Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ವಂದೇ ಮಾತರಂ’ನ 150ನೇ ವರ್ಷಾಚರಣೆಯ ವರ್ಷವಿಡೀ ಆಚರಣೆಗೆ ಚಾಲನೆ ನೀಡಲಿರುವ ಪ್ರಧಾನಮಂತ್ರಿ

07/11/2025 8:58 AM

ದಕ್ಷಿಣ ಕೊರಿಯಾದಲ್ಲಿ ವಿದ್ಯುತ್ ಸ್ಥಾವರ ಕುಸಿತ: ನಾಲ್ವರು ಸಾವು | Power plant collapse

07/11/2025 8:53 AM

ದಕ್ಷಿಣ ಕನ್ನಡದಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿ ನೈತಿಕ ಪೊಲೀಸ್ ಗಿರಿ : ಇಬ್ಬರು ಆರೋಪಿಗಳು ಅರೆಸ್ಟ್

07/11/2025 8:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಪ್ರಧಾನಿ ಮೋದಿ ಒಬ್ಬರೇ ತಮ್ಮ ಅವಧಿಯಲ್ಲಿ 135 ಲಕ್ಷ ಕೋಟಿ ರೂ. ಸಾಲ ಮಾಡಿಟ್ಟಿದ್ದಾರೆ : CM ಸಿದ್ದರಾಮಯ್ಯ ಆರೋಪ!
KARNATAKA

BIG NEWS : ಪ್ರಧಾನಿ ಮೋದಿ ಒಬ್ಬರೇ ತಮ್ಮ ಅವಧಿಯಲ್ಲಿ 135 ಲಕ್ಷ ಕೋಟಿ ರೂ. ಸಾಲ ಮಾಡಿಟ್ಟಿದ್ದಾರೆ : CM ಸಿದ್ದರಾಮಯ್ಯ ಆರೋಪ!

By kannadanewsnow5709/11/2024 9:13 AM

ಬಳ್ಳಾರಿ : ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೋಡಿ ನಮ್ಮ ನಿಮ್ಮ ಬದುಕಿನ ಸಮಸ್ಯೆಗಳ ಬಗ್ಗೆ ಯಾವತ್ತೂ ಮಾತನಾಡಿಲ್ಲ. ಜಾತಿ-ಧರ್ಮದ ಹೆಸರಿನಲ್ಲಿ ಭಾರತೀಯರನ್ನು ಪರಸ್ಪರ ಕಚ್ಚಾಡಿಸಿ, ವಿಭಜನೆ ಮೂಲಕ ರಾಜಕಾರಣ ಮಾಡುತ್ತಾ ಕಾಲ ಕಳೆಯುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಸಂಡೂರಿನ ವಡ್ಡು ಗ್ರಾಮದಲ್ಲಿ ನಡೆದ ಬೃಹತ್ ಜನಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಹುಲ್ ಗಾಂಧಿ ಅವರು ಭಾರತೀಯರ ಮನಸ್ಸು-ಹೃದಯಗಳನ್ನು ಬೆಸೆಯುವ “ಭಾರತ್ ಜೋಡೋ” ಚಳವಳಿಯನ್ನು ಮುನ್ನಡೆಸಿದ್ದಾರೆ. ರೈತರ ಬದುಕನ್ನು ಮಾರಣ ಹೋಮ ಮಾಡುವ ಕರಾಳ ಕಾಯ್ದೆಗಳನ್ನು ಬಿಜೆಪಿ ಸರ್ಕಾರ ಜಾರಿಗೆ ತಂದಿತು. ದೇಶಾದ್ಯಂತ ರೈತರು ನಡೆಸಿದ ವಿರೋಚಿತ ಹೋರಾಟಕ್ಕೆ ಶರಣಾಗಿ ಮೋದಿ ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ವಾಪಾಸ್ ಪಡೆಯಿತು. ರೈತರ ಬದುಕಿಗೆ ಕರಾಳತೆ ಸೃಷ್ಟಿಸಿದ ಪ್ರಧಾನಿ ಮೋದಿ ಅವರ ಸರ್ಕಾರ ಮತ್ತೊಂದು ಕಡೆ ಸಂವಿಧಾನ ಬದಲಾಯಿಸುವ ಹುನ್ನಾರ ನಡೆಸುತ್ತಾ, ಇಡೀ ದೇಶದ ಶ್ರಮಿಕ ಮತ್ತು ದುಡಿಯುವ ವರ್ಗಗಳ ಬದುಕಿನ ಅವಕಾಶಗಳನ್ನು ಹೊಸಕಿ ಹಾಕುವ ಹುನ್ನಾರವನ್ನೂ ನಡೆಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಬಿಜೆಪಿ ಸಂಸದ ಅನಂತ ಕುಮಾರ ಹೆಗ್ಡೆ ಅವರು ಬಿಜೆಪಿ ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಾಯಿಸಲಿಕ್ಕೆ ಎಂದು ಬಹಿರಂಗವಾಗಿ ಹೇಳಿಕೆ ನೀಡಿದ್ದರು. ಈ ಹೇಳಿಕೆಯನ್ನು ಪ್ರಧಾನಿ ಮೋದಿ ಅವರು ಅಲ್ಲಗಳೆಯಲಿಲ್ಲ. 1947 ರಿಂದ 2014 ರವರೆಗೂ ಭಾರತ ದೇಶದ ಸಾಲ ಇದ್ದದ್ದು ಕೇವಲ ₹54 ಲಕ್ಷ ಕೋಟಿ. ಮೋದಿ ಅವರು ಪ್ರಧಾನಿ ಆದ 10 ವರ್ಷಗಳಲ್ಲಿ ದೇಶದ ಸಾಲ ₹185 ಲಕ್ಷ ಕೋಟಿಗೆ ಏರಿಕೆಯಾಗಿದೆ. ಕೇವಲ ಮೋದಿಯವರು ಒಬ್ಬರೇ ತಮ್ಮ ಅವಧಿಯಲ್ಲಿ ₹135 ಲಕ್ಷ ಕೋಟಿ ಸಾಲ ಮಾಡಿಟ್ಟಿದ್ದಾರೆ. ಇದೆಲ್ಲವನ್ನೂ ತೀರಿಸುವ ಜವಾಬ್ದಾರಿ ಭಾರತೀಯರ ತಲೆಗೆ ಬಂದಿದೆ. ಇದೇ ಮೋದಿಯವರ ಕೀರ್ತಿ ಎಂದು ಆರೋಪಿಸಿದ್ದಾರೆ.

