Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವಿರಾಜಪೇಟೆಯಲ್ಲಿ ಗುಂಡಿನ ದಾಳಿ : ರಸ್ತೆಯಲ್ಲಿ ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ಫೈರಿಂಗ್.!

05/12/2025 1:28 PM

BREAKING : ಕೊಡಗಿನಲ್ಲಿ ಬೆಚ್ಚಿ ಬೀಳಿಸೋ ಘಟನೆ : ರಸ್ತೆಯಲ್ಲಿ ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ಫೈರಿಂಗ್!

05/12/2025 1:26 PM

ALERT : ದೀರ್ಘಕಾಲ ಒಂದೇ ಟವಲ್ ಬಳಸಿದ್ರೆ ಈ ಗಂಭೀರ ಸಮಸ್ಯೆಗಳು ಕಾಡಬಹುದು.!

05/12/2025 1:23 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯಾದ್ಯಂತ ಮುಂದುವರೆದ ಮಳೆಯ ಆರ್ಭಟ : ಇಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ | School holiday
KARNATAKA

BIG NEWS : ರಾಜ್ಯಾದ್ಯಂತ ಮುಂದುವರೆದ ಮಳೆಯ ಆರ್ಭಟ : ಇಂದು ಈ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ | School holiday

By kannadanewsnow5719/08/2025 6:03 AM

ಬೆಂಗಳೂರು : ರಾಜ್ಯದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇಂದು ಕೂಡ ವರುಣನ ಆರ್ಭಟ ಮುಂದುವರೆಯುವ ಕಾರಣ ರಾಜ್ಯದ ಕೆಲ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ 11 ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಇಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಮುಂಡಗೋಡು ಹೊರತುಪಡಿಸಿ ಜಿಲ್ಲೆಯ 11 ತಾಲ್ಲೂಕಿನ ಶಾಲೆಗಳು, ಪಿಯು ಕಾಲೇಜುಗಳಿಗೆ ಇಂದು ರಜೆಯನ್ನು ಘೋಷಿಸಲಾಗಿದೆ.
ಈ ಸಂಬಂಧ ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಹೊರಡಿಸಿದ್ದು, ಮಂಗಳವಾರ ಕಾರವಾರ, ಅಂಕೋಲಾ, ಕುಮಟಾ, ಶಿರಸಿ, ಹೊನ್ನಾವರ, ಯಲ್ಲಾಪುರ, ಜೋಯಿಡಾ, ಹಳಿಯಾಳ, ಸಿದ್ದಾಪುರ, ಭಟ್ಕಳ, ದಾಂಡೇಲಿ ತಾಲ್ಲೂಕಿನ ಶಾಲಾ-ಕಾಲೇಜಿಗೆ ರಜೆಯನ್ನು ನೀಡಲಾಗಿದೆ ಎಂದಿದ್ದಾರೆ.

ಬೆಳಗಾವಿ ಜಿಲ್ಲೆಯ 7 ತಾಲ್ಲೂಕಿನ ಶಾಲೆಗಳಿಗೆ ರಜೆ

ಬೆಳಗಾವಿ ಜಿಲ್ಲೆಯ 7 ತಾಲ್ಲೂಕಿನ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಬೆಳಾಗವಿ, ಬೈಲಹೊಂಗಲ, ಕಿತ್ತೂರು, ಖಾನಾಪುರ, ರಾಮದುರ್ಗ, ಸವದತ್ತಿ, ಚಿಕ್ಕೋಡಿ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಇಂದು ಮಳೆಯ ಕಾರಣ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ರಜೆ ನೀಡಿ ಆದೇಶಿಸಿದ್ದಾರೆ.

