Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬಾಂಗ್ಲಾದೇಶದಲ್ಲಿ ಉಲ್ಬಣಗೊಂಡ ಹಿಂಸಾಚಾರ : ಕೋಲ್ಕತ್ತಾದಲ್ಲಿ ಭದ್ರತೆ ಹೆಚ್ಚಳ

21/12/2025 12:36 PM

Shocking: ತಂಗಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಲು ಸ್ನೇಹಿತನನ್ನು ನೇಮಿಸಿಕೊಂಡ ಅಣ್ಣ

21/12/2025 12:11 PM

ಕರ್ನಾಟದಲ್ಲಿ ಚಳಿಯೋ ಚಳಿ ; ರಾಜ್ಯದ ಈ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

21/12/2025 12:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಗಳ ವಿಧೇಯಕ’ ಅಂಗೀಕಾರ : ರಾಜ್ಯದ 15 ಕಡೆ ರೋಪ್‌ವೇಗಳ ನಿರ್ಮಾಣಕ್ಕೆ ನಿರ್ಣಯ.!
KARNATAKA

BIG NEWS : `ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಗಳ ವಿಧೇಯಕ’ ಅಂಗೀಕಾರ : ರಾಜ್ಯದ 15 ಕಡೆ ರೋಪ್‌ವೇಗಳ ನಿರ್ಮಾಣಕ್ಕೆ ನಿರ್ಣಯ.!

By kannadanewsnow5717/12/2024 8:01 AM

ಬೆಳಗಾವಿ : ರಾಜ್ಯದಲ್ಲಿ 15 ಕಡೆ ರೋಪ್ ವೇಗಳ ನಿರ್ಮಾಣಕ್ಕೆ ಸರ್ಕಾರ ನಿರ್ಣಯ ಕೈಗೊಂಡಿದೆ. ಇವುಗಳ ನಿರ್ಮಾಣ ಮತ್ತು ಕಾರ್ಯನಿರ್ವಹಣೆಯನ್ನು ಅಧಿಕೃತಗೊಳಿಸಿ, ಸುಗಮಗೊಳಿಸುವ ಹಾಗೂ ನಿಯಂತ್ರಿಸುವ ಸಲುವಾಗಿ 2024ನೇ ಸಾಲಿನ ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಗಳ ವಿಧೇಯಕವನ್ನು ಜಾರಿಗೆ ತರಲಾಗುತ್ತಿದೆ ಎಂದು ಕಾನೂನು ಸಂಸದೀಯ ವ್ಯವಹಕಾರಗಳು ಮತ್ತು ಶಾಸಕ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ.ಪಾಟೀಲ ಹೇಳಿದರು.

ಸುವರ್ಣ ಸೌಧದಲ್ಲಿ ಸೋಮವಾರ ವಿಧಾನ ಸಭೆ ಕಲಾಪದಲ್ಲಿ ವಿಧೇಯಕವನ್ನು ಸದನದ ಪರ್ಯಾಲೋಚನೆಗೆ ಅವರು ಮಂಡಿಸಿದರು. ರೋಪ್‌ವೇಗಳ ನಿರ್ಮಾಣದಿಂದ ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಇಂಬು ದೊರಕಲಿದೆ. ಈ ರೋಪ್‌ವೇಗಳ ನಿರ್ಮಾಣದ ಜೊತೆಗೆ ನಿರ್ವಹಣೆಯನ್ನು ಸಹ ಪ್ರತ್ಯೇಕವಾಗಿ ಇಡಲು ಹಾಗೂ ಸಾರ್ವಜನಿಕ ಹಿತದೃಷ್ಠಿಯಿಂದ ವಿಧೇಯಕವನ್ನು ಮಂಡಿಸಲಾಗುತ್ತಿದೆ. ಸದನ ಒಪ್ಪಿಗೆ ನೀಡುವಂತೆ ಅವರು ಕೋರಿದರು.

