ಬೆಂಗಳೂರು : ನಟ ದರ್ಶನ ಮತ್ತು ಗ್ಯಾಂಗ್ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹತ್ಯೆ ಪ್ರಕರಣದಲ್ಲಿ ಸಾಕ್ಷಿ ನಾಶಕ್ಕೆ ಹಣ ಸಂಗ್ರಹ ಆರೋಪ ಹಿನ್ನೆಲೆಯಲ್ಲಿ ದರ್ಶನ್ ವಿರುದ್ಧ 82 ಲಕ್ಷ ನಗದು ಸಂಗ್ರಹ ಮಾಡಿದ ಆರೋಪ ಹಿನ್ನೆಲೆ ಹಣಕ್ಕೆ ಸಂಬಂಧಪಟ್ಟಂತೆ ಐಟಿ ಅಧಿಕಾರಿಗಳ ಮುಂದೆ A2 ಆರೋಪಿ ದರ್ಶನ ಹೇಳಿಕೆ ನೀಡಿದ್ದು, ದರ್ಶನ್ ಮತ್ತು ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ ಹಣ ಪತ್ತೆ ಸಂಬಂಧ ಐಟಿ ವಿಚಾರಣೆ ಬಳಿ ಹಣದ ಬಗ್ಗೆ ದರ್ಶನ್ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ.
ಕೃಷಿ ಮತ್ತು ಪಶು ಸಂಗೋಪನೆಯಿಂದ ಹಣ ಬಂದಿದ್ದಾಗಿ ದರ್ಶನ್ ಐಟಿ ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದ್ದಾರೆ. ಆದರೆ ಈ ಹಣಕ್ಕೆ ನನ್ನ ಬಳಿ ದಾಖಲೆಗಳು ಇಲ್ಲ. ಈ ಬಗ್ಗೆ ಐಟಿ ರಿಟರ್ನ್ಸ್ ವೇಳೆ ಮಾಹಿತಿ ನೀಡುತ್ತೇನೆ. ಇನ್ನು ಸಾಲಕೊಟ್ಟಿದ್ದು ಸಾಲ ಪಡೆದಿದ್ದರ ಬಗ್ಗೆ ಪ್ರಶ್ನೆಗೆ ಉತ್ತರಿಸಿದ್ದಾರೆ. ಮೋಹನ್ ರಾಜ್ಗೆ ಸಾಲವಾಗಿ ಹಣ ನೀಡಿದ್ದೆ 2024 ಫೆಬ್ರವರಿಯಲ್ಲಿ ಸಾಲ ಕೊಟ್ಟು ಮೇನಲ್ಲಿ ವಾಪಸ್ ಪಡೆದಿದ್ದೆ 3 ವರ್ಷದಿಂದ ಕೃಷಿಗೆ 25 ಲಕ್ಷ ರೂಪಾಯಿ ಮತ್ತು ಹುಟ್ಟುಹಬ್ಬಕ್ಕೆ ಗಿಫ್ಟ್ ರೂಪದಲ್ಲಿ 15 ಲಕ್ಷ ರೂಪಾಯಿ ಹಣ ಪಡೆದಿದ್ದಾಗಿ ಹೇಳಿಕೆ ನೀಡಿದರು.
ಈ ಹಣಕ್ಕೆ ನನ್ನ ಬಳಿ ಯಾವುದೇ ದಾಖಲೆ ಇಲ್ಲ ಮೋಹನ್ ರಾಜ್ಗೆ ಬಿಟ್ಟರೆ ಯಾರಿಗೂ ನಗದು ರೂಪದಲ್ಲಿ ಸಾಲ ಕೊಟ್ಟಿಲ್ಲ ಆರು ವರ್ಷದಿಂದ ನಾನು ಸಾಲ ಕೊಟ್ಟಿಲ್ಲ ಪಡೆದು ಇಲ್ಲ ಉಳಿದ ಹಣದ ಬಗ್ಗೆ ಮಾಹಿತಿ ಗೊತ್ತಿಲ್ಲ ಎಂದು ದರ್ಶನ್ ಅಧಿಕಾರಿಗಳ ಮುಂದೆ ಹೇಳಿಕೆ ನೀಡಿದರು. ದರ್ಶನ್, ವಿಜಯಲಕ್ಷ್ಮಿ, ಪ್ರಧೋಷ್ ನಿಖಿಲ್ ಹಾಗೂ ಕೇಶವಮೂರ್ತಿ ಮನೆಯಲ್ಲಿ 82 ಲಕ್ಷ ರೂಪಾಯಿ ಹಣ ಸಿಕ್ಕಿತ್ತು.








