Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ದೆಹಲಿಯ ದ್ವಾರಕಾದ ಅಪಾರ್ಟ್ಮೆಂಟ್ನಲ್ಲಿ ಭಾರಿ ಬೆಂಕಿ ಅವಘಡ | Firebreaks

10/06/2025 12:23 PM

BIG NEWS : ಕ್ರಿಕೆಟ್ ಸಂಭ್ರಮದ ಕಾಲ್ತುಳಿತ-ಕರ್ನಾಟಕ ಇತಿಹಾಸದ ಕರಾಳ ಅಧ್ಯಾಯ : CM ಸಿದ್ದರಾಮಯ್ಯಗೆ ಬಿ.ವೈ.ವಿಜಯೇಂದ್ರ ಬಹಿರಂಗ ಪತ್ರ.!

10/06/2025 12:21 PM

GOOD NEWS : ‘PM ಸೂರ್ಯಘರ್’ ಯೋಜನೆಯಡಿ ಸಿಗಲಿದೆ ಉಚಿತ ‘ಸೌರವಿದ್ಯುತ್’ : ಅರ್ಜಿ ಸಲ್ಲಿಕೆಗೆ ಈ ದಾಖಲೆಗಳು ಕಡ್ಡಾಯ.!

10/06/2025 12:14 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಕ್ರಿಕೆಟ್ ಸಂಭ್ರಮದ ಕಾಲ್ತುಳಿತ-ಕರ್ನಾಟಕ ಇತಿಹಾಸದ ಕರಾಳ ಅಧ್ಯಾಯ : CM ಸಿದ್ದರಾಮಯ್ಯಗೆ ಬಿ.ವೈ.ವಿಜಯೇಂದ್ರ ಬಹಿರಂಗ ಪತ್ರ.!
KARNATAKA

BIG NEWS : ಕ್ರಿಕೆಟ್ ಸಂಭ್ರಮದ ಕಾಲ್ತುಳಿತ-ಕರ್ನಾಟಕ ಇತಿಹಾಸದ ಕರಾಳ ಅಧ್ಯಾಯ : CM ಸಿದ್ದರಾಮಯ್ಯಗೆ ಬಿ.ವೈ.ವಿಜಯೇಂದ್ರ ಬಹಿರಂಗ ಪತ್ರ.!

By kannadanewsnow5710/06/2025 12:21 PM

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್ ಸಿಬಿ ತಂಡದ ಸಂಭ್ರಮಾಚರಣೆ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಿಂದ 11 ಜನ ಸಾವಿಗೀಡಾದ ಘಟನೆಗೆ ಸಂಬಂಧಿಸಿದಂತೆ ಸರಕಾರದ ನಿರ್ಧಾರ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಿರಂಗ ಪತ್ರ ಬರೆದಿದ್ದಾರೆ.

ಪತ್ರದಲ್ಲಿ ಏನಿದೆ?

