Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

RTE ಸೀಟಿಗಾಗಿ ಅರ್ಜಿ ಸಲ್ಲಿಸಿದ್ದ ಪೋಷಕರಿಗೆ ಮಹತ್ವದ ಮಾಹಿತಿ: 2ನೇ ಸುತ್ತಿನ ಸೀಟು ಹಂಚಿಕೆ ಪ್ರಕಟ | RTE Seat

16/06/2025 8:10 PM

BIG NEWS : `GST’ ಸಂಗ್ರಹದಲ್ಲೂ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ : CM ಸಿದ್ದರಾಮಯ್ಯ

16/06/2025 8:04 PM

ಅಪಹರಣ ಪ್ರಕರಣದಲ್ಲಿ ತಮಿಳುನಾಡು ಎಡಿಜಿಪಿ ಬಂಧನ

16/06/2025 7:58 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : `GST’ ಸಂಗ್ರಹದಲ್ಲೂ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ : CM ಸಿದ್ದರಾಮಯ್ಯ
KARNATAKA

BIG NEWS : `GST’ ಸಂಗ್ರಹದಲ್ಲೂ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ : CM ಸಿದ್ದರಾಮಯ್ಯ

By kannadanewsnow5716/06/2025 8:04 PM

ದಾವಣಗೆರೆ : ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲದೆ, ಜಿಎಸ್ಟಿ ಸಂಗ್ರಹದಲ್ಲೂ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಇದು ರಾಜ್ಯದ ಆರ್ಥಿಕತೆ ಏರುಮುಖದಲ್ಲಿ, ಪ್ರಗತಿ ಪಥದಲ್ಲಿ ಇರುವುದಕ್ಕೆ ಸಾಕ್ಷಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ದಾವಣಗೆರೆ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ, ಶಂಕುಸ್ಥಾಪನೆ ನೆರವೇರಿಸಿ ಹಲವು ಇಲಾಖೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಹಸಿ ಸುಳ್ಳುಗಳಿಗೆ ತಕ್ಕ ಉತ್ತರ ನೀಡುವ ರೀತಿಯಲ್ಲಿ ಒಂದೇ ದಿನ ₹1,350 ಕೋಟಿ ವೆಚ್ಚದ ಅಭಿವೃದ್ಧಿ ಕಾರ್ಯಗಳನ್ನು ಉದ್ಘಾಟಿಸಿ, ಶಂಕುಸ್ಥಾಪನೆ ನೆರವೇರಿಸಿದ್ದೇವೆ ಎಂದು ಹೇಳಿದ್ದಾರೆ.

56 ಇಂಚಿನ ಎದೆಯ ಪ್ರಧಾನಿ Narendra Modi ಅವರು ನಿಷ್ಕ್ರಿಯ ಆಗಿದ್ದಾರೆ. ಎದೆ ಎಷ್ಟು ಇಂಚಿದೆ ಎನ್ನುವುದು ಮುಖ್ಯವಲ್ಲ, ಎದೆಯ ಒಳಗೆ ಬಡವರ ಮತ್ತು ಮಧ್ಯಮ ವರ್ಗದವರ ಬಗ್ಗೆ ಪ್ರೀತಿ, ಕಾಳಜಿ ಇರುವುದು ಮುಖ್ಯ. ಈ ಪ್ರೀತಿ ಮೋದಿಯವರಲ್ಲಿ ಇಲ್ಲ.

ಸರ್ಕಾರದ ಬಳಿ ಹಣ ಇಲ್ಲ ಎನ್ನುವ ಬಿಜೆಪಿಯ ಕುರುಡು ಕಣ್ಣುಗಳಿಗೆ ಅಭಿವೃದ್ಧಿ ಕಾಣುತ್ತಿಲ್ಲ. ಜನರ ಮನೆ ಬಾಗಿಲಿಗೆ ನಮ್ಮ ಸರ್ಕಾರದ ಅಭಿವೃದ್ಧಿ ಕಾರ್ಯಗಳು ತಲುಪುತ್ತಿವೆ. ನಮ್ಮ ಬಳಿ ಹಣ ಇಲ್ಲದೇ ಹೋಗಿದ್ದರೆ ಒಂದೇ ದಿನ ₹1,350 ಕೋಟಿ ಮೊತ್ತದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಸಾಧ್ಯವಿತ್ತೇ? ನಾವು ಗ್ಯಾರಂಟಿಗಳನ್ನು ಘೋಷಿಸಿದಾಗ ಬಿಜೆಪಿಯ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಂದ ಹಿಡಿದು ಸ್ಥಳೀಯ BJP Karnataka ನಾಯಕರವರೆಗೂ, “ಗ್ಯಾರಂಟಿಗಳು ಜಾರಿಯೇ ಆಗುವುದಿಲ್ಲ” ಎಂದು ಹಸಿ ಹಸಿ ಸುಳ್ಳು ಹೇಳಿದ್ದರು. ಈಗ ಐದೂ ಗ್ಯಾರಂಟಿಗಳೂ ಜಾರಿ ಆಗಿವೆ. ಬಿಜೆಪಿಯ ಮತದಾರರೂ ಸೇರಿ ಇಡೀ ರಾಜ್ಯದ ಜನತೆ ಗ್ಯಾರಂಟಿಗಳ ಫಲಾನುಭವಿಗಳಾಗಿದ್ದಾರೆ.

