Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ರಾಜ್ಯಾದ್ಯಂತ ಬಿಸಿಲಿನ ತಾಪಕ್ಕೆ ಜನರು ತತ್ತರ : ತಾಪಮಾನ ಹೆಚ್ಚಳದಿಂದ `ಹೀಟ್ ಸ್ಟ್ರೋಕ್’ ಭೀತಿ !

11/03/2026 6:41 AM

ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ: ರಾಜ್ಯದಲ್ಲಿ ಮಾರ್ಚ್ 27ರವರೆಗೆ ಸರ್ಕಾರಿ ಹುದ್ದೆಗಳ ಅಧಿಸೂಚನೆಗೆ ಬ್ರೇಕ್

11/03/2026 6:39 AM

ಪೋಷಕರೇ ಗಮನಿಸಿ : `ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

11/03/2026 6:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರಿ `ಪುರುಷ ನೌಕರರಿಗೆ ಶಿಶುಪಾಲನಾ ರಜೆ’ : ಸರ್ಕಾರದಿಂದ ಮಹತ್ವದ ಆದೇಶ
KARNATAKA

BIG NEWS : ರಾಜ್ಯ ಸರ್ಕಾರಿ `ಪುರುಷ ನೌಕರರಿಗೆ ಶಿಶುಪಾಲನಾ ರಜೆ’ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5722/11/2025 10:37 AM

ಬೆಂಗಳೂರು : ಒಂಟಿ ಪೋಷಕರಾಗಿರುವ ರಾಜ್ಯ ಸರ್ಕಾರಿ ಪುರುಷ ನೌಕರರಿಗೆ ಶಿಶುಪಾಲನಾ ರಜೆ ಸೌಲಭ್ಯವನ್ನು ಮಂಜೂರು ಮಾಡುವ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಏನಿದೆ ರಾಜ್ಯ ಸರ್ಕಾರದ ಆದೇಶದಲ್ಲಿ?

ಮೇಲೆ ಓದಲಾದ ಸರ್ಕಾರಿ ಆದೇಶದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಅವರ ಇಡೀ ಸೇವಾವಧಿಯಲ್ಲಿ ಗರಿಷ್ಠ 6 ತಿಂಗಳವರೆಗೆ ಅಂದರೆ 180 ದಿನಗಳ ಶಿಶುಪಾಲನಾ ರಜೆಯನ್ನು ಮಂಜೂರು ಮಾಡಲು ಅವಕಾಶವನ್ನು ಕಲ್ಪಿಸಲಾಗಿರುತ್ತದೆ.

ಒಂಟಿ ಪೋಷಕರಾಗಿರುವ (single male parent) ಅವಿವಾಹಿತ/ ವಿವಾಹ-ವಿಚ್ಚೇದಿತ/ ವಿಧುರ ಪುರುಷ ರಾಜ್ಯ ಸರ್ಕಾರಿ ನೌಕರರಿಗೂ ಮಕ್ಕಳ ಆರೈಕೆಗಾಗಿ ಶಿಶುಪಾಲನಾ ರಜೆಯ ಅವಶ್ಯಕತೆ ಇರುತ್ತದೆಂದು ತಿಳಿಸಿ ಈ ರಜೆಯ ಸೌಲಭವನ್ನು ಅಂತಹ ಪುರುಷ ಸರ್ಕಾರಿ ನೌಕರರಿಗೂ ಸಹ ವಿಸ್ತರಿಸಬೇಕೆಂದು ಕೋರಿ ಪ್ರಸ್ತಾವನೆಗಳು ಸ್ವೀಕೃತವಾಗಿರುತ್ತವೆ. ಮೂಲತಃ ಶಿಶುಪಾಲನಾ ರಜೆಯ ಸೌಲಭ್ಯವನ್ನು ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಮಾತ್ರ ವಿಸ್ತರಿಸಿದ್ದಾಗ್ಯೂ ಏಕಪೋಷಕರಾಗಿರುವ ಪುರುಷ ಸರ್ಕಾರಿ ನೌಕರರಿಗೂ ಈ ಸೌಲಭ್ಯವನ್ನು ವಿಸ್ತರಿಸುವುದು ನ್ಯಾಯಸಮ್ಮತವಾಗುವುದನ್ನು ಪರಿಗಣಿಸಿ ಸರ್ಕಾರ ಶಿಶುಪಾಲನಾ ರಜೆಯ ಸೌಲಭ್ಯವನ್ನು ಕೆಲವು ಷರತ್ತುಗಳಿಗೊಳಪಟ್ಟು ಒಂಟಿ ಪೋಷಕರಾಗಿರುವ (single male parent) ಅವಿವಾಹಿತ/ವಿವಾಹ-ವಿಚ್ಚೇದಿತ/ವಿಧುರ ಸರ್ಕಾರಿ ಪುರುಷ ನೌಕರರಿಗೂ ಸಹ ವಿಸ್ತರಿಸಲು ತೀರ್ಮಾನಿಸಿದೆ. ಅದರಂತೆ, ಈ ಆದೇಶ.

