ಚಿತ್ರದುರ್ಗ: ಮುರುಘಾ ಶ್ರೀಗಳ ( Murugha Sri ) ವಿರುದ್ಧ ಮತ್ತಿಬ್ಬರು ಬಾಲಕಿಯರ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಮತ್ತೊಂದು ಪೋಕ್ಸೋ ಕೇಸ್ ಅಡಿ ಪ್ರಕರಣ ದಾಖಲಾಗಿದೆ. ಈ ಪ್ರಕರಣದ ತನಿಖೆ ನಡೆಯುತ್ತಿರೋ ಸಂದರ್ಭದಲ್ಲಿ ಮಠದಲ್ಲಿ ಹೆಣ್ಣುಮಗುವೊಂದು ಸಿಕ್ಕಿದ್ದು ಸುದ್ದಿಯಾಗಿತ್ತು. ಈ ಬೆನ್ನಲ್ಲೇ ಮುರುಘಾಶ್ರೀಗಳಿಂದ ತಮ್ಮ ಬಳಿಯಿದ್ದಂತ ಪವರ್ ಆಪ್ ಅಟರ್ನಿಯನ್ನು ( Power of Attorney ) ಹಸ್ತಾಂತರಿಸಲಾಗಿದೆ.
ಮುರುಘಾ ಶಿವಶರಣರು ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಜೈಲು ಸೇರಿದ ಬಳಿಕ, ಮಠದ ಆಡಳಿತಾಧಿಕಾರಿಯನ್ನಾಗಿ ನಿವೃತ್ತ ನ್ಯಾಯಮೂರ್ತಿ ಎಸ್ ಬಿ ವಸ್ತ್ರದಮಠ್ ಅವರನ್ನು ನೇಮಕ ಮಾಡಲಾಗಿತ್ತು. ಅವರೀಗ ಎಸ್ ಜೆ ಎಂ ವಿದ್ಯಾಪೀಠದ ಕಾರ್ಯದರ್ಶಿಯಾಗಿಯೂ ಕರ್ತವ್ಯ ನಿರ್ವಹಿಸುತ್ತಿದ್ದಾರೆ.
ಈ ಬಳಿಕ, ಮುರುಘಾಶ್ರೀಗಳ ಬಳಿಯಲ್ಲಿದ್ದಂತ ಪವರ್ ಆಪ್ ಅಟರ್ನಿಯ ಕಾರಣದಿಂದಾಗಿ ವಿವಿಧ ಕೆಲಸ ಕಾರ್ಯಗಳಿಗೆ ತೊಂದರೆ ಉಂಟಾಗಿತ್ತು. ಹೀಗಾಗಿ ಇಂದು ಅಧಿಕೃತವಾಗಿ ಮುರುಘಾ ಶ್ರೀಗಳು ನೋಟರಿ ಮಾಡಿಸಿ, ತಮ್ಮ ಬಳಿಯಲ್ಲಿದ್ದಂತ ಪವರ್ ಆಪ್ ಅಟರ್ನಿಯನ್ನು ನಿವೃತ್ತ ನ್ಯಾಯಧೀಶ ಎಸ್ ಬಿ ವಸ್ತ್ರದಮಠ್ ಗೆ ಹಸ್ತಾಂತರಿಸಿದ್ದಾರೆ.
ಈ ನಡುವೆ ಮುರುಘಾ ಮಠಕ್ಕೆ ಕಾನೂನು ಪ್ರಕಾರ ನೂತನ ಪೀಠಾಧಿಪತಿ ನೇಮಕವನ್ನು ಮಾಡಲಾಗುವುದು ಅಂತ ಸಿಎಂ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು.
ಇದೇ ವೇಳೆ ಅವರು ಮಾತನಾಡುತ್ತ, ಮಠದ ಭಕ್ತರು, ಮಾಜಿ ಶಾಸಕರ ನಿಯೋಗ ನನ್ನನ್ನು ಭೇಟಿ ಮಾಡಿ ಮಾಡಿ ಆಡಳಿತ ವಿಚಾರದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ನನಗೆ ತಿಳಿಸಿದ್ದು, ಟ್ರಸ್ಟ್ ಅನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಕಾನೂನು ಪ್ರಕಾರ ಏನೆಲ್ಲ ಅವಕಾಶ ಇದೆ ಅದನ್ನ ಚರ್ಚೆ ಮಾಡಿದ ಬಳಿಕ, ಎಲ್ಲವನ್ನು ಕಾನೂನಿನ ಚೌಕಟ್ಟಿನ ಅಡಿಯಲ್ಲಿ ನಡೆಯಲಿದೆ ಅಂತ ತಿಳಿಸಿದರು.
