Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘I Love You’ ಎಂದು ಹೇಳುವುದು ಲೈಂಗಿಕ ಕಿರುಕುಳವಲ್ಲ : ಹೈಕೋರ್ಟ್ ಸಂಚಲನಾತ್ಮಕ ತೀರ್ಪು

02/07/2025 7:29 PM

ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಭವಿಷ್ಯ

02/07/2025 7:21 PM

ರಾಜ್ಯ ಸರ್ಕಾರದ ಸಿಎಸ್ ವಿರುದ್ಧ ಅಸಂಸದೀಯ ಪದ ಬಳಸಿದ ಬಿಜೆಪಿ ರವಿಕುಮಾರ್ ವಿರುದ್ಧ ಪೊಲೀಸರಿಗೆ ದೂರು

02/07/2025 7:18 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದಲ್ಲಿ ಮತ್ತೊಂದು ಹೊಸ ಕಾನೂನು ಜಾರಿ : QR Code ಸಮೇತ DL, RC ಸ್ಮಾರ್ಟ್‌ ಕಾರ್ಡ್ ವಿತರಣೆ!
KARNATAKA

BIG NEWS : ರಾಜ್ಯದಲ್ಲಿ ಮತ್ತೊಂದು ಹೊಸ ಕಾನೂನು ಜಾರಿ : QR Code ಸಮೇತ DL, RC ಸ್ಮಾರ್ಟ್‌ ಕಾರ್ಡ್ ವಿತರಣೆ!

By kannadanewsnow5724/09/2024 9:08 AM

ಬೆಂಗಳೂರು : ರಾಜ್ಯದಲ್ಲಿ ಮತ್ತೊಂದು ಹೊಸ ಕಾನೂನು ಜಾರಿಗೆ ಬರಲಿದ್ದು, ಡಿಜಿಟಲ್ ತಂತ್ರಜ್ಞಾನ ಬಳಕೆಗೆ ಮಹತ್ವದ ಕ್ರಮ ಕೈಗೊಂಡಿರುವ ಸರ್ಕಾರ, ಡಿಎಲ್ ಹಾಗೂ ಆರ್‌ಸಿಗೆ ಹೊಸ ರೂಪ ಕೊಡೋಕೆ ಮುಂದಾಗಿದೆ.

ಹೌದು, ಈಗಾಗಲೇ ನಿಮ್ಮ ಡಿಎಲ್ ಹಾಗೂ ಆರ್‌ಸಿ ಕಾರ್ಡ್‌ಗಳಲ್ಲಿ ಚಿಪ್ ಇದೆ. ಇನ್ಮುಂದೆ ಹೊಸ ಡಿಎಲ್‌ಗಳಲ್ಲಿ ಕ್ಯೂಆರ್ ಕೋಡ್ ಕೂಡಾ ಇರಲಿದೆ. ಶೀಘ್ರದಲ್ಲೇ ಈ ಯೋಜನೆ ಜಾರಿಗೆ ಬರಲಿದೆ.

ದೇಶಾದ್ಯಂತ ಡಿಎಲ್ ಹಾಗೂ ಆರ್‌ಸಿ ಕಾರ್ಡ್‌ಗಳು ಒಂದೇ ರೀತಿ ಇರಬೇಕು ಅನ್ನೋದು ಸರ್ಕಾರದ ಚಿಂತನೆ. ವಾಹನ ಚಾಲನಾ ಪರವಾನಗಿ ಹಾಗೂ ವಾಹನಗಳ ನೋಂದಣಿ ಪ್ರಮಾಣ ಪತ್ರದಲ್ಲಿ ಇರುವ ಎಲ್ಲಾ ರೀತಿಯ ಲೋಪ ದೋಷಗಳನ್ನ ನಿವಾರಣೆ ಮಾಡಬೇಕು ಅನ್ನೋದು ಸರ್ಕಾರದ ನಿಲುವು. ಇದಕ್ಕಾಗಿ ಕೇಂದ್ರ ಸರ್ಕಾರದ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವಾಲಯ ಒಂದಷ್ಟು ನಿಯಮಾವಳಿಗಳನ್ನ ರೂಪಿಸಿದೆ. ಈ ನಿಯಮಾವಳಿಗಳ ಪ್ರಕಾರವೇ ಎಲ್ಲ ರಾಜ್ಯಗಳಲ್ಲೂ ಹೊಸ ಕಾರ್ಡ್‌ ವಿತರಣೆ ಮಾಡಲಾಗುತ್ತದೆ.

