Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : ವಾರ್ಷಿಕ ವೇತನ ಬಡ್ತಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

27/07/2025 1:47 PM

BREAKING : ಕಲಬುರ್ಗಿಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಬಲಿ : ಮಗು ಜನಿಸಿದ ಕೆಲವೇ ಕ್ಷಣಗಳಲ್ಲಿ ಸಾವು!

27/07/2025 1:47 PM

ಆಗಸ್ಟ್ ತಿಂಗಳಿನಲ್ಲಿ ಬ್ಯಾಂಕ್’ಗಳಿಗೆ 15 ದಿನ ರಜೆ, ಇಲ್ಲಿದೆ ಸಂಪೂರ್ಣ ಪಟ್ಟಿ |Bank Holidays

27/07/2025 1:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಗೃಹಲಕ್ಷ್ಮಿ ಸೇರಿ ಯಾವುದೇ `ಗ್ಯಾರಂಟಿ’ ಯೋಜನೆಗಳು ನಿಲ್ಲಲ್ಲ : ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ
KARNATAKA

BIG NEWS : ರಾಜ್ಯದಲ್ಲಿ ಗೃಹಲಕ್ಷ್ಮಿ ಸೇರಿ ಯಾವುದೇ `ಗ್ಯಾರಂಟಿ’ ಯೋಜನೆಗಳು ನಿಲ್ಲಲ್ಲ : ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ

By kannadanewsnow5712/11/2024 7:12 AM

ಚನ್ನಪಟ್ಟಣ: ಚುನಾವಣೆ ಮುಗಿದ ಮೇಲೆ ಗೃಹಲಕ್ಷ್ಮಿ ಸೇರಿ ಗ್ಯಾರಂಟಿಗಳನ್ನು ಸರ್ಕಾರ ಬಂದ್ ಮಾಡ್ತದೆ ಎಂದು ದೇವೇಗೌಡರು ಪರಮ ಸುಳ್ಳು ಹೇಳಿದ್ದಾರೆ. ದೇವೇಗೌಡರೇ ಒಂದು ಮಾತು ಹೇಳ್ತೀನಿ, ಸಿದ್ದರಾಮಯ್ಯ ಒಮ್ಮೆ ಮಾತು ಕೊಟ್ಟರೆ ಯಾವುದೇ ಕಾರಣಕ್ಕೂ ಮಾತು ತಪ್ಪಲ್ಲ. ನಮ್ಮ ಸರ್ಕಾರ ಯಾವ ಗ್ಯಾರಂಟಿಗಳನ್ನೂ ನಿಲ್ಸಲ್ಲ, ನಿಲ್ಸಲ್ಲ, ನಿಲ್ಸಲ್ಲ ಎಂದು ಸಿಎಂ ಸಿದ್ಧರಾಮಯ್ಯ ಘೋಷಿಸಿದರು.

ವಕ್ಫ್ ವಿಚಾರದಲ್ಲೂ ಬಿಜೆಪಿ ಜೊತೆ ಸೇರಿ ಸುಳ್ಳು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಒಬ್ಬೇ ಒಬ್ಬ ರೈತರನ್ನೂ ಒಕ್ಕಲೆಬ್ಬಿಸುವುದಿಲ್ಲ ಎಂದು ಅಧಿಕೃತ ಘೋಷಣೆ ಮಾಡಿದ್ದೇವೆ ಎಂದು ಪುನರುಚ್ಚರಿಸಿದರು.

ಮೋದಿಯಂಥಾ ಸುಳ್ಳುಗಾರ ಇಲ್ಲ ಅಂದಿದ್ದ ದೇವೇಗೌಡರು

ಭಾರತ ಮೋದಿಯವರಂತಹಾ ಸುಳ್ಳ ಪ್ರಧಾನಿಯನ್ನು ನಾನು ಹಿಂದೆಂದೂ ನೋಡಿಲ್ಲ. ಮೋದಿ ಮತ್ತೆ ಪ್ರಧಾನಿ ಆದರೆ ದೇಶ ಬಿಟ್ಟು ಹೋಗುವುದಾಗಿ ದೇವೇಗೌಡರು ಹೇಳಿದ್ದರು. ಈಗ ಮೋದಿಯವರನ್ನು ಯದ್ವಾತದ್ವಾ ಹೊಗಳುತ್ತಿದ್ದಾರೆ ಎಂದು ಛೇಡಿಸಿದರು.‌

