Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು ಫಿಕ್ಸ್ : ದೇಶಾದ್ಯಂತ ‘ಎಸ್ಮಾ’ ಜಾರಿಗೊಳಿಸಿದ ಕೇಂದ್ರ ಸರ್ಕಾರ

11/03/2026 7:32 AM

ಭಾರತ ಒಂದೆರೆಡಲ್ಲ 40 ದೇಶಗಳಿಂದ ‘ಕಚ್ಚಾ ತೈಲ’ ಆಮದು ಮಾಡಿಕೊಳ್ತಿದೆ ; ಪಟ್ಟಿ ಇಲ್ಲಿದೆ.!

11/03/2026 7:29 AM

ಇರಾನ್ ಯುದ್ಧಕ್ಕೆ ಪುಟಿನ್ ‘ಮಾಸ್ಟರ್ ಪ್ಲಾನ್’: ಟ್ರಂಪ್‌ಗೆ ಸುಲಭ ದಾರಿ ತೋರಿಸಿದ ರಷ್ಯಾ; ಸಂಘರ್ಷ ಅಂತ್ಯಕ್ಕೆ ಮುಹೂರ್ತ ಫಿಕ್ಸ್?

11/03/2026 7:29 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಪೊಲೀಸರು/ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ : ಡಾ.ಜಿ.ಪರಮೇಶ್ವರ್
KARNATAKA

BIG NEWS : ಅಪರಾಧ ಪ್ರಕರಣಗಳಲ್ಲಿ ಭಾಗಿಯಾದ ಪೊಲೀಸರು/ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ : ಡಾ.ಜಿ.ಪರಮೇಶ್ವರ್

By kannadanewsnow5719/12/2025 5:10 AM

ಬೆಳಗಾವಿ :ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವಂತಹ ಪೊಲೀಸರು / ಅಧಿಕಾರಿಗಳ ವಿರುದ್ಧ ಕಾನೂನು ಪ್ರಕರಣಗಳನ್ನು ದಾಖಲಿಸಿಕೊಂಡು, ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತಿದ್ದು, ಆರೋಪವು ಸಾಬೀತಾದಲ್ಲಿ ಅಂತಹ ಪೊಲೀಸ್ ಅಧಿಕಾರಿ / ಸಿಬ್ಬಂದಿಗಳ ವಿರುದ್ಧ ಕರ್ನಾಟಕ ರಾಜ್ಯ ಪೊಲೀಸ್ (ಶಿಸ್ತು ನಡವಳಿ) (ತಿದ್ದುಪಡಿ) ನಿಯಮಗಳಡಿ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನ ಪರಿಷತ್ ಸದಸ್ಯ ಶರವಣ ಟಿ. ಎ. ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್ ಅವರು ಉತ್ತರಿಸಿದ್ದು, ಪ್ರಸ್ತುತ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 88 ಪೊಲೀಸರು / ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಿ, ಎಫ್ಐಆರ್ ದಾಖಲಿಸಿ, ಅರೆಸ್ಟ್ ಮಾಡಿ, ಸಸ್ಪೆಂಡ್ ಮಾಡಲಾಗಿದ್ದು, ಪ್ರಕರಣ ಸಾಬೀತಾದಲ್ಲಿ ಅವರನ್ನು ಸೇವೆಯಿಂದ ವಜಾ ಗೊಳಿಸಲಾಗುವುದು ಎಂದು ಹೇಳಿದ್ದಾರೆ.

ರಾಜ್ಯದ ಪೊಲೀಸರು / ಅಧಿಕಾರಿಗಳು ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗುವುದನ್ನು ತಡೆಗಟ್ಟಲು ರಾಜ್ಯದ ಎಲ್ಲಾ ಘಟಕದ ಅಧಿಕಾರಿಗಳಿಗೆ, ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರುಗಳಿಗೆ ಕರ್ತವ್ಯ ಪಾಲನೆಯ ಕುರಿತು ಸೂಕ್ತ ಸೂಚನೆ/ ನಿರ್ದೇಶನಗಳನ್ನು ನೀಡಲಾಗಿರುತ್ತದೆ.