ಡಿಎಲ್‌ನ ಮುಂಭಾಗದಲ್ಲಿ ಕಾರ್ಡ್‌ ಮಾಲೀಕರ ಹೆಸರು, ಫೋಟೋ, ಅಡ್ರೆಸ್, ಹುಟ್ಟಿದ ದಿನಾಂಕ, ರಕ್ತದ ಗುಂಪು ಸೇರಿದಂತೆ ಹಲವು ವಿವರಗಳು ಇರುತ್ತವೆ. ಡಿಎಲ್‌ನ ಹಿಂಭಾಗದಲ್ಲಿ ನಿಮ್ಮ ಮೊಬೈಲ್ ನಂಬರ್, ಯಾವೆಲ್ಲಾ ಮಾದರಿಯ ವಾಹನ ಚಲಾಯಿಸಲು ಅನುಮತಿ ಇದೆ ಅನ್ನೋ ವಿವರ ಇರುತ್ತೆ. ಇನ್ನು ಈ ಎಲ್ಲಾ ವಿಷಯಗಳೂ ಚಿಪ್‌ಗಳಲ್ಲಿ ಇರುವ ಜೊತೆಯಲ್ಲೇ ಕ್ಯೂ ಆರ್ ಕೋಡ್‌ನಲ್ಲೂ ಇರಲಿದೆ. ಅಷ್ಟೇ ಅಲ್ಲ, ತುರ್ತು ಸಂಪರ್ಕ ಸಂಖ್ಯೆ ಕೂಡಾ ಇರುತ್ತೆ.

ಪೊಲೀಸರು ಅಥವಾ ಆರ್‌ಟಿಒ ಸಿಬ್ಬಂದಿ ನಿಮ್ಮ ಡಿಎಲ್ ಸ್ಮಾರ್ಟ್‌ ಕಾರ್ಡ್‌ ಅನ್ನು ತಮ್ಮ ಮೊಬೈಲ್‌ನಲ್ಲಿ ಒಮ್ಮೆ ಸ್ಕ್ಯಾನ್ ಮಾಡಿದ ಕೂಡಲೇ ಈ ಎಲ್ಲಾ ಮಾದರಿ ಅವರಿಗೆ ಲಭ್ಯ ಆಗುವ ರೀತಿ ಸ್ಮಾರ್ಟ್‌ ಕಾರ್ಡ್‌ನಲ್ಲಿ ತಂತ್ರಜ್ಞಾನ ಅಳವಡಿಕೆ ಮಾಡಲಾಗಿದೆ. ಈಗಾಗಲೇ ವಿತರಣೆ ಮಾಡಲಾಗುತ್ತಿರುವ ಆರ್‌ಸಿ ಕಾರ್ಡ್‌ಗಳಲ್ಲಿ ಚಿಪ್ ಇದೆ. ಜೊತೆಯಲ್ಲೇ ವಾಹನದ ಸಮಗ್ರ ಮಾಹಿತಿ ಇದೆ. ಇದೇ ಮಾಹಿತಿಗಳೂ ಹೊಸ ಮಾದರಿಯ ಕಾರ್ಡ್‌ನಲ್ಲೂ ಇರುತ್ತದೆ. ಜೊತೆಯಲ್ಲೇ ಹೆಚ್ಚಿನ ಮಾಹಿತಿ ಸೇರ್ಪಡೆ ಮಾಡಲಾಗಿರುತ್ತೆ. ಕ್ಯೂ ಆರ್ ಕೋಡ್ ಕೂಡಾ ಇರುತ್ತೆ.

ಹೊಸ ಆರ್‌ಸಿ ಕಾರ್ಡ್ ಮುಂಭಾಗದಲ್ಲಿ ವಾಹನದ ನೋಂದಣಿ ಸಂಖ್ಯೆ, ನೋಂದಣಿ ಆದ ದಿನಾಂಕ, ಕಾರ್ಡ್‌ ಅಂತ್ಯ ಆಗುವ ದಿನಾಂಕ, ಚಾಸಿಸ್ ಸಂಖ್ಯೆ, ಎಂಜಿನ್ ಸಂಖ್ಯೆ ಜೊತೆಯಲ್ಲೇ ವಾಹನಗಳ ಟ್ರ್ಯಾಕಿಂಗ್ ಸಿಸ್ಟಂ ಕೂಡಾ ಅಳವಡಿಕೆ ಮಾಡಲಾಗಿರುತ್ತೆ. ಇನ್ನು ಆರ್‌ಸಿ ಕಾರ್ಡ್‌ನ ಹಿಂಭಾಗದಲ್ಲಿ ವಾಹನ ತಯಾರಕರ ಹೆಸರು, ವಾಹನದ ಮಾದರಿ, ಸೀಟುಗಳ ಸಾಮರ್ಥ್ಯ ಸೇರಿದಂತೆ ಹಲವು ಅಂಶಗಳನ್ನು ನಮೂದು ಮಾಡಲಾಗಿರುತ್ತದೆ.

