Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಈ ಒಂದೇ ಎಲೆ 100 ರೋಗಗಳಿಗೆ ಔಷಧಿ ; ಮನೆಯಲ್ಲಿದ್ರೆ ವೈದ್ಯರೇ ಬೇಕಾಗಿಲ್ಲ!

13/02/2026 9:24 PM

ಸಾಗರದ ಯಡಮನೆಗೆ ಮಾಜಿ ಸಚಿವ ಹಾಲಪ್ಪ ಭೇಟಿ, ಸರ್ಕಾರದ ಗಮನ ಸೆಳೆದು ಸಮಸ್ಯೆ ಪರಿಹಾರದ ಭರವಸೆ

13/02/2026 8:34 PM

BREAKING: ಶಾಸಕ ಸುನೀಲ್ ಕುಮಾರ್, MLC ರವಿಕುಮಾರ್ ಸೇರಿ ಇತರರ ವಿರುದ್ಧ ಪೊಲೀಸ್ ಕಮೀಷನರಿಗೆ ರಮೇಶ್ ಬಾಬು ದೂರು

13/02/2026 8:09 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಹಕ್ಕುಪತ್ರ’ ಒದಗಿಸಲು ಕ್ರಮ : ಸಚಿವ ಮಧು ಬಂಗಾರಪ್ಪ ಭರವಸೆ
KARNATAKA

BIG NEWS : `ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಹಕ್ಕುಪತ್ರ’ ಒದಗಿಸಲು ಕ್ರಮ : ಸಚಿವ ಮಧು ಬಂಗಾರಪ್ಪ ಭರವಸೆ

By kannadanewsnow5723/12/2024 12:22 PM

ಶಿವಮೊಗ್ಗ : ಜಿಲ್ಲೆಯಲ್ಲಿ ಹಲವು ದಶಕಗಳಿಂದ ಬಗರ್‌ಹುಕುಂ ಸಾಗುವಳಿ ಮಾಡುತ್ತಿರುವ ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಒಕ್ಕಲೆಬ್ಬಿಸದಂತೆ ಸರ್ಕಾರದಿಂದ ನಿಯಮಾನುಸಾರ ಹಕ್ಕುಪತ್ರ ಒದಗಿಸಿಕೊಟ್ಟು ಸಾಗುವಳಿ ಮಾಡಿಕೊಂಡು ನೆಮ್ಮದಿಯ ಜೀವನ ಸಾಗಿಸುವಂತಾಗಲು ಮತ್ತು ಮನೆ ಕಟ್ಟಿಕೊಂಡು ಜೀವನ ನಿರ್ವಹಿಸುತ್ತಿರುವ ಅರ್ಹ ರೈತರಿಗೆ ಮತ್ತು ನಿವಾಸಿಗಳಿಗೆ ಸರ್ಕಾರದಿಂದಲೇ ಹಕ್ಕುಪತ್ರ ನೀಡಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಸೊರಬದ ಪ್ರವಾಸಿ ಮಂದಿರದಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಮಾಹಿತಿ ನೀಡಿ ಮಾತನಾಡುತ್ತಿದ್ದರು. ಈ ವಿಷಯಕ್ಕೆ ಸಂಬಂಧಿಸಿದAತೆ ದೇಶದ ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಕರಣ ವಿಚಾರಣೆ ಹಂತದಲ್ಲಿದ್ದು, ಈ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಸರ್ಕಾರ ಕಾರ್ಯಪ್ರವೃತ್ತವಾಗಿದೆ. ಈ ಹಿಂದೆ ಸದರಿ ವಿಷಯವು ನ್ಯಾಯಾಲಯದಲ್ಲಿ ಸೂಕ್ತ ಸಾಕ್ಷಾö್ಯಧಾರ ಮತ್ತು ದಾಖಲೆಗಳ ಸಹಿತ ಸಮರ್ಥಿಸಿಕೊಳ್ಳುವಲ್ಲಿ ನ್ಯೂನತೆಗಳಿದ್ದುದನ್ನು ಗುರುತಿಸಿ, ಓರ್ವ ಸಮರ್ಥ ನ್ಯಾಯವಾದಿಯೊಬ್ಬರನ್ನು ಈಗಾಗಲೇ ನೇಮಿಸಿದೆ. 2025ರ ಜನವರಿ ಮಾಹೆಯಲ್ಲಿ ಈ ಪ್ರಕರಣ ವಿಚಾರಣೆಗೆ ಬರಲಿದ್ದು, ರಾಜ್ಯದ ಶರಾವತಿ ಸಂತ್ರಸ್ಥರು ಹಾಗೂ ಬಗರ್‌ಹುಕುಂ ಸಾಗುವಳಿದಾರರ ಪರವಾಗಿ ತೀರ್ಪು ಹೊರಬರುವ ಆಶಯ ತಮಗಿರುವುದಾಗಿ ಅವರು ತಿಳಿಸಿದರು.