ನಾನು, ಜಾಲಪ್ಪ ಅವರು ಇಲ್ಲದೇ ಹೋಗಿದ್ದರೆ 1994 ರಲ್ಲಿ ದೇವೇಗೌಡರು ಮುಖ್ಯಮಂತ್ರಿ ಆಗಲು ಸಾಧ್ಯವೇ ಇರಲಿಲ್ಲ. ದೇವೇಗೌಡರನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ರಾಷ್ಟ್ರೀಯ ಅಧ್ಯಕ್ಷರಾದ ಎಸ್.ಆರ್.ಬೊಮ್ಮಾಯಿ ಸಿದ್ದರಿರಲಿಲ್ಲ. ಏಕೆಂದರೆ ಇವರು ಬೊಮ್ಮಾಯಿ ಸರ್ಕಾರವನ್ನು ಕೆಡವಿದ್ದರು. ಆದರೂ ಆ ಸಂದರ್ಭದಲ್ಲಿ ನಾವೆಲ್ಲಾ ಒಟ್ಟಾಗಿ ದೇವೇಗೌಡರ ಪರವಾಗಿ ನಿಂತೆವು. ಈಗ ಸಿದ್ದರಾಮಯ್ಯ ಅವರಿಗೆ ಸೊಕ್ಕು, ಅಹಂ ಎನ್ನುತ್ತಿದ್ದಾರೆ. ಇದು ಪಾಳೇಗಾರಿಕೆ ಅಲ್ವಾ ದೇವೇಗೌಡರೇ ಎಂದು ಪ್ರಶ್ನಿಸಿದರು.

ಆಕಸ್ಮಿಕವಾಗಿ ಪ್ರಧಾನಿ ಆದ ದೇವೇಗೌಡರು ಪಾಳೆಗಾರಿಕೆ ಮಾತ್ರ ಬಿಡಲ್ಲ. ದಲಿತರು, ಹಿಂದುಳಿದವರನ್ನು ಕಂಡ್ರೆ ಆಗಲ್ಲ. ಒಕ್ಕಲಿಗರನ್ನು ಬೆಳೆಯಲು ಬಿಡಲ್ಲ. ಇದೆಲ್ಲಾ ಪಾಳೇಗಾರಿಕೆ ಅಲ್ವಾ ? ಮೊಮ್ಮಗನಿಗಾಗಿ ಒಂದು ವಾರದಿಂದ ಚನ್ನಪಟ್ಟಣದಲ್ಲೇ ಇದ್ದಾರೆ. ಜೆಡಿಎಸ್ ಅಥವಾ ಬಿಜೆಪಿ ಯಿಂದ ಬೇರೆ ಯಾರಾದರೂ ನಿಂತಿದ್ದರೆ ದೇವೇಗೌಡರು ಹೀಗೆ ವಾರಗಟ್ಟಲೆ ಚನ್ನಪಟ್ಟಣದಲ್ಲಿ ನಿಂತು ಮತ ಕೇಳ್ತಿದ್ರಾ ? NDA ಅಭ್ಯರ್ಥಿಯಾಗಿ ಯೋಗೇಶ್ವರ್ ಸ್ಪರ್ಧಿಸಿದ್ದರೆ ದೇವೇಗೌಡರು ಹೀಗೆ ವಾರಗಟ್ಟಲೆ ಇದ್ದು ಮತ ಕೇಳ್ತಿದ್ರಾ ಎಂದು ಪ್ರಶ್ನಿಸಿದರು.

