Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಜನಸಾಮಾನ್ಯರಿಗೆ ಗುಡ್ ನ್ಯೂಸ್ : ಈ ವಸ್ತುಗಳ ಬೆಲೆಯಲ್ಲಿ ಭಾರೀ ಇಳಿಕೆ | GST Reform

15/09/2025 6:05 AM

ನಿಮ್ಮ ‘PF ಬ್ಯಾಲೆನ್ಸ್ ಚೆಕ್’ ಮಾಡಬೇಕೇ.? ಜಸ್ ಹೀಗೆ ಮಾಡಿ ಸಾಕು

15/09/2025 5:47 AM

BIG NEWS: ರಾಜ್ಯದಲ್ಲಿ ‘ಮತಾಂತರ ನಿಷೇಧ ಕಾಯ್ದೆ’ ವಾಪಸ್: ಸಿಎಂ ಸಿದ್ಧರಾಮಯ್ಯ ಸುಳಿವು?

15/09/2025 5:45 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಶಾಲಿನಿ ರಜನೀಶ್ ವಿರುದ್ಧ ರವಿಕುಮಾರ್ ಅಸಭ್ಯ ಹೇಳಿಕೆ : ಸಚಿವ ರಾಮಲಿಂಗ ರೆಡ್ಡಿ ಆಕ್ರೋಶ
KARNATAKA

BIG NEWS : ಶಾಲಿನಿ ರಜನೀಶ್ ವಿರುದ್ಧ ರವಿಕುಮಾರ್ ಅಸಭ್ಯ ಹೇಳಿಕೆ : ಸಚಿವ ರಾಮಲಿಂಗ ರೆಡ್ಡಿ ಆಕ್ರೋಶ

By kannadanewsnow5704/07/2025 8:05 AM

ಬೆಂಗಳೂರು : ವಿಧಾನಪರಿಷತ್ ಸದಸ್ಯ ರವಿಕುಮಾರ್ ರಾಜ್ಯದ ಮುಖ್ಯ ಕಾರ್ಯದರ್ಶಿಗಳ ಕುರಿತ ಹೇಳಿಕೆ ಕುರಿತು ಸಚಿವ ರಾಮಲಿಂಗ ರೆಡ್ಡಿ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ನಾಯಕರ ಅಸಂಸ್ಕೃತಿ ಮತ್ತು ಅನಾಚಾರದ ಹೇಳಿಕೆಗಳಿಗೆ ಮತ್ತೊಂದು ಸೇರ್ಪಡೆ – ನಾಚಿಕೆಗೇಡಿನ ವರ್ತನೆ, ಕೊಳಕು ಭಾಷಾ ಬಳಕೆಯ ಪುನರಾವರ್ತನೆ. ವಿಧಾನಪರಿಷತ್ ಸದಸ್ಯ ರವಿಕುಮಾರ್ ಕಲಬುರಗಿ ಜಿಲ್ಲಾಧಿಕಾರಿಗಳ ಕುರಿತು ಕೆಲವು ತಿಂಗಳುಗಳ ಹಿಂದೆಯಷ್ಟೇ ಅವಹೇಳನಕಾರಿಯಾಗಿ ಮಾತನಾಡಿ, ಮಾನ್ಯ ನ್ಯಾಯಾಲಯವು ಛೀಮಾರಿ ಹಾಕಿದ ನಂತರ ಬೇಷರತ್ ಕ್ಷಮೆ ಕೇಳಿದ್ದರು. ಮತ್ತೊಂದು ಪ್ರಕರಣದಲ್ಲಿ ಸಿ.ಟಿ.ರವಿ ಅವರು ಸದನದಲ್ಲಿ ಮಹಿಳಾ ಮಂತ್ರಿಯವರನ್ನು ಕುರಿತು ಆಡಿದ ಮಾತು ಅಸಹನೀಯ, ಸಂವೇದನಾರಹಿತ, ಸಮಾಜಕ್ಕೆ ಆಘಾತಕಾರಿಯಾದ ನಡವಳಿಕೆಯಾಗಿತ್ತು ಎಂದು ಕಿಡಿಕಾರಿದ್ದಾರೆ.

