Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಾಳೆ ಬರುವ ಶಕ್ತಿಶಾಲಿ ಅಮಾವಾಸ್ಯೆಯಂದು ಈ ಹನುಮಾನ್ ಮಂತ್ರ ಪಠಿಸಿ, ದುಷ್ಟ ಶಕ್ತಿ ದೂರ

05/07/2025 7:26 PM

BIG NEWS: ಇನ್ಮುಂದೆ ದೇಶಾದ್ಯಂತ ‘BIS ಪ್ರಮಾಣೀಕೃತ ಹೆಲ್ಮೆಟ್’ ಧರಿಸುವುದು ಕಡ್ಡಾಯ: ಕೇಂದ್ರ ಸರ್ಕಾರ

05/07/2025 7:15 PM

ಯುವ ಏಕದಿನ ಇತಿಹಾಸದಲ್ಲಿ ಅತಿ ವೇಗದ 100 ರನ್ ಗಳಿಸಿ ದಾಖಲೆ ನಿರ್ಮಿಸಿದ ‘ವೈಭವ್ ಸೂರ್ಯವಂಶಿ’

05/07/2025 7:11 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `ರಾಜ್ಯ ಸರ್ಕಾರಿ ನೌಕರರ’ ಗಮನಕ್ಕೆ : ಹೊಸ ಹುದ್ದೆಗೆ ಹಾಜರಾಗುವ `ಸೇರಿಕೆ ಕಾಲ’ದ ನಿಯಮಗಳ ಕುರಿತು ಇಲ್ಲಿದೆ ಮಾಹಿತಿ
KARNATAKA

BIG NEWS : `ರಾಜ್ಯ ಸರ್ಕಾರಿ ನೌಕರರ’ ಗಮನಕ್ಕೆ : ಹೊಸ ಹುದ್ದೆಗೆ ಹಾಜರಾಗುವ `ಸೇರಿಕೆ ಕಾಲ’ದ ನಿಯಮಗಳ ಕುರಿತು ಇಲ್ಲಿದೆ ಮಾಹಿತಿ

By kannadanewsnow5719/12/2024 9:50 AM
vidhana soudha
vidhana soudha

ಬೆಂಗಳೂರು : ಸರ್ಕಾರಿ ನೌಕರನು ಒಂದು ಹೊಸ ಹುದ್ದೆಗೆ ಹಾಜರಾಗಲು ಅಥವಾ ಅವನನ್ನು ನಿಯುಕ್ತಿಗೊಳಿಸಿದ ಸ್ಥಳಕ್ಕೆ ಹೋಗಲು ಅನುಮತಿಸಲಾದ ಕಾಲವನ್ನು ನಾವು ಸೇರಿಕೆ ಕಾಲ ಎಂದು ಕರೆಯುತ್ತೆವೆ.

ಕರ್ನಾಟಕ ರಾಜ್ಯ ಸೇವಾ ನಿಯಮಗಳು 1958 ರ ನಿಯಮ 8 (24)

ಸೇರಿಕೆ ಕಾಲ ಸರ್ಕಾರಿ ನೌಕರನಿಗೆ ಯಾವ ಸಂದರ್ಭದಲ್ಲಿ ಲಭಿಸುತ್ತದೆ?

ಯಾರೇ ಒಬ್ಬ ಸರ್ಕಾರಿ ನೌಕರನು ಸರ್ಕಾರದ ಹಿತಾಸಕ್ತಿ ಮೇರೆಗೆ ವರ್ಗಾವಣೆಯಾದಾಗ, ಆತನಿಗೆ ಆ ಹುದ್ದೆಗೆ ಹೋಗಿ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಸೇರಿಕೆ ಕಾಲ ಸಿಗುತ್ತದೆ.

3.ಯಾವ ಸಂದರ್ಭದಲ್ಲಿ ಒಬ್ಬ ಸರ್ಕಾರಿ ನೌಕರನಿಗೆ ಸೇರಿಕೆ ಕಾಲ ಲಭಿಸುವದಿಲ್ಲ?

