ಬೆಂಗಳೂರು: ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರೇ ಗಮನಿಸಿ, ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ದಾಖಲಾತಿ ಪ್ರಕ್ರಿಯೆಯನ್ನು ಜೂನ್ 30ರೊಳಗೆ ಪೂರ್ಣಗೊಳಿಸುವಂತೆ ಶಾಲಾ ಶಿಕ್ಷಣ ಇಲಾಖೆಯು ಮುಖ್ಯ ಶಿಕ್ಷಕರಿಗೆ ಸೂಚನೆ ನೀಡಿದೆ.
ರಾಜ್ಯದಲ್ಲಿ ಮೇ 29ಕ್ಕೆ ಶಾಲೆಗಳು ಆರಂಭವಾಗಲಿದ್ದು, ಮುಖ್ಯ ಶಿಕ್ಷಕರು ಮತ್ತು ಶಿಕ್ಷಕರು ಅಂದು ಶಾಲೆಗೆ ಹಾಜರಾಗಿ ಆರಂಭೋತ್ಸವದಲ್ಲಿ ಪಾಲ್ಗೊಳ್ಳಬೇಕು.
ಶಾಲೆ ಗಳಲ್ಲಿನ ಪಿಎಂ ಪೋಷಣ್, ಕ್ಷೀರಭಾಗ್ಯ, ಪಠ್ಯಪುಸ್ತಕ, ಸಮವಸ್ತ್ರಗಳ ವಿತರಣೆ ಮುಂತಾದ ಕಾರ್ಯಕ್ರಮಗಳು ಸುಗಮವಾಗಿ ನಡೆಯುವಂತೆ ನೋಡಿಕೊಳ್ಳಬೇಕು ಎಂದು ಸೂಚಿಸಲಾಗಿದೆ.
ಕ್ರಿಸ್ಮಸ್ ಸಂದರ್ಭದಲ್ಲಿ ರಜೆ ನೀಡುವ ಉದ್ದೇಶ ಹೊಂದಿರುವ ಶಿಕ್ಷಣ ಸಂಸ್ಥೆಗಳು ಈ ಬಗ್ಗೆ ಉಪನಿರ್ದೇಶಕರಿಗೆ ಮನವಿ ಸಲ್ಲಿಸ ಬೇಕು. ಉಪನಿರ್ದೇಶಕರು ಪರಿಶೀಲಿಸಿ ತೀರ್ಮಾನ ಕೈಗೊಳ್ಳುತ್ತಾರೆ. ಕ್ರಿಸ್ಮಸ್ ಸಂದರ್ಭದಲ್ಲಿ ನೀಡುವ ರಜೆಯನ್ನು ಅಕ್ಟೋಬರ್ ತಿಂಗಳ ಮಧ್ಯಂತರ ರಜೆಯಲ್ಲಿ ಕಡಿತಗೊಳಿಸಿ ಸರಿದೂಗಿಸಬೇಕು ಎಂದು ಇಲಾಖೆ ಸೂಚನೆ ನೀಡಿದೆ.