ಗೌರವಾನ್ವಿತರೇ, ಕಳೆದ ಜೂನ್ 4 ಕರ್ನಾಟಕದ ಇತಿಹಾಸದಲ್ಲಿ ಕರಾಳ ಅಧ್ಯಾಯದ ದಿನ. ಕ್ರಿಕೆಟ್ ಅಭಿಮಾನದ ಲಾಭಗಳಿಸುವ ಸ್ವಾರ್ಥದ ದುರಾಲೋಚನೆಯಿಂದ ನೀವು ಮತ್ತು ನಿಮ್ಮ ಸರ್ಕಾರ ತೆಗೆದುಕೊಂಡ ಬೇಜವಾಬ್ದಾರಿ ಹಾಗೂ ಹೊಣೆಗೇಡಿತನದ ನಿರ್ಧಾರದಿಂದಾಗಿ ಅಮಾಯಕ ಯುವಜೀವಗಳು ಬಲಿಯಾಗಿವೆ. ಜಮಾವಣೆಗೊಂಡಿದ್ದ ಸಾವಿರಾರು ಜನರು ನೋವು-ಸಂಕಷ್ಟವನ್ನು ಅನುಭವಿಸಿದ್ದಾರೆ. ಕುಟುಂಬ ಬೆಳಗಬೇಕಿದ್ದ. ಉಜ್ವಲ ಭವಿಷ್ಯದ ಕನಸು ಕಂಡಿದ್ದ 11 ಯುವ ಜನರ ಸಾವು ಆ ಕುಟುಂಬಗಳ ನೆಮ್ಮದಿಯನ್ನು ಕಿತ್ತುಕೊಂಡು ಹೆತ್ತವರು ನಿತ್ಯ ಕಣ್ಣೀರಿಡುವಂತಾಗಿದೆ. ಇಡೀ ಘಟನೆಯಿಂದಾಗಿ ಈ ಕ್ಷಣಕ್ಕೂ ಇಡೀ ರಾಜ್ಯ ಮಮ್ಮಲ ಮರುಗುತ್ತಿದೆ.

ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಘಟನೆ, ಕರ್ನಾಟಕದ ಘನತೆಗೆ ಕಪ್ಪು ಮಸಿ ಬಳಿದಿದೆ. ನಮ್ಮ ರಾಜ್ಯ ಅಸುರಕ್ಷತೆಯ ತಾಣ ಎಂಬ ಸಂದೇಶ ರವಾನೆಯಾಗಿದೆ. ಇಷ್ಟಾಗಿಯೂ ‘ಸರ್ಕಾರಕ್ಕೂ ಈ ಘಟನೆಗೂ ಸಂಬಂಧವಿಲ್ಲ, ಸರ್ಕಾರ ಈ ಘಟನೆಯ ಜವಾಬ್ದಾರಿಯನ್ನು ಹೊರಲಾಗದು’ ಎಂಬ ನಿಮ್ಮ ಹೇಳಿಕೆ ಪಲಾಯನವಾದ ಹಾಗೂ ನಿರ್ಲಜ್ಜತನದ ಹೊಣೆಗೇಡಿತನವನ್ನು ಪ್ರತಿಬಿಂಬಿಸುತ್ತಿದೆ. ಅಧಿಕಾರಕ್ಕೆ ಅಂಟಿಕೊಳ್ಳುವ ಭಂಡತನದ ನಿಮ್ಮ ನಡೆ ಪರಂಪರೆಯ ಕರ್ನಾಟಕದ ನೈತಿಕ ರಾಜಕಾರಣವನ್ನು ಅವಮಾನಿಸುತ್ತಿದೆ.