ಯಾರೇ ಒಬ್ಬ ಸರ್ಕಾರಿ ನೌಕರನನ್ನು ಯಾವುದೇ ಒಂದು ವಿಶೇಷ ಕರ್ತವ್ಯಕ್ಕೆ ತಾತ್ಕಾಲಿಕವಾಗಿ

ನಿಯೋಜಿಸಿದಾಗ ಮತ್ತು ಆತನ ಸ್ವಂತ ಕೋರಿಕೆಯ ಮೇಲೆ ವರ್ಗಾವಣೆಯಾದಾಗ ಆತನಿಗೆ ಆ

ಸ್ಥಳವನ್ನು ಹೋಗಿ ತಲುಪಲು ಬೇಕಾಗುವ ಪ್ರಯಾಣದ ಅವಧಿಯನ್ನು ಬಿಟ್ಟು ಆತನಿಗೆ ಯಾವುದೇ ಸೇರಿಕೆ ಕಾಲ ಲಭಿಸುವುವುದಿಲ್ಲ. ವಹಿಸಿಕೊಟ್ಟಿದ್ದರೆ, ಆತನು ತನ್ನ ಮುಂದಿನ ಕರ್ತವ್ಯದ ಕಾರ್ಯಾಭಾರವನ್ನು ಮುಂದಿನ ಕೆಲಸದ ದಿನದ ಪೂರ್ವಾಹ್ನದಲ್ಲಿಯೇ ತನ್ನ ಕರ್ತವ್ಯದ ಚಾರ್ಜನ್ನು ತೆಗೆದುಕೊಳ್ಳತಕ್ಕದ್ದು.

5.ಪೂರ್ವಾಹ್ನವೆಂದರೆ ಎಷ್ಟು ಗಂಟೆ?

12 ಗಂಟೆಯೊಳಗಿನ ಸಮಯವನ್ನು ಪೂರ್ವಾಹ್ನವೆಂದು ಕರೆಯುವರು.

6.ಯಾವುದೇ ಒಬ್ಬ ಸರ್ಕಾರಿ ನೌಕರನಿಗೆ ಸರ್ಕಾರದ ಹಿತಾಸಕ್ತಿಯಲ್ಲಿ ಅವನ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳ/ನಿವಾಸ ಬದಲಾವಣೆಯಾಗುವುಂತೆ ವರ್ಗಾವಣೆಯಾದಾಗ ಆತನಿಗೆ ಮುಂದಿನ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಲಭಿಸುವ ಸೇರಿಕೆ ಕಾಲಾವಧಿ ಎಷ್ಟು ತಿಳಿಸಿ?

ಯಾವುದೇ ಒಬ್ಬ ಸರ್ಕಾರಿ ನೌಕರನಿಗೆ ವರ್ಗಾವಣೆಯಿಂದ ಅವನ ಸ್ಥಳ/ನಿವಾಸ ಬದಲಾವಣೆಯಾದಾಗ ಆತನಿಗೆ ಮುಂದಿನ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಲಭಿಸುವ ಸೇರಿಕೆ ಕಾಲಾವಧಿ ಈ ಕೆಳಕಂಡಂತೆ ಇದೆ.

7.ಯಾವುದೇ ಒಬ್ಬ ಸರ್ಕಾರಿ ನೌಕರನಿಗೆ ಸರ್ಕಾರದ ಹಿತಾಸಕ್ತಿಯಲ್ಲಿ ಅವನ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳ/ನಿವಾಸ ಬದಲಾವಣೆಯಾಗುವುಂತೆ ವರ್ಗಾವಣೆಯಾದಾಗ ಆತನಿಗೆ ಮುಂದಿನ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಲು ಲಭಿಸುವ ಸೇರಿಕೆ ಕಾಲಾವಧಿ ಯಾವಾಗಿನಿಂದ ಪ್ರಾರಂಭವಾಗುತ್ತದೆ ತಿಳಿಸಿ?

ಯಾವುದೇ ಒಬ್ಬ ಸರ್ಕಾರಿ ನೌಕರನಿಗೆ ಸರ್ಕಾರದ ಹಿತಾಸಕ್ತಿಯಲ್ಲಿ ಅವನ ಕರ್ತವ್ಯ ನಿರ್ವಹಿಸುತ್ತಿರುವ ಸ್ಥಳ/ನಿವಾಸ ಬದಲಾವಣೆಯಾಗುವುಂತೆ ವರ್ಗಾವಣೆಯಾದಾಗ ಸೇರಿಕೆ ಕಾಲವು ಈ ಕೆಳಕಂಡಂತೆ ಪ್ರಾರಂಭವಾಗುತ್ತದೆ.

