Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

7ನೇ ವೇತನ ಆಯೋಗದ ಅಂತ್ಯದ ದಿನಾಂಕ ನಿಗದಿ ; 8ನೇ ವೇತನ ಆಯೋಗದಲ್ಲಿ ‘ಸಂಬಳ’ ಎಷ್ಟು ಹೆಚ್ಚಾಗ್ಬೋದು ಗೊತ್ತಾ.?

22/12/2025 10:20 PM

BREAKING: ದೇಶೀಯ ಮಹಿಳಾ ಕ್ರಿಕೆಟಿಗರು, ಅಧಿಕಾರಿಗಳಿಗೆ ಬಂಪರ್ ಗಿಫ್ಟ್ ಕೊಟ್ಟ BCCI: ಭಾರೀ ವೇತನ ಹೆಚ್ಚಳ

22/12/2025 10:16 PM

BREAKING ; ದೇಶೀಯ ‘ಮಹಿಳಾ ಕ್ರಿಕೆಟ್ ಆಟಗಾರ್ತಿ’ಯರಿಗೆ ‘BCCI’ ಗುಡ್ ನ್ಯೂಸ್ ; ವೇತನದಲ್ಲಿ ಭಾರೀ ಹೆಚ್ಚಳ ಘೋಷಣೆ

22/12/2025 10:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯದ ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಡಿಪ್ಲೋಮಾ,ಪದವಿ ಪಡೆದವರಿಗೆ ಆದ್ಯತೆ : CM ಸಿದ್ದರಾಮಯ್ಯ
KARNATAKA

BIG NEWS : ರಾಜ್ಯದ ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಡಿಪ್ಲೋಮಾ,ಪದವಿ ಪಡೆದವರಿಗೆ ಆದ್ಯತೆ : CM ಸಿದ್ದರಾಮಯ್ಯ

By kannadanewsnow5721/11/2025 6:12 AM

ಚಾಮರಾಜನಗರ : ಸಹಕಾರ ಸಂಘದ ನೇಮಕಾತಿಗಳಲ್ಲಿ ಸಹಕಾರ ಡಿಪ್ಲೊಮೋ, ಪದವಿ ಪಡೆದವರಿಗೆ ಆದ್ಯತೆ ನೀಡಲಾಗುವುದು. ಪಠ್ಯಗಳಲ್ಲಿ ಸಹಕಾರಿ ತತ್ವದ ಮಹತ್ವವನ್ನು ಅಳವಡಿಸಲಾಗುವುದು. ನಮ್ಮ ಸರ್ಕಾರ ಸಹಕಾರ ರಂಗದ ಬೆಳೆವಣಿಗೆಗೆ ಎಲ್ಲಾ ರೀತಿಯ ನೆರವು ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಚಾಮರಾಜನಗರದಲ್ಲಿ ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ ದೇಶದಲ್ಲಿ ಸಹಕಾರ ಚಳವಳಿ ಗಟ್ಟಿಯಾಯಿತು.ನೆಹರೂ ಅವರ ಈ ದೂರದೃಷ್ಟಿ ಕಾರಣಕ್ಕೆ ಅವರ ಜನ್ಮ ದಿನದಂದೇ ಪ್ರತೀ ವರ್ಷ ಸಹಕಾರ ಸಪ್ತಾಹ ಉದ್ಘಾಟನೆಯಾಗುತ್ತದೆ ಎಂದರು.

ಇಂದು ರಾಜ್ಯದಲ್ಲಿ ಕೃಷಿ, ಹೈನುಗಾರಿಕೆ, ಕೈಗಾರಿಕೆ, ಬ್ಯಾಂಕಿಂಗ್ ಸೇರಿ ಹಲವಾರು ಕ್ಷೇತ್ರಗಳಲ್ಲಿ ಸಹಕಾರಿ ಚಳವಳಿ, ಸಹಕಾರಿ ಸಂಘಗಳು ಬೆಳೆಯುತ್ತಲೇ ಇವೆ. ಇದು ಆರೋಗ್ಯಕಾರಿ ಬೆಳವಣಿಗೆ ಎಂದರು.

ನಾನು ಪಶು ಸಂಗೋಪನಾ ಸಚಿವನಾಗಿದ್ದಾಗ ಹಾಲು ಉತ್ಪಾದಕರ ಸಹಕಾರ ಸಂಘಗಳ ಸ್ವಾಯತ್ತತೆ ಮತ್ತು ಸ್ವಾವಲಂಬನೆಗೆ ಪೂರ್ಣ ಸಹಕಾರ ನೀಡಿದ್ದೆ. ಈಗ ಒಂದು ದಿನಕ್ಕೆ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ನಾನು ಹಾಲು ಉತ್ಪಾದಕರ ಅನುಕೂಲಕ್ಕಾಗಿ ಲೀಟರ್ ಗೆ 5ರೂ ನಂತೆ ಒಂದು ದಿನಕ್ಕೆ 5 ಕೋಟಿ ರೂಪಾಯಿ ಸಹಾಯ ಧನವನ್ನು ರೈತರಿಗೆ ನಮ್ಮ ಸರ್ಕಾರದಿಂದ ನೀಡಲಾಗುತ್ತಿದೆ. ನಾವು ಎರಡು ಬಾರಿ ಹಾಲಿನ ದರವನ್ನು ಹೆಚ್ಚಿಸಿದರೂ ಆ ಹೆಚ್ಚುವರಿ ಹಣ ಹಾಲು ಉತ್ಪಾದಕರಿಗೇ ಹೋಗಬೇಕು ಎಂದು ಸ್ಪಷ್ಟ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

ನಾನು ಮುಖ್ಯಮಂತ್ರಿ ಆದಾಗಿನಿಂದ ಎಲ್ಲಾ ಜಾತಿ, ಎಲ್ಲಾ ಧರ್ಮದ ಜನರ ಕಲ್ಯಾಣಕ್ಕಾಗಿ ಕಾರ್ಯಕ್ರಮಗಳನ್ನು ರೂಪಿಸಿ ಜಾರಿ ಮಾಡುತ್ತಿದ್ದೇವೆ‌. ಚಾಮರಾಜನಗರ ಜಿಲ್ಲೆಯ ಎಲ್ಲಾ ಜಾತಿಯ, ಎಲ್ಲಾ ಧರ್ಮದವರೂ ನನಗೆ ಸಹಕಾರ ಕೊಟ್ಟಿದ್ದಾರೆ. ಹೀಗಾಗಿ ಚಾಮರಾಜನಗರ ಜಿಲ್ಲೆಯನ್ನು ನಾನು ಯಾವತ್ತೂ ಮರೆಯುವುದಿಲ್ಲ. ಚಾಮರಾಜನಗರಕ್ಕೆ ಅನೇಕ ಸಾರಿ ಬಂದಿದ್ದೀನಿ. ಈ ಜಿಲ್ಲೆಗೆ ಬಂದರೆ ಮುಖ್ಯಮಂತ್ರಿ ಸ್ಥಾನ ಹೋಗುತ್ತದೆ ಅನ್ನೋ ಮೌಢ್ಯ ಪ್ರಚಲಿತದಲ್ಲಿ ಇದೆ. ಆದರೆ ಇಲ್ಲಿಗೆ ಬಂದು ಹೋದಷ್ಟೂ ನನ್ನ ಸ್ಥಾನ ಮಾತ್ರವಲ್ಲ, ನಮ್ಮ ಪಕ್ಷದ ಅಧಿಕಾರವೂ ಮತ್ತೆ ಮತ್ತೆ ಗಟ್ಟಿ ಆಗಿದೆ. ನಾನು ಜೆಡಿಎಸ್ ನಲ್ಲೇ ಇದ್ದಿದ್ದರೆ ಮುಖ್ಯಮಂತ್ರಿ ಆಗುತ್ತಿರಲಿಲ್ಲ. ದೇವೇಗೌಡರು ಮತ್ತು ಅವರ ಮಕ್ಕಳು ನನ್ನನ್ನು ಮುಖ್ಯಮಂತ್ರಿ ಮಾಡಲು ಬಿಡುತ್ತಿರಲಿಲ್ಲ ಎಂದರು.

ಸಹಕಾರಿ ಚಳವಳಿಯಲ್ಲಿದ್ದ ಜಿ.ಟಿ.ದೇವೇಗೌಡರು ಈಗಲೂ ಜೆಡಿಎಸ್ ನಲ್ಲಿ ಇದ್ದಾರೆ. ಆದರೆ ನನ್ನ ಪರವಾಗಿಯೇ ಇದ್ದಾರೆ. ಜಿ.ಟಿ.ದೇವೇಗೌಡರು 2006ರ ವರೆಗೂ ನನ್ನ ಜೊತೆಗೇ ಇದ್ದರು‌. ಜೆಡಿಎಸ್ ನಿಂದ ನನ್ನನ್ನು ಉಚ್ಚಾಟಿಸಿದ ಮೇಲೆ ಜಿ.ಟಿ.ದೇವೇಗೌಡರು ಅಲ್ಲೇ ಉಳಿದು ಬಿಟ್ಟರು. ಈಗ ಮತ್ತೆ ಒಂದು ರೀತಿಯಲ್ಲಿ ನಮ್ಮ ಜೊತೆಗೇ ಇದ್ದಾರೆ ಎಂದು ಹೇಳಿದ್ದಾರೆ.

ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ ದೇಶದಲ್ಲಿ ಸಹಕಾರ ಚಳವಳಿ ಗಟ್ಟಿಯಾಯಿತು.
ನೆಹರೂ ಅವರ ಈ ದೂರದೃಷ್ಟಿ ಕಾರಣಕ್ಕೆ ಅವರ ಜನ್ಮ ದಿನದಂದೇ ಪ್ರತೀ ವರ್ಷ ಸಹಕಾರ ಸಪ್ತಾಹ… pic.twitter.com/m4GZ0XCyOj

— Siddaramaiah (@siddaramaiah) November 20, 2025

BIG NEWS: Preference will be given to those with cooperative diplomas and degrees in state cooperative society recruitments: CM Siddaramaiah
Share. Facebook Twitter LinkedIn WhatsApp Email

Related Posts

‘ಮಾಲತೇಶ್ ಅರಸ್ ಹರ್ತಿಕೋಟೆ’ಗೆ ‘ಇಂದಿರಾ ಪ್ರಿಯದರ್ಶಿನಿ ರಾಜ್ಯ ಪರಿಸರ ಪ್ರಶಸ್ತಿ’ ಪ್ರದಾನ

22/12/2025 9:55 PM2 Mins Read

ತಂದೆಯಿಂದಲೇ ಗರ್ಭಿಣಿ ಮಗಳ ಹತ್ಯೆ: ಸಚಿವ ಸಂತೋಷ್ ಲಾಡ್ ಖಂಡನೆ

22/12/2025 9:00 PM1 Min Read

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ?: ಸಿಎಂ ಸಿದ್ಧರಾಮಯ್ಯ ಪ್ರಶ್ನೆ

22/12/2025 8:54 PM1 Min Read
Recent News

7ನೇ ವೇತನ ಆಯೋಗದ ಅಂತ್ಯದ ದಿನಾಂಕ ನಿಗದಿ ; 8ನೇ ವೇತನ ಆಯೋಗದಲ್ಲಿ ‘ಸಂಬಳ’ ಎಷ್ಟು ಹೆಚ್ಚಾಗ್ಬೋದು ಗೊತ್ತಾ.?

22/12/2025 10:20 PM

BREAKING: ದೇಶೀಯ ಮಹಿಳಾ ಕ್ರಿಕೆಟಿಗರು, ಅಧಿಕಾರಿಗಳಿಗೆ ಬಂಪರ್ ಗಿಫ್ಟ್ ಕೊಟ್ಟ BCCI: ಭಾರೀ ವೇತನ ಹೆಚ್ಚಳ

22/12/2025 10:16 PM

BREAKING ; ದೇಶೀಯ ‘ಮಹಿಳಾ ಕ್ರಿಕೆಟ್ ಆಟಗಾರ್ತಿ’ಯರಿಗೆ ‘BCCI’ ಗುಡ್ ನ್ಯೂಸ್ ; ವೇತನದಲ್ಲಿ ಭಾರೀ ಹೆಚ್ಚಳ ಘೋಷಣೆ

22/12/2025 10:16 PM

‘ಮಾಲತೇಶ್ ಅರಸ್ ಹರ್ತಿಕೋಟೆ’ಗೆ ‘ಇಂದಿರಾ ಪ್ರಿಯದರ್ಶಿನಿ ರಾಜ್ಯ ಪರಿಸರ ಪ್ರಶಸ್ತಿ’ ಪ್ರದಾನ

22/12/2025 9:55 PM
State News
KARNATAKA

‘ಮಾಲತೇಶ್ ಅರಸ್ ಹರ್ತಿಕೋಟೆ’ಗೆ ‘ಇಂದಿರಾ ಪ್ರಿಯದರ್ಶಿನಿ ರಾಜ್ಯ ಪರಿಸರ ಪ್ರಶಸ್ತಿ’ ಪ್ರದಾನ

By kannadanewsnow0922/12/2025 9:55 PM KARNATAKA 2 Mins Read

ಚಿತ್ರದುರ್ಗ: ಕರ್ನಾಟಕ ರಾಜ್ಯ ಸರ್ಕಾರದ ಕರ್ನಾಟಕ ರಾಜ್ಯ ವಾಯು ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಅಂಗವಾಗಿ ನೀಡುವಂತ ಇಂದಿರಾ…

ತಂದೆಯಿಂದಲೇ ಗರ್ಭಿಣಿ ಮಗಳ ಹತ್ಯೆ: ಸಚಿವ ಸಂತೋಷ್ ಲಾಡ್ ಖಂಡನೆ

22/12/2025 9:00 PM

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ?: ಸಿಎಂ ಸಿದ್ಧರಾಮಯ್ಯ ಪ್ರಶ್ನೆ

22/12/2025 8:54 PM

GOOD NEWS : ಶೀಘ್ರವೇ ಫೆಬ್ರವರಿ–ಮಾರ್ಚ್ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : CM ಸಿದ್ದರಾಮಯ್ಯ ಘೋಷಣೆ

22/12/2025 8:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.