Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗವಾರ್ತೆ : `ಭಾರತೀಯ ರೈಲ್ವೆ ಇಲಾಖೆಯಲ್ಲಿ `22,000’ ಹುದ್ದೆಗಳಿಗೆ ಅರ್ಜಿ ಆಹ್ವಾನ | Railway Recruitment 2026

02/01/2026 6:34 AM

ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಮೊಬೈಲ್ ಆಧಾರಿತ ಹಾಜರಾತಿ ಕಡ್ಡಾಯ : ಸರ್ಕಾರ ಮಹತ್ವದ ಆದೇಶ

02/01/2026 6:25 AM

BIG NEWS : ರಾಜ್ಯದ ಗ್ರಾ.ಪಂ. ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಭವಿಷ್ಯ ನಿಧಿ ಯೋಜನೆ’ ಸೌಲಭ್ಯ ಜಾರಿಗೊಳಿಸಿ ಸರ್ಕಾರ ಆದೇಶ!

02/01/2026 6:17 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ರೋಬೋಟ್‌’ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟ ಸಚಿವ ರಾಮಲಿಂಗಾರೆಡ್ಡಿ.!
KARNATAKA

BIG NEWS : `ರೋಬೋಟ್‌’ ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟ ಸಚಿವ ರಾಮಲಿಂಗಾರೆಡ್ಡಿ.!

By kannadanewsnow5706/02/2025 7:13 PM

ಬೆಂಗಳೂರು: ರೋಬೋಟ್‌ ನೆರವಿನಿಂದ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟಿದ್ದು, ನನ್ನ ಶೀಘ್ರಚೇತರಿಕೆಗೆ ಹೆಚ್ಚು ಸಹಕಾರಿಯಾಯಿತು ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಬನ್ನೇರುಘಟ್ಟ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಮೊಣಕಾಲು ಕೀಲು ಬದಲಾವಣೆ ಶಸ್ತ್ರಚಿಕಿತ್ಸೆ ಒಳಪಟ್ಟು, ಚೇತರಿಸಿಕೊಂಡವರ ಬೆಂಬಲಕ್ಕಾಗಿ ಆಯೋಜಿಸಿದ್ದ “ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌” ಕಾರ್ಯಕ್ರಮ ದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಕೆಲವು ಸಮಯದಿಂದ ಮೊಣಕಾಲಿನ ನೋವು ಕಾಡಲಾರಂಭಿಸಿತು, ಮೆಟ್ಟಿಲುಸಹ ಹತ್ತಲು ಸಾಧ್ಯವಾಗುತ್ತಿರಲಿಲ್ಲ, ಹಲವಾರು ಜನ ಹಲವು ರೀತಿಯ ಸಲಹೆ ನೀಡಿದರು, ಮಂಡಿನೋವಿಗೆ ತೈಲವನ್ನೂ ಸಹ ಹಚ್ಚಿಬಿಟ್ಟೆ, ಆದರೂ ಯಾವುದೇ ಪ್ರಯೋಜನ ಕಾಣಲಿಲ್ಲ. ನಂತರ ಸ್ನೇಹಿತರ ಸಲಹೆಯಂತೆ ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಡಾ.ನಾರಾಯಣ್ ಹುಲ್ಸೆ ಅವರನ್ನು ಭೇಟಿ ಮಾಡಿ, ತಪಾಸಣೆಗೆ ಒಳಗಾದಾಗ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಯ ಸಲಹೆ ನೀಡಿದರು. ಪ್ರಾರಂಭದಲ್ಲಿ ಶಸ್ತ್ರಚಿಕಿತ್ಸೆ ಬಗ್ಗೆ ಹಿಂಜರಿಕೆ ಇತ್ತು, ಆದರೆ, ರೋಬೋಟ್‌ ನೆರವಿನಿಂದ ನಿಖರವಾಗಿ ಹಾಗೂ ಅತಿವೇಗವಾಗಿ ಚೇತರಿಕೆ ಕಾಣಬಹುದು ಎಂಬುದರ ಬಗ್ಗೆ ವೈದ್ಯರ ಭರವಸೆ ನೀಡಿದ ಬಳಿಕ ತೆರೆದ ಶಸ್ತ್ರಚಿಕಿತ್ಸೆ ಬದಲು ರೋಬೋಟ್‌ ನೆರವಿನ ಶಸ್ತ್ರಚಿಕಿತ್ಸೆ ಆಯ್ದುಕೊಂಡೆ. ಅಂತೆಯೇ ಶಸ್ತ್ರಚಿಕಿತ್ಸೆ ಬಳಿಕ ನನ್ನ ನಿರೀಕ್ಷೆಗೂ ಮೀರಿ ಶೀಘ್ರವಾಗಿ ಚೇತರಿಕೆ ಕಂಡಿದ್ದೇನೆ. ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಗಾಗುವವರು ರೋಬೋಟ್‌ ನೆರವನ್ನು ಆಯ್ಕೆ ಮಾಡಿಕೊಳ್ಳುವುದು ಉತ್ತಮ ಎಂಬುದು ನನ್ನ ಅನಿಸಿಕೆ. ಇಲ್ಲಿನ ವೈದ್ಯ ತಂಡವು ಸಹ ಸೂಕ್ತ ಮಾಹಿತಿಯೊಂದಿಗೆ, ಅತ್ಯಾಧುನಿಕ ತಂತ್ರಜ್ಞಾನ ಬಳಕೆಯಿಂದ ಉತ್ತಮ ರೀತಿಯಲ್ಲಿ ನನ್ನ ಕ್ಷೇಮಸಮಾಚಾರ ನೋಡಿಕೊಂಡರು ಎಂದು ಹೇಳಿದರು.

ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಗಾದ ಪ್ರತಿಯೊಬ್ಬರು ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌ ಕಾರ್ಯಕ್ರಮದ ಅಡಿ ಭಾಗಿಯಾಗಿರುವುದು ಸಾಕಷ್ಟು ಜನರಿಗೆ ಸ್ಪೂರ್ತಿದಾಯಕವಾಗಿದೆ. ಹಲವರು ಮೊಣಕಾಲು ನೋವಿನಿಂದ ಬಳಲುತ್ತಿದ್ದರೂ, ಶಸ್ತ್ರಚಿಕಿತ್ಸೆಯ ಬೀತಿಯಿಂದ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳದೇ ನೋವಿನಲ್ಲೇ ನರಳುತ್ತಿರುತ್ತಾರೆ, ನಮ್ಮಂತಹ ನೂರಾರು ಜನರ ಅನುಭವವು ಬೇರೆಯವರಿಗೆ ಸ್ಪೂರ್ತಿಯಾಗಲಿ ಎಂದರು.

ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಶಾಖೆಯ ಅಧ್ಯಕ್ಷರಾದ ಡಾ.ವಿ.ವಿ. ಚಿನಿವಾಲರ್‌ ಮಾತನಾಡಿ, ನಾನೂ ಸಹ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟು, ಚೇತರಿಕೆ ಕಂಡಿದ್ದೇನೆ, ವೈದ್ಯಕೀಯ ಲೋಕದಲ್ಲಿ ರೋಬೋಟ್‌ನ ಆಗಮನ ರೋಗಿಗಳಿಗೆ ಹೆಚ್ಚು ಅನುಕೂಲವಾಗಿದೆ ಎಂದರು.

ಫೋರ್ಟಿಸ್‌ ಆಸ್ಪತ್ರೆಯ ಆರ್ಥೋಪೆಡಿಕ್ಸ್ ಡಾ.ನಾರಾಯಣ್ ಹುಲ್ಸೆ ಮಾತನಾಡಿ, ಇಂದು ರೋಬೋಟ್‌ ನೆರವು ವೈದ್ಯಲೋಕದಲ್ಲಿ ಹೊಸ ಅದ್ಯಾಯ ಸೃಷ್ಟಿಸಿದೆ. ಅದರಲ್ಲೂ ಮೊಣಕಾಲು, ಸೊಂಟ ಇತರೆ ಕೀಲು ಬದಲಾವಣೆಗೆ ರೋಬೋಟ್‌ ಅತ್ಯಂತ ನಿಖರವಾಗಿ ಶಸ್ತ್ರಚಿಕಿತ್ಸೆಗೆ ಸಹಕಾರಿಯಾಗಿದೆ. ಹೀಗಾಗಿಯೇ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಸ್ಟ್ರೈಡ್‌ ಸಪೋರ್ಟ್‌ ಗ್ರೂಪ್‌ ಕಾರ್ಯಕ್ರಮ ಚಾಲನೆ ನೀಡಿದ್ದೇನೆ. ಫೋರ್ಟಿಸ್ ಸ್ಟ್ರೈಡ್ ಎನ್ನುವುದು ಕೀಲು ಆರೋಗ್ಯ ಸವಾಲುಗಳಿಂದ ಪ್ರಭಾವಿತ ವ್ಯಕ್ತಿಗಳನ್ನು ಸಬಲೀಕರಣಗೊಳಿಸಲು ವಿನ್ಯಾಸಗೊಳಿಸಲಾದ ಬೆಂಬಲ ಗುಂಪಾಗಿದೆ. ಇದು ಅನುಭವಗಳನ್ನು ಹಂಚಿಕೊಳ್ಳಲು, ತಜ್ಞರ ಒಳನೋಟಗಳನ್ನು ಪಡೆಯಲು ಮತ್ತು ಸುಧಾರಿತ ಚೇತರಿಕೆಗಾಗಿ ಅಮೂಲ್ಯವಾದ ಮಾರ್ಗದರ್ಶನವನ್ನು ಪಡೆಯುವ ವೇದಿಕೆಯಾಗಿದೆ ಎಂದು ವಿವರಿಸಿದರು.