ಮೋದಿಯವರು ಭಾರತೀಯರ ಪಾಲಿಗೆ ತಂದ ಕೆಟ್ಟ ದಿನಗಳ ಬಗ್ಗೆ ಯಾವತ್ತೂ ಅವರ ಮನ್ ಕಿ ಬಾತ್ ನಲ್ಲಿ ಮಾತಾಡುವುದಿಲ್ಲ.‌ ರಾಜ್ಯದಲ್ಲೂ ಅಧಿಕಾರ ನಡೆಸಿದ BJP Karnataka ಸರ್ಕಾರ ಕೇವಲ ಲೂಟಿ ಮಾಡಿ ಮನೆ ಸೇರಿದ್ದು ಬಿಟ್ಟರೆ ಅಭಿವೃದ್ಧಿ ಕಡೆ ತಲೆ ಹಾಕಿ ಕೂಡ ಮಲುಗಲಿಲ್ಲ. ಬಿಜೆಪಿ ತನ್ನ ಅವಧಿಯಲ್ಲಿ ಇಡೀ ಸಂಡೂರಿಗೆ ಒಂದೇ ಒಂದು ಮನೆ ಕಟ್ಟಿ ಕೊಡಲಿಲ್ಲ. ಇದನ್ನೆಲ್ಲಾ ನಾನು ಪ್ರಶ್ನಿಸುತ್ತೇನೆ ಎನ್ನುವ ಕಾರಣಕ್ಕೆ, ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಮಾಡಿರುವ ಅನ್ಯಾಯಗಳ ವಿರುದ್ಧ ಬೆಂಗಳೂರಿನಿಂದ ದೆಹಲಿವರೆಗೂ ಹೋಗಿ ಹೋರಾಟ ಮಾಡಿದೆವು ಎನ್ನುವ ಕಾರಣದಿಂದ ನನ್ನ ಮೇಲೆ ಸುಳ್ಳು ಪ್ರಕರಣ ದಾಖಲಿಸಿ ತೊಂದರೆ ಕೊಡುತ್ತಿದ್ದಾರೆ.

ಇದಕ್ಕೆಲ್ಲಾ ಉತ್ತರ ಕೊಡುವ ಕಾಲ ಬಂದಿದೆ. ಈ ಉಪ ಚುನಾವಣೆಯಲ್ಲಿ ಮೂರಕ್ಕೆ ಮೂರೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸುತ್ತಾರೆ. ಸಂಡೂರಿನಲ್ಲಿ ಅನ್ನಪೂರ್ಣಮ್ಮ ಅವರನ್ನು 50 ಸಾವಿರ ಮತಗಳ ಅಂತರದಿಂದ ಗೆಲ್ಲಿಸಿದರೆ ನನಗೆ ದೊಡ್ಡ ಶಕ್ತಿ ಬರುತ್ತದೆ ಎಂದರು.