ಆರ್.ಅಶೋಕ್ ಮಾತನಾಡಿ, ವಿಧೇಯಕದಡಿ ರಚಿಸಲಾಗುವ ಸಲಹಾ ಪ್ರಾಧಿಕಾರದಲ್ಲಿ ಸರ್ಕಾರದ ಅರಣ್ಯ ಇಲಾಖೆ ಕಾರ್ಯದರ್ಶಿಗಳನ್ನು ಸಹ ಸದಸ್ಯರನ್ನಾಗಿ ನೇಮಿಸಬೇಕು. ರೋಪ್‌ವೇ ನಿರ್ಮಿಸಲು ಉದ್ದೇಶಿಸಿದ ಅನೇಕ ಸ್ಥಳಗಳು ಅರಣ್ಯ ಇಲಾಖೆ ವ್ಯಾಪ್ತಿಗೆ ಬರುತ್ತವೆ. ಇದರಿಂದ ಶೀಘ್ರವೇ ಅನುಮತಿ ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಶಾಸಕ ಡಾ.ಅಶ್ವಥ್ ನಾರಾಯಣ ಮಾತನಾಡಿ, ರೋಪ್‌ವೇಗಳು ಮಲೆನಾಡು ಭಾಗದಲ್ಲಿ ಗುಡ್ಡದ ಮೇಲೆ ಕಾಲುದಾರಿಗಳ ನಿರ್ಮಾಣದಿಂದ ಉಂಟಾಗುವ ಭೂ ಕುಸಿತ ತಡೆಯಲು ಸಹಾಯಕವಾಗಿವೆ ಎಂದು ಅಭಿಪ್ರಾಯಪಟ್ಟರು.

ಶಾಸಕ ಅರಗ ಜ್ಞಾನೇಂದ್ರ ಮಾತನಾಡಿ, ರೋಪ್‌ವೇಗಳ ಸುರಕ್ಷತೆ ಹಾಗೂ ಗುಣಮಟ್ಟ ಪರೀಶಿಲನೆಗೆ ಸರ್ಕಾರ ವಿಧೇಯಕದಲ್ಲಿ ಹೆಚ್ಚಿನ ಮಹತ್ವ ನೀಡಬೇಕು ಎಂದರು.

ಶಾಸಕ ಹೆಚ್.ಸಿ.ಬಾಲಕೃಷ್ಣ ಶ್ರವಣಬೆಳಗೊಳದಲ್ಲಿ ರೋಪ್ ವೇ ನಿರ್ಮಿಸಲು ಭಾರತೀಯ ಪುರತತ್ವ ಇಲಾಖೆ ಅನುಮತಿ ನೀಡುತ್ತಿಲ್ಲ. ಇದನ್ನು ಗಮನದಲ್ಲಿ ಇಟ್ಟುಕೊಂಡು ರೋಪ್ ವೇ ಸಲಹಾ ಪ್ರಾಧಿಕಾರದಲ್ಲಿ ಪುರತತ್ವ ಇಲಾಖೆ ಅಧಿಕಾರಿಗಳನ್ನು ಸಹ ಸದಸ್ಯರನ್ನಾಗಿ ಮಾಡುವಂತೆ ಸಲಹೆ ನೀಡಿದರು.

ಶಾಸಕರು ಸಲಹೆ ನೀಡಿದ ಸೂಚನೆಗಳ ತಿದ್ದುಪಡಿಯೊಂದಿಗೆ ವಿಧೇಯಕಕ್ಕೆ ಸದನ ಧ್ವನಿ ಮತದಿಂದೊAದಿಗೆ ಅಂಗೀಕಾರ ನೀಡಿತು.

ವಿಧೇಯಕ ವಾಪಸ್ಸು: ರಾಜ್ಯಪಾಲರ ಸಲಹೆ ಮೇರೆಗೆ  ಸಚಿವ ಎಚ್.ಕೆ.ಪಾಟೀಲ 2024ನೇ ಸಾಲಿನ ಕರ್ನಾಟಕ ವಿಧಾನ ಮಂಡಲ ಅನರ್ಹತಾ ನಿವಾರಣೆ ತಿದ್ದುಪಡಿ ವಿಧೇಯಕವನ್ನು ಹಿಂಪಡೆಯಲು ಸದನದಲ್ಲಿ ಅನುಮತಿ ಕೋರಿದರು. ವಿಧೇಯಕ ಹಿಂಪಡೆಯಲು ಸದನ ಅನುಮತಿ ನೀಡಿತು.

