ತಿರುವನಂತಪುರಂ:ಕೇರಳದ ಕಾರ್ಯಕರ್ತೆ ಬಿಂದು ಅಮ್ಮಿನಿ ಅವರ ಮೇಲೆ ಬುಧವಾರ ಕೋಝಿಕ್ಕೋಡ್ ಬೀಚ್ನಲ್ಲಿ ಅಪರಿಚಿತ ವ್ಯಕ್ತಿಯೊಬ್ಬ ದಾಳಿ ನಡೆಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ನ್ಯಾಯಾಲಯದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಝಿಕ್ಕೋಡ್ ಉತ್ತರ ಬೀಚ್ಗೆ ಆಗಮಿಸಿದಾಗ ಅಪರಿಚಿತ ವ್ಯಕ್ತಿಗಳು ತನ್ನ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಬಿಂದು ಆರೋಪಿಸಿದ್ದಾರೆ.
ಟಿವಿ ಚಾನೆಲ್ಗಳು ಪ್ರಸಾರ ಮಾಡಿದ ದೃಶ್ಯಗಳಲ್ಲಿ ಅಪರಿಚಿತ ವ್ಯಕ್ತಿಗಳು ಅಮ್ಮಿಣಿಯವರ ಮೇಲೆ ಹಲ್ಲೆ ನಡೆಸಿರುವುದನ್ನು ತೋರಿಸಿದೆ. ಯಾವುದೇ ಪ್ರಚೋದನೆ ಇಲ್ಲದೇ ಆಕೆಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಕಾರ್ಯಕರ್ತೆ ಆರೋಪಿಸಿದ್ದಾರೆ. ಆಕೆಯ ದೂರಿನ ಆಧಾರದ ಮೇಲೆ ಘಟನೆಯ ಕುರಿತು ತನಿಖೆ ಆರಂಭಿಸಲಾಗಿದೆ ಎಂದು ಕೋಝಿಕ್ಕೋಡ್ ನಗರ ಪೊಲೀಸರು ತಿಳಿಸಿದ್ದಾರೆ.
2019 ರಲ್ಲಿ ಶಬರಿಮಲೆ ದೇಗುಲದಲ್ಲಿ ಎಲ್ಲಾ ವಯೋಮಾನದ ಮಹಿಳೆಯರಿಗೆ ಪ್ರಾರ್ಥನೆ ಸಲ್ಲಿಸಲು ಅನುಮತಿ ನೀಡಿದ ಸುಪ್ರೀಂ ಕೋರ್ಟ್ ಆದೇಶದ ನಂತರ ಅಮ್ಮಿನಿ ಅವರು ಶಬರಿಮಲೆ ದೇವಸ್ಥಾನಕ್ಕೆ ಭೇಟಿ ನೀಡಿ ಸುದ್ದಿಯಲ್ಲಿದ್ದರು.ಭಾರತೀಯ ದಂಡ ಸಂಹಿತೆಯ ಸೆಕ್ಷನ್ 323 (ಸ್ವಯಂಪ್ರೇರಿತವಾಗಿ ನೋವುಂಟು ಮಾಡಿದ್ದಕ್ಕಾಗಿ ಶಿಕ್ಷೆ) ಮತ್ತು 509 (ಮಹಿಳೆಯರ ಮರ್ಯಾದೆಯನ್ನು ಅವಮಾನಿಸಿದ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವೆಲ್ಲಾಯಿ ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ತನಿಖೆ ನಡೆಸುತ್ತಿದ್ದು, ಶೀಘ್ರದಲ್ಲೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.