ಬೆಂಗಳೂರು : ಪ್ರಸಕ್ತ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ಬಾರಿ 69 ಸಾಧಕರ ಹೆಸರು ಫೈನಲ್ ಮಾಡಲಾಗಿದೆ.
ನವೆಂಬರ್ 1 ರ ಕನ್ನಡ ರಾಜ್ಯೋತ್ಸವದ ದಿನ ನಾಡಿನ 69 ಮಂದಿ ಪ್ರಶಸ್ತಿ ಪುರಸ್ಕೃತರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಲಾಗುತ್ತದೆ. ಪ್ರಶಸ್ತಿ ಪುರಸ್ಕೃತರ ಆಯ್ಕೆಗೆ ಇತ್ತೀಚಿಗೆ ಆಯ್ಕೆ ಸಮಿತಿ ಮಾಡಲಾಗಿತ್ತು. ಈ ಸಮಿತಿಯ ಶಿಫಾರಸುಗಳ ಅನ್ವಯ ಗುರುವಾರ ಉನ್ನತ ಮಟ್ಟದ ಆಯ್ಕೆ ಸಮಿತಿ ಸಭೆ ನಡೆಸಲಾಗಿದೆ.
ಈ ಬಾರಿ ಕನ್ನಡ ರಾಜ್ಯೋತ್ಸವದಲ್ಲಿ 69 ಮಂದಿ ಸಾಧಕರ ಹೆಸರು ಫೈನಲ್ ಮಾಡಲಾಗಿದ್ದು, ಅ.30 ರಂದು ಪುರಸ್ಕೃತರ ಹೆಸರು ಘೋಷಣೆ ಆಗಲಿದೆ ಎನ್ನಲಾಗಿದೆ.