Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ತಾಲ್ಲೂಕು ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ಸಂಗ್ರಹಣೆ ವ್ಯವಸ್ಥೆ ಜಾರಿ

17/06/2025 8:45 PM

GOOD NEWS: ಶೀಘ್ರವೇ ರಾಜ್ಯದಲ್ಲಿ 11 ಸರ್ಕಾರಿ ಬ್ಲಡ್ ಬ್ಯಾಂಕ್ ಅನುಷ್ಠಾನ: ಸಚಿವ ದಿನೇಶ್ ಗುಂಡೂರಾವ್

17/06/2025 8:39 PM

MGNVY ಕ್ರಿಯಾಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ಬಿಎಸ್ ಸುರೇಶ್ ಎಚ್ಚರಿಕೆ

17/06/2025 8:34 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕಾಂಗ್ರೆಸ್ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ : ಗೃಹ ಸಚಿವ ಡಾ. ಜಿ. ಪರಮೇಶ್ವರ ಸ್ಪಷ್ಟನೆ
KARNATAKA

BIG NEWS : ಕಾಂಗ್ರೆಸ್ ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ : ಗೃಹ ಸಚಿವ ಡಾ. ಜಿ. ಪರಮೇಶ್ವರ ಸ್ಪಷ್ಟನೆ

By kannadanewsnow0509/01/2025 1:15 PM

ಬೆಂಗಳೂರು : ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಅಜೆಂಡ ಏನಿದೆ ಎಂಬುದು ಗೊತ್ತಿಲ್ಲ. ಪಕ್ಷದಲ್ಲಿ ಯಾವ ಗೊಂದಲವೂ ಇಲ್ಲ. ಎಸ್‌ಸಿ, ಎಸ್‌ಟಿ ಸಮಾವೇಶದ ಕುರಿತು‌ ಕರೆದಿದ್ದ ಸಭೆ ಮುಂದೂಡಲು ಅನೇಕ ಕಾರಣಗಳಿವೆ. ಎಐಸಿಸಿ ವರಿಷ್ಟರು ಭಾಗವಹಿಸುವುದಾಗಿ ತಿಳಿಸಿದ್ದರಿಂದ ಮುಂದೂಡಲಾಗಿದೆ. ಎಐಸಿಸಿ ನಮ್ಮ ಮೇಲೆ ನಂಬಿಕೆ ಇಟ್ಟಿಲ್ಲ ಎಂಬ ಪ್ರಶ್ನೆ ಈಗ ಬರುವುದಿಲ್ಲ. ನೀವೆ ಬೆಳಗ್ಗೆ ಒಂದು, ಸಂಜೆ ಒಂದು ನಂಬಿಕೆಯ ಪ್ರಶ್ನೆ ಹುಟ್ಟು ಹಾಕುತ್ತಿದ್ದೀರಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನ ಕಾರ್ಯದರ್ಶಿಗಳಾದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಅವರು ನನ್ನ ಹತ್ತಿರ ಮಾತನಾಡಿದ್ದಾರೆ. ಗೌಪ್ಯ ಸಭೆ ಏನು ಇಲ್ಲ. ನಮ್ಮ ಸಮಸ್ಯೆಗಳನ್ನು ಚರ್ಚಿಸಬೇಕು ಅಂತ ಸಭೆ ಸೇರುತ್ತಿದ್ದೇವೆ. ಅದಕ್ಕೆ ನೀವೆ ಬನ್ನಿ ಎಂದು ಕರೆದಿದ್ದೇನೆ. ಅವರು ದಿನಾಂಕ ಸೂಚಿಸುವುದಾಗಿ ತಿಳಿಸಿದ್ದಾರೆ. ನಂತರ ಸಭೆ ಮಾಡುತ್ತೇವೆ ಎಂದರು.

ಸ್ಪಷ್ಟವಾದ ಸಭೆಯ ಬಗ್ಗೆ ಕೆಲವರು ಆತಂಕಕ್ಕೆ ಒಳಗಾಗಿದ್ದಾರೆ ಎಂದು ಮಾಧ್ಯಮದವರ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಯಾರು ಆತಂಕಕ್ಕೆ ಒಳಗಾಗಿದ್ದಾರೆ? ನನಗೆ ಗೊತ್ತಿರುವ ಹಾಗೇ ಯಾವ ಆತಂಕನೂ ಇಲ್ಲ. ಯಾರು ಆತಂಕ ಪಡುವ ಅಗತ್ಯತೆಯು ಇಲ್ಲ ಎಂದು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದೇನೆ. ಪಕ್ಷದಿಂದ ಹೊರತಾಗಿ ಸಮಾವೇಶ ಮಾಡುತ್ತೇವೆ ಎಂದು ನಾನು ಎಲ್ಲೂ ಹೇಳಿಲ್ಲ. ನಾನಾ ವಿಶ್ಲೇಷಣೆಗಳಿಗೆ ಉತ್ತರಿಸಲು ಆಗುತ್ತದೆಯೇ? ಒಬ್ಬೊಬ್ಬರು ಒಂದೊಂದು ರೀತಿಯ ವಿಶ್ಲೇಷಣೆ ಮಾಡುವುದು ಸಹಜ.

ಡಿ.ಕೆ.ಶಿವಕುಮಾರ್ ಅವರು ನನಗೆ ಆತಂಕವಿದೆ ಎಂದು ಎಲ್ಲಾದರು ಹೇಳಿದ್ದಾರೆಯೇ? ಸುಮ್ಮನೆ ಹೇಳುವುದು ಬೇಡ. ನಿನ್ನೆ ಇಡೀ ದಿನ ಅವರೊಂದಿಗೆ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದೇನೆ. ಪತ್ರಿಕಾಗೋಷ್ಟಿಯನ್ನು ನಡೆಸಿದ್ದೇವೆ. ನನಗೆ ನಿಮ್ಮ ಆತಂಕ ಇದೆ ಅಂತ ಅವರು ಹೇಳೇ ಇಲ್ಲ ಎಂದು ಪ್ರತಿಕ್ರಿಯಿಸಿದರು. ದೆಹಲಿಯಲ್ಲಿ ಎಐಸಿಸಿ ಕಚೇರಿ ನಿರ್ಮಾಣಕ್ಕೆ 2009ರಲ್ಲಿ ಅಡಿಗಲ್ಲು ಹಾಕಲಾಗಿತ್ತು. ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿತ್ತು. ಈಗ ಉದ್ಘಾಟನೆಗೆ ಸಿದ್ಧವಾಗಿದ್ದು,‌‌ ಜನವರಿ 15ರಂದು ನಡೆಯುವ ಉದ್ಘಾಟನಾ‌ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವುದಾಗಿ ತಿಳಿಸಿದರು.

ನಕ್ಸಲರು ಮುಖ್ಯಮಂತ್ರಿಯವರ ಕಚೇರಿಗೆ ಬಂದು ಶರಣಾಗತರಾಗಿರುವುದರಲ್ಲಿ‌ ತಪ್ಪೇನಿದೆ. ನಕ್ಸಲ್ ಚಟುವಟಿಕೆಗೆ ಬರಬಾರದು‌ ಎಂಬ ಸಂದೇಶ ಇಡೀ ಸಮಾಜಕ್ಕೆ ತಲುಪಬೇಕು. ಮುಖ್ಯಮಂತ್ರಿಯವರ ಮುಂದೆ ಶರಣಾದಾಗ ರಾಜ್ಯದಲ್ಲಿ ಎಲ್ಲರಿಗೂ ಗೊತ್ತಾಗುತ್ತದೆ. ನಕ್ಸಲರ‌ ಪರಿವರ್ತನೆಗೆ ಸರ್ಕಾರ ಅವಕಾಶ ಕೊಟ್ಟಿದೆ. ಅದರಲ್ಲಿ ತಪ್ಪೇನಿದೆ‌. ಬಿಜೆಪಿ ಶಾಸಕ‌ ಸುನೀಲ್ ಕ್ಷೇತ್ರದಲ್ಲಿ ನಕ್ಸಲ್ ಚಟುವಟಿಕೆ ಜಾಸ್ತಿ ಇದೆ. ಎಎನ್ಎಫ್ ಕಾರ್ಕಳದಲ್ಲಿ ಇದೆಯಲ್ಲವೇ? ಎಂದು ಪ್ರಶ್ನಿಸಿದರು.

