Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ’ದ ಅಧ್ಯಕ್ಷರಾಗಿ ‘ಪುಷ್ಪರಾಜ್ ಶೆಟ್ಟಿ’ ಆಯ್ಕೆ

09/11/2025 10:13 PM

BREAKING : 2025ರ ‘SSC CHSL’ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ; ಡೌನ್ಲೋಡ್ ಮಾಡಲು ನೇರ ಲಿಂಕ್ ಇಲ್ಲಿದೆ!

09/11/2025 9:59 PM

BREAKING: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಿರುನಾಲೆಗೆ ಕಾರಿ ಬಿದ್ದು ಓರ್ವ ನಾಪತ್ತೆ, ಮೂವರಿಗೆ ಗಾಯ

09/11/2025 9:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಕರ್ತವ್ಯ’ದ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ.!
KARNATAKA

BIG NEWS : ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : `ಕರ್ತವ್ಯ’ದ ವೇಳೆ ಈ ನಿಯಮಗಳ ಪಾಲನೆ ಕಡ್ಡಾಯ.!

By kannadanewsnow5702/03/2025 10:05 AM

ಬೆಂಗಳೂರು : ಸರ್ಕಾರಿ ನೌಕರರ ಸೇವೆಗೆ ಸೇರಿದ ನಂತರ ನಡೆದುಕೊಳ್ಳಬೇಕಾದ ಕಡ್ಡಾಯ ಸೇವಾ ನಿಯಮಗಳನ್ನು ಕರ್ನಾಟಕ ರಾಜ್ಯ ನಾಗರಿಕ ಸೇವಾ (ನಡತೆ) ನಿಯಮಗಳು, 2021 ರಲ್ಲಿ ಪ್ರಕಟಿಸಲಾಗಿದ್ದು, ಇಲ್ಲಿದೆ ಸರ್ಕಾರಿ ಸೇವೆಗೆ ಸೇರಿದ ನಂತರ ನೌಕರರು ಪಾಲಿಸಬೇಕಾದ ಸಂಪೂರ್ಣ ಮಾಹಿತಿ.

ಸರ್ಕಾರಿ ನೌಕರ ಎಂದರೆ. ಕರ್ನಾಟಕ ರಾಜ್ಯದ ನಾಗರಿಕ ಸೇವಾ ಸದಸ್ಯನಾಗಿರುವ ಅಥವಾ ಕರ್ನಾಟಕ ರಾಜ್ಯದ ವ್ಯವಹಾರಗಳಿಗೆ ಸಂಬಂಧಪಟ್ಟ ನಾಗರಿಕ ಹುದ್ದೆಯನ್ನು ಧಾರಣ ಮಾಡಿರುವಂಥ ಯಾರೇ ವ್ಯಕ್ತಿ ಎಂದು ಅರ್ಥ ಹಾಗೂ ಅದು, ಯಾವ ವ್ಯಕ್ತಿಯ ಸೇವೆಗಳನ್ನು ತಾತ್ಕಾಲಿಕವಾಗಿ ಭಾರತ ಸರ್ಕಾರ, ಮತ್ತೊಂದು ರಾಜ್ಯ ಸರ್ಕಾರ, ಕಂಪನಿ, ನಿಗಮ, ನಿಗಮಿತವಾಗಿರುವ ಮಂಡಳಿ. ಸಂಸ್ಥೆ ಅಥವಾ ನಿಗಮಿತವಾಗಿಲ್ಲದಿರುವ ಸ್ಥಳೀಯ ಪ್ರಾಧಿಕಾರದ ಸೇವೆಗೆ ನಿಯೋಜಿಸಲಾಗಿದೆಯೋ ಅಂಥ ವ್ಯಕ್ತಿಯು ರಾಜ್ಯದ ಸಂಚಿತ ನಿಧಿಯ ಹೊರತಾದ ಇತರ ಯಾವುದೇ ಮೂಲಗಳಿಂದ ವೇತನ ಪಡೆದುಕೊಳ್ಳುತ್ತಿರುವುದು ಏನೇ ಇದ್ದರೂ ಅಂಥ ವ್ಯಕ್ತಿಯನ್ನು ಒಳಗೊಳ್ಳುತ್ತದೆ:

