Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Rain Alert : `ವಾಯುಭಾರ ಕುಸಿತ’ : ರಾಜ್ಯದಲ್ಲಿ ಇನ್ನೂ 1 ವಾರ ಭಾರೀ ಮಳೆ ಮುನ್ಸೂಚನೆ.!

23/10/2025 6:06 AM

SHOCKING: ಬೆಂಗಳೂರಲ್ಲಿ ದೀಪಾವಳಿ ಪಟಾಕಿ ಸಿಡಿದು 190 ಮಂದಿಗೆ ಗಾಯ : ಶಾಶ್ವತವಾಗಿ ಕಣ್ಣು ಕಳೆದುಕೊಂಡ 8 ಜನ!

23/10/2025 6:06 AM

ಉದ್ಯೋಗವಾರ್ತೆ : ಸರ್ಕಾರದ ವಿವಿಧ ಇಲಾಖೆಗಳಲ್ಲಿ `14,000’ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | Govt Jobs 2025

23/10/2025 6:02 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯ ಸರ್ಕಾರದಿಂದ 3 ತಿಂಗಳಲ್ಲಿ `ಇ-ಖಾತಾ’ ನೀಡಲು ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!
KARNATAKA

BIG NEWS: ರಾಜ್ಯ ಸರ್ಕಾರದಿಂದ 3 ತಿಂಗಳಲ್ಲಿ `ಇ-ಖಾತಾ’ ನೀಡಲು ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ.!

By kannadanewsnow5719/02/2025 6:27 AM

ಬೆಂಗಳೂರು: ರಾಜ್ಯ ಸರ್ಕಾರದಿಂದ ಇ-ಖಾತಾ ವಿತರಣೆ ಸಂಬಂಧ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. 3 ತಿಂಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯಲು ಬಾಕಿ ಇರುವ ಎಲ್ಲಾ ಆಸ್ತಿಗಳಿಗೆ 3 ತಿಂಗಳ ಗಡುವು ನೀಡಲಾಗಿದೆ. ಇದಕ್ಕಾಗಿ SOP ಜಾರಿಗೊಳಿಸಿದೆ. ಈ ಮೂಲಕ ರಾಜ್ಯದ ಆಸ್ತಿ ಮಾಲೀಕರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ.

ಈ ಸಂಬಂಧ ಪೌರಾಡಳಿತ ನಿರ್ದೇಶನಾಲಯದ ನಿರ್ದೇಶಕರು ಇ-ಆಸ್ತಿ ತಂತ್ರಾಂಶದ ಮೂಲಕ ಇ-ಖಾತಾ ನೀಡುವ ಪ್ರಮಾಣಿಕ ಕಾರ್ಯವಿಧಾನವನ್ನು ಜಾರಿಗೊಳಿಸಿದ್ದಾರೆ. ಅದರಲ್ಲಿ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯಲು ಬಾಕಿ ಇರುವ ಎಲ್ಲಾ ಆಸ್ತಿಗಳಿಗೆ 03 ತಿಂಗಳೊಳಗಾಗಿ ನೀಡಲು ಉದ್ದೇಶಿಸಲಾಗಿರುತ್ತದೆ. ಆದ್ದರಿಂದ, ಇ-ಖಾತಾ ನೀಡಲು ಅಭಿಯಾನ ಕೈಗೊಂಡು ಕೆಳಕಂಡ ಕಾರ್ಯವಿಧಾನವನ್ನು ಅನುಸರಿಸುವುದು ಅಂತ ಹೇಳಿದ್ದಾರೆ.

1) ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ನೀಡಲು ಬಾಕಿಯಿರುವ ಆಸ್ತಿಗಳ ಗುರುತಿಸುವುದು. ಇ- ಖಾತಾ ಪಡೆಯಲು ಗುರುತಿಸಲಾದ ಆಸ್ತಿಗಳ ಮಾಲೀಕರು ಇ-ಖಾತಾ ಪಡೆಯಲು ಬೇಕಾದ ದಾಖಲೆಗಳನ್ನು ಸಲ್ಲಿಸಲು ಮಾಹಿತಿ ನೀಡುವುದು.
2) ನಗರ ಸ್ಥಳೀಯ ಸಂಸ್ಥೆಗಳಲ್ಲಿ ಇ-ಖಾತಾ ಪಡೆಯಲು ಮಾಹಿತಿ ನೀಡುವ ಸಲುವಾಗಿ ಸಹಾಯವಾಣಿಯನ್ನು ಸ್ಥಾಪಿಸುವುದು. ಸಹಾಯವಾಣಿಯಲ್ಲಿ ಇ-ಖಾತಾ ಸಂಬಂಧಿಸಿದ ವಿಷಯದ ಕುರಿತು ಪರಿಪೂರ್ಣ ಮಾಹಿತಿ ಇರುವ ಸಿಬ್ಬಂದಿಯನ್ನು ಸಹಾಯವಾಣಿಗೆ ನೇಮಕ ಮಾಡುವುದು. ಸಹಾಯವಾಣಿಯ ಸಂಖ್ಯೆ ಮತ್ತು WhatsApp ಸಂಖ್ಯೆಯನ್ನು ವ್ಯಾಪಕವಾಗಿ ಪುಚುರಪಡಿಸುವುದು.
3) ಇ-ಖಾತಾ ಅಭಿಯಾನದ ಕುರಿತು ಪ್ರಚಾರ ಮಾಡಲು ನಗರ ಸ್ಥಳೀಯ ಸಂಸ್ಥೆಗಳ ವಾಹನದಲ್ಲಿ ಮುದ್ರಿತ ಧ್ವನಿ (ಆಡಿಯೋ), ಪುಚುರಪಡಿಸುವುದು. ಈ ಕುರಿತು ಪ್ರಕಟಣೆಗಳನ್ನು ಹೊರಡಿಸುವುದು. 4) ಇ-ಖಾತಾ ಅಭಿಯಾನದ ಬಗ್ಗೆ ಲಭ್ಯವಿರುವ ಮೊಬೈಲ್ ಸಂಖ್ಯೆಗಳಿಗೆ SMS ಮೂಲಕ ಮಾಹಿತಿಯನ್ನು ನೀಡುವುದು (General message).
5) ಇ-ಖಾತಾ ಪಡೆಯಲು ಅವಶ್ಯವಿರುವ ದಾಖಲೆಗಳ ಪಟ್ಟಿಯನ್ನು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಪುಚುರಪಡಿಸುವುದು. ಪಡೆಯಬೇಕಾದ ಕನಿಷ್ಟ ದಾಖಲೆಗಳ ವಿವರ ಈ ಕೆಳಕಂಡಂತಿದೆ:
೩) “ಎ” ರಿಜಿಸ್ಟರ್‌ನಲ್ಲಿ ದಾಖಲಿರುವ ಆಸ್ತಿಗಳಿಗೆ ಇ-ಖಾತಾ ನೀಡಲು ಪಡೆಯಬೇಕಾದ ದಾಖಲೆಗಳು.
1) ಆಸ್ತಿಗೆ ಸಂಬಂಧಿಸಿದಂತೆ ಸ್ವತ್ತಿನ ಮಾಲೀಕತ್ವ ಸಾಬೀತುಪಡಿಸುವ ನೋಂದಾಯಿತ ಮಾರಾಟ ಪತ್ರಗಳು/ದಾನಪತ್ರ/ವಿಭಾಗ ಪತ್ರಗಳು/ಸರ್ಕಾರ ಅಥವಾ ಸರ್ಕಾರದ ನಿಗಮ ಮಂಡಳಿಗಳಿಂದ ನೀಡಲಾದ ಹಕ್ಕು ಪತ್ರಗಳು/ಮಂಜೂರಾತಿ ಪತ್ರಗಳು/ಕಂದಾಯ ಇಲಾಖೆಯಿಂದ 94 cc ಅಡಿ ನೀಡಲಾದ ಹಕ್ಕು ಪತ್ರ.
2) ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಯಾದ ದೃಡೀಕೃತ ಪ್ರತಿ ಮತ್ತು ನಿವೇಶನಗಳ ಬಿಡುಗಡೆ ಪತ್ರ.
3) ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ. 4) ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ. 5) ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. 6) ಮಾಲೀಕರ ಗುರುತಿನ ದಾಖಲೆ ಪ್ರತಿ.