ಈಗ ಮತ್ತೊಮ್ಮೆ ರವಿಕುಮಾರ್ ಅವರು ರಾಜ್ಯದ ಮುಖ್ಯ ಕಾರ್ಯದರ್ಶಿಗಳ ಕುರಿತ ಹೇಳಿಕೆ? ಸರ್ಕಾರವನ್ನು ನಡೆಸಲು ಶ್ರಮಿಸುವ ಮಹಿಳಾ ಅಧಿಕಾರಿ ಅದರಲ್ಲೂ ಅತ್ಯುನ್ನತ ಸ್ಥಾನದಲ್ಲಿ ಕರ್ತವ್ಯ ನಿರ್ವಹಿಸುವವರ ಬಗ್ಗೆ ಮಾತನಾಡುವಾಗ ಕನಿಷ್ಠ ಸೌಜನ್ಯವೂ ತೋರದೆ, ತಮ್ಮ ಮನೆಯ ಹೆಣ್ಣುಮಕ್ಕಳಿಗಾದರೆ ಈ ರೀತಿ ಭಾಷೆ ಬಳಸುತ್ತೇವೆಯೇ ಎಂದು ಯೋಚಿಸುವ ಔದಾರ್ಯವೂ ಇಲ್ಲದ ಕೊಳಕು ಮನಸ್ಸಿನ ಮನುಷ್ಯ ಇವರು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹುಟ್ಟು ಗುಣ ಸುಟ್ಟರು ಹೋಗಲ್ಲ ಎಂಬ ಗಾದೆ ಬಿ.ಜೆ.ಪಿ ನಾಯಕರಿಗೆ ಅನ್ವರ್ಥ ಅನ್ನಿಸುತ್ತದೆ. ಬಿ.ಜೆ.ಪಿ, ಆರ್ ಎಸ್ ಎಸ್ , ವಿಶ್ವ ಹಿಂದೂ ಪರಿಷತ್ ನವರು ಅವರ ಪಕ್ಷದ ಪದಾಧಿಕಾರಿಗಳಿಗೆ/ ನಾಯಕರುಗಳಿಗೆ ನಾಲಿಗೆ ಬಿಗಿ ಹಿಡಿದು ಮಾತನಾಡುವುದಕ್ಮೆ ತರಬೇತಿ ನೀಡಲು ಮರೆತಿರಬೇಕು. ಅದರಲ್ಲೂ ಮಹಿಳೆಯರ ಕುರಿತು ಮಾತನಾಡುವಾಗ ಸೌಜನ್ಯ, ಸಂಸ್ಕೃತಿ, ಆಚಾರ ವಿಚಾರ ಯಾವುದೂ ಇಲ್ಲದೆ ಅನಾಗರೀಕ, ಅಪಾರ್ಥ ಕಲ್ಪಿಸುವ ಭಾಷೆ ಬಳಸುವುದನ್ನು ಕಲಿಸಿರಬೇಕು ಎಂದು ಹೇಳಿದ್ದಾರೆ.

ಮಾತು ಮಾತಿಗೆ ಭಾರತ ಮಾತೆಗೆ ಜೈಕಾರ ಹಾಕುವ ಇವರು ಬೂಟಾಟಿಕೆಯವರು, ನಮ್ಮೊಡನೆ ಇರುವ ಹೆಣ್ಣುಮಕ್ಕಳನ್ನು ಗೌರವಿಸುವುದೇ ಭಾರತ ಮಾತೆಗೆ ನಾವು ಸಲ್ಲಿಸುವ ನಿಜವಾದ ಗೌರವ. ಆದರೆ ಇದನ್ನು ಬಿ.ಜೆ.ಪಿ ಅವರಿಂದ ನಿರೀಕ್ಷಿಸಬೇಡಿ, ನಾವು ಭಾಷಣಕ್ಕೆ ಮಾತ್ರ ಸೀಮಿತ ಎಂಬುದನ್ನು ಜಗತ್ತಿಗೆ ಸಾರಲು ಹೊರಟಿರುವ ಇಂತಹ ಮನಸ್ಥಿತಿಯ ನಾಯಕರುಗಳಿಗೆ ನನ್ನ ಧಿಕ್ಕಾರ ಎಂದು ಹೇಳಿದ್ದಾರೆ.

@BJP4India ನಾಯಕರ ಅಸಂಸ್ಕೃತಿ ಮತ್ತು ಅನಾಚಾರದ ಹೇಳಿಕೆಗಳಿಗೆ ಮತ್ತೊಂದು ಸೇರ್ಪಡೆ – ನಾಚಿಕೆಗೇಡಿನ ವರ್ತನೆ, ಕೊಳಕು ಭಾಷಾ ಬಳಕೆಯ ಪು‌ನರಾವರ್ತನೆ.