ಸರ್ಕಾರಿ ಆದೇಶ ಸಂಖ್ಯೆ:ಆಇ 3(ಇ) ಸೇನಿಸೇ 2023, ಬೆಂಗಳೂರು,ದಿನಾಂಕ:9.6.2023

ಪ್ರಸ್ತಾವನೆಯಲ್ಲಿ ವಿವರಿಸಿರುವ ಕಾರಣಗಳ ಹಿನ್ನೆಲೆಯಲ್ಲಿ, ಸರ್ಕಾರವು ಒಂಟಿ ಪೋಷಕರಾಗಿರುವ (single male parent) ಅವಿವಾಹಿತ/ವಿವಾಹ-ವಿಚ್ಛೇದಿತ/ವಿಧುರ ಪುರುಷ ರಾಜ್ಯ ಸರ್ಕಾರಿ ನೌಕರರಿಗೂ ಅವರ ಇಡೀ ಸೇವಾವಧಿಯಲ್ಲಿ ಗರಿಷ್ಠ 6 ತಿಂಗಳ ಅವಧಿಗೆ ಅಂದರೆ ಒಟ್ಟು 180 ದಿನಗಳಿಗೆ ಮೀರದಂತೆ ಶಿಶುಪಾಲನಾ ರಜೆಯ ಸೌಲಭ್ಯವನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮಂಜೂರು ಮಾಡಿದೆ. ರಜೆಯನ್ನು ಮಂಜೂರು ಮಾಡುವ ಸಕ್ಷಮ ಪ್ರಾಧಿಕಾರವು ದಿನಾಂಕ:21.06.2021 ರ ಸರ್ಕಾರಿ ಆದೇಶ ಸಂಖ್ಯೆ ಆಇ 4(ಇ) ಸೇನಿಸೇ 2021 ರಲ್ಲಿ ವಿಧಿಸಲಾಗಿರುವ ಷರತ್ತುಗಳನ್ನು ಸಂದರ್ಭಾನುಸಾರ ಅನ್ವಯಿಸಿಕೊಂಡು ಶಿಶುಪಾಲನಾ ರಜೆಯನ್ನು ಮಂಜೂರು ಮಾಡತಕ್ಕದ್ದು.

ಯಾವುದೇ ಸಂದರ್ಭದಲ್ಲಿ ಶಿಶುಪಾಲನಾ ರಜೆಯನ್ನು ಪಡೆದ ಅವಧಿಯಲ್ಲಿ ಸಂಬಂಧಿತ ಪುರುಷ ನೌಕರರು ವಿವಾಹ ಮಾಡಿಕೊಂಡಲ್ಲಿ ಆ ದಿನಾಂಕದಿಂದ ಶಿಶುಪಾಲನಾ ರಜೆಯು ತಾನಾಗಿಯೇ ರದ್ದುಗೊಳ್ಳುತ್ತದೆ.

