Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಡಿವೋರ್ಸ್​ ಬೇಡ, ನಾವಿಬ್ಬರೂ ಮತ್ತೆ ಒಂದಾಗುತ್ತೇವೆ’: ಬ್ಯಾಡ್ಮಿಂಟನ್ ತಾರೆ​ ಸೈನಾ ನೆಹ್ವಾಲ್- ಪರುಪಳ್ಳಿ ಕಶ್ಯಪ್!

03/08/2025 7:41 AM

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್: 2025 ರಲ್ಲಿ 45,000 ಉದ್ಯೋಗಿಗಳನ್ನು ನೇಮಿಸಿಕೊಳ್ಳಲಿರುವ ‘ಕ್ಯಾಪ್‌ಜೆಮಿನಿ ಇಂಡಿಯಾ’

03/08/2025 7:11 AM

BIG NEWS : ದೋಷಪೂರಿತ ನಂಬರ್ ಪ್ಲೇಟ್ ಅಳವಡಿಕೆ : ಮೈಸೂರಲ್ಲಿ ಸಂಚಾರಿ ಪೊಲೀಸರಿಂದ 159 ಬೈಕ್ ಗಳು ಸೀಜ್

03/08/2025 7:10 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಿಯಲ್ ಎಸ್ಟೇಟ್ ಗೆ ಅರಣ್ಯ ಭೂಮಿ ಮಾರಲು `HMT’ಗೆ ಬಿಡಬೇಕೆ : ಹೆಚ್.ಡಿ.ಕುಮಾರಸ್ವಾಮಿಗೆ ಸಚಿವ ಈಶ್ವರ ಖಂಡ್ರೆ ಪ್ರಶ್ನೆ
KARNATAKA

BIG NEWS : ರಿಯಲ್ ಎಸ್ಟೇಟ್ ಗೆ ಅರಣ್ಯ ಭೂಮಿ ಮಾರಲು `HMT’ಗೆ ಬಿಡಬೇಕೆ : ಹೆಚ್.ಡಿ.ಕುಮಾರಸ್ವಾಮಿಗೆ ಸಚಿವ ಈಶ್ವರ ಖಂಡ್ರೆ ಪ್ರಶ್ನೆ

By kannadanewsnow5703/02/2025 12:58 PM

ಬೆಂಗಳೂರು : ಕುದುರೇಮುಖ ಕಬ್ಬಿಣದ ಅದಿರು ಕಂಪನಿ ವಿಚಾರದಲ್ಲಿ ಕೆಐಓಸಿಎಲ್ ತಪ್ಪು ಮುಚ್ಚಿಕೊಳ್ಳಲು ಕರ್ನಾಟಕ ಸರ್ಕಾರದ ಮೇಲೆ ಎಚ್.ಡಿ. ಕುಮಾರಸ್ವಾಮಿ ಮಿಥ್ಯಾರೋಪ ಮಾಡುತ್ತಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿರುಗೇಟು ನೀಡಿದ್ದಾರೆ.

ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ರಾಜ್ಯದ ಅಭಿವೃದ್ಧಿಯ ವಿಚಾರದಲ್ಲಿ ರಾಜಕೀಯ ಬೆರಸುವುದಿಲ್ಲ, ಆದರೆ ಕೆ.ಐ.ಓ.ಸಿ.ಎಲ್. ಈ ಹಿಂದೆ ಗಣಿಗಾರಿಕೆ ನಡೆಸುವಾಗ ಸರಿಪಡಿಸಲು ಸಾಧ್ಯವೇ ಆಗದಷ್ಟು ಪರಿಸರ ಹಾನಿ ಮಾಡಿದೆ, ಪರಿಸರ ಹಾನಿಯ ಮೊತ್ತ ಸೇರಿದಂತೆ 1400 ಕೋಟಿ ರೂ. ಬಾಕಿ ಕಟ್ಟಿಲ್ಲ. ತನ್ನ ತಪ್ಪು ಸರಿಪಡಿಸಿಕೊಳ್ಳಲು ತಯಾರಿಲ್ಲದ ಕಂಪನಿಗೆ ಮತ್ತಷ್ಟು ಪರಿಸರ ಹಾನಿ ಮಾಡಲು ಬಿಡಬೇಕೆ ಎಂದು ಪ್ರಶ್ನಿಸಿದ್ದಾರೆ.