b) “ಬಿ” ರಿಜಿಸ್ಟರ್‌ನಲ್ಲಿ ದಾಖಲಿಸಬೇಕಾದ ಆಸ್ತಿಗಳಿಗೆ ಇ-ಖಾತಾ ನೀಡಲು ಪಡೆಯಬೇಕಾದ
ದಾಖಲೆಗಳು:
ಆಸ್ತಿಗೆ ಸಂಬಂಧಿಸಿದಂತೆ ಮಾಲೀಕತ್ವ ಸಾಬೀತುಪಡಿಸುವ ದಿನಾಂಕ:10-09-2024ರ ಪೂರ್ವದಲ್ಲಿ ನೋಂದಾಯಿತ ಮಾರಾಟ ಪತ್ರಗಳು/ದಾನಪತ್ರ/ವಿಭಾಗ ಪತ್ರಗಳು/ಹಕ್ಕು ಖುಲಾಸೆ ಪತ್ರಗಳು.
ಪ್ರಸಕ್ತ ಸಾಲಿನವರೆಗೆ ಋಣಭಾರ ಪ್ರಮಾಣ ಪತ್ರ.
•ಚಾಲ್ತಿ ಸಾಲಿನ ಆಸ್ತಿ ತೆರಿಗೆ ಪಾವತಿ ರಸೀದಿ,
·ಮಾಲೀಕರ ಫೋಟೋ ಮತ್ತು ಸ್ವತ್ತಿನ ಫೋಟೋ. ಮಾಲೀಕರ ಗುರುತಿನ ದಾಖಲೆ ಪ್ರತಿ