1.ಆತನು ತನ್ನ ಕರ್ತವ್ಯದ ಪ್ರಭಾರವನ್ನು ಪೂರ್ವಾಹ್ನದಲ್ಲಿ ವಹಿಸಿಕೊಟ್ಟಿದ್ದರೆ ಹಳೆಯ ಹುದ್ದೆಯ ಪ್ರಭಾರವನ್ನು ತ್ಯಜಿಸಿದ ದಿನದಿಂದ ಪ್ರಾರಂಭವಾಗುತ್ತದೆ. ಆತನು ತನ್ನ ಕರ್ತವ್ಯದ ಪ್ರಭಾರವನ್ನು ಅಪರಾಹ್ನದಲ್ಲಿ ವಹಿಸಿಕೊಟ್ಟಿದ್ದರೆ ಮುಂದಿನ ದಿನದಿಂದ ಸೇರಿಕೆ ಕಾಲವು ಪ್ರಾರಂಭವಾಗುತ್ತದೆ.

8.ಯಾವನೇ ಒಬ್ಬ ಸರ್ಕಾರಿ ನೌಕರನು ವರ್ಗಾವಣೆಗೊಂಡು, ಸೇರಿಕೆ ಕಾಲವಧಿಯಲ್ಲಿದ್ದಾಗ, ಆತನನ್ನು ಮೊದಲು ವರ್ಗಾವಣೆಗೊಳಿಸಿದ ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ವರ್ಗಾಯಿಸಿದಾಗ, ಆತನಿಗೆ ಲಭ್ಯವಾಗುವ ಸೇರಿಕೆ ಕಾಲವನ್ನು ತಿಳಿಸಿ.

ಆತನು ಪರಿಷ್ಕೃತ ಆದೇಶವನ್ನು ಪಡೆಯುವುದಕ್ಕಿಂತ ಮುಂಚೆ ಬಳಸಿಕೊಂಡಿದ್ದ ಸೇರಿಕೆ ಕಾಲವನ್ನು ಬಿಟ್ಟು ಆತನು ಹೊಸದಾಗಿ ಪರಿಷ್ಕೃತ ಆದೇಶವನ್ನು ಪಡೆದ ದಿನಾಂಕದಿಂದ ಹೊಸ ಸೇರಿಕೆ ಕಾಲವು ಬಳಸಿಕೊಳ್ಳಲು ಹಕ್ಕುಳ್ಳವನಾಗಿರುತ್ತಾನೆ.

9.ಯಾವನೇ ಒಬ್ಬ ಸರ್ಕಾರಿ ನೌಕರನು ವರ್ಗಾವಣೆಗೊಂಡು ಸೇರಿಕೆ ಕಾಲವಧಿಯಲ್ಲಿದ್ದಾಗ.ಆತನನ್ನು ಮೊದಲು ವರ್ಗಾವಣೆಗೊಳಿಸಿದ ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ವರ್ಗಾಯಿಸಿದಾಗ,ಆತನಿಗೆ ಲಭ್ಯವಾಗುವ ಸೇರಿಕೆ ಕಾಲ ಯಾವತ್ತಿನಿಂದ ಅಥವಾ ಎಲ್ಲಿಂದ ಪ್ರಾರಂಭವಾಗುತ್ತದೆ ತಿಳಿಸಿ.

ಯಾವನೇ ఒబ్బ ನೌಕರನು ವರ್ಗಾವಣೆಗೊಂಡು ಸೇರಿಕೆ ಕಾಲವಧಿಯಲ್ಲಿದ್ದಾಗ,ಆತನನ್ನು ಮೊದಲು ವರ್ಗಾವಣೆಗೊಳಿಸಿದ ಸ್ಥಳದಿಂದ ಇನ್ನೊಂದು ಸ್ಥಳಕ್ಕೆ ವರ್ಗಾಯಿಸಿದಾಗ, ಆತನು ಪರಿಷ್ಕೃತ ಆದೇಶವನ್ನು ಸ್ವೀಕರಿಸಿದ ಸ್ಥಳದಿಂದಲೇ ಆತನಿಗೆ ಸೇರಿಕೆ ಕಾಲವು ಪ್ರಾರಂಭವಾಗುತ್ತದೆ