ಸರ್ಕಾರಿ ಸ್ವಾಮ್ಯದ ಕೆಐಓಸಿಎಲ್ ಅಕ್ರಮವಾಗಿ ಲಕ್ಯಾ ಜಲಾಶಯದ ಎತ್ತರ ಹೆಚ್ಚಿಸಿ, ಅರಣ್ಯ ಮುಳುಗಡೆ ಮಾಡಿತ್ತು. ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಎನ್.ಪಿ.ವಿ. ಮೊತ್ತ, ಬಡ್ಡಿ ಸೇರಿ ಸುಮಾರು 1349.52948 ಕೋಟಿ ರೂ.ಗಳನ್ನು ಅರಣ್ಯ ಇಲಾಖೆಗೆ ಪಾವತಿಸಬೇಕಿದೆ, ಇದರ ಜೊತೆಗೆ 1334.33 ಹೆಕ್ಟೇರ್ ಭೂಮಿಯನ್ನು ಅರಣ್ಯ ಇಲಾಖೆಗೆ ಹಿಂತಿರುಗಿಸಬೇಕಿದೆ. ಕರ್ನಾಟಕದ ಮುಖ್ಯಮಂತ್ರಿಗಳಾಗಿದ್ದ ಕುಮಾರಸ್ವಾಮಿ ಅವರು, ಅರಣ್ಯ ಇಲಾಖೆಗೆ ಕಟ್ಟಬೇಕಾದ ಬಾಕಿ ಮತ್ತು ಹಿಂತಿರುಗಿಸಬೇಕಾದ ಭೂಮಿಯ ಬಗ್ಗೆ ಏಕೆ ಮಾತನಾಡುತ್ತಿಲ್ಲ ಎಂದು ಈಶ್ವರ ಖಂಡ್ರೆ ಪ್ರಶ್ನಿಸಿದ್ದಾರೆ.

ಕೇಂದ್ರ ಉನ್ನತಾಧಿಕಾರ ಸಮಿತಿ (ಸಿ.ಇ.ಸಿ.) ವರದಿಯಲ್ಲಿ ಹಾಗೂ 13ನೇ ವಿಧಾನಸಭೆಯ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿ ನೀಡಿರುವ 3ನೇ ವರದಿಯಲ್ಲೂ ಕೆಐಓಸಿಎಲ್ ಪರಿಸರಕ್ಕೆ ಮಾಡಿರುವ ಹಾನಿಯ ಬಗ್ಗೆ ಸ್ಪಷ್ಟವಾಗಿ ಉಲ್ಲೇಖವಿದೆ. ಕಂಪನಿ ಅರಣ್ಯ ಭೂಮಿಯನ್ನು ಅರಣ್ಯೇತರ ಉದ್ದೇಶಕ್ಕೆ ಬಳಸಲು ಸೂಕ್ತ ಅನುಮತಿ ಪಡೆಯದೇ ನಿಯಮ ಉಲ್ಲಂಘಿಸಿದೆ. ಮಾಡಿರುವ ತಪ್ಪು ಸರಿಪಡಿಸಿಕೊಂಡು, ದಂಡ ಪಾವತಿಸಿ ಎಂದು ಹೇಳಿದರೆ ಅದು ಅಭಿವೃದ್ಧಿಗೆ ಅಡ್ಡಿ ಮಾಡುವ ರಾಜಕೀಯ ಆಗುತ್ತದೆಯೇ ಎಂದು ಖಂಡ್ರೆ ಪ್ರಶ್ನಿಸಿದ್ದಾರೆ.