6) ದಿನಾಂಕ:01-08-2023 ರಲ್ಲಿ ನಿರ್ದೇಶನಾಲಯದಿಂದ ಹೊರಡಿಸಲಾದ ಸುತ್ತೋಲೆಯಂತೆ ಇ-ಖಾತಾ ಪಡೆಯಲು ಅರ್ಜಿ ಸ್ವೀಕೃತವಾದ ಒಂದು ದಿನದಲ್ಲಿ ಸಹಾಯವಾಣಿಯಲ್ಲಿ ದಾಖಲೆಗಳನ್ನು ಇ-ಆಸ್ತಿ ತಂತ್ರಾಂಶದಲ್ಲಿ Upload ಮಾಡುವುದು.
7) ಸಕಾಲ ಅಧಿನಿಯಮದಡಿ ಇ-ಖಾತಾವನ್ನು ನೀಡಲು ನಿಗಧಿಪಡಿಸಲಾದ 7 ದಿನಗಳೊಳಗಾಗಿ ತಂತ್ರಾಂಶದಲ್ಲಿ ನಿಗಧಿಪಡಿಸಲಾಗಿರುವ ಕಾರ್ಯ ಹರಿವಿನಲ್ಲಿ (Work flow) ನಿರ್ವಹಿಸಿ ಇ-ಖಾತಾ ಸೃಜಿಸಿ ನೀಡುವುದು.
8) ಇ-ಖಾತಾ ನಮೂನೆ 2/3 ಹಾಗೂ 2ಎ/3ಎ ನೀಡಲು ನಗರ ಸ್ಥಳೀಯ ಸಂಸ್ಥೆಗಳಿಂದ ನಿಗಧಿಪಡಿಸಲಾದ ಶುಲ್ಕವನ್ನು ಮಾತ್ರ ಪಡೆಯುವುದು.
9) ಮಹಾನಗರ ಪಾಲಿಕೆ /ನಗರ ಸ್ಥಳೀಯ ಸಂಸ್ಥೆಗಳು ನಾಗರೀಕರ ಅನುಕೂಲಕ್ಕಾಗಿ ಇ-ಆಸ್ತಿ ತಂತ್ರಾಂಶದಲ್ಲಿ ನಮೂನೆ 2/3 ನ್ನು ಸೃಜಿಸಿ ನಾಗರೀಕರಿಗೆ ಒದಗಿಸಲು ಮೇಳಗಳನ್ನು ಆಯೋಜಿಸುವುದು, ವ್ಯವಸ್ಥಿತವಾಗಿ ಮತ್ತು ಸಂಘಟಿತ ರೀತಿಯಲ್ಲಿ ಮೇಳಗಳನ್ನು ನಡೆಸಲು ಕೆಳಕಂಡ ಕಾರ್ಯವಿಧಾನ ಕೈಗೊಳ್ಳುವುದು;
(i) ವಾರ್ಡ್ ಅಥವಾ ಬೀದಿಗಳನ್ನು, ಅಪಾರ್ಟ್‌ಮೆಂಟ್ / ಲೇಔಟ್ ಅನ್ನು ಗುರುತಿಸುವುದು. ಆ ಭಾಗದಲ್ಲಿನ ಸಕ್ರಿಯ ನಾಗರಿಕ ಗುಂಪುಗಳು ಅಥವಾ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಸಕ್ರಿಯ ವ್ಯಕ್ತಿಗಳ ಸಹಾಯವನ್ನು ಪಡೆಯುವುದು.
(ii) ಸದರಿ ವಾರ್ಡ್ ಅಥವಾ ಬೀದಿಗಳನ್ನು, ಅಪಾರ್ಟ್‌ಮೆಂಟ್ / ಲೇಔಟ್ ನಲ್ಲಿ ಇ-ಖಾತಾ ಇಲ್ಲದಿರುವ ಸ್ವತ್ತುಗಳ ಪಟ್ಟಿಯನ್ನು ಪ್ರಚುರಪಡಿಸುವುದು.
(ii)ಇ-ಖಾತಾ ಪಡೆಯಲು ನಾಗರೀಕನು ಸಲ್ಲಿಸಬೇಕಾದ ಮಾಹಿತಿ/ದಾಖಲೆಗಳ ವಿವರವನ್ನು ತಿಳಿಸುವುದು.
(iv)ಅಧಿಕೃತ ಸ್ವತ್ತಿನ ಮಾಲೀಕರು ಸಲ್ಲಿಸಬೇಕಾದ ದಾಖಲೆಗಳು, ಮತ್ತು ಅನಧಿಕೃತ ಸ್ವತ್ತಾಗಿದ್ದಲ್ಲಿ ಸಲ್ಲಿಸಬೇಕಾದ ದಾಖಲೆಗಳ ಮಾಹಿತಿಯ ವಿವರವನ್ನು ನೀಡುವುದು.
(v) ಮೇಳದ ದಿನಾಂಕದಂದು, ಸ್ಥಳದಲ್ಲಿ ಸಾಕಷ್ಟು ಸಂಖ್ಯೆಯ ಕಂಪ್ಯೂಟರ್‌ಗಳು, ಪ್ರಿಂಟರ್‌ಗಳು ಮತ್ತು ಇಂಟರ್ನೆಟ್ ವ್ಯವಸ್ಥೆ ಇರುವುದನ್ನು ಖಚಿತಪಡಿಸಿಕೊಳ್ಳುವುದು. ಜನಸಂದಣಿ ಮತ್ತು ಅನಗತ್ಯ ಕಾಯುವಿಕೆಯನ್ನು ತಪ್ಪಿಸಲು ಅಗತ್ಯವಿರುವಷ್ಟು ಕಂಪ್ಯೂಟರ್ ಮತ್ತು ಪ್ರಿಂಟರ್ ಖಚಿತಪಡಿಸಿಕೊಳ್ಳಬೇಕು. ಮುಖ್ಯ ಇಂಟರ್ನೆಟ್ ವಿಫಲವಾದಲ್ಲಿ ಬ್ಯಾಕ್-ಅಪ್ ಇಂಟರ್ನೆಟ್ ಸಂಪರ್ಕವನ್ನು ಹೊಂದಿರುವುದು.
(vi)ಮೂಲಭೂತ ಸೌಕರ್ಯಗಳೊಂದಿಗೆ ಸಾಕಷ್ಟು ಕುಳಿತುಕೊಳ್ಳುವ ಮತ್ತು ಕಾಯುವ ಸ್ಥಳವನ್ನು ಆಯೋಜಿಸುವುದು. ಆಗಮಿಸುವ ನಾಗರೀಕರಿಗೆ ಟೋಕನ್‌ಗಳನ್ನು ನೀಡುವುದು.

ಈ ಮೆಲ್ಕಂಡ ಕ್ರಮಗಳನ್ನು ಅನುಸರಿಸಿ, ದಿನಾಂಕ:10-05-2025 ರೊಳಗಾಗಿ ಇ-ಖಾತಾ ಅಭಿಯಾವನ್ನು ನಡೆಸಿ ತಮ್ಮ ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಆಸ್ತಿಗಳಿಗೆ ಇ-ಖಾತಾ ನೀಡಿ ಇ-ಖಾತಾ ಅಭಿಯಾವನ್ನು ಯಶಸ್ವಿಗೊಳಿಸುವಂತೆ ತಿಳಿಸಲಾಗಿದೆ.