BIG NEWS : ರಾಜ್ಯದಲ್ಲಿ ಮತ್ತೊಂದು ಹೊಸ ಕಾನೂನು ಜಾರಿ : QR Code ಸಮೇತ DL BIG NEWS: 'One Nation One Card' scheme to be implemented in the state: DL RC smart card distribution with QR code! RC ಸ್ಮಾರ್ಟ್‌ ಕಾರ್ಡ್ ವಿತರಣೆ!
Share. Facebook Twitter LinkedIn WhatsApp Email

Related Posts

ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಭವಿಷ್ಯ

02/07/2025 7:21 PM2 Mins Read

ರಾಜ್ಯ ಸರ್ಕಾರದ ಸಿಎಸ್ ವಿರುದ್ಧ ಅಸಂಸದೀಯ ಪದ ಬಳಸಿದ ಬಿಜೆಪಿ ರವಿಕುಮಾರ್ ವಿರುದ್ಧ ಪೊಲೀಸರಿಗೆ ದೂರು

02/07/2025 7:18 PM1 Min Read

‘ಬೆಂಗಳೂರು ನಗರ ವಿವಿ’ಗೆ ‘ಮನಮೋಹನ್ ಸಿಂಗ್’ ಹೆಸರಿಡಲು ‘ರಾಜ್ಯ ಸಚಿವ ಸಂಪುಟ’ ಅನುಮೋದನೆ

02/07/2025 7:13 PM2 Mins Read
Recent News

‘I Love You’ ಎಂದು ಹೇಳುವುದು ಲೈಂಗಿಕ ಕಿರುಕುಳವಲ್ಲ : ಹೈಕೋರ್ಟ್ ಸಂಚಲನಾತ್ಮಕ ತೀರ್ಪು

02/07/2025 7:29 PM

ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಭವಿಷ್ಯ

02/07/2025 7:21 PM

ರಾಜ್ಯ ಸರ್ಕಾರದ ಸಿಎಸ್ ವಿರುದ್ಧ ಅಸಂಸದೀಯ ಪದ ಬಳಸಿದ ಬಿಜೆಪಿ ರವಿಕುಮಾರ್ ವಿರುದ್ಧ ಪೊಲೀಸರಿಗೆ ದೂರು

02/07/2025 7:18 PM

‘ಬೆಂಗಳೂರು ನಗರ ವಿವಿ’ಗೆ ‘ಮನಮೋಹನ್ ಸಿಂಗ್’ ಹೆಸರಿಡಲು ‘ರಾಜ್ಯ ಸಚಿವ ಸಂಪುಟ’ ಅನುಮೋದನೆ

02/07/2025 7:13 PM
State News
KARNATAKA

ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಸಿಎಂ ಬದಲಾವಣೆ ಖಚಿತ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಭವಿಷ್ಯ

By kannadanewsnow0902/07/2025 7:21 PM KARNATAKA 2 Mins Read

ಬೆಂಗಳೂರು: ಅಕ್ಟೋಬರ್‌ ಅಥವಾ ನವೆಂಬರ್‌ನಲ್ಲಿ ಖಚಿತವಾಗಿ ಸಿಎಂ ಬದಲಾವಣೆಯಾಗಲಿದೆ. ಕಾಂಗ್ರೆಸ್‌ ಪಕ್ಷ ಮನೆಯೊಂದು ಮೂರು ಬಾಗಿಲು ಆಗಿದ್ದು, ಎಲ್ಲರೂ ಸಿಎಂ ಆಗಲು…

ರಾಜ್ಯ ಸರ್ಕಾರದ ಸಿಎಸ್ ವಿರುದ್ಧ ಅಸಂಸದೀಯ ಪದ ಬಳಸಿದ ಬಿಜೆಪಿ ರವಿಕುಮಾರ್ ವಿರುದ್ಧ ಪೊಲೀಸರಿಗೆ ದೂರು

02/07/2025 7:18 PM

‘ಬೆಂಗಳೂರು ನಗರ ವಿವಿ’ಗೆ ‘ಮನಮೋಹನ್ ಸಿಂಗ್’ ಹೆಸರಿಡಲು ‘ರಾಜ್ಯ ಸಚಿವ ಸಂಪುಟ’ ಅನುಮೋದನೆ

02/07/2025 7:13 PM

BREAKING: ನಾಳೆಯಿಂದ DCET-2025ಕ್ಕೆ ಮೊದಲ ಸುತ್ತಿನ ಕೌನ್ಸೆಲಿಂಗ್ ಆರಂಭ

02/07/2025 6:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.