BIG NEWS : ಕರ್ನಾಟಕ ಪ್ರವಾಸೋದ್ಯಮ ರೋಪ್‌ವೇಗಳ ವಿಧೇಯಕ ಅಂಗೀಕಾರ : ರಾಜ್ಯದ 15 ಕಡೆ ರೋಪ್‌ವೇಗಳ ನಿರ್ಮಾಣಕ್ಕೆ ನಿರ್ಣಯ.! BIG NEWS: Karnataka Tourism Ropeways Bill passed resolution to construct ropeways at 15 locations in the state
Share. Facebook Twitter LinkedIn WhatsApp Email

Related Posts

ಕರ್ನಾಟದಲ್ಲಿ ಚಳಿಯೋ ಚಳಿ ; ರಾಜ್ಯದ ಈ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

21/12/2025 12:05 PM1 Min Read

ಕಾಶಿಗೆ ಹೋದರೇ ಈ ವಸ್ತುಗಳನ್ನು ದಾನ ಮಾಡಬೇಕಂತೆ: ಅದೇಕೆ ಗೊತ್ತಾ.? ಇಲ್ಲಿದೆ ಮಾಹಿತಿ

21/12/2025 10:21 AM2 Mins Read

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

21/12/2025 9:58 AM1 Min Read
Recent News

ಬಾಂಗ್ಲಾದೇಶದಲ್ಲಿ ಉಲ್ಬಣಗೊಂಡ ಹಿಂಸಾಚಾರ : ಕೋಲ್ಕತ್ತಾದಲ್ಲಿ ಭದ್ರತೆ ಹೆಚ್ಚಳ

21/12/2025 12:36 PM

Shocking: ತಂಗಿಯ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಲು ಸ್ನೇಹಿತನನ್ನು ನೇಮಿಸಿಕೊಂಡ ಅಣ್ಣ

21/12/2025 12:11 PM

ಕರ್ನಾಟದಲ್ಲಿ ಚಳಿಯೋ ಚಳಿ ; ರಾಜ್ಯದ ಈ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

21/12/2025 12:05 PM

BREAKING: ದಕ್ಷಿಣ ಆಫ್ರಿಕಾದ ಜೋಹಾನ್ಸ್ ಬರ್ಗ್ ನಲ್ಲಿ ಗುಂಡಿನ ದಾಳಿ: ಮೂವರು ಮಕ್ಕಳು ಸೇರಿದಂತೆ 11 ಮಂದಿ ಸಾವು

21/12/2025 11:17 AM
State News
KARNATAKA

ಕರ್ನಾಟದಲ್ಲಿ ಚಳಿಯೋ ಚಳಿ ; ರಾಜ್ಯದ ಈ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್​!

By kannadanewsnow0721/12/2025 12:05 PM KARNATAKA 1 Min Read

ಬೆಂಗಳೂರು: IMD ಮುಂದಿನ 48 ಗಂಟೆಗಳ ಕಾಲ ಉತ್ತರ ಕರ್ನಾಟಕದ 7 ಜಿಲ್ಲೆಗಳಿಗೆ ಆರೆಂಜ್ ಎಚ್ಚರಿಕೆಯನ್ನು ನೀಡಿದೆ, ತಾಪಮಾನವು ಸಾಮಾನ್ಯಕ್ಕಿಂತ…

ಕಾಶಿಗೆ ಹೋದರೇ ಈ ವಸ್ತುಗಳನ್ನು ದಾನ ಮಾಡಬೇಕಂತೆ: ಅದೇಕೆ ಗೊತ್ತಾ.? ಇಲ್ಲಿದೆ ಮಾಹಿತಿ

21/12/2025 10:21 AM

ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ

21/12/2025 9:58 AM
BJP issues lookout notice to Bairati Basavaraj, fearing arrest

ಬಂಧನದ ಭೀತಿಯಲ್ಲಿ ಬಿಜೆಪಿ ಬೈರತಿ ಬಸವರಾಜ್, ಲುಕ್‌ಔಟ್‌ ನೋಟಿಸ್‌ ಜಾರಿ

21/12/2025 9:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.