ಚಾಮರಾಜನಗರ : ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಮೀಣ್ಯಂ ವನ್ಯಜೀವಿ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮರಣೋತ್ತರ ಪರೀಕ್ಷೆಯಲ್ಲಿ ಹುಲಿಗಳಿಗೆ ವಿಷ ಪ್ರಾಶನ ಮಾಡಿರುವುದು ಪತ್ತೆಯಾಗಿದೆ. ಹಸುಗಳಿಗೆ ವಿಷ ಪ್ರಾಶನ ಮಾಡಿದ್ದು ಬಳಿಕ ಅದನ್ನು ತಿಂದ ಹುಲಿಗಳು ಸಾವನ್ನಪ್ಪಿವೆ ಎಂದು ಉಪ ಸಂರಕ್ಷಣಾಧಿಕಾರಿ ಚಕ್ರಪಾಣಿ ಹೇಳಿಕೆ ನೀಡಿದರು.
ವಿಷ ಪ್ರಾಶನದಿಂದಲೇ ಐದು ಹುಲಿಗಳು ಮೃತಪಟ್ಟಿವೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಚಕ್ರಪಾಣಿ ಈ ಕುರಿತು ಹೇಳಿಕೆ ನೀಡಿದ್ದು, ಮರಣೋತ್ತರ ಪರೀಕ್ಷೆ ವೇಳೆ ಹುಲಿ ದೇಹದಲ್ಲಿ ವಿಷ ಪತ್ತೆಯಾಗಿದೆ. ಹಸುವಿನ ದೇಹದ ಮೇಲು ವಿಷದ ಅಂಶ ಕಂಡು ಬಂದಿದೆ ಹುಲಿ ಬೇಟೆಯಾಡಿದ ನಂತರ ವಿಷ ಹಾಕಿರುವ ಸಾಧ್ಯತೆ ಇದೆ. ಹುಲಿಗಳು ನಾಡಿಗೆ ಬಂದಿಲ್ಲ, ಹಸುಗಳೆ ಕಾಡಿಗೆ ಬಂದಿವೆ ಎಂದು ಉಪ ಅರಣ್ಯ ಸಂರಕ್ಷಣಾಧಿಕಾರಿ ಚಕ್ರಪಾಣಿ ಹೇಳಿಕೆ ನೀಡಿದರು.