ಇರಲಿ, ಚನ್ನಪಟ್ಟಣಕ್ಕೆ ಏನು ಮಾಡಿದ್ದೀರಿ ಎನ್ನುವುದನ್ನು ಕ್ಷೇತ್ರದ ಜನತೆ ಕೇಳಬೇಕು. ಬರೀ ಕಣ್ಣೀರು ಹಾಕೋದಲ್ಲ. ಅತ್ಯಾಚಾರಕ್ಕೆ ಒಳಗಾದ ಹಾಸನದ ಹೆಣ್ಣು‌ಮಕ್ಕಳ ಪರವಾಗಿ ಕಣ್ಣೀರೇ ಬರಲಿಲ್ಲ ಪಾಪ ದೇವೇಗೌಡರಿಗೆ ಎಂದರು.

ಸಿದ್ದರಾಮಯ್ಯ ಅವರು ಎರಡನೇ ಬಾರಿ ಮುಖ್ಯಮಂತ್ರಿ ಆದೆ ಅಂತ ದೇವೇಗೌಡರಿಗೆ ಹೊಟ್ಟೆಯುರಿ. ಅದಕ್ಕೇ ನಮ್ಮ ಸರ್ಕಾರ ಕಿತ್ತಾಕುತ್ತೇವೆ ಎನ್ನುತ್ತಿದ್ದಾರೆ. ರಾಜ್ಯದ ಜನತೆ ಆರಿಸಿರುವ ನಮ್ಮ‌ ಸರ್ಕಾರವನ್ನು ಕುಮಾರಸ್ವಾಮಿ, ದೇವೇಗೌಡರಿಂದ ಕೀಳಲು ಸಾಧ್ಯವಿಲ್ಲ. ನಿಮ್ಮ ಹೊಟ್ಟೆಯುರಿ ನಿಮ್ಮನ್ನೇ ಸುಡತ್ತೆ ಹೊರತು ನಮ್ಮನ್ನು ಏನೂ ಮಾಡಲು ಸಾಧ್ಯವಿಲ್ಲ ದೇವೇಗೌಡರೇ ಎಂದರು.

ಮೊದಲ ಬಾರಿ ಸಿಎಂ ಆಗಿ ಹತ್ತು ಹಲವು ಭಾಗ್ಯಗಳನ್ನು ನೀಡಿದೆ. ಎರಡನೇ ಬಾರಿ ಸಿಎಂ ಆಗಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿ ನಮ್ಮ ಸಾಧನೆಯ ಸಾಕ್ಷಿ ರಾಜ್ಯದ ಜನತೆಯ ಎದುರಿಗೆ ಇಟ್ಟಿದ್ದೀವಿ.

ನೀವು ಏನು ಸಾಧನೆ ಮಾಡಿದ್ದೀರಿ ಅಂತ ಚನ್ನಪಟ್ಟಣ ಜನತೆಯ ಎದುರು ಯಾವ ಮುಖ ಇಟ್ಟುಕೊಂಡು ಮತ ಕೇಳುತ್ತಿದ್ದೀರಿ ಎಂದು ಪ್ರಶ್ನಿಸಿದರು.

400 ಕೋಟಿ ವೆಚ್ಚದ ಹಾಲಿನ ಪುಡಿ ಘಟಕ ಮಾಡಿದ್ದು ನಾವು. ಕನಕಪುರದಲ್ಲಿ 2016 ರಲ್ಲಿ ಡೈರಿ ಸಂಕೀರ್ಣವನ್ನು 700 ಕೋಟಿ ರೂ ವೆಚ್ಚದಲ್ಲಿ ಮಾಡಿದ್ದು ನಾವು. ಇಂಥವು ಇನ್ನೂ ಪಟ್ಟಿ ದೊಡ್ಡದಿದೆ. ಕುಮಾರಸ್ವಾಮಿ ಅವರು ಇಂಥಾ ಒಂದೇ ಒಂದನ್ನು ಮಾಡಿದ್ದಾರಾ ಹೇಳಿ ದೇವೇಗೌಡರೇ . ಇದನ್ನು ಚನ್ನಪಟ್ಟಣ ಜನತೆ ಕೂಡ ಕೇಳಬೇಕು ಎಂದು ಕರೆ ನೀಡಿದರು.