10.ಯಾವನೇ ಒಬ್ಬ ಸರ್ಕಾರಿ ನೌಕರನನ್ನು ಅಮಾನತ್ತಿನಿಂದ ಬಿಡುಗಡೆಗೊಳಿಸಿ ಅಮಾನತ್ತಿಗೆ ಮುಂಚೆ ಅಥವಾ ಅಮಾನತ್ತಿನ ಮುಂಚಿನ ರಜೆಯ ನಿಕಟಪೂರ್ವದಲ್ಲಿ ಕೆಲಸ ಮಾಡುತ್ತಿದ್ದ ಸ್ಥಳದಲ್ಲಿಯೇ ಪುನರ ನೇಮಿಸಿದಾಗ ಆತನಿಗೆ ಸೇರಿಕೆ ಕಾಲವು ಲಭ್ಯವಾಗುತ್ತದೆಯೇ? ಇಂತಹ ಸಂದರ್ಭದಲ್ಲಿ ಯಾವುದೇ ಸೇರಿಕೆ ಕಾಲವು ಲಭ್ಯವಾಗುವುದಿಲ್ಲ.

11. ಯಾವನೇ ಒಬ್ಬ ಸರ್ಕಾರಿ ನೌಕರನನ್ನು ಅಮಾನತ್ತಿನಿಂದ ಬಿಡುಗಡೆಗೊಳಿಸಿ ಅಮಾನತ್ತಿಗೆ ಮುಂಚೆ ಅಥವಾ ಅಮಾನತ್ತಿನ ಮುಂಚಿನ ರಜೆಯ ನಿಕಟಪೂರ್ವದಲ್ಲಿ ಕೆಲಸ ಮಾಡುತ್ತಿದ್ದ ಸ್ಥಳವನ್ನು ಬಿಟ್ಟು ಬೇರೆ ಸ್ಥಳಕ್ಕೆ ನೇಮಿಸಿದಾಗ ಆತನಿಗೆ ಸೇರಿಕೆ ಕಾಲವು ಲಭ್ಯವಾಗುತ್ತದೆಯೇ? ಇಂತಹ ಸಂದರ್ಭದಲ್ಲಿ ಸೇರಿಕೆ ಕಾಲವು ಲಭ್ಯವಾಗುತ್ತದೆ. ಅಮಾನತ್ತಿನಿಂದ ಬಿಡುಗಡೆಗೊಳಿಸಿ ಪುನರ ನೇಮಕ ಮಾಡಿದ ಆದೇಶ ಸ್ವೀಕರಿಸಿದ ದಿನಾಂಕದ ನಂತರದ ದಿನದಿಂದ ಸೇರಿಕೆ ಕಾಲವು ಲಭ್ಯವಾಗುತ್ತದೆ.

12.ಯಾವನೇ ಒಬ್ಬ ಸರ್ಕಾರಿ ನೌಕರನನ್ನು ಅಮಾನತ್ತಿನಿಂದ ಬಿಡುಗಡೆಗೊಳಿಸಿ ಅಮಾನತ್ತಿನಲ್ಲಿದ್ದ ಅವಧಿಯಲ್ಲಿ ವಾಸಮಾಡಲು ಅನುಮತಿ ನೀಡಲಾಗಿದ್ದ ಸ್ಥಳವನ್ನು ಬಿಟ್ಟು ಬೇರೆ ಸ್ಥಳಕ್ಕೆ ನೇಮಕ ಮಾಡಿದಾಗ ಆತನಿಗೆ ಸೇರಿಕೆ ಕಾಲವು ಲಭ್ಯವಾಗುತ್ತದೆಯೇ? ಇಂತಹ ಸಂದರ್ಭದಲ್ಲಿ ಆತನಿಗೆ ಸೇರಿಕೆ ಕಾಲವು ಲಭ್ಯವಾಗುತ್ತದೆ.