‘ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಕಾರ್ಯಕ್ರಮದಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ, ಆದ್ದರಿಂದ ಇದರಲ್ಲಿ ಸರ್ಕಾರದ ಯಾವ ತಪ್ಪ ಇಲ್ಲ, ದುರ್ಘಟನೆ ನಡೆದಿರುವುದು ಚಿನ್ನಸ್ವಾಮಿ ಕ್ರೀಡಾಂಗಣದ ಆವರಣದಲ್ಲಿ’ ಎಂದು ಹೇಳಿಕೆ ನೀಡಿದ್ದೀರಿ. ಸುದೀರ್ಘ ರಾಜಕಾರಣ ಹಾಗೂ ಅಧಿಕಾರದ ಅನುಭವ ಹೊಂದಿರುವ ನಿಮ್ಮ ಬಾಯಿಂದ ಹೊರಟಿರುವ ಇಂಥಾ ಮಾತುಗಳಿಂದಾಗಿ ನಿಮ್ಮ ಪ್ರಬುದ್ಧತೆಯನ್ನು ನಾವು ಶಂಕಿಸುವಂತಾಗಿದೆ. ನಿಮ್ಮ ಹೇಳಿಕೆಯಿಂದಾಗಿ ನೀವು ಇಡೀ ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧಕ್ಕೆ ಮಾತ್ರ ಮುಖ್ಯಮಂತ್ರಿಯೋ ಎಂಬ ಪ್ರಶ್ನೆ ಕಾಲ್ತುಳಿತದಲ್ಲಿ ನೊಂದವರು ಕೇಳುತ್ತಿದ್ದಾರೆ. ಪೊಲೀಸರ ರಕ್ಷಣೆ ನಿಮಗೆ, ನಿಮ್ಮ ಮಂತ್ರಿ ಮಂಡಲಕ್ಕೆ, ನಿಮ್ಮ ಕುಟುಂಬಕ್ಕೆ, ನಿಮ್ಮ ಅಧಿಕಾರಿಗಳಿಗೆ ಮಾತ್ರ ಹೊರತೂ ಸ್ಟೇಡಿಯಂ ಬಳಿಯ ದುರಂತದಲ್ಲಿ ಸಾವು-ನೋವು ಅನುಭವಿಸಿದ ಜನಸಾಮಾನ್ಯರಿಗಲ್ಲ ಎಂಬುದು ನಿಮ್ಮ ಮಾತಿನ ಧಾಟಿಯಲ್ಲಿ ವ್ಯಕ್ತವಾಗುತ್ತಿದೆ. ಕೂಗಳತೆಯ ದೂರದಲ್ಲಿ ಈ ದುರಂತ ಘಟನೆ ನಡೆದರೂ ಎರಡು ಗಂಟೆಯ ಅಂತರದವರೆಗೂ (3.50 ರಿಂದ 5.45) ತಮಗೆ ದುರಂತದ ಕುರಿತು ಮಾಹಿತಿ ಸಿಗಲಿಲ್ಲ ಎಂಬ ನಿಮ್ಮ ಹೇಳಿಕೆ ಗಮನಿಸಿದರೆ ಆಡಳಿತ ವ್ಯವಸ್ಥೆ ನಿಮ್ಮ ಕೈತಪ್ಪಿ ದಿಕ್ಕೆಟ್ಟು ಹೋಗಿದೆ ಎಂಬುದು ವೇದ್ಯವಾಗುತ್ತದೆ. ಇಂತಹ ದುರ್ಬಲ ಸಮರ್ಥನೆಯ ಮೂಲಕ ನೀವು ಜವಾಬ್ದಾರಿಯಿಂದ ನುಣುಚಿಕೊಳ್ಳಲಾಗದು.

ಪೋಲಿಸ್ ಅಧಿಕಾರಿಗಳ ಮುನ್ನೆಚ್ಚರಿಕೆಯ ಸ್ಪಷ್ಟ ಸೂಚನೆಯ ಪತ್ರವನ್ನು ಕಣ್ಣೆತ್ತಿಯೂ ನೋಡದೆ ಪಕ್ಕಕ್ಕೆ ಸರಿಸಿದ ನಿಮ್ಮ ಇಡೀ ಅಧಿಕಾರ ವ್ಯವಸ್ಥೆ “ಕ್ರಿಕೆಟಿಗರ ಸನ್ಮಾನ ಸಮಾರಂಭಕ್ಕೆ ಹರಿದು ಬರುವ ಜನಸಾಗರದ ಮೆಚ್ಚುಗೆಯನ್ನು ಪಡೆಯಬೇಕೆಂಬ ರಾಜಕೀಯ ಉನ್ಮಾದದಲ್ಲಿ ತೇಲಿಹೋಗಿತ್ತು”. ಇದರ ಪರಿಣಾಮವಾಗಿ ಯೋಜಿತವಲ ಯೋಜಿತವಲ್ಲದ ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಉಂಟಾಗಬಹುದಾದ ಅವಘಡಗಳನ್ನು ಪರಾಮರ್ಶಿಸದೇ, ಏಕಪಕ್ಷೀಯ ಸರ್ವಾಧಿಕಾರಿ ಆದೇಶದಿಂದಾಗಿ ಅಧಿಕಾರಿಗಳು ನಿಸ್ಸಹಾಯಕರಾಗಿ ಅದನ್ನು ಪಾಲಿಸುವ ಅನಿವಾರ್ಯತೆಗೆ ಸಿಲುಕಿದ್ದು ಅಸಲೀ ಸತ್ಯ ಎಂಬುದು ಇಡೀ ರಾಜ್ಯದ ಜನತೆಗೇ ತಿಳಿದಿದೆ.

“ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು” ಎಂಬಂತೆ ಬೆಂಗಳೂರು ಪೋಲಿಸ್ ಆಯುಕ್ತರೂ ಸೇರಿದಂತೆ ಐವರು ಅಧಿಕಾರಿಗಳನ್ನು ಅಮಾನತ್ತುಗೊಳಿಸಿ, ಜನರ ಆಕ್ರೋಶವನ್ನು ತಣಿಸಬಹುದು ಎಂಬ ದುರಾಲೋಚನೆಯಿಂದ ಅವರನ್ನು ಬಲಿಪಶು ಮಾಡಿದಿರಿ. ನೀವು, ನಿಮ್ಮ ಉಪ-ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳ ಬೇಜವಾಬ್ದಾರಿತನದಿಂದಾಗಿ ಹಾಗೂ ನಿಮ್ಮ ಸುತ್ತಲಿನ ಭಟ್ಟಂಗಿಗಳ ಸಲಹೆಯನ್ನು ಅನುಸರಿಸಲಾಗಿ ಇಂತಹ ಘೋರ ಘಟನೆ ಸಂಭವಿಸಿತು ಎಂಬುದು “ಅಂಗೈ ಹುಣ್ಣಿನಷ್ಟೇ” ನಿಖರವಾಗಿದೆ.

ಇಡೀ ಘಟನೆಯ ಕುರಿತು ಈವರೆವಿಗೂ ನಿಮ್ಮ ಬಾಯಿಂದ ಕನಿಷ್ಟ ಪಶ್ಚಾತಾಪದ ಮಾತೂ ಹೊರಬಂದಿಲ್ಲ. ಅನಿವಾರ್ಯವೆಂಬಂತೆ ಜೀವ ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ಘೋಷಿಸಿರುವುದನ್ನೇ ಬಹುದೊಡ್ಡ ಸ್ಪಂದನೆ ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದೀರಿ. ನಿಮ್ಮ ಪರಿಹಾರಗಳು ಅಮೂಲ್ಯ ಜೀವಗಳನ್ನು ಆ ಕುಟುಂಬಗಳಿಗೆ ಮರಳಿಸಲಾಗದು. ಆದರೆ ನ್ಯಾಯವಲ್ಲದ ಸಾವುಗಳಿಗೆ ಕನಿಷ್ಟ ನ್ಯಾಯ ಸಿಗಬೇಕೆಂದರೆ ಹೊಣೆಗೇಡಿತನದ ನಿರ್ಧಾರ ಕೈಗೊಂಡ ಉನ್ನತ ಸ್ಥಾನದಲ್ಲಿರುವ ನೀವು ನೈತಿಕ ಜವಾಬ್ದಾರಿಯನ್ನು ಹೊರಲೇಬೇಕು. ಇಲ್ಲವಾದರೆ ಇತಿಹಾಸ ಎಂದೂ ನಿಮ್ಮನ್ನು ಕ್ಷಮಿಸಲಾರದು.