BIG NEWS : ಪ್ರಧಾನಿ ಮೋದಿ ಒಬ್ಬರೇ ತಮ್ಮ ಅವಧಿಯಲ್ಲಿ 135 ಲಕ್ಷ ಕೋಟಿ ರೂ. ಸಾಲ ಮಾಡಿಟ್ಟಿದ್ದಾರೆ : CM ಸಿದ್ದರಾಮಯ್ಯ ಆರೋಪ! BIG NEWS: PM Modi alone spent Rs 135 lakh crore in his tenure. Cm Siddaramaiah accuses him of taking loans
Share. Facebook Twitter LinkedIn WhatsApp Email

Related Posts

ದಕ್ಷಿಣ ಕನ್ನಡದಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿ ನೈತಿಕ ಪೊಲೀಸ್ ಗಿರಿ : ಇಬ್ಬರು ಆರೋಪಿಗಳು ಅರೆಸ್ಟ್

07/11/2025 8:45 AM1 Min Read

BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಶೀಲಶಂಕಿಸಿ ಪತ್ನಿಯನ್ನ ಭೀಕರವಾಗಿ ಕೊಂದ ಪತಿ!

07/11/2025 8:44 AM1 Min Read

BREAKING : ಇಂದು ಚಿತ್ತಾಪುರದಲ್ಲಿ ‘RSS’ ಪಥಸಂಚಲನಕ್ಕೆ ಸಮಯ ನಿಗದಿ ಸಾಧ್ಯತೆ : ಎಲ್ಲರ ಚಿತ್ತ ಹೈಕೋರ್ಟ್ ನತ್ತ

07/11/2025 8:27 AM1 Min Read
Recent News

‘ವಂದೇ ಮಾತರಂ’ನ 150ನೇ ವರ್ಷಾಚರಣೆಯ ವರ್ಷವಿಡೀ ಆಚರಣೆಗೆ ಚಾಲನೆ ನೀಡಲಿರುವ ಪ್ರಧಾನಮಂತ್ರಿ

07/11/2025 8:58 AM

ದಕ್ಷಿಣ ಕೊರಿಯಾದಲ್ಲಿ ವಿದ್ಯುತ್ ಸ್ಥಾವರ ಕುಸಿತ: ನಾಲ್ವರು ಸಾವು | Power plant collapse

07/11/2025 8:53 AM

ದಕ್ಷಿಣ ಕನ್ನಡದಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿ ನೈತಿಕ ಪೊಲೀಸ್ ಗಿರಿ : ಇಬ್ಬರು ಆರೋಪಿಗಳು ಅರೆಸ್ಟ್

07/11/2025 8:45 AM

BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಶೀಲಶಂಕಿಸಿ ಪತ್ನಿಯನ್ನ ಭೀಕರವಾಗಿ ಕೊಂದ ಪತಿ!

07/11/2025 8:44 AM
State News
KARNATAKA

ದಕ್ಷಿಣ ಕನ್ನಡದಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ ಮಾಡಿ ನೈತಿಕ ಪೊಲೀಸ್ ಗಿರಿ : ಇಬ್ಬರು ಆರೋಪಿಗಳು ಅರೆಸ್ಟ್

By kannadanewsnow0507/11/2025 8:45 AM KARNATAKA 1 Min Read

ದಕ್ಷಿಣಕನ್ನಡ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನೈತಿಕ ಪೊಲೀಸ್ ಗಿರಿ ನಡೆಸಿದ ಇಬ್ಬರು ಆರೋಪಿಗಳನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ದಕ್ಷಿಣ…

BREAKING : ಬೆಂಗಳೂರಲ್ಲಿ ಮತ್ತೊಂದು ಮರ್ಡರ್ : ಶೀಲಶಂಕಿಸಿ ಪತ್ನಿಯನ್ನ ಭೀಕರವಾಗಿ ಕೊಂದ ಪತಿ!

07/11/2025 8:44 AM

BREAKING : ಇಂದು ಚಿತ್ತಾಪುರದಲ್ಲಿ ‘RSS’ ಪಥಸಂಚಲನಕ್ಕೆ ಸಮಯ ನಿಗದಿ ಸಾಧ್ಯತೆ : ಎಲ್ಲರ ಚಿತ್ತ ಹೈಕೋರ್ಟ್ ನತ್ತ

07/11/2025 8:27 AM

BREAKING : ಪೋಷಕರೇ ಹುಷಾರ್ : ದಾವಣಗೆರೆಯಲ್ಲಿ ನೀರಿನ ತೊಟ್ಟಿಗೆ ಬಿದ್ದು 6 ವರ್ಷದ ಬಾಲಕ ಸಾವು!

07/11/2025 8:05 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.