ಇಂತಹ ಪ್ರಕರಣಗಳಲ್ಲಿ ಪೊಲೀಸ್ ಅಧಿಕಾರಿ / ಸಿಬ್ಬಂದಿಗಳ ಕರ್ತವ್ಯದ ಮೇಲೆ ಉನ್ನತಾಧಿಕಾರಿಗಳು ನಿಗಾವಹಿಸುವಂತೆ ಸೂಚನೆ ನೀಡಲಾಗಿದೆ. ಪೊಲೀಸ್ ಅಧಿಕಾರಿ / ಸಿಬ್ಬಂದಿಗಳೊಂದಿಗೆ ಸಮನ್ವಯ ಸಾಧಿಸಲು ಸಭೆಗಳನ್ನು ಕರೆದು ಉನ್ನತಾಧಿಕಾರಿಗಳಿಂದ ಸಲಹೆ ಸೂಚನೆಗಳನ್ನು ನೀಡಲಾಗುತ್ತಿದೆ.

ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯವರುಗಳ ದುರ್ನಡತೆ, ಅಕ್ರಮ ಚಟುವಟಿಕೆಗಳು ಹಾಗೂ ಅಪರಾಧಿ ಕೃತ್ಯಗಳಲ್ಲಿ ತೊಡಗಿರುವ ಮಾಹಿತಿಗಳನ್ನು ಜಿಲ್ಲಾ ಮಟ್ಟದ ಉನ್ನತಾಧಿಕಾರಿಗಳು ತಕ್ಷಣವೇ ಪೊಲೀಸ್ ಪ್ರಧಾನ ಕಛೇರಿಗೆ ವರದಿ ಮಾಡುವಂತೆ ಸೂಚಿಸಲಾಗಿದೆ.

ಎಲ್ಲಾ ಘಟಕದ ಅಧಿಕಾರಿಗಳಿಂದ ಅಧೀನದ ಪೊಲೀಸ್ ಅಧಿಕಾರಿ / ಸಿಬ್ಬಂದಿಯವರುಗಳ ಪೂರ್ವಾಪರಗಳ ಪರಿಶೀಲನೆ ಮತ್ತು ಸಮಗ್ರತೆಯ ಮೌಲ್ಯಮಾಪನಗಳನ್ನು ನಿಯತವಾಗಿ ನಡೆಸಲಾಗುತ್ತಿದೆ.

ನೈತಿಕ ಮಾನದಂಡಗಳು, ಕಾನೂನು ಬದ್ಧ ಕರ್ತವ್ಯಗಳು ಮತ್ತು ಭ್ರಷ್ಟಾಚಾರ / ಅಪರಾಧಗಳ ಕುರಿತು ಜಾಗೃತಿ ಮೂಡಿಸಲು ತರಬೇತಿ ಕಾರ್ಯಕ್ರಮಗಳ ಮೂಲಕ ಪೊಲೀಸ್ ಅಧಿಕಾರಿ/ಸಿಬ್ಬಂದಿಗಳಿಗೆ ತಿಳುವಳಿಕೆಯನ್ನು ನೀಡಲಾಗುತ್ತಿದೆ.

ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವಂತಹ ಪೊಲೀಸರು / ಅಧಿಕಾರಿಗಳ ವಿರುದ್ಧ ಕಾನೂನು ಪ್ರಕರಣಗಳನ್ನು ದಾಖಲಿಸಿಕೊಂಡು, ನಿಯಮಾನುಸಾರ ಕ್ರಮ ಕೈಗೊಳ್ಳಲಾಗುತ್ತಿದ್ದು, ಆರೋಪವು ಸಾಬೀತಾದಲ್ಲಿ ಅಂತಹ ಪೊಲೀಸ್ ಅಧಿಕಾರಿ / ಸಿಬ್ಬಂದಿಗಳ ವಿರುದ್ಧ ಕರ್ನಾಟಕ ರಾಜ್ಯ ಪೊಲೀಸ್ (ಶಿಸ್ತು ನಡವಳಿ) (ತಿದ್ದುಪಡಿ) ನಿಯಮಗಳಡಿ ಶಿಸ್ತು ಕ್ರಮ ಕೈಗೊಳ್ಳಲಾಗುತ್ತಿದೆ.… pic.twitter.com/AqEb0Ederl

— DIPR Karnataka (@KarnatakaVarthe) December 18, 2025

BIG NEWS: Strict action against police/officials involved in criminal cases: Dr. G. Parameshwar
Share. Facebook Twitter LinkedIn WhatsApp Email

Related Posts

ಪೋಷಕರೇ ನಿಮ್ಮ ಮಕ್ಕಳನ್ನು `ಕೇಂದ್ರೀಯ ವಿದ್ಯಾಲಯ’ಕ್ಕೆ ಸೇರಿಸಬೇಕಾ? ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

11/03/2026 7:13 AM2 Mins Read

ನಿಮ್ಮ ಜಮೀನು ಅಕ್ರಮವಾಗಿ ಒತ್ತುವರಿಯಾಗಿದೆಯೇ? ಚಿಂತಿಸಬೇಡಿ, ಇಲ್ಲಿವೆ ಕಾನೂನು ಪರಿಹಾರಗಳು !