ಕೇಂದ್ರ ಉಕ್ಕು ಸಚಿವಾಲಯದಡಿ ಬರುವ ಎನ್.ಎಂ.ಡಿ.ಸಿ.ಗೆ ಉಕ್ಕು ಕಾರ್ಖಾನೆ ಸ್ಥಾಪಿಸಲು 2014ರಲ್ಲಿಯೇ ಬಳ್ಳಾರಿ ಬಳಿ ವೇಣಿವೀರಾಪುರದಲ್ಲಿ 2857.54 ಎಕರೆ ಜಮೀನು ನೀಡಲಾಗಿದೆ. ಉಕ್ಕು ಕಾರ್ಖಾನೆ ಆರಂಭಿಸಿದರೆ 50 ಸಾವಿರ ಜನರಿಗೆ ಉದ್ಯೋಗ ಲಭಿಸುತ್ತದೆ. ಕೆಐಓಸಿಎಲ್ ಮುಚ್ಚಿದರೆ 300 ಕಾರ್ಮಿಕರಿಗೆ ತೊಂದರೆ ಆಗುತ್ತದೆ ಎನ್ನುತ್ತಿದ್ದ ಕುಮಾರಸ್ವಾಮಿ ಈಗ 1000 ಕಾರ್ಮಿಕರು ಎನ್ನುತ್ತಿದ್ದಾರೆ, ವೇಣಿಪುರದಲ್ಲಿ ಕಾರ್ಖಾನೆ ಆರಂಭಿಸಿದರೆ ಉದ್ಯೋಗ ನೀಡಬಹುದು. ಏಕೆ ಆರಂಭ ಮಾಡುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಎಚ್.ಎಂ.ಟಿ ರಿಯಲ್ ಎಸ್ಟೇಟ್ ದಂಧೆಗೆ ಅವಕಾಶ ಕೊಡಬೇಕೆ?
ಎಚ್.ಎಂ.ಟಿ. ವಶದಲ್ಲಿರುವ ಪೀಣ್ಯ ಪ್ಲಾಂಟೇಷನ್ ಅರಣ್ಯ ಜಮೀನು ಮಂಜೂರಾತಿಯ ಬಗ್ಗೆಯೇ ಅನುಮಾನವಿದೆ. ಎಚ್.ಎಂ.ಟಿ. ತನಗೆ ಮಂಜೂರಾಗಿದೆ ಎಂದು ಒದಗಿಸಿರುವ ದಾಖಲೆಯಲ್ಲಿ ಸರ್ವೆ ನಂಬರ್ ಮತ್ತು ಮಂಜೂರಾದ ದಿನಾಂಕವೂ ಇಲ್ಲ. 443 ಎಕರೆ ಭೂಮಿ ಮಂಜೂರಾತಿ ಬಗ್ಗೆ ಅಥವಾ ಅರಣ್ಯೇತರ ಉದ್ದೇಶಕ್ಕೆ ಸರ್ಕಾರಿ ಆದೇಶ ಆಗಿರುವ ಯಾವುದೇ ಗೆಜೆಟ್ ಅಧಿಸೂಚನೆ ಇಲ್ಲ. ಹೀಗಿದ್ದೂ ಪ್ರಸ್ತುತ ಮುಚ್ಚಿಹೋಗಿರುವ ಎಚ್.ಎಂ.ಟಿ. ಅರಣ್ಯ ಜಮೀನನ್ನು ಖಾಸಗಿ ಬಿಲ್ಡರ್ ಗಳು ಸೇರಿದಂತೆ ಹಲವು ಕಂಪನಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿದೆ. ಎಚ್.ಎಂ.ಟಿ.ಗೆ ರಿಯಲ್ ಎಸ್ಟೇಟ್ ದಂಧೆ ನಡೆಸಲು ಸರ್ಕಾರ ಅವಕಾಶ ಕೊಡಬೇಕೇ ಎಂದು ಈಶ್ವರ ಖಂಡ್ರೆ ಪ್ರಶ್ನಿಸಿದ್ದಾರೆ.