ಘನ ಉಚ್ಚ ನ್ಯಾಯಾಲಯ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದೆ. ನಿಮ್ಮ ವಿವೇಚನೆಯಿಂದ ನಿಯೋಜಿಸಲ್ಪಟ್ಟ ನ್ಯಾಯಮೂರ್ತಿಗಳ ಮೂಲಕ ನ್ಯಾಯಾಂಗ ತನಿಖೆಗೂ ಆದೇಶಿಸಿದ್ದೀರಿ. ನಿಮ್ಮದೇ ಮುಷ್ಠಿಯಲ್ಲಿರುವ ಅಧಿಕಾರ ವ್ಯವಸ್ಥೆಯಿಂದ ತನಿಖೆ ನಡೆಸುವ ಕಣ್ಣೆರೆಸುವ ತಂತ್ರವನ್ನೂ ಅನುಸರಿಸುತ್ತಿದ್ದೀರಿ. ಇದರಲ್ಲಿ ಘನ ಉಚ್ಚನ್ಯಾಯಾಲಯದ ವಿಚಾರಣೆಯೊಂದನ್ನು ಹೊರತುಪಡಿಸಿ ಇನ್ಯಾವುದೇ ತನಿಖೆಗಳಿಂದಲೂ ನ್ಯಾಯ ಸಿಗುತ್ತದೆ, ತಪ್ಪಿತಸ್ಥರ ತಲೆದಂಡವಾಗುತ್ತದೆ ಎಂಬ ನಂಬಿಕೆ ರಾಜ್ಯದ ಜನತೆಗೆ ಉಳಿದಿಲ್ಲ. ಏಕೆಂದರೆ ನೀವು ಅಧಿಕಾರದಲ್ಲಿ ಉಳಿದುಕೊಳ್ಳಲು ಇಡೀ ಪೋಲಿಸ್ ವ್ಯವಸ್ಥೆಯ ಆತ್ಮಸ್ಥೆರ್ಯವನ್ನೇ ಕುಗ್ಗುವಂತೆ ಈಗಾಗಲೇ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಿದ್ದೀರಿ. ಸಾಮಾನ್ಯ ಪೇದೆಯಿಂದ ಹಿಡಿದು ಅಧಿಕಾರಿಗಳವರೆಗಿನ ಇಡೀ ಪೊಲೀಸ್ ವ್ಯವಸ್ಥೆ ನಿಮ್ಮ ನಿರ್ಧಾರಗಳಿಂದ ಈಗಾಗಲೇ ಘಾಸಿಗೊಂಡಿದೆ. ಈಗಾಗಲೇ ಹಳಿ ತಪ್ಪಿರುವ ಕಾನೂನು ಸುವ್ಯವಸ್ಥೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅಸ್ತವ್ಯಸ್ತಗೊಂಡರೆ ಅದರಲ್ಲಿ ಆಶ್ಚರ್ಯವೇನೂ ಇಲ್ಲ.

ಕರ್ನಾಟಕದ ಇತಿಹಾಸದಲ್ಲಿ ಜೂನ್ 4 ರಂದು ನಡೆದ ಕಾಲ್ತುಳಿತದ ಘೋರ ದುರಂತದ ಅಧ್ಯಾಯದಲ್ಲಿ ಕಳಂಕಿತ ಸ್ಥಾನದಲ್ಲಿರುವ ನೀವು, ಉಪ-ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ರವರು ಹಾಗೂ ಗೃಹಮಂತ್ರಿ ಡಾ. ಜಿ. ಪರಮೇಶ್ವರ್ ರವರು ನಿಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡುವ ನಿಟ್ಟಿನಲ್ಲಿ ಆತ್ಮಾವಲೋಕನ ಮಾಡಿಕೊಳ್ಳಲು ಇನ್ನೂ ಕಾಲ ಮಿಂಚಿಲ್ಲ ಎಂಬುದನ್ನು ನಿಮಗೆ ಮನವರಿಕೆ ಮಾಡಿಕೊಡಲು ಬಯಸುತ್ತೇನೆ. ಕರ್ನಾಟಕದ ರಾಜಕಾರಣದ ಇತಿಹಾಸದಲ್ಲಿ ಆರೋಪಗಳು ಬಂದಾಗ ನೈತಿಕ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಿದ ಪ್ರಸಂಗಗಳು ಪರಂಪರೆಯ ರಾಜಕಾರಣದ ಘನತೆಯ ಬಿಂದುಗಳಾಗಿವೆ.

ಗೌರವಾನ್ವಿತ ಮುಖ್ಯಮಂತ್ರಿಗಳಾಗಿದ್ದ ಮಾನ್ಯರುಗಳಾದ ಎಸ್. ನಿಜಲಿಂಗಪ್ಪನವರು, ವೀರೇಂದ್ರ ಪಾಟೀಲರು, ಡಿ. ದೇವರಾಜ ಅರಸರು, ರಾಮಕೃಷ್ಣ ಹೆಗಡೆಯವರು, ಎಸ್.ಆರ್. ಬೊಮ್ಮಾಯಿರವರು, ಹೆಚ್. ಡಿ. ದೇವೇಗೌಡರು, ಜೆ. ಹೆಚ್. ಪಟೇಲ್‌ರವರು, ಎಸ್. ಎಂ. ಕೃಷ್ಣರವರು ಹಾಗೂ ಬಿ.ಎಸ್. ಯಡಿಯೂರಪ್ಪನವರು ಸೇರಿದಂತೆ ಇತರರು ಮುಖ್ಯಮಂತ್ರಿಗಳ ಸ್ಥಾನದಲ್ಲಿ ಕುಳಿತು ಕರ್ನಾಟಕದ ಜನರ ಹೃದಯದಲ್ಲಿ ಶಾಶ್ವತ ಗೌರವ-ಅಭಿಮಾನಗಳನ್ನು ಉಳಿಸಿಕೊಂಡಿದ್ದಾರೆ. ಈ ಪರಂಪರೆ ಮುಂದುವರೆಯಬೇಕೆನ್ನುವುದು ಕರ್ನಾಟಕದ ಜನತೆಯ ಅಭಿಪ್ರಾಯವಾಗಿದೆ. ಇದಕ್ಕೆ ಅಪಚಾರವಾಗದಂತೆ ತಾವು ನಡೆದುಕೊಳ್ಳಬೇಕೆನ್ನುವುದು ನಮ್ಮ ಒತ್ತಾಯವಾಗಿದೆ.

  

BIG NEWS: Trampled cricket celebrations - a dark chapter in Karnataka's history: B.Y. Vijayendra's open letter to CM Siddaramaiah!
Share. Facebook Twitter LinkedIn WhatsApp Email

Related Posts

GOOD NEWS : ‘PM ಸೂರ್ಯಘರ್’ ಯೋಜನೆಯಡಿ ಸಿಗಲಿದೆ ಉಚಿತ ‘ಸೌರವಿದ್ಯುತ್’ : ಅರ್ಜಿ ಸಲ್ಲಿಕೆಗೆ ಈ ದಾಖಲೆಗಳು ಕಡ್ಡಾಯ.!

10/06/2025 12:14 PM2 Mins Read

BIG NEWS : ಸಾರ್ವಜನಿಕರೇ ಮುಖ್ಯ ಮಾಹಿತಿ : ನಿಮ್ಮ ಬಳಿ 10 ವರ್ಷದ ಹಳೆಯ ‘ಆಧಾರ್ ಕಾರ್ಡ್’ ಇದ್ರೆ ಜೂನ್ 14ರೊಳಗೆ ತಪ್ಪದೇ ಈ ಕೆಲಸ ಮಾಡಿ.!

10/06/2025 11:58 AM2 Mins Read

BREAKING : ಬೆಂಗಳೂರು ಕಾಲ್ತುಳಿತ ದುರಂತ ಕೇಸ್ : ತನಿಖೆಯ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ.!