ರಾಜ್ಯದ ಬಜೆಟ್ ಗಾತ್ರ ಹೆಚ್ಚಾಗಿರುವುದು ಮಾತ್ರವಲ್ಲದೆ, ಜಿಎಸ್ಟಿ ಸಂಗ್ರಹದಲ್ಲೂ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ. ಇದು ರಾಜ್ಯದ ಆರ್ಥಿಕತೆ ಏರುಮುಖದಲ್ಲಿ, ಪ್ರಗತಿ ಪಥದಲ್ಲಿ ಇರುವುದಕ್ಕೆ ಸಾಕ್ಷಿ ಎಂದರು.

ಬಿಜೆಪಿ ಅಧಿಕಾರದಲ್ಲಿದ್ದಾಗ ರಾಜ್ಯದ ಜನರಿಗೆ ಒಂದೇ ಒಂದು ಮನೆ ಕೊಡಲಿಲ್ಲ. ಆದರೆ ನಾವು ಬರೀ ದಾವಣಗೆರೆ ಜಿಲ್ಲೆಯಲ್ಲಿ ಒಂದೇ ದಿನ ಪೌರ ಕಾರ್ಮಿಕ ವರ್ಗಕ್ಕೆ 1,892 ಮನೆಗಳನ್ನು ವಿತರಿಸಿದ್ದೇವೆ. ಬಿಜೆಪಿಯವರ ಸುಳ್ಳುಗಳಿಗೆ ರಾಜ್ಯದ ಜನತೆ ಸೊಪ್ಪು ಹಾಕುತ್ತಿಲ್ಲ. ಉಪ ಚುನಾವಣೆಯಲ್ಲಿ ಶಿಗ್ಗಾಂವಿ, ಚನ್ನಪಟ್ಟಣದಲ್ಲಿ ಮಾಜಿ ಮುಖ್ಯಮಂತ್ರಿಗಳ ಮಕ್ಕಳನ್ನೇ ಜನ ಸೋಲಿಸಿ ನಮಗೆ ಶಕ್ತಿ ತುಂಬಿದರು. ಸಂಡೂರಿನಲ್ಲೂ ನಾವೇ ಗೆದ್ದೆವು. ಮುಂದಿನ ಚುನಾವಣೆಯಲ್ಲೂ ನಾವೇ ಮತ್ತೆ ಗೆದ್ದು ಬರ್ತೀವಿ ಎನ್ನುವ ಭರವಸೆ ನನಗಿದೆ ಎಂದರು.

ಅಭಿವೃದ್ಧಿ ವಿಚಾರದಲ್ಲಿ ನಾವು ಜಾತಿ, ಧರ್ಮ, ಪಕ್ಷ ನೋಡುವುದಿಲ್ಲ. ಎಲ್ಲಾ ಪಕ್ಷದವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು. ಅಭಿವೃದ್ಧಿ ವಿಚಾರದಲ್ಲಿ, ಕೇಂದ್ರ ಸರ್ಕಾರ ನಮಗೆ ಮಾಡಿದ ದ್ರೋಹದ ವಿಚಾರದಲ್ಲಿ ನಾನು ಸುಳ್ಳು ಹೇಳಿದ್ದರೆ ಮತ್ತೆ ಸಾರ್ವಜನಿಕವಾಗಿ ವೇದಿಕೆ ಹತ್ತೋದಿಲ್ಲ, ಭಾಷಣ ಮಾಡುವುದಿಲ್ಲ ಎಂದು ಹೇಳಿದರು.
ರಾಜ್ಯದ ಆರ್ಥಿಕತೆ ಮತ್ತು ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಾರ್ವಜನಿಕವಾಗಿ ಬಹಿರಂಗ ಚರ್ಚೆಗೆ ಬರಲಿ ಎಂದು ತಿಳಿಸಿದರು.