ಹಾಸನ ಜಿಲ್ಲೆಯ ಈ ತಾಲ್ಲೂಕಿನ ಶಾಲೆಗಳಿಗೆ ರಜೆ

ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಹೀಗಾಗಿ ಹಾಸನ ಜಿಲ್ಲೆಯ ಸಕಲೇಶಪುರ, ಅರಕಲಗೋಡು ತಾಲ್ಲೂಕಿನ ಅಂಗನವಾಡಿ, ಶಾಲೆಗಳಿಗೆ ಇಂದು ರಜೆಯನ್ನು ನೀಡಲಾಗಿದೆ.

ಬೇಲೂರು ತಾಲ್ಲೂಕಿನ ಅರೆಹಳ್ಳಿ, ಬಿಕ್ಕೋಡು ಹೋಬಳಿಯ ಶಾಲೆಗಳಿಗೆ, ಆಲೂರು ತಾಲ್ಲೂಕಿನ ಕೆ.ಹೊಸಕೋಟೆ, ಪಾಳ್ಯ ಹೋಬಳಿಯ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ಹಾಸನ ಜಿಲ್ಲೆಯ 2 ತಾಲ್ಲೂಕಿನ ನಾಲ್ಕು ಹೋಬಳಿಯ ಅಂಗನವಾಡಿ, ಶಾಲೆಗಳಿಗೆ ಮಾತ್ರವನೇ ನಾಳೆ ಮಳೆಯ ಕಾರಣ ಮುಂಜಾಗ್ರತಾ ಕ್ರಮವಾಗಿ ಡಿಸಿ ಲತಾಕುಮಾರಿ ರಜೆ ನೀಡಿ ಆದೇಶಿಸಿದ್ದಾರೆ.

ಧಾರವಾಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಧಾರವಾಡ ಜಿಲ್ಲೆಯಲ್ಲೂ ಮಳೆಯ ಆರ್ಭಟ ಹೆಚ್ಚಾಗಿದೆ. ಹೀಗಾಗಿ ಧಾರವಾಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಇಂದು ರಜೆಯನ್ನು ನೀಡಿ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಆದೇಶಿಸಿದ್ದಾರೆ. ಇಂದು ಧಾರವಾಡ ಜಿಲ್ಲೆಯ ಅಂಗನವಾಡಿ, ಶಾಲೆಗಳು, ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಶಾಲೆಗಳಿಗೆ ರಜೆ

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಅಂಗನವಾಡಿ, ಶಾಲೆಗಳಿಗೆ ಇಂದು ರಜೆ ನೀಡಲಾಗಿದೆ. ಇಂದು ರಜೆ ಘೋಷಿಸಿ ಡಿಸಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.

ಉಡುಪಿ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ ಜಿಲ್ಲೆಯಲ್ಲೂ ಮಳೆಯ ಆರ್ಭಟ ಮುಂದುವರೆದಿದ್ದು, ಇಂದು ಉಡುಪಿ ಜಿಲ್ಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ಬೀದರ್ ಜಿಲ್ಲೆ ಔರಾದ್ ತಾಲೂಕು

ಬೀದರ್ ಜಿಲ್ಲೆ ಔರಾದ್ ತಾಲೂಕಿನಲ್ಲಿ ಭಾರಿ ಮಳೆ ಮುಂದುವರೆದ ಹಿನ್ನೆಲೆಯಲ್ಲಿ ಶಾಲಾ, ಕಾಲೇಜುಗಳಿಗೆ ಇಂದು ರಜೆ ನೀಡಲಾಗಿದೆ. ಅಂಗನವಾಡಿ, ಶಾಲೆ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ತಹಶೀಲ್ದಾರ್ ಆದೇಶಿಸಿದ್ದಾರೆ.

BIG NEWS: Rain continues across the state: Holiday declared for schools and colleges in these 6 districts today | School holiday
Share. Facebook Twitter LinkedIn WhatsApp Email

Related Posts

BREAKING : ವಿರಾಜಪೇಟೆಯಲ್ಲಿ ಗುಂಡಿನ ದಾಳಿ : ರಸ್ತೆಯಲ್ಲಿ ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ಫೈರಿಂಗ್.!

