ಮೈಸೂರು : ರಾಜ್ಯದಲ್ಲಿ ಭಾರೀ ಸದ್ದು ಮಾಡುತ್ತಿರುವ ಮೈಸೂರು ಅಭಿವೃದ್ಧಿ ಪ್ರಾಧಿಕಾರ (ಮುಡಾ)ದ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ಹೈಕೋರ್ಟ್ ಸಿಜೆಗೆ ದೂರು ನೀಡಲಾಗಿದೆ.
ಮುಡಾ ನಿವೇಶನ ಅಕ್ರಮಕ್ಕೆ ಸಂಬಂಧಿಸಿದಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಹೈಕೋರ್ಟ್ ಸಿಜೆ ಮತ್ತು ರಾಜ್ಯಪಾಲರಿಗೆ ಬಿಜೆಪಿ ಶಾಸಕ ಟಿ.ಎಸ್. ಶ್ರೀವತ್ಸ ಅವರು ದೂರು ನೀಡಿದ್ದು, ಈ ಸಂಬಂಧ ಅಗತ್ಯ ದಾಖಲೆಗಳನ್ನೂ ಸಲ್ಲಿಸಿದ್ದಾರೆ.
ಮುಡಾ ನಿವೇಶನ ಅಕ್ರಮದ ಕುರಿತು ಸಂಪೂರ್ಣ ದಾಖಲೆಗಳಿದ್ದು, ಅವಕಾಶ ನೀಡಿದ್ರೆ ಖುದ್ದು ಹಾಜರಾಗಿ ಪ್ರಕರಣದ ಸಂಪೂರ್ಣ ವಿವರ ನೀಡುವುದಾಗಿ ಮನವಿ ಮಾಡಿದ್ದಾರೆ.