BIG NEWS: State government `Childcare leave for male employees': Important order from the government
Share. Facebook Twitter LinkedIn WhatsApp Email

Related Posts

ALERT : ರಾಜ್ಯಾದ್ಯಂತ ಬಿಸಿಲಿನ ತಾಪಕ್ಕೆ ಜನರು ತತ್ತರ : ತಾಪಮಾನ ಹೆಚ್ಚಳದಿಂದ `ಹೀಟ್ ಸ್ಟ್ರೋಕ್’ ಭೀತಿ !

11/03/2026 6:41 AM2 Mins Read

ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ: ರಾಜ್ಯದಲ್ಲಿ ಮಾರ್ಚ್ 27ರವರೆಗೆ ಸರ್ಕಾರಿ ಹುದ್ದೆಗಳ ಅಧಿಸೂಚನೆಗೆ ಬ್ರೇಕ್

11/03/2026 6:39 AM1 Min Read

ಪೋಷಕರೇ ಗಮನಿಸಿ : `ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

11/03/2026 6:35 AM2 Mins Read
Recent News

ALERT : ರಾಜ್ಯಾದ್ಯಂತ ಬಿಸಿಲಿನ ತಾಪಕ್ಕೆ ಜನರು ತತ್ತರ : ತಾಪಮಾನ ಹೆಚ್ಚಳದಿಂದ `ಹೀಟ್ ಸ್ಟ್ರೋಕ್’ ಭೀತಿ !

11/03/2026 6:41 AM

ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ: ರಾಜ್ಯದಲ್ಲಿ ಮಾರ್ಚ್ 27ರವರೆಗೆ ಸರ್ಕಾರಿ ಹುದ್ದೆಗಳ ಅಧಿಸೂಚನೆಗೆ ಬ್ರೇಕ್

11/03/2026 6:39 AM

ಪೋಷಕರೇ ಗಮನಿಸಿ : `ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

11/03/2026 6:35 AM

ALERT : ಭಾರತದಲ್ಲಿ ಲಕ್ಷಾಂತರ `ಆಂಡ್ರಾಯ್ಡ್ ಫೊನ್’ಗಳಿಗೆ ಹ್ಯಾಕಿಂಗ್ ಭೀತಿ : `CERT’ ಎಚ್ಚರಿಕೆ !

11/03/2026 6:33 AM
State News
KARNATAKA

ALERT : ರಾಜ್ಯಾದ್ಯಂತ ಬಿಸಿಲಿನ ತಾಪಕ್ಕೆ ಜನರು ತತ್ತರ : ತಾಪಮಾನ ಹೆಚ್ಚಳದಿಂದ `ಹೀಟ್ ಸ್ಟ್ರೋಕ್’ ಭೀತಿ !

By kannadanewsnow5711/03/2026 6:41 AM KARNATAKA 2 Mins Read

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಸೂರ್ಯನ ಪ್ರತಾಪ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಮಾರ್ಚ್ ಎರಡನೇ ವಾರ ಕಳೆಯುತ್ತಿದ್ದಂತೆ…

ನೇಮಕಾತಿ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆ: ರಾಜ್ಯದಲ್ಲಿ ಮಾರ್ಚ್ 27ರವರೆಗೆ ಸರ್ಕಾರಿ ಹುದ್ದೆಗಳ ಅಧಿಸೂಚನೆಗೆ ಬ್ರೇಕ್

11/03/2026 6:39 AM

ಪೋಷಕರೇ ಗಮನಿಸಿ : `ಭಾಗ್ಯಲಕ್ಷ್ಮಿ ಬಾಂಡ್’ ಹಣ ಪಡೆಯುವುದು ಹೇಗೆ? ಇಲ್ಲಿದೆ ಸಂಪೂರ್ಣ ಮಾಹಿತಿ

11/03/2026 6:35 AM

ಯಜಮಾನಿಯರಿಗೆ ಗುಡ್ ನ್ಯೂಸ್ : ಗೃಹಲಕ್ಷ್ಮೀ ಯೋಜನೆಯ ಡಿಸೆಂಬರ್ ಕಂತಿನ ಹಣ ಬಿಡುಗಡೆ

11/03/2026 6:10 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.