ವಿವರಣೆ: ಈ ನಿಯಮಗಳಲ್ಲಿ ಉಲ್ಲೇಖಿಸಲಾಗಿರುವ ‘ಸರ್ಕಾರಿ ನೌಕರ” ಎಂದರೆ ಈ ನಿಯಮಗಳು ಅನ್ವಯವಾಗುವ ಯಾವುದೇ ವರ್ಗ ಅಥವಾ ಸೇವೆಗೆ ಸೇರಿದ ಅಧಿಕಾರಿ ಮತ್ತು ಸಿಬ್ಬಂದಿಗಳು

3 ಸರ್ಕಾರಿ ನೌಕರನಿಗೆ ಸಂಬಂಧಪಟ್ಟಂತೆ ‘ಕುಟುಂಬದ ಸದಸ್ಯರು’ ಎಂಬುದು:

(1) ಸಂದರ್ಭಾನುಸಾರ ಸರ್ಕಾರಿ ನೌಕರನ/ ನೌಕರಳ ಪತ್ನಿಯು ಅಥವಾ ಪತಿಯು, ಸರ್ಕಾರಿ ನೌಕರನ/ನೌಕರಳ ಜೊತೆ ವಾಸವಾಗಿರಲಿ ಅಥವಾ ಇಲ್ಲದಿರಲಿ ಅವರನ್ನು ಒಳಗೊಳ್ಳುತ್ತದೆ. ಆದರೆ ಸಕ್ಷಮ ನ್ಯಾಯಾಲಯದ ಡಿಕ್ರಿಯ ಅಥವಾ ಆದೇಶದ ಮೂಲಕ ಸರ್ಕಾರಿ ನೌಕರನಿಂದ/ ನೌಕರಳಿಂದ ಬೇರ್ಪಟ್ಟಿರುವ ಸಂದರ್ಭಾನುಸಾರ ಪತ್ನಿ ಅಥವಾ ಪತಿಯನ್ನು ಒಳಗೊಳ್ಳುವುದಿಲ್ಲ.

(ii) ಸರ್ಕಾರಿ ನೌಕರನ ಮತ್ತು ಸಂಪೂರ್ಣವಾಗಿ ಆತನ ಮೇಲೆಯೇ ಅವಲಂಬಿಸಿರುವ ಮಗನನ್ನು ಅಥವಾ ಮಗಳನ್ನು ಅಥವಾ ಮಲ-ಮಗ ಅಥವಾ ಮಲ-ಮಗಳನ್ನು ಒಳಗೊಳ್ಳುತ್ತದೆ. ಆದರೆ ಸರ್ಕಾರಿ ನೌಕರನ ಮೇಲೆ ಯಾವುದೇ ರೀತಿಯಲ್ಲಿ ಅವಲಂಬಿಸಿರದ ಅಥವಾ ಯಾವುದೇ ಕಾನೂನಿನ ಮೂಲಕ ಅಥವಾ ಅದರ ಮೇರೆಗೆ ಯಾವ ಮಗುವಿನ ಅಥವಾ ಮಲ ಮಗುವಿನ ಅಭಿರಕ್ಷೆಯನ್ನು ಸರ್ಕಾರಿ ನೌಕರನಿಗೆ ನೀಡಲಾಗಿಲ್ಲವೋ G ಮಗುವನ್ನು ಅಥವಾ ಮಲ-ಮಗುವನ್ನು ಒಳಗೊಳ್ಳುವುದಿಲ್ಲ

(iii) ಸರ್ಕಾರಿ ನೌಕರನಿಗೆ ಅಥವಾ ಸರ್ಕಾರಿ ನೌಕರನ/ನೌಕರಳ ಪತ್ನಿಗೆ ಅಥವಾ ಪತಿಗೆ ರಕ್ತ ಸಂಬಂಧದ ಅಥವಾ ವಿವಾಹದ ಮೂಲಕ ಸಂಬಂಧಿಯಾದ ಪೂರ್ಣವಾಗಿ ಸರ್ಕಾರಿ ನೌಕರರನ್ನೇ ಅವಲಂಬಿಸಿರುವ ಯಾರೇ ಇತರ ವ್ಯಕ್ತಿಯನ್ನು ಒಳಗೊಳ್ಳುತ್ತದೆ:

4 “ನಿಯಮಿಸಿದ ಪ್ರಾಧಿಕಾರ’ ಎಂದರೆ,-

(i) ಕರ್ನಾಟಕ ನ್ಯಾಯಿಕ ಸೇವೆಗೆ ಸೇರಿದ ವ್ಯಕ್ತಿಗಳ ಸಂದರ್ಭದಲ್ಲಿ ಕರ್ನಾಟಕದ ಉಚ್ಚ ನ್ಯಾಯಾಲಯ:

(ii) ಸಮೂಹ ಎ ದರ್ಜೆಯ ಯಾವುದೇ ಹುದ್ದೆಯನ್ನು ಹೊಂದಿರುವ ಮತ್ತು ಸಮೂಹ – ಬಿ ಯಲ್ಲಿ ತಹಶೀಲ್ದಾರ್ ದರ್ಜೆ-11 ಹುದ್ದೆಯನ್ನು ಹೊಂದಿರುವ ಸರ್ಕಾರಿ ನೌಕರನ

ಸಂಬಂಧದಲ್ಲಿ ಸರ್ಕಾರ:

(iii) ಸಮೂಹ ಬಿ ಯಲ್ಲಿನ ತಹಶೀಲ್ದಾರ್ ದರ್ಜೆ-II ಅನ್ನು ಹೊರತುಪಡಿಸಿ, ಸಮೂಹ-ಬಿ, ಸಮೂಹ-ಸಿ ಹಾಗೂ ಸಮೂಹ-ಡಿ ಯಲ್ಲಿನ ಯಾವುದೇ ಹುದ್ದೆಯನ್ನು ಹೊಂದಿರುವ ಸರ್ಕಾರಿ ನೌಕರನ ಸಂಬಂಧದಲ್ಲಿ ಇಲಾಖೆಯ ಮುಖ್ಯಸ್ಥ:

ಪರಂತು ಇಲಾಖಾ ಮುಖ್ಯಸ್ಥರು ಆದೇಶದ ಮೂಲಕ ತಮ್ಮ ಆಡಳಿತ ನಿಯಂತ್ರಣಕ್ಕೆ ಒಳಪಡುವ ಯಾವುದೇ ಇತರೆ ಪ್ರಾಧಿಕಾರಿಗಳನ್ನು ಈ ಖಂಡದ ಉದ್ದೇಶಕ್ಕಾಗಿ ನಿಯಮಿತ ಪ್ರಾಧಿಕಾರವೆಂದು ನಿರ್ದಿಷ್ಟಪಡಿಸಬಹುದು.

ವಿವರಣೆ.- ಅನ್ಯ ಸೇವೆಯ ಮೇಲಿರುವ ಅಥವಾ ಇತರ ಯಾವುದೇ ಇಲಾಖೆಗೆ ಅಥವಾ

ಇತರ ಯಾವುದೇ ಸರ್ಕಾರಕ್ಕೆ ಪ್ರತಿನಿಯೋಜನೆಗೊಂಡಿರುವ, ಸರ್ಕಾರಿ ನೌಕರನ ಸಂದರ್ಭದಲ್ಲಿ,

ಸಂದರ್ಭಾನುಸಾರ (ii)ನೇ ಉಪ-ಖಂಡ ಅಥವಾ (iii)ನೇ ಉಪ-ಖಂಡದಲ್ಲಿ ನಿರ್ದಿಷ್ಟಪಡಿಸಿದ ಪ್ರಾಧಿಕಾರಗಳೇ ನಿಯಮಿಸಿದ ಪ್ರಾಧಿಕಾರವಾಗಿರತಕ್ಕದ್ದು.

(iv) ಅಂಥ ಪ್ರಾಧಿಕಾರವನ್ನು ಸರ್ಕಾರವು ಆ ಬಗ್ಗೆ ಹೊರಡಿಸಲಾದ ಆದೇಶದ ಮೂಲಕ ಗೊತ್ತುಪಡಿಸತಕ್ಕದ್ದು.