ಸರ್ವೋಚ್ಚ ನ್ಯಾಯಾಲಯ Once a Forest is Always a Forest – Environment is more important than civil rights ಎಂದು ಪದೇ ಪದೇ ಹೇಳಿದೆ. ಎಚ್.ಎಂ.ಟಿ. ವಶದಲ್ಲಿರುವ ಅರಣ್ಯ ಭೂಮಿ ಡಿನೋಟಿಫೈ ಆಗಿಲ್ಲ. ಹೀಗಾಗಿ ಅದನ್ನು ಪರಭಾರೆ, ದಾನ ಮಾಡಲು ಅವಕಾಶವೇ ಇಲ್ಲ. ಅರಣ್ಯ ಭೂಮಿ ಮರಳಿ ಪಡೆಯುವುದರಲ್ಲಿ ತಪ್ಪೇನು? ಜೊತೆಗೆ ಕೆಲವೇ ಕೆಲವು ಅಧಿಕಾರಿಗಳು ಸಚಿವ ಸಂಪುಟದ ಗಮನಕ್ಕೂ ತಾರದೆ, ತಾವೇ ಸ್ವಯಂ ನಿರ್ಧಾರ ಕೈಗೊಂಡು ಸುಪ್ರೀಂಕೋರ್ಟ್ ಗೆ ಮಧ್ಯಂತರ ಅರ್ಜಿ (IA) ಹಾಕಿದ್ದರು, ಈ ಅಧಿಕಾರಿಗಳಿಗೆ ಕಾರಣ ಕೇಳಿ ನೋಟಿಸ್ ಸಹ ನೀಡಲಾಗಿದೆ. ಸರ್ಕಾರದ ಸಮ್ಮತಿ ಇಲ್ಲದ ಐಎ ಹಿಂಪಡೆಯಲು ನಿರ್ಧರಿಸಲಾಗಿತ್ತು, ಇದಕ್ಕೆ ಸಚಿವ ಸಂಪುಟವೂ ಘಟನೋತ್ತರ ಅನುಮೋದನೆ ನೀಡಿದೆ. ಇದರಲ್ಲಿ ಅಭಿವೃದ್ಧಿಗೆ ಅಡ್ಡಿ ಪಡಿಸುವ ಯಾವುದೇ ರಾಜಕೀಯ ಇಲ್ಲ. ಬದಲಾಗಿ ರಾಜ್ಯದ ಹಿತವಿದೆ ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ಕುಮಾರಸ್ವಾಮಿ ಅವರು ಬೆಂಗಳೂರಿಗೆ ಬಂದಾಗಲೆಲ್ಲಾ ಎಚ್.ಎಂ.ಟಿ, ಮತ್ತು ಕೆ.ಐ.ಓ.ಸಿ.ಎಲ್. ವಿಚಾರದಲ್ಲಿ ಆರೋಪ ಮಾಡುವುದನ್ನು ಬಿಟ್ಟು, ರಾಜ್ಯದ ಹಿತದ ಬಗ್ಗೆಯೂ ಚಿಂತಿಸಬೇಕು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

BIG NEWS : ರಿಯಲ್ ಎಸ್ಟೇಟ್ ಗೆ ಅರಣ್ಯ ಭೂಮಿ ಮಾರಲು `HMT'ಗೆ ಬಿಡಬೇಕೆ : ಹೆಚ್.ಡಿ.ಕುಮಾರಸ್ವಾಮಿಗೆ ಸಚಿವ ಈಶ್ವರ ಖಂಡ್ರೆ ಪ್ರಶ್ನೆ
Share. Facebook Twitter LinkedIn WhatsApp Email

Related Posts

BIG NEWS : ದೋಷಪೂರಿತ ನಂಬರ್ ಪ್ಲೇಟ್ ಅಳವಡಿಕೆ : ಮೈಸೂರಲ್ಲಿ ಸಂಚಾರಿ ಪೊಲೀಸರಿಂದ 159 ಬೈಕ್ ಗಳು ಸೀಜ್

03/08/2025 7:10 AM1 Min Read

ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ 20 ದಿನಗಳಲ್ಲಿ ಜಾರಿ: ಮಾಜಿ ಸಚಿವ ಆಂಜನೇಯ

03/08/2025 7:04 AM1 Min Read

BREAKING : ‘ನಮ್ಮ ಮೆಟ್ರೋದಲ್ಲಿ’ ಮೊದಲ ಬಾರಿಗೆ ಯಕೃತ್‌ ಸಾಗಣೆ : ಯುವಕನಿಗೆ ಅಂಗಾಂಗ ಕಸಿ ಯಶಸ್ವಿ!