BIG NEWS : ರಾಜ್ಯದಲ್ಲಿ ಗೃಹಲಕ್ಷ್ಮಿ ಸೇರಿ ಯಾವುದೇ `ಗ್ಯಾರಂಟಿ' ಯೋಜನೆಗಳು ನಿಲ್ಲಲ್ಲ : ಸಿಎಂ ಸಿದ್ದರಾಮಯ್ಯ ಮತ್ತೊಮ್ಮೆ ಸ್ಪಷ್ಟನೆ BIG NEWS: No 'guarantee' schemes including Grihalakshmi says Cm Siddaramaiah will stop in the state
Share. Facebook Twitter LinkedIn WhatsApp Email

Related Posts

ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : ವಾರ್ಷಿಕ ವೇತನ ಬಡ್ತಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

27/07/2025 1:47 PM1 Min Read

BREAKING : ಕಲಬುರ್ಗಿಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಬಲಿ : ಮಗು ಜನಿಸಿದ ಕೆಲವೇ ಕ್ಷಣಗಳಲ್ಲಿ ಸಾವು!

27/07/2025 1:47 PM1 Min Read

BREAKING : ಚಿಕ್ಕಮಗಳೂರಿನಲ್ಲಿ ಭಾರೀ ಮಳೆ : ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿತ.!

27/07/2025 1:27 PM1 Min Read
Recent News

ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : ವಾರ್ಷಿಕ ವೇತನ ಬಡ್ತಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

27/07/2025 1:47 PM

BREAKING : ಕಲಬುರ್ಗಿಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಬಲಿ : ಮಗು ಜನಿಸಿದ ಕೆಲವೇ ಕ್ಷಣಗಳಲ್ಲಿ ಸಾವು!

27/07/2025 1:47 PM

ಆಗಸ್ಟ್ ತಿಂಗಳಿನಲ್ಲಿ ಬ್ಯಾಂಕ್’ಗಳಿಗೆ 15 ದಿನ ರಜೆ, ಇಲ್ಲಿದೆ ಸಂಪೂರ್ಣ ಪಟ್ಟಿ |Bank Holidays

27/07/2025 1:35 PM

BREAKING : ಚಿಕ್ಕಮಗಳೂರಿನಲ್ಲಿ ಭಾರೀ ಮಳೆ : ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿತ.!

27/07/2025 1:27 PM
State News
KARNATAKA

ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : ವಾರ್ಷಿಕ ವೇತನ ಬಡ್ತಿ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ.!

By kannadanewsnow5727/07/2025 1:47 PM KARNATAKA 1 Min Read

ಬೆಂಗಳೂರು : ಪರಿವೀಕ್ಷಣಾ ಅವಧಿಯಲ್ಲಿ ತಡೆಹಿಡಿಯಲಾದ ವಾರ್ಷಿಕ ವೇತನ ಬಡ್ತಿಗಳನ್ನು ಬಿಡುಗಡೆಗೊಳಿಸಿ ವೇತನ ನಿಗಧೀಕರಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ…

BREAKING : ಕಲಬುರ್ಗಿಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ಬಾಣಂತಿ ಬಲಿ : ಮಗು ಜನಿಸಿದ ಕೆಲವೇ ಕ್ಷಣಗಳಲ್ಲಿ ಸಾವು!

27/07/2025 1:47 PM

BREAKING : ಚಿಕ್ಕಮಗಳೂರಿನಲ್ಲಿ ಭಾರೀ ಮಳೆ : ರಾಷ್ಟ್ರೀಯ ಹೆದ್ದಾರಿ 169ರಲ್ಲಿ ಗುಡ್ಡ ಕುಸಿತ.!

27/07/2025 1:27 PM

ಭೀಮನ ಅಮಾವಾಸ್ಯೆಯಂದು ಗಂಡನ ಪೂಜೆ ಮಾಡಿ ಆತ್ಮಹತ್ಯೆ ಕೇಸ್ ಗೆ ಟ್ವಿಸ್ಟ್ : ಪತಿಗೆ ಅನೈತಿಕ ಸಂಬಂಧ ಹಿನ್ನೆಲೆ ಪತ್ನಿ ಸೂಸೈಡ್!

27/07/2025 12:42 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.