ಈ ನಿಯಮಗಳ ವಿವಿಧ ಉಪಬಂಧಗಳ ಉದ್ದೇಶಕ್ಕಾಗಿ ವಿವಿಧ ಪ್ರಾಧಿಕಾರಿಗಳನ್ನು ನಿರ್ದಿಷ್ಟಪಡಿಸಬಹುದು.

(2) ಈ ನಿಯಮಗಳಲ್ಲಿ ಬಳಸಿದ ಆದರೆ ಪರಿಭಾಷಿಸಿರದ ಇನ್ನಿತರ ಎಲ್ಲಾ ಪದಗಳು ಮತ್ತು ಪದಾವಳಿಗಳು, ಕರ್ನಾಟಕ ನಾಗರಿಕ ಸೇವಾ ನಿಯಮಗಳಲ್ಲಿ ಅಥವಾ ಕರ್ನಾಟಕ ರಾಜ್ಯ ನಾಗರಿಕ ಸೇವಾ ಅಧಿನಿಯಮ, 1978ರ (1990ರ ಕರ್ನಾಟಕ ಅಧಿನಿಯಮ 14) ಅಡಿಯಲ್ಲಿ ರಚಿಸಲಾದ ಅಥವಾ ರಚಿಸಲಾಗಿದೆಯೆಂದು ಭಾವಿಸಲಾದ ಯಾವುದೇ ಇತರ ನಿಯಮಗಳಲ್ಲಿ ಅವುಗಳಿಗೆ ನೀಡಲಾದ ಅರ್ಥವನ್ನೇ ಇವುಗಳಿಗೂ ನೀಡಲಾಗಿದೆ ಎಂದು ಭಾವಿಸತಕ್ಕದ್ದು.

3. ಸಾಮಾನ್ಯ ತತ್ತ್ವಗಳು.

(1) ಪ್ರತಿಯೊಬ್ಬ ಸರ್ಕಾರಿ ನೌಕರನು, ಎಲ್ಲ ಕಾಲಗಳಲ್ಲಿಯೂ, –

(i) ಸಂಪೂರ್ಣ ನೀತಿ ನಿಷ್ಠೆಯನ್ನು ಹೊಂದಿರತಕ್ಕದ್ದು,

(ii) ಕರ್ತವ್ಯ ಶ್ರದ್ಧೆಯನ್ನು ಹೊಂದಿರತಕ್ಕದ್ದು

(iii) ಸರ್ಕಾರಿ ನೌಕರನಿಗೆ ತಕ್ಕದ್ದಲ್ಲದ ಯಾವುದನ್ನೂ ಮಾಡತಕ್ಕದ್ದಲ್ಲ: ಮತ್ತು

(iv) ಯಾವುದೇ ಅಪರಾಧಿಕ ಚಟುವಟಿಕೆಯಲ್ಲಿ ತೊಡಗತಕ್ಕದ್ದಲ್ಲ.

(2) ಪ್ರತಿಯೊಬ್ಬ ಸರ್ಕಾರಿ ನೌಕರನು,-

(i) ಉನ್ನತ ನೈತಿಕ ಆದರ್ಶಗಳನ್ನು ಹೊಂದಿರತಕ್ಕದ್ದು:

(ii) ರಾಜಕೀಯವಾಗಿ ತಟಸ್ಥನಾಗಿರತಕ್ಕದ್ದು:

(iii) ತನ್ನ ಕರ್ತವ್ಯಗಳನ್ನು ನಿರ್ವಹಿಸುವಲ್ಲಿ, ಅರ್ಹತಾದಾಯಕ, ನ್ಯಾಯ ಸಮ್ಮತ ಮತ್ತು ನಿಷ್ಪಕ್ಷಪಾತತೆಯ ಮೂಲ ತತ್ತ್ವಗಳನ್ನು ಅಳವಡಿಸಿಕೊಂಡಿರತಕ್ಕದ್ದು;

(iv) ಉತ್ತರದಾಯಿತ್ಯ ಮತ್ತು ಪಾರದರ್ಶಕತೆಯನ್ನು ನಿರ್ವಹಿಸತಕ್ಕದ್ದು

(v) ಸಾರ್ವಜನಿಕರಿಗೆ ಸ್ಪಂದನಾಶೀಲನಾಗಿರತಕ್ಕದ್ದು ಹಾಗೂ

(vi) ಸಾರ್ವಜನಿಕರೊಂದಿಗೆ ಸೌಜನ್ಯ ಹಾಗೂ ವಿನಯದಿಂದ ವರ್ತಿಸತಕ್ಕದ್ದು.