ಹಲವು ದಶಕಗಳ ಸಮಸ್ಯೆಗೆ ಈ ಹಿಂದಿನ ಚುನಾಯಿತ ಜನಪ್ರತಿನಿಧಿಗಳು ಅರ್ಹ ಬಡ ರೈತರಿಗೆ, ವನವಾಸಿಗಳಿಗೆ ಸರಿಯಾದ ನ್ಯಾಯ ಒದಗಿಸುವಲ್ಲಿ ವಿಫುಲರಾಗಿರುವುದು ಮೇಲ್ನೋಟಕ್ಕೆ ಗೋಚರಿಸುತ್ತಿದೆ ಎಂದ ಅವರು, ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಅಧಿಕಾರಾವಧಿಯಲ್ಲಿ ವಿತರಿಸಲಾಗಿದ್ದ ಹಕ್ಕುಪತ್ರಗಳನ್ನು ನಂತರ ಆಡಳಿತಕ್ಕೆ ಬಂದ ಸರ್ಕಾರಗಳು ಸದರಿ ಹಕ್ಕುಪತ್ರಗಳನ್ನು ಅನೂರ್ಜಿತಗೊಳಿಸಿ, ರೈತರನ್ನು ಸಂಕಷ್ಟಕ್ಕೀಡು ಮಾಡಿದ್ದವು. ಪ್ರಸ್ತುತ ಸರ್ಕಾರ ನೊಂದವರ ಪರವಾಗಿ ಕಾರ್ಯನಿರ್ವಹಿಸಲಿದೆ ಎಂದವರು ನುಡಿದರು.

ಈ ವಿಷಯಕ್ಕೆ ಸಂಬAಧಿಸಿದAತೆ ಶರಾವತಿ ಸಂತ್ರಸ್ಥರ ಸಮಸ್ಯೆಗೆ ಶಾಶ್ವತ ಪರಿಹಾರ ಕೊಡಿಸುವ ನಿಟ್ಟಿನಲ್ಲಿ ಯತ್ನ ಮುಂದುವರೆದಿದ್ದು, ಅರ್ಹರಿಗೆ ಹಕ್ಕುಪತ್ರ ನೀಡುವ ಕುರಿತು ಈಗಾಗಲೇ ಅನೇಕ ಬಾರಿ ರಾಜ್ಯದ ಮಾನ್ಯ ಮುಖ್ಯಮಂತ್ರಿಗಳೊAದಿಗೆ ಸಮಾಲೋಚನೆ ನಡೆಸಲಾಗಿದೆ ಎಂದರು.

ಅಡಿಕೆ ಹಾನಿಕಾರಕವಲ್ಲ : ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಹಾಗೂ ಪರಂಪರಾಗತವಾಗಿ ಅಡಿಕೆ ಬೆಳೆಯನ್ನು ತಮ್ಮ ಜೀವನಾಧಾರ ಬೆಳೆಯನ್ನಾಗಿ ಬೆಳೆಸಿಕೊಂಡು ಬರಲಾಗುತ್ತಿದೆ. ಅಲ್ಲದೇ ಅದರ ಕ್ಷೇತ್ರವ್ಯಾಪ್ತಿ ಪ್ರತಿವರ್ಷ ಹೆಚ್ಚಾಗುತ್ತಲೇ ಇದೆ. ಕೆಲವು ವರ್ಷಗಳ ಹಿಂದೆ ಅಡಿಕೆ ಬೆಳೆ ಆರೋಗ್ಯಕ್ಕೆ ಹಾನಿಕಾರಕವೆಂದು ಸಂಸ್ಥೆಯೊAದು ವರದಿ ನೀಡಿತ್ತು. ಈ ವರದಿ ಸ್ಪಷ್ಟತೆಯಿಂದ ಕೂಡಿಲ್ಲ. ಬದಲಾಗಿ ಅಡಿಕೆ ಆರೋಗ್ಯಕ್ಕೆ ಉತ್ತಮ ಆಹಾರವಾಗಿದ್ದು, ಹಾನಿಕಾರಕವಲ್ಲ ಎಂದ ಅವರು, ರಾಜ್ಯ ಸರ್ಕಾರವು ಅಡಿಕೆ ಬೆಳೆಗಾರರ ಸಂರಕ್ಷಣೆಗೆ ಬದ್ದವಾಗಿದೆ. ಕೇಂದ್ರ ಸರ್ಕಾರವೂ ಕೂಡ ಈ ಬಗ್ಗೆ ರೈತರ ಪರವಾಗಿ ಸಮರ್ಥಿಸಿಕೊಳ್ಳಬೇಕೆಂದವರು ನುಡಿದರು.

ಸದನದಲ್ಲಿ ಅಸಂವಿಧಾನಿಕ ಪದ ಬಳಕೆಗೆ ಖಂಡನೆ : ರಾಜ್ಯ ಸರ್ಕಾರದ ಜವಾಬ್ದಾರಿಯುತ ಹುದ್ದೆಯಲ್ಲಿರುವ ಮಹಿಳಾ ಸಚಿವರ ಬಗ್ಗೆ ಮಾತನಾಡುವ ಭರದಲ್ಲಿ ಅಸಂವಿಧಾನಿಕ ಪದ ಬಳಸಿರುವುದು ಖಂಡನೀಯ ಮತ್ತು ಅತ್ಯಂತ ಬೇಜವಾಬ್ದಾರಿ ಹೇಳಿಕೆಯಾಗಿದೆ. ಅಸಭ್ಯ ಪದ ಬಳಕೆ ಮಾಡಿದ ಜನಪ್ರತಿನಿಧಿಗಳ ವಿರುದ್ಧ ನ್ಯಾಯಾಲಯವು ಕಠಿಣ ದಂಡನೆಗೆ ಗುರಿಪಡಿಸಬೇಕೆಂದವರು ನುಡಿದರು.

ನಮ್ಮ ದೇಶದ ಸಂವಿಧಾನ ಎಲ್ಲರಿಗೂ ಎಲ್ಲ ರೀತಿಯ ಹಕ್ಕು ಮತ್ತು ಸ್ವಾತಂತ್ರö್ಯವನ್ನು ನೀಡಿದೆ. ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ದೇವರಿಗೆ ಮಿಗಿಲಾದವರು. ಗಾಂಧಿ ಮತ್ತು ಅಂಬೇಡ್ಕರ್ ಈ ದೇಶದ ಎರಡು ಕಣ್ಣುಗಳು ಎಂದು ಬಣ್ಣಿಸಿದ ಅವರು, ದೇಶದ ಪ್ರಜಾಸತ್ತಾತ್ಮಕ ಸಾರ್ವಭೌಮ, ಮತ್ತು ಏಕತೆಯನ್ನು ಎತ್ತಿ ಹಿಡಿಯುವ ಪ್ರಧಾನಾಲಯದಲ್ಲಿ ಗೌರವಾನ್ವಿತ ಅಂಬೇಡ್ಕರ್ ಅವರ ಬಗ್ಗೆ ಜನಪ್ರತಿನಿಧಿಯೊಬ್ಬರು ಅವಹೇಳನಕಾರಿಯಾಗಿ ಮಾತನಾಡಿರುವುದು ಅತ್ಯಂತ ಖಂಡನೀಯ ಎಂದರು. ಈ ಸಂದರ್ಭದಲ್ಲಿ ಕಾಂಗ್ರೇಸ್ ಮುಖಂಡ ನಾಗರಾಜಗೌಡ ಹಾಗೂ ಆರ್.ಪ್ರಸನ್ನಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

BIG NEWS : `ಶರಾವತಿ ಮುಳುಗಡೆ ಸಂತ್ರಸ್ಥರಿಗೆ ಹಕ್ಕುಪತ್ರ' ಒದಗಿಸಲು ಕ್ರಮ : ಸಚಿವ ಮಧು ಬಂಗಾರಪ್ಪ ಭರವಸೆ BIG NEWS: Minister Madhu Bangarappa assures steps to provide title deeds to Sharavathi flood victims
Share. Facebook Twitter LinkedIn WhatsApp Email

Related Posts

ಸಾಗರದ ಯಡಮನೆಗೆ ಮಾಜಿ ಸಚಿವ ಹಾಲಪ್ಪ ಭೇಟಿ, ಸರ್ಕಾರದ ಗಮನ ಸೆಳೆದು ಸಮಸ್ಯೆ ಪರಿಹಾರದ ಭರವಸೆ

13/02/2026 8:34 PM1 Min Read

BREAKING: ಶಾಸಕ ಸುನೀಲ್ ಕುಮಾರ್, MLC ರವಿಕುಮಾರ್ ಸೇರಿ ಇತರರ ವಿರುದ್ಧ ಪೊಲೀಸ್ ಕಮೀಷನರಿಗೆ ರಮೇಶ್ ಬಾಬು ದೂರು