BIG NEWS : `ರೋಬೋಟ್‌' ನೆರವಿನ ಮೊಣಕಾಲು ಬದಲಿ ಶಸ್ತ್ರಚಿಕಿತ್ಸೆಗೆ ಒಳಪಟ್ಟ ಸಚಿವ ರಾಮಲಿಂಗಾರೆಡ್ಡಿ.! BIG NEWS: Minister Ramalinga Reddy undergoes robot-assisted knee replacement surgery
Share. Facebook Twitter LinkedIn WhatsApp Email

Related Posts

ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಮೊಬೈಲ್ ಆಧಾರಿತ ಹಾಜರಾತಿ ಕಡ್ಡಾಯ : ಸರ್ಕಾರ ಮಹತ್ವದ ಆದೇಶ

02/01/2026 6:25 AM1 Min Read

BIG NEWS : ರಾಜ್ಯದ ಗ್ರಾ.ಪಂ. ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಭವಿಷ್ಯ ನಿಧಿ ಯೋಜನೆ’ ಸೌಲಭ್ಯ ಜಾರಿಗೊಳಿಸಿ ಸರ್ಕಾರ ಆದೇಶ!

02/01/2026 6:17 AM1 Min Read

BREAKING : ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ಕೇಸ್ : ಶಾಸಕ ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಜನರ ವಿರುದ್ಧ `FIR’ ದಾಖಲು.!

02/01/2026 6:12 AM1 Min Read
Recent News

ಉದ್ಯೋಗವಾರ್ತೆ : `ಭಾರತೀಯ ರೈಲ್ವೆ ಇಲಾಖೆಯಲ್ಲಿ `22,000’ ಹುದ್ದೆಗಳಿಗೆ ಅರ್ಜಿ ಆಹ್ವಾನ | Railway Recruitment 2026

02/01/2026 6:34 AM

ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಮೊಬೈಲ್ ಆಧಾರಿತ ಹಾಜರಾತಿ ಕಡ್ಡಾಯ : ಸರ್ಕಾರ ಮಹತ್ವದ ಆದೇಶ

02/01/2026 6:25 AM

BIG NEWS : ರಾಜ್ಯದ ಗ್ರಾ.ಪಂ. ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಭವಿಷ್ಯ ನಿಧಿ ಯೋಜನೆ’ ಸೌಲಭ್ಯ ಜಾರಿಗೊಳಿಸಿ ಸರ್ಕಾರ ಆದೇಶ!

02/01/2026 6:17 AM

BREAKING : ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ಕೇಸ್ : ಶಾಸಕ ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಜನರ ವಿರುದ್ಧ `FIR’ ದಾಖಲು.!

02/01/2026 6:12 AM
State News
KARNATAKA

ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಮೊಬೈಲ್ ಆಧಾರಿತ ಹಾಜರಾತಿ ಕಡ್ಡಾಯ : ಸರ್ಕಾರ ಮಹತ್ವದ ಆದೇಶ

By kannadanewsnow5702/01/2026 6:25 AM KARNATAKA 1 Min Read

ಬೆಂಗಳೂರು : ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯು ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ಮೊಬೈಲ್ ಆಧಾರಿತ ಹಾಜರಾತಿಯನ್ನು ಕಡ್ಡಾಯವಾಗಿ…

BIG NEWS : ರಾಜ್ಯದ ಗ್ರಾ.ಪಂ. ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : `ಭವಿಷ್ಯ ನಿಧಿ ಯೋಜನೆ’ ಸೌಲಭ್ಯ ಜಾರಿಗೊಳಿಸಿ ಸರ್ಕಾರ ಆದೇಶ!

02/01/2026 6:17 AM

BREAKING : ಬಳ್ಳಾರಿಯಲ್ಲಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಗಲಾಟೆ ಕೇಸ್ : ಶಾಸಕ ಜನಾರ್ದನ ರೆಡ್ಡಿ, ಶ್ರೀರಾಮುಲು ಸೇರಿ 11 ಜನರ ವಿರುದ್ಧ `FIR’ ದಾಖಲು.!

02/01/2026 6:12 AM

BIG NEWS: ರಾಜ್ಯದ ‘ಗ್ರಾಮೀಣ ಜನತೆ’ಗೆ ಗುಡ್ ನ್ಯೂಸ್: ಈ ಕಟ್ಟಡಗಳಿಗೆ ‘OC’ ವಿನಾಯ್ತಿ ನೀಡಿ ಸರ್ಕಾರ ಅಧಿಕೃತ ಆದೇಶ

02/01/2026 5:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.