ನಕ್ಸಲರು ಶರಣಾದಾಗ ಶಸ್ತ್ರಾಸ್ತ್ರಗಳು ಇರಲಿಲ್ಲ. ಶಸ್ತ್ರಾಸ್ತ್ರಗಳನ್ನು ಬಿಟ್ಟು ಬಂದಿದ್ದಾರೆ. ಎಲ್ಲಿ ಎಸೆದು ಬಂದಿದ್ದಾರೆ ಎಂಬುದರ ಕುರಿತು ಪೊಲೀಸರು ತನಿಖೆ ನಡೆಸಲಿದ್ದಾರೆ. ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ಶೇ. 99ರಷ್ಟು ಕೊನೆಯಾಗಿದೆ‌. ಶರಣಾಗತರಾದ ನಕ್ಸಲರಲ್ಲಿ ತಮಿಳುನಾಡು, ಕೇರಳ ರಾಜ್ಯದವರು ಇದ್ದಾರೆ. ನಮ್ಮ‌ ಮುಖ್ಯಮಂತ್ರಿಯವರು ಸಂಬಂಧಪಟ್ಟ ರಾಜ್ಯಗಳ ಮುಖ್ಯಮಂತ್ರಿಯವರೊಂದಿಗೆ ಮಾತನಾಡುವುದಾಗಿ ತಿಳಿಸಿದ್ದಾರೆ. ಶರಣಾದ ನಕ್ಸಲಿಗರ ಮೇಲೆ ಬೇರೆ ರಾಜ್ಯಗಳಲ್ಲಿ ಪ್ರಕರಣಗಳಿವೆ. ಆ ರಾಜ್ಯದ ಸರ್ಕಾರಗಳು ಸಹ ತೀರ್ಮಾನ ಕೈಗೊಳ್ಳಬೇಕು ಎಂದರು.

ತಿರುಪತಿಯಲ್ಲಿ ಕಾಲ್ತುಳಿತದಿಂದ ಭಕ್ತರು ಸಾವನ್ನಪ್ಪಿರುವುದು ದುರದೃಷ್ಟಕರ. ಈ ರೀತಿ ಆಗಬಾರದಿತ್ತು. ಮೃತರ ಕುಟುಂಬದವರಿಗೆ ಭಗವಂತನು ದುಃಖ ಭರಿಸುವ ಶಕ್ತಿ ಕರುಣಿಸಲಿ. ಈವರೆಗಿನ ಮಾಹಿತಿ ಪ್ರಕಾರ, ಘಟನೆಯಲ್ಲಿ ರಾಜ್ಯದವರು ಇದ್ದರು ಎಂಬುದು ಗೊತ್ತಾಗಿಲ್ಲ ಎಂದು ಹೇಳಿದರು.