11/03/2026 7:10 AM2 Mins Read

BIG NEWS : ರಾಜ್ಯದಲ್ಲಿ `SSLC’ ಪರೀಕ್ಷೆ ಮುಗಿದ ತಕ್ಷಣ `ಶಿಕ್ಷಕರ ವರ್ಗಾವಣೆಗೆ ಕೌನ್ಸೆಲಿಂಗ್’ !

11/03/2026 7:04 AM1 Min Read
Recent News

ಗ್ಯಾಸ್ ಪೂರೈಕೆಯಲ್ಲಿ ವ್ಯತ್ಯಯವಾದ್ರೆ ಜೈಲು ಫಿಕ್ಸ್ : ದೇಶಾದ್ಯಂತ ‘ಎಸ್ಮಾ’ ಜಾರಿಗೊಳಿಸಿದ ಕೇಂದ್ರ ಸರ್ಕಾರ

11/03/2026 7:32 AM

ಭಾರತ ಒಂದೆರೆಡಲ್ಲ 40 ದೇಶಗಳಿಂದ ‘ಕಚ್ಚಾ ತೈಲ’ ಆಮದು ಮಾಡಿಕೊಳ್ತಿದೆ ; ಪಟ್ಟಿ ಇಲ್ಲಿದೆ.!

11/03/2026 7:29 AM

ಇರಾನ್ ಯುದ್ಧಕ್ಕೆ ಪುಟಿನ್ ‘ಮಾಸ್ಟರ್ ಪ್ಲಾನ್’: ಟ್ರಂಪ್‌ಗೆ ಸುಲಭ ದಾರಿ ತೋರಿಸಿದ ರಷ್ಯಾ; ಸಂಘರ್ಷ ಅಂತ್ಯಕ್ಕೆ ಮುಹೂರ್ತ ಫಿಕ್ಸ್?

11/03/2026 7:29 AM

ವಿಮಾನ ಪ್ರಯಾಣಿಕರಿಗೆ ಇಂಧನ ಬರೆ: ಏರ್ ಇಂಡಿಯಾ ಟಿಕೆಟ್ ದರ ಏರಿಕೆ; ಇಂದಿನಿಂದಲೇ ಹೆಚ್ಚುವರಿ ಶುಲ್ಕ ಜಾರಿ!

11/03/2026 7:24 AM
State News
KARNATAKA

ಪೋಷಕರೇ ನಿಮ್ಮ ಮಕ್ಕಳನ್ನು `ಕೇಂದ್ರೀಯ ವಿದ್ಯಾಲಯ’ಕ್ಕೆ ಸೇರಿಸಬೇಕಾ? ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭ

By kannadanewsnow5711/03/2026 7:13 AM KARNATAKA 2 Mins Read

ಮಕ್ಕಳ ಶಿಕ್ಷಣಕ್ಕೆ ಅಡಚಣೆಯಾಗದಂತೆ ದೇಶಾದ್ಯಂತ ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಕೇಂದ್ರೀಯ ವಿದ್ಯಾಲಯ ಸಂಘಟನ್ (KVS), 2026-27ನೇ ಶೈಕ್ಷಣಿಕ ಸಾಲಿನ ಪ್ರವೇಶಾತಿ…

ನಿಮ್ಮ ಜಮೀನು ಅಕ್ರಮವಾಗಿ ಒತ್ತುವರಿಯಾಗಿದೆಯೇ? ಚಿಂತಿಸಬೇಡಿ, ಇಲ್ಲಿವೆ ಕಾನೂನು ಪರಿಹಾರಗಳು !

11/03/2026 7:10 AM

BIG NEWS : ರಾಜ್ಯದಲ್ಲಿ `SSLC’ ಪರೀಕ್ಷೆ ಮುಗಿದ ತಕ್ಷಣ `ಶಿಕ್ಷಕರ ವರ್ಗಾವಣೆಗೆ ಕೌನ್ಸೆಲಿಂಗ್’ !

11/03/2026 7:04 AM

ವಯಸ್ಸಾದಂತೆ ಮೂಳೆ ಸವೆತಕ್ಕೆ ಕಾರಣವೇನು ಗೊತ್ತಾ? ಅಚ್ಚರಿ ಮಾಹಿತಿ ಬಿಚ್ಚಿಟ್ಟ ವೈದ್ಯರು!

11/03/2026 6:50 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.