ವಿಧಾನ‌ಪರಿಷತ್ ಸದಸ್ಯರಾದ ಶ್ರೀ ರವಿಕುಮಾರ್ ಕಲಬುರಗಿ ಜಿಲ್ಲಾಧಿಕಾರಿಗಳ ಕುರಿತು ಕೆಲವು ತಿಂಗಳುಗಳ ಹಿಂದೆಯಷ್ಟೇ ಅವಹೇಳನಕಾರಿಯಾಗಿ ಮಾತನಾಡಿ, ಮಾನ್ಯ ನ್ಯಾಯಾಲಯವು ಛೀಮಾರಿ‌ ಹಾಕಿದ ನಂತರ… pic.twitter.com/rLzw1O1SGd

— Ramalinga Reddy (@RLR_BTM) July 3, 2025

BIG NEWS: Ravikumar's obscene statement against Shalini Rajneesh: Minister Ramalinga Reddy outraged
Share. Facebook Twitter LinkedIn WhatsApp Email

Related Posts

BIG NEWS: ರಾಜ್ಯದಲ್ಲಿ ‘ಮತಾಂತರ ನಿಷೇಧ ಕಾಯ್ದೆ’ ವಾಪಸ್: ಸಿಎಂ ಸಿದ್ಧರಾಮಯ್ಯ ಸುಳಿವು?

15/09/2025 5:45 AM1 Min Read

BREAKING: ರಾಯಚೂರಲ್ಲಿ ವಿಷ ಸೇವಿಸಿ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನ, ಒಬ್ಬರು ಸಾವು

14/09/2025 10:04 PM1 Min Read

ಚಿಕ್ಕಬಳ್ಳಾಪುರದಲ್ಲಿ ಗಣೇಶ ಮೆರವಣಿಗೆ ನೋಡಲು ತೆರಳುತ್ತಿದ್ದ ಇಬ್ಬರು ದುರ್ಮರಣ

14/09/2025 9:46 PM1 Min Read
Recent News

ಜನಸಾಮಾನ್ಯರಿಗೆ ಗುಡ್ ನ್ಯೂಸ್ : ಈ ವಸ್ತುಗಳ ಬೆಲೆಯಲ್ಲಿ ಭಾರೀ ಇಳಿಕೆ | GST Reform

15/09/2025 6:05 AM

ನಿಮ್ಮ ‘PF ಬ್ಯಾಲೆನ್ಸ್ ಚೆಕ್’ ಮಾಡಬೇಕೇ.? ಜಸ್ ಹೀಗೆ ಮಾಡಿ ಸಾಕು

15/09/2025 5:47 AM

BIG NEWS: ರಾಜ್ಯದಲ್ಲಿ ‘ಮತಾಂತರ ನಿಷೇಧ ಕಾಯ್ದೆ’ ವಾಪಸ್: ಸಿಎಂ ಸಿದ್ಧರಾಮಯ್ಯ ಸುಳಿವು?

15/09/2025 5:45 AM

BIG NEWS: ‘ಲಿವಿಂಗ್ ಟುಗೆದರ್’ ಬಳಿಕ ಮದುವೆಗೆ ನಿರಾಕರಿಸುವುದು ಅಪರಾಧವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

15/09/2025 5:40 AM
State News
KARNATAKA

BIG NEWS: ರಾಜ್ಯದಲ್ಲಿ ‘ಮತಾಂತರ ನಿಷೇಧ ಕಾಯ್ದೆ’ ವಾಪಸ್: ಸಿಎಂ ಸಿದ್ಧರಾಮಯ್ಯ ಸುಳಿವು?

By kannadanewsnow0915/09/2025 5:45 AM KARNATAKA 1 Min Read

ಬೆಂಗಳೂರು: ಕರ್ನಾಟಕದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿಯಲ್ಲಿದೆ. ಇಂತಹ ಮತಾಂತರ ನಿಷೇಧ ಕಾಯ್ದೆಯನ್ನು ವಾಪಾಸ್ ಪಡೆಯುವ ಸುಳಿವನ್ನು ಸಿಎಂ ಸಿದ್ಧರಾಮಯ್ಯ…

BREAKING: ರಾಯಚೂರಲ್ಲಿ ವಿಷ ಸೇವಿಸಿ ಮೂವರು ಯುವತಿಯರು ಆತ್ಮಹತ್ಯೆಗೆ ಯತ್ನ, ಒಬ್ಬರು ಸಾವು

14/09/2025 10:04 PM

ಚಿಕ್ಕಬಳ್ಳಾಪುರದಲ್ಲಿ ಗಣೇಶ ಮೆರವಣಿಗೆ ನೋಡಲು ತೆರಳುತ್ತಿದ್ದ ಇಬ್ಬರು ದುರ್ಮರಣ

14/09/2025 9:46 PM

ಮಲಗುವ ಮುನ್ನ ಈ 3 ಅಕ್ಷರಗಳ ಮಂತ್ರವನ್ನು ಪಠಿಸಿ, ಮರುದಿನ ನಿಮ್ಮ ಎಲ್ಲಾ ಪ್ರಯತ್ನ ಯಶಸ್ವಿ

14/09/2025 9:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.