ಉಡುಪಿ : ಉಡುಪಿ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಭಾರೀ ಸುಂಟರಗಾಳಿ ಬೀಸಿದ್ದು, ಸುಂಟರಗಾಳಿಗೆ ಜನರು ಕಂಗಾಲಾಗಿರುವ ಘಟನೆ ನಡೆದಿದೆ.

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಅಮವಾಸ್ಯೆಬೈಲಿ ಗ್ರಾಮಪಂಚಾಯತಿಯ ರಟ್ಟಾಡಿ ಗ್ರಾಮದಲ್ಲಿ ಭೀಕರ ಸುಂಟರಗಾಳಿ ಬೀಸಿದ ಪರಿಣಾಮ ಬೃಹತ್‌ ಮರಗಳು, ವಿದ್ಯುತ್‌ ಕಂಬಗಳು ನೆಲಕ್ಕುರಳಿದ್ದು, ಮನೆಗಳಿಗೂ ಹಾನಿಯಾಗಿದೆ.

ಗ್ರಾಮದಲ್ಲಿ ಇದೇ ಮೊದಲ ಬಾರಿಗೆ ಇಂತಹ ಅನುಭವಕ್ಕೆ ಗ್ರಾಮಸ್ಥರು ಕಂಗಾಲಾಗಿದ್ದು, ಸುಂಟರಗಾಳಿ ಹೊಡೆತಕ್ಕೆ ಜನಜೀವನ ಅಸ್ತವ್ಯಸ್ಥವಾಗಿದ್ದು, ಜನರಲ್ಲಿ ಆತಂಕಕ್ಕೆ ಕಾರಣವಾಗಿದೆ.

Share.
Exit mobile version