05/12/2025 1:28 PM1 Min Read

BREAKING : ಕೊಡಗಿನಲ್ಲಿ ಬೆಚ್ಚಿ ಬೀಳಿಸೋ ಘಟನೆ : ರಸ್ತೆಯಲ್ಲಿ ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ಫೈರಿಂಗ್!

05/12/2025 1:26 PM1 Min Read

ALERT : ದೀರ್ಘಕಾಲ ಒಂದೇ ಟವಲ್ ಬಳಸಿದ್ರೆ ಈ ಗಂಭೀರ ಸಮಸ್ಯೆಗಳು ಕಾಡಬಹುದು.!

05/12/2025 1:23 PM2 Mins Read
Recent News

BREAKING : ವಿರಾಜಪೇಟೆಯಲ್ಲಿ ಗುಂಡಿನ ದಾಳಿ : ರಸ್ತೆಯಲ್ಲಿ ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ಫೈರಿಂಗ್.!

05/12/2025 1:28 PM

BREAKING : ಕೊಡಗಿನಲ್ಲಿ ಬೆಚ್ಚಿ ಬೀಳಿಸೋ ಘಟನೆ : ರಸ್ತೆಯಲ್ಲಿ ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ಫೈರಿಂಗ್!

05/12/2025 1:26 PM

ALERT : ದೀರ್ಘಕಾಲ ಒಂದೇ ಟವಲ್ ಬಳಸಿದ್ರೆ ಈ ಗಂಭೀರ ಸಮಸ್ಯೆಗಳು ಕಾಡಬಹುದು.!

05/12/2025 1:23 PM

BREAKING : ನನ್ನ ಹೇಳಿಕೆ ತಿರುಚಲಾಗಿದೆ : ಕಾಂಗ್ರೆಸ್ ವಿರುದ್ಧ 63% ಕಮಿಷನ್ ಆರೋಪದ ವಿಚಾರಕ್ಕೆ ನ್ಯಾ.ಬಿ ವೀರಪ್ಪ ಸ್ಪಷ್ಟನೆ

05/12/2025 1:18 PM
State News
KARNATAKA

BREAKING : ವಿರಾಜಪೇಟೆಯಲ್ಲಿ ಗುಂಡಿನ ದಾಳಿ : ರಸ್ತೆಯಲ್ಲಿ ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ಫೈರಿಂಗ್.!

By kannadanewsnow5705/12/2025 1:28 PM KARNATAKA 1 Min Read

ವಿರಾಜಪೇಟೆ : ರಸ್ತೆ ಬದಿ ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ಫೈರಿಂಗ್ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ…

BREAKING : ಕೊಡಗಿನಲ್ಲಿ ಬೆಚ್ಚಿ ಬೀಳಿಸೋ ಘಟನೆ : ರಸ್ತೆಯಲ್ಲಿ ಹೋಗುತ್ತಿದ್ದ ಇಬ್ಬರು ಯುವಕರ ಮೇಲೆ ಫೈರಿಂಗ್!

05/12/2025 1:26 PM

ALERT : ದೀರ್ಘಕಾಲ ಒಂದೇ ಟವಲ್ ಬಳಸಿದ್ರೆ ಈ ಗಂಭೀರ ಸಮಸ್ಯೆಗಳು ಕಾಡಬಹುದು.!

05/12/2025 1:23 PM

BREAKING : ನನ್ನ ಹೇಳಿಕೆ ತಿರುಚಲಾಗಿದೆ : ಕಾಂಗ್ರೆಸ್ ವಿರುದ್ಧ 63% ಕಮಿಷನ್ ಆರೋಪದ ವಿಚಾರಕ್ಕೆ ನ್ಯಾ.ಬಿ ವೀರಪ್ಪ ಸ್ಪಷ್ಟನೆ

05/12/2025 1:18 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.