03/08/2025 6:49 AM1 Min Read
Recent News

‘ಡಿವೋರ್ಸ್​ ಬೇಡ, ನಾವಿಬ್ಬರೂ ಮತ್ತೆ ಒಂದಾಗುತ್ತೇವೆ’: ಬ್ಯಾಡ್ಮಿಂಟನ್ ತಾರೆ​ ಸೈನಾ ನೆಹ್ವಾಲ್- ಪರುಪಳ್ಳಿ ಕಶ್ಯಪ್!

03/08/2025 7:41 AM

ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್: 2025 ರಲ್ಲಿ 45,000 ಉದ್ಯೋಗಿಗಳನ್ನು ನೇಮಿಸಿಕೊಳ್ಳಲಿರುವ ‘ಕ್ಯಾಪ್‌ಜೆಮಿನಿ ಇಂಡಿಯಾ’

03/08/2025 7:11 AM

BIG NEWS : ದೋಷಪೂರಿತ ನಂಬರ್ ಪ್ಲೇಟ್ ಅಳವಡಿಕೆ : ಮೈಸೂರಲ್ಲಿ ಸಂಚಾರಿ ಪೊಲೀಸರಿಂದ 159 ಬೈಕ್ ಗಳು ಸೀಜ್

03/08/2025 7:10 AM

ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ 20 ದಿನಗಳಲ್ಲಿ ಜಾರಿ: ಮಾಜಿ ಸಚಿವ ಆಂಜನೇಯ

03/08/2025 7:04 AM
State News
KARNATAKA

BIG NEWS : ದೋಷಪೂರಿತ ನಂಬರ್ ಪ್ಲೇಟ್ ಅಳವಡಿಕೆ : ಮೈಸೂರಲ್ಲಿ ಸಂಚಾರಿ ಪೊಲೀಸರಿಂದ 159 ಬೈಕ್ ಗಳು ಸೀಜ್

By kannadanewsnow0503/08/2025 7:10 AM KARNATAKA 1 Min Read

ಮೈಸೂರು : ದೋಷಪೂರಿತ ನಂಬರ್ ಪ್ಲೇಟ್ ಅಳವಡಿಕೆ ಹಿನ್ನೆಲೆಯಲ್ಲಿ 159 ಬೈಕ್ ಗಳು ಸೀಜ್ ಮಾಡಲಾಗಿದ್ದು, ಮೈಸೂರು ನಗರ ಸಂಚಾರ…

ಪರಿಶಿಷ್ಟ ಜಾತಿಗೆ ಒಳ ಮೀಸಲಾತಿ 20 ದಿನಗಳಲ್ಲಿ ಜಾರಿ: ಮಾಜಿ ಸಚಿವ ಆಂಜನೇಯ

03/08/2025 7:04 AM

BREAKING : ‘ನಮ್ಮ ಮೆಟ್ರೋದಲ್ಲಿ’ ಮೊದಲ ಬಾರಿಗೆ ಯಕೃತ್‌ ಸಾಗಣೆ : ಯುವಕನಿಗೆ ಅಂಗಾಂಗ ಕಸಿ ಯಶಸ್ವಿ!

03/08/2025 6:49 AM

ಬೆಂಗಳೂರಲ್ಲಿ ತಡರಾತ್ರಿ ನಂದಿನಿ ಪಾರ್ಲರ್ ಬೀಗ ಮುರಿದು 3 ಲಕ್ಷ ಕಳ್ಳತನ : ಪ್ರಕರಣ ದಾಖಲು

03/08/2025 6:13 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.