ಬೆಂಗಳೂರು : ಚೊಚ್ಚಲ ಐಪಿಎಲ್ ಟ್ರೋಫಿ ಎತ್ತಿ ಹಿಡಿದಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಕಳೆದ ಜೂನ್ ನಾಲ್ಕರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ನಡೆಸುವ ವೇಳೆ ಕಾಲ್ತುಳಿತದಿಂದ 11 ಜನರು ಸಾವನಪ್ಪಿದ್ದರು. ಈ ಒಂದು ಪ್ರಕರಣದಿಂದ ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಬಿ ದಯಾನಂದ್ ಅಮಾನತುಕೊಂಡಿದ್ದರು. ಇದೀಗ ವಿಚಾರಣೆಗೆ ಹಾಜರಾಗುವಂತೆ ಜಿಲ್ಲಾಧಿಕಾರಿ ಜಗದೀಶ್ ಅವರು ಬಿ.ದಯಾನಂದ್ ಗೆ ನೋಟಿಸ್ ನೀಡಿದ್ದಾರೆ.
ಹೌದು ಕಳೆದ ಜೂನ್ 4 ರಂದು ಬೆಂಗಳೂರಿನಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆರ್ ಸಿ ಬಿ ಸಂಭ್ರಮಾಚರಣೆಯ ವೇಳೆ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ವಿಚಾರಣೆಗೆ ಹಾಜರಾಗುವಂತೆ ಬಿ.ದಯಾನಂದ್ ಅವರಿಗೆಗೆ ನೋಟಿಸ್ ನೀಡಲಾಗಿದೆ. ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಅವರು ದಯಾನಂದ ಅವರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಈ ಒಂದು ಕಾಲ್ತುಳಿದ ಪ್ರಕರಣದಲ್ಲಿ ಸದ್ಯ ಬಿ.ದಯಾನಂದ ಅವರು ಅಮಾನತ್ತಿನಲ್ಲಿದ್ದಾರೆ.