ಅಂದ ಹಾಗೇ ಪೋಕ್ಸ್ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾ ಶ್ರೀಗಳಿಗೆ ಸಂಕಷ್ಟ ಎದುರಾಗಿದೆ. ಇದೀಗ ಪೀಠಾಧಿಪತಿಗಳ ಬದಲಾವಣೆ ಒತ್ತಡ ಹೆಚ್ಚಾಗಿದೆ. ನಿನ್ನೆಯಷ್ಟೆ ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ್ದಾರೆ. ಇದೀಗ ನಾನಾ ಸುದ್ದಿಗಳು ಮಠದ ಆವರಣದಲ್ಲಿ ಹರಡಿದೆ. ಸರ್ಕಾರ ಕೂಡ ಶ್ರೀಗಳ ಬದಲಾವಣೆ ಬಗ್ಗೆ ಪರೋಕ್ಷ ಸುಳಿವು ನೀಡಿದೆ.
ನೂತನ ಪೀಠಾಧಿಪತಿಗಳ ರೇಸ್ನಲ್ಲಿ ಆರು ಸ್ವಾಮೀಜಿಗಳಿದ್ದಾರೆ. ಎಸ್ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಎಸ್ ಬಿ ವಸ್ತ್ರದಮಠಗೆ ಪವರ್ ಆಫ್ ಅಟಾರ್ನಿ ನೀಡಲಾಗಿದೆ. ಮುರುಘಾ ಶ್ರೀಗಳು ಅಧಿಕೃತವಾಗಿ ನೋಟರಿ ಮಾಡಿ ಪವರ್ ಆಫ್ ಅಟಾರ್ನಿ ನೀಡಿದ್ದಾರೆ. ಹೈಕೋರ್ಟ್ ಸೂಚನೆಯಂತೆ ಎಸ್ ಜೆ ಎಂ ವಿದ್ಯಾಪೀಠದ ಚೆಕ್ ಸಹಿ ಸೇರಿ ವಿವಿಧ ಆಡಳಿತಾತ್ಮಕ ನಿರ್ಧಾರಕ್ಕಾಗಿ ಪವರ್ ಆಫ್ ಅಟಾರ್ನಿ ನೀಡಲಾಗಿದೆ.
ಹೊಸ ಪೀಠಾಧಿಪತಿ ಯಾರಾಗ್ತಾರೆ?
*ಮಲ್ಲಿಕಾರ್ಜುನ ದೇವರು- ಸರ್ಪಭೂಷಣ ಮಠ, ಬೆಂಗಳೂರು
*ಮಹಾಂತ ರುದ್ರೇಶ್ವರ ಶ್ರೀ- ಹೆಬ್ಬಾಳ ಮಠ
* ಬಸವಪ್ರಭು ಶ್ರೀ- ವಿರಕ್ತ ಮಠ, ದಾವಣಗೆರೆ
* ಶಾಂತವೀರ ಶ್ರೀ- ಗುರುಮಿಠ್ಕಲ್ ಮಠ, ಯಾದಗಿರಿ
* ಶಿವಬಸವ ಶ್ರೀ- ಅಥಣಿ ಮಠ, ಬೆಳಗಾವಿ
* ಸಿದ್ಧರಾಮ ಶ್ರೀ- ಇಳಕಲ್ ಮಠ
ಮುರುಘಾ ಶ್ರೀಗಳ ವಿರುದ್ಧ ಎರಡನೇ ಎಫ್ಐಆರ್ ದಾಖಲಾಗ್ತಿದ್ದಂತೆ ಮುರುಘಾಮಠದಲ್ಲಿ ನಾಲ್ಕೂವರೆ ವರ್ಷದ ಹೆಣ್ಣು ಮಗು ಇರುವ ವಿಚಾರ ದೊಡ್ಡ ಸಂಚಲನ ಸೃಷ್ಟಿಸಿತ್ತು.