ಬೆಂಗಳೂರು : ಐಪಿಎಲ್ 18 ನೇ ಆವೃತ್ತಿಯಲ್ಲಿ ಮೊಟ್ಟಮೊದಲ ಬಾರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಚಾಂಪಿಯನ್ಸ್ ಆಗಿ ಹೊರಹೊಮ್ಮಿದೆ. ನಿನ್ನೆ ಅಹಮದಾಬಾದ್ ನಲ್ಲಿ ಆರ್ಸಿಬಿ ಮತ್ತು ಪಂಜಾಬ್ ನಡುವೆ ನಡೆದ ಪಂದ್ಯದಲ್ಲಿ ಆರ್ಸಿಬಿ ಪಂಜಾಬ್ ವಿರುದ್ಧ 6 ರನ್ ಗಳ ರೋಚಕ ಗೆಲುವು ಸಾಧಿಸಿ ಮೊದಲ ಬಾರಿಗೆ ಚೊಚ್ಚಲ ಕಪ್ ಎತ್ತಿ ಹಿಡಿಯಿತು. ಇದೀಗ ಸಿಎಂ ಸಿದ್ದರಾಮಯ್ಯ ಆರ್ಸಿಬಿಐ ಎಲ್ಲಾ ಆಟಗಾರರಿಗೆ ಹಾಗೂ ಅಭಿಮಾನಿಗಳಿಗೂ ಕೂಡ ಅಭಿನಂದನೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರ್ಸಿಬಿ ತಂಡದ ಎಲ್ಲಾ ಆಟಗಾರರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅಲ್ಲದೇ ಅಭಿಮಾನಿಗಳಿಗೂ ಕೂಡ ಅಭಿನಂದನೆ ಸಲ್ಲಿಸುತ್ತೇನೆ. ಆರ್ ಸಿ ಬಿ ಇದುವರೆಗೂ ಐಪಿಎಲ್ ಕಪ್ ಗೆದ್ದಿರಲಿಲ್ಲ ಆದರೆ 18ನೇ ಆವೃತ್ತಿಯಲ್ಲಿ ಕಪ್ ಗೆದ್ದಿದ್ದಾರೆ. ಸಂಜೆ 4 ಗಂಟೆಗೆ ಗೆ ಅಭಿನಂದನಾ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಎಲ್ಲಾ ಆಟಗಾರರಿಗೆ ಬಹುಮಾನ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.