Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಶಿವಮೊಗ್ಗದ ಆನಂದಪುರ ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು, ಅರೆಸ್ಟ್

03/06/2025 5:47 PM

‘ಚೇಳು’ ಕಚ್ಚಿದ ಗಾಬರಿಯಾಗ್ಬೇಡಿ, ತಕ್ಷಣ ಹೀಗೆ ಮಾಡಿ.!

03/06/2025 5:39 PM

BIG NEWS : ಧಾರವಾಡದಲ್ಲಿ ಬೋರ್ವೆಲ್ ತಂತಿ ಕಂಬಕ್ಕೆ ಕಟ್ಟುವಾಗ, ವಿದ್ಯುತ್ ಪ್ರವಹಿಸಿ ರೈತ ಸಾವು

03/06/2025 5:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ವಾಹನಗಳನ್ನು ಏಕಾಏಕಿ ಅಡ್ಡಗಟ್ಟಿ ಚಾಲಕರಿಂದ `ಕೀ’ ಕಸಿದುಕೊಳ್ಳುವಂತಿಲ್ಲ : ಸಂಚಾರಿ ಪೊಲೀಸರಿಗೆ ರಾಜ್ಯ ಸರ್ಕಾರದಿಂದ ಗೈಡ್ ಲೈನ್ಸ್ ಬಿಡುಗಡೆ.!
KARNATAKA

BIG NEWS : ವಾಹನಗಳನ್ನು ಏಕಾಏಕಿ ಅಡ್ಡಗಟ್ಟಿ ಚಾಲಕರಿಂದ `ಕೀ’ ಕಸಿದುಕೊಳ್ಳುವಂತಿಲ್ಲ : ಸಂಚಾರಿ ಪೊಲೀಸರಿಗೆ ರಾಜ್ಯ ಸರ್ಕಾರದಿಂದ ಗೈಡ್ ಲೈನ್ಸ್ ಬಿಡುಗಡೆ.!

By kannadanewsnow5702/06/2025 9:23 AM

ಬೆಂಗಳೂರು: ಮಂಡ್ಯದಲ್ಲಿ ಕೆಲ ದಿನಗಳ ಹಿಂದೆ ಪೊಲೀಸರು ತಪಾಸಣೆ ಮಾಡುತ್ತಿದ್ದಂತ ವೇಳೆಯಲ್ಲಿ ವಾಹನ ಬಿದ್ದು ಮಗುವೊಂದು ಸಾವನ್ನಪ್ಪಿತ್ತು. ಈ ಘಟನೆಯ ನಂತ್ರ ರಾಜ್ಯದ ಎಲ್ಲಾ ಘಟಕಗಳಲ್ಲಿ ಪೊಲೀಸ್ ಠಾಣಾ ಸರಹದ್ದುಗಳಲ್ಲಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳು ಸಾರ್ವಜನಿಕರ ವಾಹನಗಳನ್ನು ತಪಾಸಣೆ ನಡೆಸುವಾಗ ಕೈಗೊಳ್ಳಬೇಕಾದಂತ ಸುರಕ್ಷತಾ ಕ್ರಮಗಳನ್ನು ಸರ್ಕಾರ ಬಿಡುಗಡೆಗೊಳಿಸಿದೆ.

ಈ ಬಗ್ಗೆ ಕರ್ನಾಟಕ ಪೊಲೀಸ್ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ದಿನಾಂಕ: 26.05.2025 ರಂದು ಮಂಡ್ಯ ಜಿಲ್ಲೆಯಲ್ಲಿ ಪೊಲೀಸರು ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳನ್ನು ತಪಾಸಣೆ ಮಾಡುವಾಗ ಸರಿಯಾದ ರಸ್ತೆ ಸುರಕ್ಷತಾ | ಮುಂಜಾಗ್ರತಾ ಕ್ರಮಗಳನ್ನು ವಹಿಸದೇ, ಹೆದ್ದಾರಿಯಲ್ಲಿ ವಾಹನ ಸಂಚಾರ ದಟ್ಟಣೆಯನ್ನು ಗಮನಿಸದೇ ವಾಹನಗಳನ್ನು ತಡೆದು ಪ್ರಕರಣ ದಾಖಲಿಸುವ ನಿಟ್ಟಿನಲ್ಲಿ ರಸ್ತೆ ಅಪಘಾತವುಂಟಾಗಿ ಓರ್ವ ಮಗುವು ಮೃತಪಟ್ಟಿರುತ್ತದೆ ಎಂದಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ, ದಿನಾಂಕ: 13.05.2025 ರಂದು ದಾವಣಗೆರೆ ಜಿಲ್ಲೆಯಲ್ಲಿ ಪೊಲೀಸರು ಸಂಚಾರ ನಿಯಮ ಉಲ್ಲಂಘಿಸುವ ವಾಹನಗಳನ್ನು ತಪಾಸಣೆ ನಡೆಸುವ ಸಂದರ್ಭದಲ್ಲಿ ವೇಗವಾಗಿ ಚಲಾಯಿಸಿಕೊಂಡು ಬಂದ ಕ್ಯಾಂಟರ್ ಚಾಲಕನೂ ಪೊಲೀಸ್ ಸಿಬ್ಬಂದಿಗೆ ಅಪಘಾತಪಡಿಸಿ ಸದರಿ ಪೊಲೀಸ್ ಸಿಬ್ಬಂದಿಯು ಮೃತಪಟ್ಟಿರುತ್ತಾರೆ.

ಮೇಲ್ಕಂಡ ಪ್ರಕರಣಗಳನ್ನು ಗಮನಿಸಿದಲ್ಲಿ ಪೊಲೀಸರು ಸಂಚಾರ ನಿಯಮ ಉಲ್ಲಂಘನಾ ಪಕರಣಗಳನ್ನು ದಾಖಲಿಸುವಾಗ ಯಾವುದೇ ರಸ್ತೆ ಸುರಕ್ಷತಾ ಕ್ರಮಗಳನ್ನು / ಮುಂಜಾಗ್ರತಾ ಕ್ರಮಗಳನ್ನು / ಸಂಚಾರ ದಟ್ಟಣೆಯನ್ನು ಗಮನದಲ್ಲಿರಿಸಿಕೊಳ್ಳದಿರುವುದು ಕಂಡುಬಂದಿರುತ್ತದೆ. ಇದರಿಂದ ಸಾರ್ವಜನಿಕರ | ಅಮಾಯಕರ ಜೀವಕ್ಕೆ ಹಾಗೂ ಪೊಲೀಸರೇ ತಮ್ಮ ಜೀವಕ್ಕೂ ಕುತ್ತು ತಂದುಕೊಳ್ಳುತ್ತಿರುವುದು ಗಂಭೀರವಾಗಿ ಪರಿಗಣಿಸಬೇಕಾದ ಅಂಶವಾಗಿರುತ್ತದೆ.

ಈ ಸಂಬಂಧ, ಎಲ್ಲಾ ಘಟಕಗಳು ಈಗಾಗಲೇ ಮಾನ್ಯ ಡಿಜಿ & ಐಜಿಪಿ ರವರು ಈ ಹಿಂದೆ ಹೊರಡಿಸಿರುವ ಉಲ್ಲೇಖಿತ ಸುತ್ತೋಲೆಗಳಲ್ಲಿ ನಮೂದಿಸಿರುವಂತೆ ಸಂಚಾರ ನಿಯಂತ್ರಣ ಮಾಡತಕ್ಕದ್ದು.

ಆದ್ದರಿಂದ, ಎಲ್ಲಾ ಘಟಕಾಧಿಕಾರಿಗಳು ತಮ್ಮ ಅಧೀನಕ್ಕೊಳಪಡುವ ಅಧಿಕಾರಿ / ಸಿಬ್ಬಂದಿಗಳಿಗೆ ಈ ಕೆಳಕಂಡ ನಿರ್ದೇಶನಗಳನ್ನು ನೀಡಿ ಅವುಗಳನ್ನು ಪಾಲನೆ ಮಾಡಲು ಸೂಚಿಸುವುದು.

 

  1. ಪೊಲೀಸರು ವಾಹನ ಸವಾರರ ವಾಹನಗಳಿಗೆ ಸಂಬಂಧಪಟ್ಟ ದಾಖಲೆಗಳನ್ನು ಪರೀಕ್ಷಿಸಲು ಸಕಾರಣವಿಲ್ಲದೇ ವಾಹನಗಳನ್ನು ತಡೆದು ತಪಾಸಣೆಗೊಳಪಡಿಸಬಾರದು.

