ಮಂಗಳೂರು : ಕಳೆದ ಕೆಲವು ದಿನಗಳ ಹಿಂದೆ ಮಂಗಳೂರಲ್ಲಿ ರೌಡಿಶೀಟರ್ ಹಾಗೂ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಭೀಕರ ಕೊಲೆಯಾಗಿತ್ತು. ಈಗ ಈ ಒಂದು ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಂಗಳೂರಿನ ಸಿಸಿಬಿ ಪೊಲೀಸರು ಮತ್ತೋರ್ವ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
ಹೌದು ಮಂಗಳೂರು ಸಿಸಿಬಿ ಪೊಲೀಸರು ಸುಹಾಸ್ ಶೆಟ್ಟಿ ಕೊಲೆ ಪ್ರಕರಣದಲ್ಲಿ ಇದೀಗ ಮತ್ತೊಬ್ಬ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಬಜಪೇ ಶಾಂತಿಗುಡ್ಡೆ ನಿವಾಸಿಯಾದ ಅಬ್ದುಲ್ ರಜಾಕ್ ನನ್ನು ಇದೀಗ ಮಂಗಳೂರು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪ್ರಮುಖ ಆರೋಪಿಗಳ ಜೊತೆ ಸೇರಿದ್ದ ಎನ್ನುವ ಆರೋಪ ಕೇಳಿ ಬಂದಿದೆ ಆರೋಪಿಗಳು ತಲೆಮರೆಸಿಕೊಳ್ಳಲು ಈತನೇ ಸಹಾಯ ಮಾಡಿದ್ದ ಎನ್ನಲಾಗಿದೆ. ಪ್ರಮುಖ ಆರೋಪಿ ಮುಜಾಮಿಲ್ ತಂದೆ ಅಬ್ದುಲ್ ರಜಾಕ್ ಎಂದು ತಿಳಿದುಬಂದಿದೆ.ಮುಜಾಮಿಲ್ ಮಗಳ ಗಂಡ ನೌಷಾದ್ ಜೊತೆ ಸೇರಿ ಸುಹಾಸ ಕೊಲೆಗೆ ಸಂಚು ರೂಪಿಸಿದ್ದರು ಎಂದು ತಿಳಿದುಬಂದಿದೆ.