 

 

BIG NEWS : ರಾಜ್ಯ ಸರ್ಕಾರಿ ನೌಕರರ ಗಮನಕ್ಕೆ : ʻNOCʼ ಪಡೆಯುವ ಕುರಿತು ಇಲ್ಲಿದೆ ಮಾಹಿತಿ BIG NEWS: 'State government employees' notice: Here's what the rules for 'joining period' for attending a new post
Share. Facebook Twitter LinkedIn WhatsApp Email

Related Posts

ನಾಳೆ ಬರುವ ಶಕ್ತಿಶಾಲಿ ಅಮಾವಾಸ್ಯೆಯಂದು ಈ ಹನುಮಾನ್ ಮಂತ್ರ ಪಠಿಸಿ, ದುಷ್ಟ ಶಕ್ತಿ ದೂರ

05/07/2025 7:26 PM3 Mins Read

‘ಆನ್ ಲೈನ್ ಗೇಮ್’ನಿಂದ ದೂರವಿರಿ: ಯುವಕರಿಗೆ ‘ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್’ ಕಿವಿಮಾತು

05/07/2025 6:34 PM1 Min Read

BREAKING: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ: ಕುಳಿತಲ್ಲೇ ಪ್ರಾಣ ಬಿಟ್ಟ 63 ವರ್ಷದ ವೃದ್ಧ

05/07/2025 6:19 PM1 Min Read
Recent News

ನಾಳೆ ಬರುವ ಶಕ್ತಿಶಾಲಿ ಅಮಾವಾಸ್ಯೆಯಂದು ಈ ಹನುಮಾನ್ ಮಂತ್ರ ಪಠಿಸಿ, ದುಷ್ಟ ಶಕ್ತಿ ದೂರ

05/07/2025 7:26 PM

BIG NEWS: ಇನ್ಮುಂದೆ ದೇಶಾದ್ಯಂತ ‘BIS ಪ್ರಮಾಣೀಕೃತ ಹೆಲ್ಮೆಟ್’ ಧರಿಸುವುದು ಕಡ್ಡಾಯ: ಕೇಂದ್ರ ಸರ್ಕಾರ

05/07/2025 7:15 PM

ಯುವ ಏಕದಿನ ಇತಿಹಾಸದಲ್ಲಿ ಅತಿ ವೇಗದ 100 ರನ್ ಗಳಿಸಿ ದಾಖಲೆ ನಿರ್ಮಿಸಿದ ‘ವೈಭವ್ ಸೂರ್ಯವಂಶಿ’

05/07/2025 7:11 PM

9 ತಿಂಗಳಿನಿಂದ ಕಾಯುತ್ತಿದ್ದ ದಿನ ಕೊನೆಗೂ ಬಂತು ; ದಾಖಲೆ ಮಟ್ಟಕ್ಕೆ ‘ಭಾರತ’..!

05/07/2025 6:59 PM
State News
KARNATAKA

ನಾಳೆ ಬರುವ ಶಕ್ತಿಶಾಲಿ ಅಮಾವಾಸ್ಯೆಯಂದು ಈ ಹನುಮಾನ್ ಮಂತ್ರ ಪಠಿಸಿ, ದುಷ್ಟ ಶಕ್ತಿ ದೂರ

By kannadanewsnow0905/07/2025 7:26 PM KARNATAKA 3 Mins Read

ಕತ್ತಲೆ ಆವರಿಸಿದಾಗ ದುಷ್ಟ ಶಕ್ತಿಗಳು ಹೆಚ್ಚು ಸಕ್ರಿಯವಾಗಿರುತ್ತವೆ ಎಂದು ಹೇಳಲಾಗುತ್ತದೆ. ಕತ್ತಲೆ ನಮ್ಮನ್ನು ಆವರಿಸುವ ಅಮಾವಾಸ್ಯೆಯ ದಿನದಂದು ದುಷ್ಟ ಶಕ್ತಿಗಳ…

‘ಆನ್ ಲೈನ್ ಗೇಮ್’ನಿಂದ ದೂರವಿರಿ: ಯುವಕರಿಗೆ ‘ಸಾಗರ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್’ ಕಿವಿಮಾತು

05/07/2025 6:34 PM

BREAKING: ಹಾಸನದಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ: ಕುಳಿತಲ್ಲೇ ಪ್ರಾಣ ಬಿಟ್ಟ 63 ವರ್ಷದ ವೃದ್ಧ

05/07/2025 6:19 PM

BREAKING: ಬೆಂಗಳೂರಲ್ಲಿ ಒಳಮೀಸಲಾತಿ ಸಮೀಕ್ಷೆ ವೇಳೆ ಕರ್ತವ್ಯಲೋಪ: ಇಂದು ಒಂದೇ ದಿನ ನಾಲ್ವರು ಅಧಿಕಾರಿಗಳು ಸಸ್ಪೆಂಡ್

05/07/2025 5:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.