 

  1. ಕಣ್ಣಿಗೆ ಕಾಣುವ (Visible violations) ಸಂಚಾರ ನಿಯಮ ಉಲ್ಲಂಘನೆಗಳು ಕಂಡುಬಂದಲ್ಲಿ ಮಾತ್ರವೇ ಅಂತಹ ವಾಹನಗಳನ್ನು ನಿಲ್ಲಿಸಿ ಪಕರಣಗಳನ್ನು ದಾಖಲಿಸುವುದು. ಪ್ರಕರಣಗಳನ್ನು ದಾಖಲಿಸುವಾಗ ಈ ಕೆಳಕಂಡ ಅಂಶಗಳನ್ನು ಗಮನದಲ್ಲಿಟ್ಟುಕೊಳ್ಳುವುದು.

 

ಅ) | ಹೆದ್ದಾರಿಗಳಲ್ಲಿ Zig Zag ಮಾದರಿಯಲ್ಲಿ ಬ್ಯಾರಿಕೇಡ್ ಗಳನ್ನು ಹಾಕಿ ವಾಹನಗಳನ್ನು (Barricade) ತಡೆಯಬಾರದು.

 

ಆ) ರಸ್ತೆಯಲ್ಲಿ ದಿಢೀರನೆ ಅಡ್ಡಬಂದು ವಾಹನ ನಿಲ್ಲಿಸುವಂತೆ ಹೇಳಬಾರದು.

 

ಇ) | ಬೈಕ್‌ನ ಹಿಂಬದಿ ಸವಾರ (Pillion rider) ನನ್ನು ಹಿಡಿದು ಎಳೆಯುವುದು ಹಾಗೂ ವಾಹನಗಳ ಕೀಲಿಕೈ (Key) ಅನ್ನು ತೆಗೆದುಕೊಳ್ಳುವುದನ್ನು ಮಾಡಬಾರದು.

 

  1. ವೇಗವಾಗಿ ಚಲಾಯಿಸಿಕೊಂಡು ಬರುವ ವಾಹನ ಸವಾರರನ್ನು ಹಿಡಿಯಲು ಅವರನ್ನು ಬೆನ್ನಟ್ಟದೇ ಆ ವಾಹನಗಳ ನೋಂದಣಿ ಸಂಖ್ಯೆಯನ್ನು ಗುರುತು ಮಾಡಿಕೊಂಡು ಜಿಲ್ಲಾ ಪೊಲೀಸ್‌ ಠಾಣಾ ಸರಹದ್ದುಗಳ ವಿವಿಧ ನಿಯಂತ್ರಣ ಕೋಣೆಗಳಿಗೆ ಮಾಹಿತಿ ರವಾನಿಸಿ ಸದರಿ ವಾಹನ ಸವಾರರನ್ನು ಪತ್ತೆಹಚ್ಚಿ ಪ್ರಕರಣ ದಾಖಲಿಸುವುದು.

 

  1. ಸಂಚಾರ ನಿಯಮ ಉಲ್ಲಂಘನೆದಾರರ ವಿರುದ್ಧ ಪ್ರಕರಣ ದಾಖಲಿಸುವಾಗ (Physical Enforcement) ಅಥವಾ ವಾಹನಗಳ ತಪಾಸಣೆ ಮಾಡುವ ಸಂದರ್ಭದಲ್ಲಿ ಪೊಲೀಸರು ತಮ್ಮ ಸುರಕ್ಷತೆಗಾಗಿ Reflective Jacket ಗಳನ್ನು ಧರಿಸುವುದು. ಸಂಜೆ ವೇಳೆಯಲ್ಲಿ ಕಡ್ಡಾಯವಾಗಿ LED Baton ಗಳನ್ನು ಉಪಯೋಗಿಸಬೇಕು ಹಾಗೂ ವಾಹನಗಳನ್ನು ತಪಾಸಣೆ ಮಾಡುವ ಸಂದರ್ಭದಲ್ಲಿ ಕಡ್ಡಾಯವಾಗಿ Body worn camera ಗಳನ್ನು ಧರಿಸತಕ್ಕದ್ದು.

 

  1. ಯಾವ ಯಾವ ಘಟಕಗಳಲ್ಲಿ Traffic Management centre (TMC) / Intelligent Traffic Management System (ITMS) ಅನ್ನು ಅನುಷ್ಠಾನಗೊಳಿಸಲಾಗಿದೆಯೋ ಅಂತಹ ಘಟಕದವರು ಆದಷ್ಟು ಸಂಪರ್ಕರಹಿತ ಪವರ್ತನಾ (Contactless enforcement) ಮುಖಾಂತರ ಪ್ರಕರಣಗಳನ್ನು ದಾಖಲಿಸುವುದು.