(3) ಮೇಲ್ವಿಚಾರಣಾ ಹುದ್ದೆಯನ್ನು ಹೊಂದಿರುವ ಪ್ರತಿಯೊಬ್ಬ ಸರ್ಕಾರಿ ನೌಕರನು, ತತ್ಕಾಲದಲ್ಲಿ ತನ್ನ ನಿಯಂತ್ರಣಕ್ಕೆ ಮತ್ತು ಅಧಿಕಾರಕ್ಕೆ ಒಳಪಟ್ಟಿರುವ ಎಲ್ಲಾ ಸರ್ಕಾರಿ ನೌಕರರ ನೀತಿ ನಿಷ್ಠೆಯನ್ನು ಮತ್ತು ಕರ್ತವ್ಯ ಶ್ರದ್ಧೆಯನ್ನು ಸುನಿಶ್ಚಿತಪಡಿಸಿಕೊಳ್ಳಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳತಕ್ಕದ್ದು.

(4) ಪ್ರತಿಯೊಬ್ಬ ಸರ್ಕಾರಿ ನೌಕರನು, ತನ್ನ ಕರ್ತವ್ಯಗಳನ್ನು ನಿರ್ವಹಿಸುವಾಗ ಸೌಜನ್ಯಯುತವಾದ ವರ್ತನೆಯನ್ನು ಹೊಂದಿರತಕ್ಕದ್ದು.

(5) ಪ್ರತಿಯೊಬ್ಬ ಸರ್ಕಾರಿ ನೌಕರನು,-

(i) ಸಂವಿಧಾನ ಮತ್ತು ಪ್ರಜಾಸತ್ತಾತ್ಮಕ ಮೌಲ್ಯಗಳ ಸರ್ವೋಚ್ಛತೆಗೆ ಸ್ವತಃ ಬದ್ಧನಾಗಿರತಕ್ಕದ್ದು ಮತ್ತು ಎತ್ತಿ ಹಿಡಿಯತಕ್ಕದ್ದು

(ii) ಭಾರತದ ಸಾರ್ವಭೌಮತ್ರ್ಯ ಮತ್ತು ಅಖಂಡತೆ, ರಾಷ್ಟ್ರದ ಭದ್ರತೆ, ಸಾರ್ವಜನಿಕ ಸುವ್ಯವಸ್ಥೆ, ಸಭ್ಯತೆ ಮತ್ತು ನೈತಿಕತೆಯನ್ನು ಸಮರ್ಥಿಸತಕ್ಕದ್ದು ಮತ್ತು ಎತ್ತಿ ಹಿಡಿಯತಕ್ಕದ್ದು;

(iii) ಸಾರ್ವಜನಿಕ ಹಿತದೃಷ್ಟಿಯಿಂದ ಮಾತ್ರವೇ ನಿರ್ಧಾರಗಳನ್ನು ತೆಗೆದುಕೊಳ್ಳತಕ್ಕದ್ದು ಮತ್ತು ಸಾರ್ವಜನಿಕ ಸಂಪನ್ಮೂಲಗಳನ್ನು ಸಮರ್ಥವಾಗಿ, ಪರಿಣಾಮಕಾರಿಯಾಗಿ ಮತ್ತು ಮಿತವ್ಯಯಕರವಾಗಿ ಬಳಸತಕ್ಕದ್ದು ಅಥವಾ ಬಳಸುವಂತೆ ಮಾಡತಕ್ಕದ್ದು.

BIG NEWS: State government employees should note: It is mandatory to follow these rules while on duty
Share. Facebook Twitter LinkedIn WhatsApp Email

Related Posts

‘ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ’ದ ಅಧ್ಯಕ್ಷರಾಗಿ ‘ಪುಷ್ಪರಾಜ್ ಶೆಟ್ಟಿ’ ಆಯ್ಕೆ

09/11/2025 10:13 PM1 Min Read

BREAKING: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಿರುನಾಲೆಗೆ ಕಾರಿ ಬಿದ್ದು ಓರ್ವ ನಾಪತ್ತೆ, ಮೂವರಿಗೆ ಗಾಯ

09/11/2025 9:48 PM1 Min Read

ಲೋಕಾಯುಕ್ತರ ಆಸ್ತಿ ಬಹಿರಂಗಕ್ಕೂ ಕಾಯ್ದೆ ತಿದ್ದುಪಡಿ ಮಾಡಿ: ಸಚಿವ ಹೆಚ್.ಕೆ ಪಾಟೀಲ್ ಗೆ MLC ರಮೇಶ್ ಬಾಬು ಪತ್ರ

09/11/2025 9:32 PM2 Mins Read
Recent News

‘ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ’ದ ಅಧ್ಯಕ್ಷರಾಗಿ ‘ಪುಷ್ಪರಾಜ್ ಶೆಟ್ಟಿ’ ಆಯ್ಕೆ

09/11/2025 10:13 PM

BREAKING : 2025ರ ‘SSC CHSL’ ಪರೀಕ್ಷೆಯ ಪ್ರವೇಶ ಪತ್ರ ಬಿಡುಗಡೆ ; ಡೌನ್ಲೋಡ್ ಮಾಡಲು ನೇರ ಲಿಂಕ್ ಇಲ್ಲಿದೆ!

09/11/2025 9:59 PM

BREAKING: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಿರುನಾಲೆಗೆ ಕಾರಿ ಬಿದ್ದು ಓರ್ವ ನಾಪತ್ತೆ, ಮೂವರಿಗೆ ಗಾಯ

09/11/2025 9:48 PM

ಕಾಲೇಜುಗಳು ತಮ್ಮ ಪ್ರವೇಶ ರದ್ದುಗೊಳಿಸುವ ವಿದ್ಯಾರ್ಥಿಗಳಿಗೆ ‘ಶುಲ್ಕ’ ಮರು ಪಾವತಿಸುವುದು ಕಡ್ಡಾಯ ; UGC

09/11/2025 9:48 PM
State News
KARNATAKA

‘ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ’ದ ಅಧ್ಯಕ್ಷರಾಗಿ ‘ಪುಷ್ಪರಾಜ್ ಶೆಟ್ಟಿ’ ಆಯ್ಕೆ

By kannadanewsnow0909/11/2025 10:13 PM KARNATAKA 1 Min Read

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ವಾರ್ತಾಭಾರತಿ ಪತ್ರಿಕೆಯ ಹಿರಿಯ ಪತ್ರಕರ್ತ ಪುಷ್ಪರಾಜ್ ಶೆಟ್ಟಿ…

BREAKING: ರಸ್ತೆ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಿರುನಾಲೆಗೆ ಕಾರಿ ಬಿದ್ದು ಓರ್ವ ನಾಪತ್ತೆ, ಮೂವರಿಗೆ ಗಾಯ

09/11/2025 9:48 PM

ಲೋಕಾಯುಕ್ತರ ಆಸ್ತಿ ಬಹಿರಂಗಕ್ಕೂ ಕಾಯ್ದೆ ತಿದ್ದುಪಡಿ ಮಾಡಿ: ಸಚಿವ ಹೆಚ್.ಕೆ ಪಾಟೀಲ್ ಗೆ MLC ರಮೇಶ್ ಬಾಬು ಪತ್ರ

09/11/2025 9:32 PM

GOOD NEWS: ರಾಜ್ಯದಲ್ಲಿ 18,000 ಶಿಕ್ಷಕರ ನೇಮಕಾತಿಗೆ ಸರ್ಕಾರ ತೀರ್ಮಾನ: ಸಚಿವ ಮಧು ಬಂಗಾರಪ್ಪ

09/11/2025 9:01 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.