BIG NEWS: State government issues guidelines for issuing 'e-khata' within 3 months: Adherence to these rules is mandatory.
Share. Facebook Twitter LinkedIn WhatsApp Email

Related Posts

Rain Alert : `ವಾಯುಭಾರ ಕುಸಿತ’ : ರಾಜ್ಯದಲ್ಲಿ ಇನ್ನೂ 1 ವಾರ ಭಾರೀ ಮಳೆ ಮುನ್ಸೂಚನೆ.!

23/10/2025 6:06 AM1 Min Read

SHOCKING: ಬೆಂಗಳೂರಲ್ಲಿ ದೀಪಾವಳಿ ಪಟಾಕಿ ಸಿಡಿದು 190 ಮಂದಿಗೆ ಗಾಯ : ಶಾಶ್ವತವಾಗಿ ಕಣ್ಣು ಕಳೆದುಕೊಂಡ 8 ಜನ!

23/10/2025 6:06 AM1 Min Read

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಗ್ರಾ.ಪಂ.ವ್ಯಾಪ್ತಿಯಲ್ಲೇ ‘ಇ-ಸ್ವತ್ತು’ ಸೌಲಭ್ಯಕ್ಕೆ ಚಾಲನೆ.!

23/10/2025 5:52 AM2 Mins Read
Recent News

Rain Alert : `ವಾಯುಭಾರ ಕುಸಿತ’ : ರಾಜ್ಯದಲ್ಲಿ ಇನ್ನೂ 1 ವಾರ ಭಾರೀ ಮಳೆ ಮುನ್ಸೂಚನೆ.!

23/10/2025 6:06 AM

SHOCKING: ಬೆಂಗಳೂರಲ್ಲಿ ದೀಪಾವಳಿ ಪಟಾಕಿ ಸಿಡಿದು 190 ಮಂದಿಗೆ ಗಾಯ : ಶಾಶ್ವತವಾಗಿ ಕಣ್ಣು ಕಳೆದುಕೊಂಡ 8 ಜನ!

23/10/2025 6:06 AM

ಉದ್ಯೋಗವಾರ್ತೆ : ಸರ್ಕಾರದ ವಿವಿಧ ಇಲಾಖೆಗಳಲ್ಲಿ `14,000’ ಹೆಚ್ಚು ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | Govt Jobs 2025

23/10/2025 6:02 AM

SHOCKING : ರಾತ್ರಿ ಪತ್ನಿ ಬಾಗಿಲು ತೆರೆಯಲು ನಿರಾಕರಿಸಿದ್ದಕ್ಕೆ ಬೆಂಕಿ ಹಚ್ಚಿಕೊಂಡು ಪತಿ ಆತ್ಮಹತ್ಯೆ : ಆಘಾತಕಾರಿ ವಿಡಿಯೋ ವೈರಲ್ | WATCH VIDEO

23/10/2025 5:58 AM
State News
KARNATAKA

Rain Alert : `ವಾಯುಭಾರ ಕುಸಿತ’ : ರಾಜ್ಯದಲ್ಲಿ ಇನ್ನೂ 1 ವಾರ ಭಾರೀ ಮಳೆ ಮುನ್ಸೂಚನೆ.!

By kannadanewsnow5723/10/2025 6:06 AM KARNATAKA 1 Min Read

ಬೆಂಗಳೂರು : ರಾಜ್ಯದ ಹಲವು ಜಿಲ್ಲೆಗಳಲ್ಲಿ ಈ ವಾರಾಂತ್ಯದವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ,…

SHOCKING: ಬೆಂಗಳೂರಲ್ಲಿ ದೀಪಾವಳಿ ಪಟಾಕಿ ಸಿಡಿದು 190 ಮಂದಿಗೆ ಗಾಯ : ಶಾಶ್ವತವಾಗಿ ಕಣ್ಣು ಕಳೆದುಕೊಂಡ 8 ಜನ!

23/10/2025 6:06 AM

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್ : ಗ್ರಾ.ಪಂ.ವ್ಯಾಪ್ತಿಯಲ್ಲೇ ‘ಇ-ಸ್ವತ್ತು’ ಸೌಲಭ್ಯಕ್ಕೆ ಚಾಲನೆ.!

23/10/2025 5:52 AM

ರಾಜ್ಯ `ಸರ್ಕಾರಿ ನೌಕರರೇ’ ಗಮನಿಸಿ : ಪ್ರಯಾಣ ಭತ್ಯೆ, ಭವಿಷ್ಯ ನಿಧಿ ಮುಂಗಡದ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

23/10/2025 5:46 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.