ಬೆಂಗಳೂರು : ಕಾರ್ಮಿಕರ ಕೆಲಸದ ಅವಧಿ ಹೆಚ್ಚಳಕ್ಕೆ ಸಂಬಂಧಿಸಿದಂತೆ ಇನ್ನೂ ನಿರ್ಧಾರ ಆಗಿಲ್ಲ ಎಂದು ಕಾರ್ಮಿಕ ಸಂತೋಷ್ ಲಾಡ್ ಸ್ಪಷ್ಟನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಮಿಕರ ಕೆಲಸದ ಅವಧಿ ಹೆಚ್ಚಳಕ್ಕೆ ಸಂಬಂಧಿಸಿ ಪ್ರಸ್ತಾವನೆ ಹಿಂದಿನಿಂದಲೂ ಇದೆ. ಅದನ್ನು ಅನುಷ್ಠಾನಗೊಳಿಸುವ ಕುರಿತು ಕೈಗಾರಿಕೆಗಳಿಗೆ ಯಾವುದೇ ಅನುಮತಿ ಈವರೆಗೆ ನೀಡಿಲ್ಲ, ಕೆಲಸದ ಅವಧಿ ಹೆಚ್ಚಳ ವಿಚಾರದಲ್ಲಿ ನಮಗೆ ಸ್ಪಷ್ಟತೆಯಿದೆ. ಹೀಗಾಗಿ ಹಲವು ದಿನಗಳಿಂದ ಕೈಗಾರಿಕೆಗಳ ಬೇಡಿಕೆಯಿದ್ದರೂ ಅದಕ್ಕೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಎಂದರು.
ಐಟಿ ಕಂಪನಿಗಳು ಸೇರಿ ಆಯ್ದ ಕೆಲ ಔದ್ಯೋಗಿಕ ಕ್ಷೇತ್ರಗಳಲ್ಲಿ ಕೆಲಸ ಅವಧಿಯನ್ನು ಗರಿಷ್ಠ 9ರಿಂದ 10 ಗಂಟೆಯವರೆಗೆ ವಿಸ್ತರಿಸಲು ಹಾಗೂ ಹೆಚ್ಚುವರಿ ಕೆಲಸದ ಅವಧಿ ಯನ್ನು ದಿನಕ್ಕೆ 12 ಗಂಟೆಗಳಿಗೆ ವಿಸ್ತರಿಸುವ ಪ್ರಸ್ತಾವನೆ ಅನುಷ್ಠಾನಕ್ಕೆ ಸರ್ಕಾರ ಮುಂದಾಗಿದೆ ಎಂಬ ವಿಚಾರ ಚರ್ಚೆಯಾಗುತ್ತಿದೆ. ಅದಕ್ಕೆ ಕಾರ್ಮಿಕ ಸಂಘಟನೆಗಳು ವಿರೋಧ ವ್ಯಕ್ತವಾಗುತ್ತಿದೆ. ಸರ್ಕಾರ ಅದಕ್ಕೆ ಸಂಬಂಧಿಸಿ ಯಾವುದೇ ನಿರ್ಧಾರವನ್ನೂ ಕೈಗೊಂಡಿಲ್ಲ. ಇನ್ನೂ ಚರ್ಚಾ ಹಂತದಲ್ಲಿದೆ ಎಂದು ತಿಳಿಸಿದ್ದಾರೆ.