ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಇದೀಗ ಇತಿಹಾಸ ಸೇರಿದ್ದು ಇನ್ನು ಮುಂದೆ ಗ್ರೇಟರ್ ಬೆಂಗಳೂರು ಪ್ರಧಿಕಾರವಾಗಿ ಬದಲಾಗಿದೆ. ಇಂದಿನಿಂದಲೇ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿಯಾಗಿದೆ. ಈ ಒಂದು ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಸಿಎಂ ಸಿದ್ದರಾಮಯ್ಯ ಅಧ್ಯಕ್ಷರಾಗಿದ್ದು, ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವಿಚಾರವಾಗಿ ವಿಪಕ್ಷ ನಾಯಕ ಆರ್ ಅಶೋಕ್ ಇದು ಗ್ರೇಟರ್, ಬೆಂಗಳೂರು ಅಲ್ಲ ಕ್ವಾರ್ಟರ್ ಬೆಂಗಳೂರು ಎಂದು ವಾಗ್ದಾಳಿ ನಡೆಸಿದರು.
ಗ್ರೇಟರ್ ಬೆಂಗಳೂರಿಗೆ ವಿಪಕ್ಷ ನಾಯಕ ಆರ್ ಅಶೋಕ ಕಿಡಿ ಕಾರಿದ್ದು, ಇದು ಗ್ರೇಟರ್ ಬೆಂಗಳೂರು ಅಲ್ಲ ಕ್ವಾರ್ಟರ್ ಬೆಂಗಳೂರು. ತುಘಲಕ್ ದರ್ಬಾರ್ ಅನ್ನೋದು ಇದನ್ನೇ. ಕೆಂಪೇಗೌಡರು ನಾಲ್ಕು ಗೋಪುರ ಕಟ್ಟಿ ಒಂದು ಬೆಂಗಳೂರು ಮಾಡಿದರು. ಕಾಂಗ್ರೆಸಿಗರು ಬೆಂಗಳೂರಿನ ಒಂದು ಬಾಗಿಲು ಮೂರು ಮಾಡಿದ್ದಾರೆ. ಯಾರದ್ದೋ ಆಸ್ತಿಗೆ ಬೆಲೆ ಬರಬೇಕು ಎಂದು ಮಾಡುವುದಲ್ಲ ಎಂದು ಗ್ರೇಟರ್ ಬೆಂಗಳೂರು ಕುರಿತು ಆರ್ ಅಶೋಕ್ ವಾಗ್ದಾಳಿ ನಡೆಸಿದರು.
ಬೆಂಗಳೂರು ಒಡೆದರೆ ಕೆಂಪೇಗೌಡರಿಗೆ ದ್ರೋಹ ಬಗೆದಂತೆ. ಬೆಂಗಳೂರು ಮೂರು ಭಾಗ ಆದರೆ ಆದಾಯ ಏನು ಬರುತ್ತದೆ? ಕನ್ನಡಿಗರೇ ಮೇಯರ್ ಆಗುತ್ತಾರೆ ಎಂದು ಗ್ಯಾರಂಟಿ ಕೊಡುತ್ತಾರೆ? ಎಂದು ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನಿಸಿದರು.