗಿದ್ದು, ಈ ಕೇಂದ್ರಗಳಿಂದ ಖರೀದಿಸುವ ಔಷಧಿಗಳಿಗೆ ವಿಶೇಷ ರಿಯಾಯ್ತಿಯನ್ನು ಒದಗಿಸುತ್ತದೆ.
ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಪುಸ್ತಾವನೆ ಮತ್ತು ಲಭ್ಯವಿರುವ ದಾಖಲೆಗಳನ್ನು ಕೂಲಂಕಷವಾಗಿ ಪರಿಶೀಲಿಸಿ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.

ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಸರ್ಕಾರಿ ಆಸ್ಪತ್ರೆಗಳಲ್ಲಿ ಇನ್ನು ಮುಂದೆ ಜನೌಷಧಿ ಕೇಂದ್ರಗಳ ಹಂಚಿಕೆಯನ್ನು ಸ್ಥಗಿತಗೊಳಿಸಲು ಮತ್ತು ಅದಕ್ಕೆ ಅನುಗುಣವಾಗಿ ಜನೌಷಧಿ ಕೇಂದ್ರಗಳ ಪ್ರಾರಂಭಕ್ಕಾಗಿ ಆಯುಕ್ತಾಲಯದಲ್ಲಿ ಅನುಮೋದನೆಗಾಗಿ ಬಾಕಿ ಇರುವ 31 ಅರ್ಜಿಗಳನ್ನು ತಿರಸ್ಕರಿಸಲು ಅನುಮೋದನೆ ನೀಡಿ ಆದೇಶಿಸಿದೆ.

ಆದಾಗ್ಯೂ, ಸರ್ಕಾರಿ ಆಸ್ಪತ್ರೆಗಳ ಹೊರಗೆ ಜನೌಷಧಿ ಕೇಂದ್ರಗಳ ಸ್ಥಾಪನೆಯು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಗೆ ಬರದ ಕಾರಣ ಮುಂದುವರಿಯಬಹುದಾಗಿದೆ.

ಮುಂದುವರೆದು, ಪ್ರಸ್ತುತ ಇಲಾಖೆಯ ಸರ್ಕಾರಿ ಆಸ್ಪತ್ರೆಗಳಲ್ಲಿ ಅಸ್ತಿತ್ವದಲ್ಲಿರುವ ಜನೌಷದಿ ಕೇಂದ್ರಗಳನ್ನು ಅವರೊಂದಿಗೆ ಮಾಡಿಕೊಂಡಿರುವ ಒಪ್ಪಂದ ನಿಯಮಗಳ (MOU) ಪುಕಾರ ಸ್ಥಗಿತಗೊಳಿಸಲು ಅಗತ್ಯ ಕ್ರಮವಹಿಸತಕ್ಕದ್ದು. ಹಾಗೆಯೇ, ಜೆನೆರಿಕ್ ಔಷಧಿಗಳ ಖರೀದಿಗೆ ಬಿ.ಪಿ.ಪಿ.ಐ ಯೊಂದಿಗೆ ಕೆ.ಎಸ್.ಎಂ.ಎಸ್.ಸಿ.ಎಲ್ ರವರು ವಿಶೇಷ ದರಗಳನ್ನು ರೂಪಿಸಲು ಸೂಚಿಸಿದೆ. ಪರ್ಯಾಯವಾಗಿ, ಆಸ್ಪತ್ರೆಗಳು ಬಿ.ಪಿ.ಪಿ.ಐ (BPPI) ಯಿಂದ ಔಷಧಿಗಳನ್ನು ಖರೀದಿಸಿ ರೋಗಿಗಳಿಗೆ ಉಚಿತವಾಗಿ ವಿತರಿಸಲು ಕ್ರಮವಹಿಸಕ್ಕದ್ದು ಎಂಬುದಾಗಿ ತಿಳಿಸಿದೆ.

 

BIG NEWS: 'Janaushadhi Kendras' in the state's government hospital premises closed: Important order from the government!
Share. Facebook Twitter LinkedIn WhatsApp Email

Related Posts

Watch video: ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿ ಯುವಕನ ಹುಚ್ಚಾಟ; ಸಾರ್ವಜನಿಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ!

