ಬೆಂಗಳೂರು : ಬಹುನಿರೀಕ್ಷಿತ ಜಾತಿಗಣತಿ ವರದಿ ಕುರಿತು ತೀರ್ಮಾನಿಸಲು ರಾಜ್ಯ ಸರ್ಕಾರವು ಇಂದು ವಿಶೇಷ ಸಚಿವ ಸಂಪುಟ ಸಭೆ ಕರೆದಿದೆ.
ಜಾತಿಗಣತಿ ಹಿಂದಿನ ಸಮೀಕ್ಷಾ ವರದಿಯ ಅಂಕಿ-ಅಂಶಗಳ ಬಗ್ಗೆ ವಿರೋಧ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪರಿಷ್ಕೃತ ಸಮೀಕ್ಷೆ ಹೆಸರಿನಲ್ಲಿ ಮತ್ತೊಮ್ಮೆ ಜಾತಿವಾರು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಮರು ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರವು ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.
ನ್ಯಾ. ನಾಗಮೋಹನ್ದಾಸ್ ನೇತೃತ್ವದಲ್ಲಿ ನಡೆಯುತ್ತಿರುವ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025 ಮಾದರಿಯನ್ನೇ ಅನುಸರಿಸಿ 90 ದಿನಗಳಲ್ಲಿ ಮರು ಸಮೀಕ್ಷೆ ಪೂರ್ಣಗೊಳಿಸಲು ನಿರ್ಧರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.