 

  1. ಇಂತಹ ಅನಾಹುತಗಳನ್ನು ತಪ್ಪಿಸಲು ಎಲ್ಲಾ ಘಟಕಗಳಲ್ಲೂ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲನೆ ಮಾಡುವ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಕಾಲಕಾಲಕ್ಕೆ ಸರಿಯಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು.

 

  1. ರಾಷ್ಟ್ರೀಯ ಹೆದ್ದಾರಿ, ರಾಜ್ಯ ಹೆದ್ದಾರಿ ಹಾಗೂ ಇತರೆ ರಸ್ತೆಗಳಲ್ಲಿ ಯಾವುದೇ ಕಾರಣಕ್ಕೂ ಅತಿ-ವೇಗವಾಗಿ ಚಲಿಸುವ ವಾಹನಗಳನ್ನು ತಡೆಯುವ ಪ್ರಯತ್ನ ಮಾಡಬಾರದು ಹಾಗೂ ಇಂತಹ ವಾಹನಗಳ ವಿರುದ್ಧ ಎಫ್.ಟಿ.ವಿ.ಆರ್ ದಾಖಲಿಸಲು ತಂತ್ರಜ್ಞಾನ ಆಧಾರಿತ ನಿಯಮಗಳ ಜಾರಿಯನ್ನು ಅನುಸರಿಸುವುದು.

 

  1. ವಾಹನಗಳ ವೇಗವನ್ನು ಇಳಿಸುವ ಸಲುವಾಗಿ, ತಪಾಸಣೆಯ ಸ್ಥಳದ ಸುಮಾರು 100-150 ಮೀಟರ್ ಮೊದಲೇ ರಿಫೆಕ್ಟಿವ್ ರಬ್ಬರ್ ಕೋನ್‌ಗಳನ್ನು ಹಾಗೂ ಸುರಕ್ಷತಾ ಸಲಕರಣಿಗಳನ್ನು ಅಳವಡಿಸುವುದು.

 

  1. ರಾತ್ರಿ ಮತ್ತು ತಡರಾತ್ರಿಯ ಸಂದರ್ಭದಲ್ಲಿ ಸಂಚಾರ ಸಿಗ್ನಲ್ ದೀಪಗಳಿರುವ / ಜಂಕ್ಷನ್ ಗಳ ಬದಿಯಲ್ಲೇ ವಾಹನಗಳನ್ನು ತಪಾಸಣೆ ಮಾಡುವುದು ಸೂಕ್ತ.

 

  1. ಕಾನೂನು ಮತ್ತು ಸುವ್ಯವಸ್ಥೆ ಪೊಲೀಸರು ನಡೆಸುವ ನಾಕಾಬಂಧಿ ಪ್ರಕ್ರಿಯೆಗಳನ್ನು ಸಾಧ್ಯವಾದಷ್ಟು ಹೆದ್ದಾರಿಗಳಲ್ಲಿ ನಡೆಸಬಾರದು. ತಪಾಸಣೆಯ ಸಂದರ್ಭದಲ್ಲಿ ಇಂತಹ ಕಾ&ಸು ಅಧಿಕಾರಿ ಮತ್ತು ಸಿಬ್ಬಂದಿಯವರುಗಳು ಸುರಕ್ಷತಾ ಹಿತದೃಷ್ಟಿಯಿಂದ ಸಂಚಾರ ಪೊಲೀಸರ ಬೆಂಬಲ ಮತ್ತು ಸಹಕಾರವನ್ನು ಪಡೆದುಕೊಳ್ಳುವುದು.

 

ಎಲ್ಲಾ ಪೊಲೀಸ್ ಆಯುಕ್ತರುಗಳು ಹಾಗೂ ಪೊಲೀಸ್ ಅಧೀಕ್ಷಕರುಗಳು ಈ ವಿಷಯದ ಕುರಿತು ವೈಯಕ್ತಿಕ ಗಮನಹರಿಸಿ, ತಮ್ಮ ಅಧೀನಕ್ಕೊಳಪಡುವ ಅಧಿಕಾರಿ / ಸಿಬ್ಬಂದಿಗಳು ಈ ಸುತ್ತೋಲೆಯನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಕಟ್ಟುನಿಟ್ಟಾಗಿ ನಿರ್ದೇಶನಗಳನ್ನು ನೀಡುವುದು.