13/02/2026 8:09 PM2 Mins Read

Watch Video: ಹಗಲು ಹೊತ್ತಲ್ಲೇ ಕಳ್ಳತನ ಮಾಡಲು ಹೋಗಿ ಸಿಕ್ಕಿಬಿದ್ದ ಕಳ್ಳ, ಊರ ತುಂಬೆಲ್ಲ ಮೆರವಣಿಗೆ

13/02/2026 7:56 PM1 Min Read
Recent News

ಈ ಒಂದೇ ಎಲೆ 100 ರೋಗಗಳಿಗೆ ಔಷಧಿ ; ಮನೆಯಲ್ಲಿದ್ರೆ ವೈದ್ಯರೇ ಬೇಕಾಗಿಲ್ಲ!

13/02/2026 9:24 PM

ಸಾಗರದ ಯಡಮನೆಗೆ ಮಾಜಿ ಸಚಿವ ಹಾಲಪ್ಪ ಭೇಟಿ, ಸರ್ಕಾರದ ಗಮನ ಸೆಳೆದು ಸಮಸ್ಯೆ ಪರಿಹಾರದ ಭರವಸೆ

13/02/2026 8:34 PM

BREAKING: ಶಾಸಕ ಸುನೀಲ್ ಕುಮಾರ್, MLC ರವಿಕುಮಾರ್ ಸೇರಿ ಇತರರ ವಿರುದ್ಧ ಪೊಲೀಸ್ ಕಮೀಷನರಿಗೆ ರಮೇಶ್ ಬಾಬು ದೂರು

13/02/2026 8:09 PM

‘ಹಳೆಯ ಕಟ್ಟಡಗಳು ಗುಲಾಮಗಿರಿಯ ಸಂಕೇತಗಳಾಗಿದ್ವು’ : ಸೇವಾ ತೀರ್ಥ ಮತ್ತು ಕರ್ತವ್ಯ ಭವನ ಉದ್ಘಾಟಿಸಿದ ಪ್ರಧಾನಿ ಮೋದಿ

13/02/2026 8:07 PM
State News
KARNATAKA

ಸಾಗರದ ಯಡಮನೆಗೆ ಮಾಜಿ ಸಚಿವ ಹಾಲಪ್ಪ ಭೇಟಿ, ಸರ್ಕಾರದ ಗಮನ ಸೆಳೆದು ಸಮಸ್ಯೆ ಪರಿಹಾರದ ಭರವಸೆ

By kannadanewsnow0913/02/2026 8:34 PM KARNATAKA 1 Min Read

ಶಿವಮೊಗ್ಗ: ಅರಣ್ಯ ಸಚಿವ ಈಶ್ವರ್ ಖಂಡ್ರೆಯವರ ಟಿಪ್ಪಣಿಯಿಂದಾಗಿ ಸಾಗರದ ಶರಾವತಿ ಮುಳುಗಡೆ ಸಂತ್ರಸ್ತರನ್ನು ಸಂಕಷ್ಟಕ್ಕೆ ದೂಡುವಂತಾಗಿತ್ತು. ಇಂತಹ ಸಾಗರದ ಯಡಮನೆ…

BREAKING: ಶಾಸಕ ಸುನೀಲ್ ಕುಮಾರ್, MLC ರವಿಕುಮಾರ್ ಸೇರಿ ಇತರರ ವಿರುದ್ಧ ಪೊಲೀಸ್ ಕಮೀಷನರಿಗೆ ರಮೇಶ್ ಬಾಬು ದೂರು

13/02/2026 8:09 PM

Watch Video: ಹಗಲು ಹೊತ್ತಲ್ಲೇ ಕಳ್ಳತನ ಮಾಡಲು ಹೋಗಿ ಸಿಕ್ಕಿಬಿದ್ದ ಕಳ್ಳ, ಊರ ತುಂಬೆಲ್ಲ ಮೆರವಣಿಗೆ

13/02/2026 7:56 PM

KSRTC ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: ಈ ಪ್ರವಾಸಿ ತಾಣಗಳಿಗೆ ‘ಪ್ಯಾಕೇಜ್ ಟೂರ್’ ಘೋಷಣೆ

13/02/2026 6:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.