ರಾಯಚೂರು : ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಪ್ರಣವ ಪಂಚಾಕ್ಷರಿ ಗುರುಪೀಠದ ಸ್ವಾಮೀಜಿ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ.
ಪ್ರಣವ ಪಂಚಾಕ್ಷರಿ ಗುರುಪೀಠದ ಶಂಭು ಸೋಮನಾಥ ಶಿವಾಚಾರ್ಯ ಶ್ರೀಗಳ ವಿರುದ್ಧ ಮಹಿಳೆಯೊಬ್ಬರು ಲೈಂಗಿಕ ದೌರ್ಜನ್ಯದ ಆರೋಪ ಮಾಡಿದ್ದು, ಸ್ವಾಮೀಜಿ ವಿರುದ್ಧ ದೂರು ನೀಡಲು ಸಂತ್ರಸ್ತೆ ಮಹಿಳೆ ಠಾಣೆಗಳಿಗೆ ಅಲೆದಾಟ ನಡೆಸಿದ್ದಾರೆ. ಬಳಿಕ ಠಾಣೆಯ ವಿಜಿಟರ್ ರಿಜಿಸ್ಟರ್ ಬುಕ್ ನಲ್ಲಿ ಹೆಸರು, ವಿಳಾಸ ಬರೆದು ಹೋಗಿದ್ದಾರೆ. ಸದ್ಯ ಮಹಿಳೆಯ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಯಾರ ಸಂಪರ್ಕಕ್ಕೂ ಸಿಗುತ್ತಿಲ್ಲ ಎನ್ನಲಾಗಿದೆ.
ಮಠಕ್ಕೆ ಕಳೆದ 6 ತಿಂಗಳ ಹಿಂದೆ ಬಂದಿದ್ದ ಮಹಿಳೆ ಹಾಗೂ ಮಹಿಳೆಯ ಮಗಳು. ಮೂಲತಃ ಆಂಧ್ರಪ್ರದೇಶ ಮೂಲದವರು ಎನ್ನಲಾಗಿದ್ದು, ಸದ್ಯ ಮಹಿಳೆ ನಾಪತ್ತೆಯಾಗಿದ್ದು, ಗಬ್ಬೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.