BIG NEWS: Vehicles cannot be stopped suddenly and 'keys' taken from drivers: State government releases guidelines for traffic police!
Share. Facebook Twitter LinkedIn WhatsApp Email

Related Posts

BREAKING: ಶಿವಮೊಗ್ಗದ ಆನಂದಪುರ ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು, ಅರೆಸ್ಟ್

03/06/2025 5:47 PM1 Min Read

BIG NEWS : ಧಾರವಾಡದಲ್ಲಿ ಬೋರ್ವೆಲ್ ತಂತಿ ಕಂಬಕ್ಕೆ ಕಟ್ಟುವಾಗ, ವಿದ್ಯುತ್ ಪ್ರವಹಿಸಿ ರೈತ ಸಾವು

03/06/2025 5:30 PM1 Min Read

ಆಶೀರ್ವಾದ್‌ ಸ್ಮಾರ್ಟ್‌ ಇಂಡಿಯಾ ಕಾರ್ಯಕ್ರಮದ ಮೂಲಕ ಅಯೋಡಿನ್‌ ಕೊರತೆ ಬಗ್ಗೆ ಜಾಗೃತಿ

03/06/2025 5:28 PM1 Min Read
Recent News

BREAKING: ಶಿವಮೊಗ್ಗದ ಆನಂದಪುರ ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು, ಅರೆಸ್ಟ್

03/06/2025 5:47 PM

‘ಚೇಳು’ ಕಚ್ಚಿದ ಗಾಬರಿಯಾಗ್ಬೇಡಿ, ತಕ್ಷಣ ಹೀಗೆ ಮಾಡಿ.!

03/06/2025 5:39 PM

BIG NEWS : ಧಾರವಾಡದಲ್ಲಿ ಬೋರ್ವೆಲ್ ತಂತಿ ಕಂಬಕ್ಕೆ ಕಟ್ಟುವಾಗ, ವಿದ್ಯುತ್ ಪ್ರವಹಿಸಿ ರೈತ ಸಾವು

03/06/2025 5:30 PM

ಆಶೀರ್ವಾದ್‌ ಸ್ಮಾರ್ಟ್‌ ಇಂಡಿಯಾ ಕಾರ್ಯಕ್ರಮದ ಮೂಲಕ ಅಯೋಡಿನ್‌ ಕೊರತೆ ಬಗ್ಗೆ ಜಾಗೃತಿ

03/06/2025 5:28 PM
State News
KARNATAKA

BREAKING: ಶಿವಮೊಗ್ಗದ ಆನಂದಪುರ ಪೊಲೀಸರಿಂದ ಆರೋಪಿ ಕಾಲಿಗೆ ಗುಂಡೇಟು, ಅರೆಸ್ಟ್

By kannadanewsnow0903/06/2025 5:47 PM KARNATAKA 1 Min Read

ಶಿವಮೊಗ್ಗ: ಜಿಲ್ಲೆಯ ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರ ಗುಂಡಿನ ಸದ್ದು ಕೇಳಿ ಬಂದಿದೆ. 30 ಪ್ರಕರಣಗಳಲ್ಲಿ ಭಾಗಿಯಾಗಿದ್ದಂತ ಆರೋಪಿಯ ಕಾಲಿಗೆ…

BIG NEWS : ಧಾರವಾಡದಲ್ಲಿ ಬೋರ್ವೆಲ್ ತಂತಿ ಕಂಬಕ್ಕೆ ಕಟ್ಟುವಾಗ, ವಿದ್ಯುತ್ ಪ್ರವಹಿಸಿ ರೈತ ಸಾವು

03/06/2025 5:30 PM

ಆಶೀರ್ವಾದ್‌ ಸ್ಮಾರ್ಟ್‌ ಇಂಡಿಯಾ ಕಾರ್ಯಕ್ರಮದ ಮೂಲಕ ಅಯೋಡಿನ್‌ ಕೊರತೆ ಬಗ್ಗೆ ಜಾಗೃತಿ

03/06/2025 5:28 PM

ಬೆಂಗಳೂರಲ್ಲಿ ಹೃದಯವಿದ್ರಾವಕ ಘಟನೆ : ಮಾತು ಕೇಳಿಲ್ಲವೆಂದು ಬಾಸುಂಡೆ ಮೂಡುವ ಹಾಗೆ ಮಗಳ ಮೇಲೆ ಹಲ್ಲೆ ಮಾಡಿದ ತಂದೆ!

03/06/2025 5:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.