Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ ಸರ್ಕಾರದಿಂದ `ಆಶಾ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್ : 1500 ರೂ.`ಪ್ರೋತ್ಸಾಹಧನ’ ಹೆಚ್ಚಳ.!

08/08/2025 5:54 AM

BIG NEWS : ಎಡಗೈ ಶೇ. 6, ಬಲಗೈ ಶೇ.5ರಷ್ಟು `ಒಳಮೀಸಲಾತಿ’ : ಆ. 16ರಂದು `ವಿಶೇಷ ಸಂಪುಟ ಸಭೆ’ಯಲ್ಲಿ ಅಂತಿಮ ನಿರ್ಧಾರ.!

08/08/2025 5:51 AM

ಆಶಾ ಕಾರ್ಯಕರ್ತೆಯರಿಗೆ ಸಚಿವ ದಿನೇಶ್ ಗುಂಡೂರಾವ್ ಗುಡ್ ನ್ಯೂಸ್

08/08/2025 5:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಎಡಗೈ ಶೇ. 6, ಬಲಗೈ ಶೇ.5ರಷ್ಟು `ಒಳಮೀಸಲಾತಿ’ : ಆ. 16ರಂದು `ವಿಶೇಷ ಸಂಪುಟ ಸಭೆ’ಯಲ್ಲಿ ಅಂತಿಮ ನಿರ್ಧಾರ.!
KARNATAKA

BIG NEWS : ಎಡಗೈ ಶೇ. 6, ಬಲಗೈ ಶೇ.5ರಷ್ಟು `ಒಳಮೀಸಲಾತಿ’ : ಆ. 16ರಂದು `ವಿಶೇಷ ಸಂಪುಟ ಸಭೆ’ಯಲ್ಲಿ ಅಂತಿಮ ನಿರ್ಧಾರ.!

By kannadanewsnow5708/08/2025 5:51 AM

ಬೆಂಗಳೂರು: ಶೇಕಡ 17ರಷ್ಟು ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ಪ್ರವರ್ಗವಾರು ವಿಂಗಡಿಸುವ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಆಯೋಗದ ವರದಿಯನ್ನು ಗುರುವಾರ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗಿದೆ ಆ. 16ರಂದು ನಡೆಯಲಿರುವ ವಿಶೇಷ ಸಂಪುಟ ಸಭೆಯಲ್ಲಿ ಈ ಕುರಿತಾಗಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು.

ರಾಜ್ಯದಲ್ಲಿರುವ 101 ಪರಿಶಿಷ್ಟ ಜಾತಿಗಳನ್ನು ಐದು ಪ್ರವರ್ಗಗಳಾಗಿ ವಿಂಗಡಿಸಿ ಎಸ್ಸಿಗೆ ಮೀಸಲಾಗಿರುವ ಶೇಕಡ 17ರಷ್ಟು ಮೀಸಲಾತಿಯನ್ನು ಪ್ರವರ್ಗವಾರು ವಿಂಗಡಿಸಲು ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಏಕ ಸದಸ್ಯ ಆಯೋಗ ವರದಿ ನೀಡಿದೆ. ಪ್ರವರ್ಗ ಎ ಶೇಕಡ 1ರಷ್ಟು ಮೀಸಲಾತಿ ನೀಡಿಲಾಗಿದ್ದು, ಅತ್ಯಂತ ಹಿಂದುಳಿದ ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ 59 ಸಣ್ಣ ಪುಟ್ಟ ಸಮುದಾಯಗಳಿವೆ. ಪ್ರವರ್ಗ ಬಿ ನಲ್ಲಿ ಹೆಚ್ಚು ಹಿಂದುಳಿದ ಮಾದಿಗ ಮತ್ತು ಅದೇ ರೀತಿ ಸಾಮಾಜಿಕ ಆರ್ಥಿಕ ರಾಜಕೀಯ ಸ್ಥಿತಿ ಇರುವ 18 ಸಮುದಾಯಗಳಿದ್ದು, ಶೇಕಡ 6ರಷ್ಟು ಮೀಸಲಾತಿ ನೀಡಲಾಗಿದೆ.