Share. Facebook Twitter LinkedIn WhatsApp Email

Related Posts

GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ತಾಲ್ಲೂಕು ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ಸಂಗ್ರಹಣೆ ವ್ಯವಸ್ಥೆ ಜಾರಿ

17/06/2025 8:45 PM1 Min Read

GOOD NEWS: ಶೀಘ್ರವೇ ರಾಜ್ಯದಲ್ಲಿ 11 ಸರ್ಕಾರಿ ಬ್ಲಡ್ ಬ್ಯಾಂಕ್ ಅನುಷ್ಠಾನ: ಸಚಿವ ದಿನೇಶ್ ಗುಂಡೂರಾವ್

17/06/2025 8:39 PM2 Mins Read

MGNVY ಕ್ರಿಯಾಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ಬಿಎಸ್ ಸುರೇಶ್ ಎಚ್ಚರಿಕೆ

17/06/2025 8:34 PM2 Mins Read
Recent News

GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ತಾಲ್ಲೂಕು ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ಸಂಗ್ರಹಣೆ ವ್ಯವಸ್ಥೆ ಜಾರಿ

17/06/2025 8:45 PM

GOOD NEWS: ಶೀಘ್ರವೇ ರಾಜ್ಯದಲ್ಲಿ 11 ಸರ್ಕಾರಿ ಬ್ಲಡ್ ಬ್ಯಾಂಕ್ ಅನುಷ್ಠಾನ: ಸಚಿವ ದಿನೇಶ್ ಗುಂಡೂರಾವ್

17/06/2025 8:39 PM

MGNVY ಕ್ರಿಯಾಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ಬಿಎಸ್ ಸುರೇಶ್ ಎಚ್ಚರಿಕೆ

17/06/2025 8:34 PM

‘ಸುರಕ್ಷತೆಯತ್ತ ಗಮನಹರಿಸಿ, ಹಾರಾಟದ ಕಾರ್ಯಾಚರಣೆ ಬಿಗಿಗೊಳಿಸಿ’ : ಅಧಿಕಾರಿಗಳಿಗೆ ‘ಏರ್ ಇಂಡಿಯಾ’ ಸೂಚನೆ

17/06/2025 8:26 PM
State News
KARNATAKA

GOOD NEWS: ರಾಜ್ಯದ ಜನತೆಗೆ ಗುಡ್ ನ್ಯೂಸ್: ತಾಲ್ಲೂಕು ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ಸಂಗ್ರಹಣೆ ವ್ಯವಸ್ಥೆ ಜಾರಿ

By kannadanewsnow0917/06/2025 8:45 PM KARNATAKA 1 Min Read

ಬೆಂಗಳೂರು: ತಾಯಂದಿರ ಸಾವುಗಳನ್ನು ತಡೆಯುವಲ್ಲಿ ರಕ್ತದ ಪಾತ್ರ ಪ್ರಮುಖವಾಗಿದೆ. 147 ತಾಲೂಕು ಆಸ್ಪತ್ರೆಗಳಲ್ಲಿ ಪ್ಲಾಸ್ಮಾ ಸಂಗ್ರಹಣೆ ವ್ಯವಸ್ಥೆ ಜಾರಿಗೆ ತರಲಾಗುತ್ತಿದ್ದು,…

GOOD NEWS: ಶೀಘ್ರವೇ ರಾಜ್ಯದಲ್ಲಿ 11 ಸರ್ಕಾರಿ ಬ್ಲಡ್ ಬ್ಯಾಂಕ್ ಅನುಷ್ಠಾನ: ಸಚಿವ ದಿನೇಶ್ ಗುಂಡೂರಾವ್

17/06/2025 8:39 PM

MGNVY ಕ್ರಿಯಾಯೋಜನೆ ಸಿದ್ಧಪಡಿಸದ ಅಧಿಕಾರಿಗಳ ವಿರುದ್ಧ ಕ್ರಮ: ಸಚಿವ ಬಿಎಸ್ ಸುರೇಶ್ ಎಚ್ಚರಿಕೆ

17/06/2025 8:34 PM

BREAKING : ಶಿವಮೊಗ್ಗದಲ್ಲಿ 30 ಸಾವಿರ ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ‘RDWSD’ ಸೆಕ್ಷನ್ ಅಧಿಕಾರಿ

17/06/2025 8:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.