ಕೊಪ್ಪಳ : ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಕಿತ್ತಾಟ ನಡೆಯುತ್ತಿದ್ದು, ಅದರ ಮಧ್ಯ ದಲಿತ ಸಿಎಂ ಕೂಗು ಸಹ ಕೇಳಿ ಬರುತ್ತಿದೆ. ಈ ವಿಚಾರವಾಗಿ ಕೊಪ್ಪಳದಲ್ಲಿ ಇಂಧನ ಸಚಿವ ಕೆಜೆ ಜಾರ್ಜ್ ರಾಜ್ಯದಲ್ಲಿ ಅವಕಾಶ ಸಿಕ್ಕರೆ ದಲಿತರನ್ನು ಸಿಎಂ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದಾರೆ.
ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಆಕಾಶ ಸಿಕ್ಕರೆ ದಲಿತರನ್ನು ಸಿಎಂ ಮಾಡುತ್ತೇವೆ. ಬೇರೆ ಬೇರೆ ರಾಜ್ಯದಲ್ಲಿ ದಲಿತರನ್ನು ಕಾಂಗ್ರೆಸ್ ಸಿಎಂ ಮಾಡಿದೆ. ರಾಜ್ಯದಲ್ಲೂ ಕೂಡ ಅವಕಾಶ ಸಿಕ್ಕರೆ ದಲಿತರನ್ನು ಸಿಎಂ ಮಾಡುತ್ತೇವೆ. ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಆಗುವ ಎಲ್ಲಾ ಅರ್ಹತೆ ಇದೆ ಎಂದು ಇಂಧನ ಸಚಿವ ಕೆಜೆ ಜಾರ್ಜ್ ಹೇಳಿಕೆ ನೀಡಿದರು.