ಪ್ರವರ್ಗ ಸಿ ಯಲ್ಲಿ ಹಿಂದುಳಿದ ಹೊಲಯ ಮತ್ತು ಅದೇ ರೀತಿಯ ಸಾಮಾಜಿಕ ಆರ್ಥಿಕ ಮತ್ತು ರಾಜಕೀಯ ಸ್ಥಿತಿ ಇರುವ 17 ಜಾತಿಗಳಿಗೆ ಶೇಕಡ 5ರಷ್ಟು ಮೀಸಲಾತಿ ನೀಡಲಾಗಿದೆ. ಪ್ರವರ್ಗ ಡಿ ನಲ್ಲಿ ಕಡಿಮೆ ಹಿಂದುಳಿದ ಲಂಬಾಣಿ, ಭೋವಿ, ಕೊರಮ, ಕೊರಚ ಸಮುದಾಯಗಳಿದ್ದು, ಶೇ. 4 ಮೀಸಲಾತಿ ನೀಡಲಾಗಿದೆ

ಪ್ರವರ್ಗ ಇ ನಲ್ಲಿ ಆದಿ ದ್ರಾವಿಡ, ಆದಿ ಕರ್ನಾಟಕ, ಆದಿ ಆಂಧ್ರಗಳಿಗೆ ಶೇ. 1ರಷ್ಟು ಮೀಸಲಾತಿ ನೀಡಲಾಗಿದೆ. ಪಟ್ಟಿಯಲ್ಲಿ ಗುರುತಿಸಿಕೊಳ್ಳದ ಜಾತಿಗಳ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ಜಾತಿ ಪಟ್ಟಿಯಲ್ಲಿ ಸೇರಿಸಲು ಕ್ರಮ ಕೈಗೊಳ್ಳಬೇಕು ಎಂದು ಆಯೋಗ ಶಿಫಾರಸು ಮಾಡಿದೆ.
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಅಯೋಗದ ವತಿಯಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಕೈಗೊಳ್ಳಲು ಸಚಿವ ಸಂಪುಟ ನಿರ್ಧರಿಸಿದೆ ಎಂದು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ತಿಳಿಸಿದರು.

ಸಮೀಕ್ಷೆಯನ್ನು ಡಿಜಿಟಲ್ ಕೈಗೊಳ್ಳುವುದು ಮತ್ತು ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಮಾಡಲು ತಂತ್ರಾಂಶದ ಅಭಿವೃದ್ಧಿ ಮತ್ತು ಉಸ್ತುವಾರಿಯನ್ನು ಇ-ಆಡಳಿತ ಇಲಾಖೆ ಮೂಲಕ ಕೈಗೊಳ್ಳಲು; ಹಾಗೂ ಸಮೀಕ್ಷೆಯಲ್ಲಿ ನಮೂದಿಸಲಾಗುವ 6 ವರ್ಷ ಮೇಲ್ಪಟ್ಟ ಪ್ರತಿ ವ್ಯಕ್ತಿಯ ಆಧಾರ್ ದೃಢೀಕರಣವನ್ನು ಕಡ್ಡಾಯಗೊಳಿಸಲು; ಹಾಗೂ ನ್ಯಾ.ನಾಗಮೋಹನ್ದಾಸ್ ರವರ ನೇತೃತ್ವದಲ್ಲಿ ಒಳಮೀಸಲಾತಿಗೆ ಸಂಬAಧಿಸಿದAತೆ, ಪರಿಶಿಷ್ಟ ಜಾತಿ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿರುತ್ತಾರೆ. ಅದೇ ರೀತಿಯಾಗಿ ಹಿಂದುಳಿದ ವರ್ಗಗಳ ಆಯೋಗವು ನಡೆಸುವ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿಕೊಂಡು ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲು; ಮತ್ತು ಸಮೀಕ್ಷಾ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಆಯೋಗದ ಮೇಲುಸ್ತುವಾರಿಯಲ್ಲಿ ಅಗತ್ಯವಿರುವ ಅಧಿಕಾರಿಗಳು, ಶಿಕ್ಷಕರು ಹಾಗೂ ಇತರೆ ಸಿಬ್ಬಂದಿಗಳು ಕೆಲಸ ಮಾಡುವರು.

BIG NEWS: Left-handed people. 6 percent right-handed people 5 percent `internal reservation': Final decision in a special cabinet meeting on August 16th!
Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ `ಆಶಾ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್ : 1500 ರೂ.`ಪ್ರೋತ್ಸಾಹಧನ’ ಹೆಚ್ಚಳ.!

08/08/2025 5:54 AM1 Min Read

ಆಶಾ ಕಾರ್ಯಕರ್ತೆಯರಿಗೆ ಸಚಿವ ದಿನೇಶ್ ಗುಂಡೂರಾವ್ ಗುಡ್ ನ್ಯೂಸ್

08/08/2025 5:47 AM1 Min Read

ರಾಜ್ಯದ ಜನತೆಗೆ ಗುಡ್ ನ್ಯೂಸ್: ಪ್ರತಿ ತಾಲ್ಲೂಕು ಆಸ್ಪತ್ರೆಗಳಲ್ಲಿ ‘ಇಬ್ಬರು ಸ್ತ್ರೀ ರೋಗ ತಜ್ಞರ’ ನೇಮಕ

08/08/2025 5:44 AM2 Mins Read
Recent News

ರಾಜ್ಯ ಸರ್ಕಾರದಿಂದ `ಆಶಾ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್ : 1500 ರೂ.`ಪ್ರೋತ್ಸಾಹಧನ’ ಹೆಚ್ಚಳ.!

08/08/2025 5:54 AM

BIG NEWS : ಎಡಗೈ ಶೇ. 6, ಬಲಗೈ ಶೇ.5ರಷ್ಟು `ಒಳಮೀಸಲಾತಿ’ : ಆ. 16ರಂದು `ವಿಶೇಷ ಸಂಪುಟ ಸಭೆ’ಯಲ್ಲಿ ಅಂತಿಮ ನಿರ್ಧಾರ.!

08/08/2025 5:51 AM

ಆಶಾ ಕಾರ್ಯಕರ್ತೆಯರಿಗೆ ಸಚಿವ ದಿನೇಶ್ ಗುಂಡೂರಾವ್ ಗುಡ್ ನ್ಯೂಸ್

08/08/2025 5:47 AM

ರಾಜ್ಯದ ಜನತೆಗೆ ಗುಡ್ ನ್ಯೂಸ್: ಪ್ರತಿ ತಾಲ್ಲೂಕು ಆಸ್ಪತ್ರೆಗಳಲ್ಲಿ ‘ಇಬ್ಬರು ಸ್ತ್ರೀ ರೋಗ ತಜ್ಞರ’ ನೇಮಕ

08/08/2025 5:44 AM
State News
KARNATAKA

ರಾಜ್ಯ ಸರ್ಕಾರದಿಂದ `ಆಶಾ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್ : 1500 ರೂ.`ಪ್ರೋತ್ಸಾಹಧನ’ ಹೆಚ್ಚಳ.!

By kannadanewsnow5708/08/2025 5:54 AM KARNATAKA 1 Min Read

ಬೆಂಗಳೂರು: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಪ್ರೋತ್ಸಾಹದ ವಿಚಾರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗುಡ್ ನ್ಯೂಸ್ ನೀಡಿದ್ದಾರೆ. ಅದೇನು ಅಂತ…

BIG NEWS : ಎಡಗೈ ಶೇ. 6, ಬಲಗೈ ಶೇ.5ರಷ್ಟು `ಒಳಮೀಸಲಾತಿ’ : ಆ. 16ರಂದು `ವಿಶೇಷ ಸಂಪುಟ ಸಭೆ’ಯಲ್ಲಿ ಅಂತಿಮ ನಿರ್ಧಾರ.!

08/08/2025 5:51 AM

ಆಶಾ ಕಾರ್ಯಕರ್ತೆಯರಿಗೆ ಸಚಿವ ದಿನೇಶ್ ಗುಂಡೂರಾವ್ ಗುಡ್ ನ್ಯೂಸ್

08/08/2025 5:47 AM

ರಾಜ್ಯದ ಜನತೆಗೆ ಗುಡ್ ನ್ಯೂಸ್: ಪ್ರತಿ ತಾಲ್ಲೂಕು ಆಸ್ಪತ್ರೆಗಳಲ್ಲಿ ‘ಇಬ್ಬರು ಸ್ತ್ರೀ ರೋಗ ತಜ್ಞರ’ ನೇಮಕ

08/08/2025 5:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.