ಬೆಂಗಳೂರು : 18 ವರ್ಷಗಳ ಬಳಿಕ ಚೊಚ್ಚಲ ಐಪಿಎಲ್ ಟ್ರೋಫಿ ಗೆದ್ದ ಆರ್ಸಿಬಿ ತಂಡದ ಆಟಗಾರರಿಗೆ ಬೆಂಗಳೂರಿನ ವಿಧಾನಸೌಧದ ಬಳಿ ಅಭಿನಂದನಾ ಸಮಾರಂಭ ಹಮ್ಮಿಕೊಳ್ಳಲಾಗಿತ್ತು. ಕಳೆದ ಜೂನ್ 4ರಂದು ಈ ಒಂದು ಸಮಾರಂಭ ವೇಳೆ ಕಾಲ್ತುಳಿತದಲ್ಲಿ 11 ಜನರು ಸಾವನ್ನಪ್ಪಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈ ಕೋರ್ಟ್ ಸ್ವಯಂ ಪ್ರೇರಿತವಾಗಿ ಪಿಐಎಲ್ ವಿಚಾರಣೆ ನಡೆಸಲಿದೆ.
ಹೌದು ಕಾಲ್ತುಳಿತ ಪ್ರಕರಣದಲ್ಲಿ 11 ಜನರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಹೈಕೋರ್ಟ್ ಸ್ವಯಂ ಪ್ರೇರಿತ ಪಿಐಎಲ್ ವಿಚಾರಣೆ ನಡೆಸಲಿದೆ ನ್ಯಾ.ವಿ ಕಾಮೇಶ್ವರರಾವ್ ಹಾಗು ನ್ಯಾ. ಸಿಎಂ ಜೋಶಿ ಅವರ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಸರ್ಕಾರಕ್ಕೆ ಹೈಕೋರ್ಟ್ ಸಾಲು ಸಾಲು ಪ್ರಶ್ನೆ ಕೇಳಿತ್ತು. ಹಾಗಾಗಿ ಇಂದು ಮುಚ್ಚಿದ ಲಕೋಟೆಯಲ್ಲಿ ಸರ್ಕಾರ ಹೈಕೋರ್ಟಿಗೆ ಉತ್ತರ ನೀಡಲಿದೆ.
ವಿಜಯೋತ್ಸವ ಆಚರಣೆಗೆ ನಿರ್ಧರಿಸಿದವರು ಯಾರು? ಪ್ರಕ್ರಿಯೆ ಹೇಗಿತ್ತು? ಟ್ರಾಫಿಕ್ ನಿಯಂತ್ರಿಸಲು ಅನುಸರಿಸಿದ ಕ್ರಮಗಳೇನು? ಜನರ ಗುಂಪನ್ನು ನಿಯಂತ್ರಿಸಲು ಕೈಗೊಂಡ ಕ್ರಮಗಳೇನು? ಸ್ಥಳದಲ್ಲಿ ಒದಗಿಸಿದ್ದ ವೈದ್ಯಕೀಯ ಮತ್ತು ಇತರೆ ಸೌಲಭ್ಯಗಳೇನು? ಸಂಭ್ರಮಾಚರಣೆಯಲ್ಲಿ ಪಾಲ್ಗೊಳ್ಳುವ ಜನಸಂಖ್ಯೆ ಮೊದಲೇ ಅಂದಾಜಿಸಲಾಗಿತ್ತ?
ಗಾಯಗೊಂಡವರಿಗೆ ಸ್ಥಳದಲ್ಲಿ ವೈದ್ಯಕೀಯ ಚಿಕಿತ್ಸೆ ನೀಡಲಾಗಿತ್ತೆ? ಇಲ್ಲವೆಂದಾದರೆ ಯಾಕೆ ವೈದಿಕೀಯ ಚಿಕಿತ್ಸೆ ನೀಡಿಲ್ಲ? ಗಾಯಗೊಂಡವರನ್ನು ಆಸ್ಪತ್ರೆಗೆ ಕರೋದಯಲು ಎಷ್ಟು ಸಮಯ ಬೇಕಾಯಿತು? 50,000 ಕ್ಕಿಂತ ಹೆಚ್ಚಿನ ಜನರ ಸಂಭ್ರಮಾಚರಣೆಗೆ ಎಸ್ಓಪಿ ಇತ್ತೇ? ಸಂಭ್ರಮಾಚರಣೆ ಕಾರ್ಯಕ್ರಮಕ್ಕೆ ಅನುಮತಿ ಪಡೆಯಲಾಗಿತ್ತೆ? ಇಷ್ಟು ಪ್ರಶ್ನೆಗಳನ್ನು ಸರ್ಕಾರದ ಮುಂದಿಟ್ಟು ಹೈಕೋರ್ಟ್ ಉತ್ತರ ಕೇಳಿದೆ.