BIG NEWS: State ranks second in the country in `GST' collection: CM Siddaramaiah
Share. Facebook Twitter LinkedIn WhatsApp Email

Related Posts

RTE ಸೀಟಿಗಾಗಿ ಅರ್ಜಿ ಸಲ್ಲಿಸಿದ್ದ ಪೋಷಕರಿಗೆ ಮಹತ್ವದ ಮಾಹಿತಿ: 2ನೇ ಸುತ್ತಿನ ಸೀಟು ಹಂಚಿಕೆ ಪ್ರಕಟ | RTE Seat

16/06/2025 8:10 PM1 Min Read

BIG NEWS : `SSLC ಪರೀಕ್ಷೆ-3’ ನೋಂದಣಿ : ಪುನರಾವರ್ತಿತ, ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

16/06/2025 7:51 PM2 Mins Read

BREAKING : ರಾಜ್ಯದಲ್ಲಿ ಖಾಸಗಿಯಾಗಿ ಪ್ರಾಥಮಿಕ, ಪ್ರೌಢಶಾಲೆಗಳನ್ನು ಪ್ರಾರಂಭಿಸಲು ನೋಂದಣಿ ವಿಸ್ತರಣೆ : ರಾಜ್ಯ ಸರ್ಕಾರ ಆದೇಶ

16/06/2025 7:43 PM3 Mins Read
Recent News

RTE ಸೀಟಿಗಾಗಿ ಅರ್ಜಿ ಸಲ್ಲಿಸಿದ್ದ ಪೋಷಕರಿಗೆ ಮಹತ್ವದ ಮಾಹಿತಿ: 2ನೇ ಸುತ್ತಿನ ಸೀಟು ಹಂಚಿಕೆ ಪ್ರಕಟ | RTE Seat

16/06/2025 8:10 PM

BIG NEWS : `GST’ ಸಂಗ್ರಹದಲ್ಲೂ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ : CM ಸಿದ್ದರಾಮಯ್ಯ

16/06/2025 8:04 PM

ಅಪಹರಣ ಪ್ರಕರಣದಲ್ಲಿ ತಮಿಳುನಾಡು ಎಡಿಜಿಪಿ ಬಂಧನ

16/06/2025 7:58 PM

ಸೈಪ್ರಸ್ ಅಧ್ಯಕ್ಷರಿಗೆ ‘ಕಾಶ್ಮೀರಿ ರೇಷ್ಮೆ ಕಾರ್ಪೆಟ್’, ಪ್ರಥಮ ಮಹಿಳೆಗೆ ‘ಬೆಳ್ಳಿ ಕ್ಲಚ್ ಪರ್ಸ್’ ಉಡುಗೊರೆಯಾಗಿ ನೀಡಿದ ‘ಪ್ರಧಾನಿ ಮೋದಿ’

16/06/2025 7:55 PM
State News
KARNATAKA

RTE ಸೀಟಿಗಾಗಿ ಅರ್ಜಿ ಸಲ್ಲಿಸಿದ್ದ ಪೋಷಕರಿಗೆ ಮಹತ್ವದ ಮಾಹಿತಿ: 2ನೇ ಸುತ್ತಿನ ಸೀಟು ಹಂಚಿಕೆ ಪ್ರಕಟ | RTE Seat

By kannadanewsnow0916/06/2025 8:10 PM KARNATAKA 1 Min Read

ಬೆಂಗಳೂರು: ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆಯಡಿ ಸೀಟಿಗಾಗಿ ಅರ್ಜಿ ಸಲ್ಲಿಸಿದ್ದವರಿಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ…

BIG NEWS : `GST’ ಸಂಗ್ರಹದಲ್ಲೂ ರಾಜ್ಯ ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ : CM ಸಿದ್ದರಾಮಯ್ಯ

16/06/2025 8:04 PM

BIG NEWS : `SSLC ಪರೀಕ್ಷೆ-3’ ನೋಂದಣಿ : ಪುನರಾವರ್ತಿತ, ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

16/06/2025 7:51 PM

BREAKING : ರಾಜ್ಯದಲ್ಲಿ ಖಾಸಗಿಯಾಗಿ ಪ್ರಾಥಮಿಕ, ಪ್ರೌಢಶಾಲೆಗಳನ್ನು ಪ್ರಾರಂಭಿಸಲು ನೋಂದಣಿ ವಿಸ್ತರಣೆ : ರಾಜ್ಯ ಸರ್ಕಾರ ಆದೇಶ

16/06/2025 7:43 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.