10/06/2025 11:35 AM1 Min Read
Recent News

ದೆಹಲಿಯ ದ್ವಾರಕಾದ ಅಪಾರ್ಟ್ಮೆಂಟ್ನಲ್ಲಿ ಭಾರಿ ಬೆಂಕಿ ಅವಘಡ | Firebreaks

10/06/2025 12:23 PM

BIG NEWS : ಕ್ರಿಕೆಟ್ ಸಂಭ್ರಮದ ಕಾಲ್ತುಳಿತ-ಕರ್ನಾಟಕ ಇತಿಹಾಸದ ಕರಾಳ ಅಧ್ಯಾಯ : CM ಸಿದ್ದರಾಮಯ್ಯಗೆ ಬಿ.ವೈ.ವಿಜಯೇಂದ್ರ ಬಹಿರಂಗ ಪತ್ರ.!

10/06/2025 12:21 PM

GOOD NEWS : ‘PM ಸೂರ್ಯಘರ್’ ಯೋಜನೆಯಡಿ ಸಿಗಲಿದೆ ಉಚಿತ ‘ಸೌರವಿದ್ಯುತ್’ : ಅರ್ಜಿ ಸಲ್ಲಿಕೆಗೆ ಈ ದಾಖಲೆಗಳು ಕಡ್ಡಾಯ.!

10/06/2025 12:14 PM

ಇಂದೋರ್ ಕೊಲೆ ಪ್ರಕರಣ: ‘ಪತಿಯೊಂದಿಗೆ ಆತ್ಮೀಯತೆ ಹೊಂದುವುದು ಇಷ್ಟವಿಲ್ಲ’ : ಪ್ರಿಯಕರನಿಗೆ ಮೆಸೇಜ್ ಕಳುಹಿಸಿದ್ದ ಮಹಿಳೆ

10/06/2025 12:09 PM
State News
KARNATAKA

BIG NEWS : ಕ್ರಿಕೆಟ್ ಸಂಭ್ರಮದ ಕಾಲ್ತುಳಿತ-ಕರ್ನಾಟಕ ಇತಿಹಾಸದ ಕರಾಳ ಅಧ್ಯಾಯ : CM ಸಿದ್ದರಾಮಯ್ಯಗೆ ಬಿ.ವೈ.ವಿಜಯೇಂದ್ರ ಬಹಿರಂಗ ಪತ್ರ.!

By kannadanewsnow5710/06/2025 12:21 PM KARNATAKA 3 Mins Read

ಬೆಂಗಳೂರು : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಆರ್ ಸಿಬಿ ತಂಡದ ಸಂಭ್ರಮಾಚರಣೆ ಸಂದರ್ಭದಲ್ಲಿ ಉಂಟಾದ ಕಾಲ್ತುಳಿತದಿಂದ 11 ಜನ…

GOOD NEWS : ‘PM ಸೂರ್ಯಘರ್’ ಯೋಜನೆಯಡಿ ಸಿಗಲಿದೆ ಉಚಿತ ‘ಸೌರವಿದ್ಯುತ್’ : ಅರ್ಜಿ ಸಲ್ಲಿಕೆಗೆ ಈ ದಾಖಲೆಗಳು ಕಡ್ಡಾಯ.!

10/06/2025 12:14 PM

BIG NEWS : ಸಾರ್ವಜನಿಕರೇ ಮುಖ್ಯ ಮಾಹಿತಿ : ನಿಮ್ಮ ಬಳಿ 10 ವರ್ಷದ ಹಳೆಯ ‘ಆಧಾರ್ ಕಾರ್ಡ್’ ಇದ್ರೆ ಜೂನ್ 14ರೊಳಗೆ ತಪ್ಪದೇ ಈ ಕೆಲಸ ಮಾಡಿ.!

10/06/2025 11:58 AM

BREAKING : ಬೆಂಗಳೂರು ಕಾಲ್ತುಳಿತ ದುರಂತ ಕೇಸ್ : ತನಿಖೆಯ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ.!

10/06/2025 11:35 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.