ಬೆಂಗಳೂರು : ನಟ ದರ್ಶನ್ ಅಭಿಮಾನಿಗಳು ಎಂದು ಅಶ್ಲೀಲ ಮೆಸೇಜ್ ಮಾಡಿದ ಕಿಡಿಗೇಡಿಗಳು ಅರೆಸ್ಟ್ ಆಗಿದ್ದು, ಪೊಲೀಸರಿಗೆ ಧನ್ಯವಾದ ತಿಳಿಸಿ ನಟಿ ರಮ್ಯಾ ಪೋಸ್ಟ್ ಹಂಚಿಕೊಂಡಿದ್ದಾರೆ.
ಹೌದು ದೂರಿನ ಮೇಲೆ ತ್ವರಿತ ಕ್ರಮ ಕೈಗೊಂಡಿದ್ದಕ್ಕಾಗಿ ನಮ್ಮ ಗೃಹ ಸಚಿವ ಡಾ. ಪರಮೇಶ್ವರ್ ಅವ್ರು @DrParameshwara ಮತ್ತು ಸೀಮಂತ್ ಕುಮಾರ್ ಸಿಂಗ್ ಅವ್ರು @seemantsingh96 ಬೆಂಗಳೂರು ಪೊಲೀಸ್ ಆಯುಕ್ತರು @CPBlr ಮತ್ತು ಸಿಸಿಬಿಯ ಸಂಪೂರ್ಣ ತಂಡಕ್ಕೆ ಧನ್ಯವಾದಗಳು.ಬೆಂಗಳೂರು ನಗರ ಪೊಲೀಸರು ಸ್ತ್ರೀದ್ವೇಷದ ಆಕ್ರಮಣದ ವಿರುದ್ಧ ದೃಢವಾದ ನಿಲುವನ್ನು ತೆಗೆದುಕೊಂಡಿದ್ದಾರೆ. ಕಾನೂನು ಕ್ರಮ ಕೈಗೊಳ್ಳಲಾಗಿದೆ ಮತ್ತು ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಸಂದೇಶ ಸ್ಪಷ್ಟವಾಗಿದೆ:. ನಮ್ಮ ನಗರದಲ್ಲಿ ಮಹಿಳೆಯರ ಘನತೆಯನ್ನು ರಕ್ಷಿಸುವ ಮತ್ತು ಸುರಕ್ಷತೆಯನ್ನು ಖಾತ್ರಿಪಡಿಸುವ ವಿಷಯಕ್ಕೆ ಬಂದಾಗ ಕಾನೂನಿನ ಕೈಯಿಂದ ತಪ್ಪಿಸಿಕೊಳ್ಳುವುದು ಕಷ್ಟ ಎಂದು ನಟಿ ರಮ್ಯಾ ಪೋಸ್ಟ್ ಮಾಡಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟಿ ರಮ್ಯಾ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದರು. ಈ ವಿಚಾರವಾಗಿ ದರ್ಶನ್ ಅಭಿಮಾನಿಗಳು ನಟಿ ರಮ್ಯಾ ಗೆ ಅಶ್ಲೀಲವಾಗಿ ಮೆಸೇಜ್ ಕಳುಹಿಸಿದ್ದರು. ಇದನ್ನು ದಾಖಲೆ ಸಮೇತ ಇತ್ತೀಚಿಗೆ ನಟಿ ರಮ್ಯಾ ಬೆಂಗಳೂರು ಕಮಿಷನರಿಗೆ ದೂರು ನೀಡಿದ್ದರು. ದೂರು ಹಿನ್ನೆಲೆಯಲ್ಲಿ ಈ ಒಂದು ಪ್ರಕರಣ ಸಿಸಿಬಿಗೆ ವರ್ಗಾವಣೆಯಾಗಿದ್ದು, ಬಳಿಕ ಇಂದು ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದು ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಇದೀಗ ರಮ್ಯಾ ಅವರು ಬೆಂಗಳೂರು ಪೊಲೀಸರ ಈ ಒಂದು ಕ್ರಮಕ್ಕೆ ಧನ್ಯವಾದ ತಿಳಿಸಿದ್ದಾರೆ.
I thank our Home Minister Dr Parameshwar avru @DrParameshwara and Seemant Kumar Singh avru @seemantsingh96 Commissioner of Police Bengaluru @CPBlr and the entire team at CCB for the swift action taken on the complaint.
The Bangalore City Police have taken a firm stand against… pic.twitter.com/nTQuqbbFhl
— Ramya/Divya Spandana (@divyaspandana) August 2, 2025