06/05/2026 8:04 PM2 Mins Read

BREAKING: ಹುತಾತ್ಮ ಅರ್ಜುನ ಆನೆಯ 650 ಕೆಜಿ ತೂಕದ ಪ್ರತಿಮೆಯನ್ನು ಸಚಿವ ಈಶ್ವರ್ ಖಂಡ್ರೆ ಉದ್ಘಾಟನೆ

06/05/2026 7:51 PM3 Mins Read

BREAKING: ಮಂಡ್ಯದಲ್ಲಿ ರೈಲಿನಲ್ಲಿ ಸೀಟು ಗಲಾಟೆ; ಇಬ್ಬರು ಪ್ರಯಾಣಿಕರಿಗೆ ಚಾಕು ಇರಿತ

06/05/2026 7:48 PM1 Min Read
Recent News

ಜಾಗತಿಕ ಮಾಧ್ಯಮ ಲೋಕದ ಧ್ರುವತಾರೆ ಅಸ್ತಂಗತ: ಸಿಎನ್ಎನ್ ಸಂಸ್ಥಾಪಕ ಟೆಡ್ ಟರ್ನರ್ ಇನ್ನಿಲ್ಲ | Ted Turner Dies

06/05/2026 8:22 PM

ವಿಮಾನಯಾನ ಸಂಸ್ಥೆಗಳಿಗೆ ಕೇಂದ್ರದ ಭರ್ಜರಿ ಬೂಸ್ಟರ್ ಡೋಸ್: ವಿಮಾನ ಇಂಧನ ದರ ಏರಿಕೆ ನಡುವೆ 5,000 ಕೋಟಿ ರೂ. ತುರ್ತು ಸಾಲ ಬಿಡುಗಡೆ!

06/05/2026 8:20 PM

BREAKING: ಮಾಧ್ಯಮ ಲೋಕದ ದಿಗ್ಗಜ, CNN ಸಂಸ್ಥಾಪಕ ಟೆಡ್ ಟರ್ನರ್ ಇನ್ನಿಲ್ಲ | Ted Turner No More

06/05/2026 8:20 PM

ಸಂಗೀತ ನಿರ್ದೇಶಕ ಪಲಾಶ್ ಮುಚ್ಚಲ್ ವಿರುದ್ಧ ಜಾತಿ ನಿಂದನೆ ಕೇಸ್: ಸ್ಮೃತಿ ಮಂಧಾನ ಬಾಲ್ಯದ ಗೆಳೆಯನಿಂದ ದೂರು!

06/05/2026 8:08 PM
State News
KARNATAKA

Watch video: ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿ ಯುವಕನ ಹುಚ್ಚಾಟ; ಸಾರ್ವಜನಿಕರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ!

By kannadanewsnow8906/05/2026 8:04 PM KARNATAKA 2 Mins Read

ಬೆಂಗಳೂರಿನ ಜನನಿಬಿಡ ಪ್ರದೇಶವಾದ ಉತ್ತರಹಳ್ಳಿಯಲ್ಲಿ 22 ವರ್ಷದ ಯುವಕನೊಬ್ಬ ಆತ್ಮಹತ್ಯೆಗೆ ಯತ್ನಿಸಿದ್ದು, ಸ್ಥಳೀಯರಲ್ಲಿ ಭೀತಿ ಮೂಡಿಸಿತ್ತು. ಗೋವಾ ಮೂಲದ ಇಸ್ಮಾನ್…

BREAKING: ಹುತಾತ್ಮ ಅರ್ಜುನ ಆನೆಯ 650 ಕೆಜಿ ತೂಕದ ಪ್ರತಿಮೆಯನ್ನು ಸಚಿವ ಈಶ್ವರ್ ಖಂಡ್ರೆ ಉದ್ಘಾಟನೆ

06/05/2026 7:51 PM

BREAKING: ಮಂಡ್ಯದಲ್ಲಿ ರೈಲಿನಲ್ಲಿ ಸೀಟು ಗಲಾಟೆ; ಇಬ್ಬರು ಪ್ರಯಾಣಿಕರಿಗೆ ಚಾಕು ಇರಿತ

06/05/2026 7:48 PM

ಅತ್ಯಂತ ಹೆಚ್ಚು ಸುಳ್ಳು ಹೇಳುವ ಪಕ್ಷ ಬಿಜೆಪಿ: ಸಚಿವ ಈಶ್ವರ ಖಂಡ್ರೆ

06/05/2026 7:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.