ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಕೊಟ್ಟ ಕ್ಲೀನ್ ಚಿಟ್ ಗೆ ನ್ಯಾಯಾಲಯ ಇಂದು ತೀರ್ಪು ನೀಡಲಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಕೊಟ್ಟ ಕ್ಲೀನ್ ಚಿಟ್ ಗೆ ನ್ಯಾಯಾಲಯ ಇಂದು ತೀರ್ಪು ಪ್ರಕಟಿಸಲಿದೆ. ಲೋಕಾಯುಕ್ತ ಸಲ್ಲಿಸಿದ್ದ ಬಿ ರಿಪೋರ್ಟ್ ಪ್ರಶ್ನಿಸಿ ದೂರುದಾರ ಸ್ನೇಹಮಯಿ ಕೃಷ್ಣ ಕೋರ್ಟ್ ಮೆಟ್ಟಿಲೇರಿದ್ದರು.ವಾದ ಆಲಿಸಿದ್ದ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ನ್ಯಾಯಾಲಯ ಬಿ ರಿಪೋರ್ಟ್ ಒಪ್ಪಿದ್ರೆ ಸಿಎಂ ಕುಟುಂಬಕ್ಕೆ ಬಿಗ್ ರಿಲೀಫ್ ಸಿಗಲಿದೆ.
ಲೋಕಾಯುಕ್ತದಿಂದ ಇಂದು ಪ್ರಕರಣದ ಅಂತಿಮ ವರದಿ ಸಲ್ಲಿಕೆಯಾಗಲಿದೆ. ಅಂತಿಮ ವರದಿ ಸಲ್ಲಿಕೆ ಬಳಿಕ ಬಿ ರಿಪೋರ್ಟ್ ಆದೇಶ ಹೊರಬೀಳಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಯವರು ಮೂಡಾದಿಂದ ಪಡೆದಿದ್ದ 14 ಸೈಟ್ಗಳ ಬಗ್ಗೆ ತನಿಖೆ ನಡೆಸಿದ್ದ ಲೋಕಾಯುಕ್ತ ಬಿ ರಿಪೋರ್ಟ್ ಸಲ್ಲಿಸಿತ್ತು.








