ದಾವಣಗೆರೆ : ಆಪರೇಷನ್ ಸಿಂಧೂರ್ ಕುರಿತಂತೆ ಕೊತ್ತೂರು ಮಂಜುನಾಥ್ ಹೇಳಿಕೆಗೆ ಶಾಸಕ ಬಸನಗೌಡ ಪಾಟೀಲ ಆಕ್ರೋಶ ಹೊರ ಹಾಕಿದ್ದಾರೆ. ದಾವಣಗೆರೆಯಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅನುಮಾನ ಇದ್ದರೆ ಶಾಸಕ ಕೊತ್ತೂರು ಮಂಜುನಾಥ್ ನೋಡಿಕೊಂಡು ಬರಲಿ ಎಂದು ಕಿಡಿ ಕಾರಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಾಸಕ ಮಂಜುನಾಥ್ ಗೆ ಅನುಮಾನ ಇದ್ದರೆ ಅದೇ ಫ್ಲೈಟ್ ನಲ್ಲಿ ಅವರು ಹೋಗಿ ನೋಡಿಕೊಂಡು ಬರಲಿ. ಪಾಕಿಸ್ತಾನ ಹೀರೋ ಅಂದರೆ ಅದು ರಾಹುಲ್ ಗಾಂಧಿ ಮತ್ತು ಸಿಎಂ ಸಿದ್ದರಾಮಯ್ಯ. ಕಾಂಗ್ರೆಸ್ ನವರಿಗೆ ಪಾಕಿಸ್ತಾನದಿಂದ ಪ್ರೀವಿಸ ಕೊಡುತ್ತಾರೆ. ಹೋಗಿ ನೋಡಿಕೊಂಡು ಬರಲಿ ಎಂದು ಶಾಸಕ ಯತ್ನಾಳ್ ವ್ಯಂಗ್ಯವಾಡಿದರು. ದಾಳಿಗೆ ಒಳಗಾದಂತಹ ಉಗ್ರರ ಕ್ಯಾಂಪ್ ನೋಡಿಕೊಂಡು ಬರಲಿ. ಸೈನಿಕರ ಕುರಿತು ಈ ರೀತಿ ಮಾತನಾಡುವುದು ಸರಿಯಲ್ಲ ಎಂದು ತಿಳಿಸಿದರು.