ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳದಿಂದ ಸರಣಿ ಆತ್ಮಹತ್ಯೆಗಳು ನಡೆಯುತ್ತಿವೆ ಈ ವಿಚಾರವಾಗಿ, ಮೈಕ್ರೋ ಫೈನಾನ್ಸ್ ವಸೂಲಿ ಕ್ರಮಕ್ಕೆ ಹೆದರಿ ಯಾರೂ ಆತ್ಮಹತ್ಯೆ ಮಾಡಿಕೊಳ್ಳಬೇಡಿ. ಸರ್ಕಾರ ಸದಾ ನಿಮ್ಮ ಜೊತೆಗಿದೆ. ತೊಂದರೆ ಕೊಟ್ಟರೆ ದೂರು ಕೊಡಿ. ಅವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ ನೀಡಿದ್ದಾರೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಸುತ್ತೂರು ಜಾತ್ರಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಡವರ ಆರ್ಥಿಕ ಅಸಹಾಯಕತೆಯನ್ನು ಶೋಷಿಸುವ ಮೈಕ್ರೋ ಫೈನಾನ್ಸ್ ಗಳ ಅತಿರೇಕದ ವಸೂಲಿ ನಿಯಂತ್ರಿಸಲು ಸುಗ್ರೀವಾಜ್ಞೆ ಮೂಲಕ ಕಠಿಣ ಕಾನೂನು ತರುತ್ತಿದ್ದೇವೆ. ಇನ್ನೂ ಸುಗ್ರೀವಾಜ್ಞೆ ಹೊರಡಿಸಿಲ್ಲ. ಸುಗ್ರೀ ವಾಜ್ಞೆ ಹೊರಡಿಸಿದ ನಂತರ ಇದಕ್ಕೆ ಕಡಿವಾಣ ಬೀಳಲಿದೆ ಎಂದು ಅವರು ತಿಳಿಸಿದರು.
ಮೈಕ್ರೋ ಫೈನಾನ್ಸ್ಗಳ ಅತಿರೇಕದ ವಸೂಲಿ ನಿಯಂತ್ರಿಸಲು ಸುಗ್ರೀ ವಾಜ್ಞೆ ಮೂಲಕ ಕಠಿಣ ಕಾನೂನು ತರಿದ್ದೇವೆ. ಸುಗ್ರೀವಾಜ್ಞೆ ಹೊರಡಿಸಿದ ಬಳಿಕ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಕಡಿವಾಣ ಬೀಳಲಿದೆ.ಮೈಕ್ರೋ ಫೈನಾನ್ಸ್ಗಳು ಆರ್ಬಿಐ ನಿಯಮದಡಿ ಬರುತ್ತವೆ. ಶೇ.28, 29, 30ರಷ್ಟು ಬಡ್ಡಿ ವಸೂಲಿ ಮಾಡುತ್ತಿವೆ. ಇದರಿಂದ ಬೇಸತ್ತು ಸಾಲಗಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಯಾರು ವಿಪರೀತವಾಗಿ ಬಡ್ಡಿ ವಸೂಲಿ ಮಾಡುತ್ತಿದಾರೋ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ. ಜನರು ಆತ್ಮಹತ್ಯೆ ಮಾಡಿಕೊಳ್ಳಬಾರದು ಎಂದು ಮನವಿ ಮಾಡಿದರು.